ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ತಿಂಗಳಲ್ಲಿ ಒಂದು ದಿನ ಋತುಚಕ್ರ ರಜೆ ನೀಡಬೇಕು. ತಿಂಗಳಲ್ಲಿ ಒಂದು ದಿನ ವರ್ಷಕ್ಕೆ 12 ದಿನ ವೇತನ ಸಹಿತ ರಜೆ ನೀಡುವಂತೆ ಸರ್ಕಾರ ಆದೇಶಿಸಿದೆ. ಇತ್ತೀಚೆಗಷ್ಟೆ ಋತುಚಕ್ರ ರಜೆ ನೀಡಲು ಕ್ಯಾಬಿನೆಟ್ ನಿರ್ಣಯಿಸಿತ್ತು. ಕ್ಯಾಬಿನೆಟ್ ನಿರ್ಣಯದಂತೆ ಕಾರ್ಮಿಕ ಇಲಾಖೆ ಅಧಿಕೃತ ಅದೇಶ ಹೊರಡಿಸಿದೆ. 2 ಷರತ್ತುಗಳನ್ನು ವಿಧಿಸಿ ರಜೆ ನೀಡಲು ಸಂಸ್ಥೆಗಳಿಗೆ ಸೂಚಿಸಿದೆ. ಷರತ್ತುಗಳೆನು […]

Continue Reading

ನಟಿ ಪ್ರಿಯಾಂಕಾ ಉಪೇಂದ್ರ ಮೊಬೈಲ್ ಹ್ಯಾಕ್ ಮಾಡಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ನಟಿ ಪ್ರಿಯಾಂಕಾ ಉಪೇಂದ್ರ ಪೋನ್ ಹ್ಯಾಕ್ ಮಾಡಿದ್ದ ವಂಚಕನನ್ನು ಬೆಂಗಳೂರಿನ ಸದಾಶಿವನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ವಿಕಾಸಕುಮಾರ್ ಎಂದು ಗುರುತಿಸಲಾಗಿದ್ದು, ಪ್ರಿಯಾಂಕಾ ಉಪೇಂದ್ರ ಅವರ ಮೊಬೈಲ್ ಹ್ಯಾಕ್ ಮಾಡಿ, ಅದರಲ್ಲಿದ್ದ ನಂಬರ್‌ಗಳಿಗೆ ಮೆಸೇಜ್ ಮಾಡಿ ದುಡ್ಡು ಕೇಳಿದ್ದ. ನಟಿ ದೂರಿನ ಬಳಿಕ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿಯನ್ನು ಬಿಹಾರದಲ್ಲಿ ಬಂಧಿಸಿ, ಬೆಂಗಳೂರಿಗೆ ಕರೆತಂದಿದ್ದಾರೆ. ಬಳಿಕ ಪೊಲೀಸರು ವಿಚಾರಣೆ ನಡೆಸಿದ್ದು, ಈ ವೇಳೆ ಪ್ರಿಯಾಂಕಾ ಅವರ ಮಗನಿಂದ ಹಾಕಿಸಿಕೊಂಡಿದ್ದ 50 ಸಾವಿರ ರೂ. […]

Continue Reading

ಸ್ವತಂತ್ರ ಭಾರತದ ಅತ್ಯಂತ ದುರ್ಬಲ ಗೃಹ ಸಚಿವ ಅಮಿತ್ ಶಾ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸ್ವತಂತ್ರ ಭಾರತದ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವರು ಯಾರಾದರೂ ಇದ್ದರೆ ಅದು ಅಮಿತ್ ಶಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವತಂತ್ರ ಭಾರತದಲ್ಲಿ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವರು ಯಾರಾದರೂ ಇದ್ದರೆ ಅದು ಅಮಿತ್ ಶಾ. ಪುಲ್ವಾಮಾ ಆಯ್ತು, ಮಣಿಪುರ ಆಯ್ತು, ಪಹಲ್ಗಾಮ್, ಇದೀಗ ದೆಹಲಿ ಹೀಗೆ ಸಾಕಷ್ಟು ಆಗಿದೆ. ಚುನಾವಣಾ ಭಾಷಣದಲ್ಲಿ ಬಾಂಗ್ಲಾದೇಶದವರು ಒಳಗೆ ಬರ್ತಾರೆ ಅಂತಾರೆ, ಆದರೆ ಈಗ ಆಡಳಿತ ನಡೆಸುತ್ತಿರುವವರು ಯಾರು ? […]

Continue Reading

ಸರ್ಕಾರದಿಂದ ಹೈ ಅಲರ್ಟ್: ಲಕ್ಷಾಂತರ ಆಂಡ್ರಾಯ್ಡ್ ಫೋನ್‌ಗಳು ಹ್ಯಾಕ್ ಆಗುವ ಸಾಧ್ಯತೆ

ಬೆಂಗಳೂರು: ದೇಶದ ಲಕ್ಷಾಂತರ ಆಂಡ್ರಾಯ್ಡ್ ಬಳಕೆದಾರರಿಗೆ CERT-In ಹೊಸ ಎಚ್ಚರಿಕೆ ನೀಡಿದೆ. ಭಾರತ ಸರ್ಕಾರದ ಸೈಬರ್ ಭದ್ರತಾ ತಂಡ (CERT-In) ಆಂಡ್ರಾಯ್ಡ್ ಬಳಕೆದಾರರಿಗೆ ಪ್ರಮುಖ ಸೈಬರ್ ದಾಳಿಯ ಬೆದರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಆಂಡ್ರಾಯ್ಡ್ ಫೋನ್‌ಗಳಲ್ಲಿ ಹಲವಾರು ದುರ್ಬಲತೆಗಳು ಕಂಡುಬಂದಿವೆ, ಇದು ಹ್ಯಾಕರ್‌ಗಳಿಗೆ ನಮ್ಮ ಫೋನನ್ನು ವಶಕ್ಕೆ ಪಡೆಯಲು ಅವಕಾಶ ಮಾಡಿಕೊಡುತ್ತದೆ. ಇತ್ತೀಚೆಗೆ ನೀಡಲಾದ ಈ ಸಲಹೆಯಲ್ಲಿ, ಸರ್ಕಾರಿ ಸಂಸ್ಥೆಯು ಹ್ಯಾಕರ್‌ಗಳು ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಂನಲ್ಲಿರುವ ಈ ದುರ್ಬಲತೆಗಳನ್ನು ಬಳಸಿಕೊಳ್ಳಬಹುದು ಮತ್ತು ವಂಚನೆಗಳನ್ನು ನಡೆಸಬಹುದು ಎಂದು ಹೇಳಿದೆ. […]

Continue Reading

RSS ಶಾಖೆಗಳಲ್ಲಿ, ಕೇಶವ ಕೃಪಾದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಆರ್‌ಎಸ್‌ಎಸ್ ಶಾಖೆಗಳಲ್ಲಿ, ಕೇಶವ ಕೃಪಾದಲ್ಲಿ ಸುಳ್ಳಿನ ಕಾರ್ಖಾನೆ ನಡೆಸಿದ್ದಾರೆ. ಇದನ್ನೆ ಆರ್‌ಎಸ್‌ಎಸ್ ಇತಿಹಾಸ ಅಂದುಕೊಂಡಿದ್ದಾರೆ ಎಂದು ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ವಂದೆ ಮಾತರಂ ಗೀತೆ ರಾಷ್ಟ್ರಗೀತೆ ಆಗಬೇಕಿತ್ತು ಎಂಬ ಸಂಸದ ಕಾಗೇರಿ ಹೇಳಿಕೆ ವಿಚಾರಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಆರ್‌ಎಸ್‌ಎಸ್ ಅವರಿಗೆ ಅವರ ಇತಿಹಾಸ ಗೊತ್ತಿಲ್ಲ. ಬಿಜೆಪಿ ನಾಯಕರು, ಸ್ವಯಂ ಸೇವಕರು ಆರ್‌ಎಸ್‌ಎಸ್ ಪತ್ರಿಕೆ ಆರ್ಗನೈಸರ್ ಲೇಖನ ಓದಲಿ. ಅದನ್ನು ಓದಿದರೆ ನೀವು ಎಷ್ಟು ದೊಡ್ಡ […]

Continue Reading

ಕಿಚ್ಚ ಸುದೀಪ್‌ಗೆ ವಿಶೇಷ ಗಿಫ್ಟ್‌ ನೀಡಲಿದ್ದಾರೆ ಮಲ್ಲಮ್ಮ

ಬೆಂಗಳೂರು: ಬಿಗ್‌ಬಾಸ್ ಖ್ಯಾತಿಯ ಮಲ್ಲಮ್ಮ ಐದು ವಾರಗಳ ನಂತರ ಮನೆಯಿಂದ ಹೊರಗೆ ಬಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ಮಲ್ಲಮ್ಮ ಯಾದಗಿರಿ ಜಿಲ್ಲೆಯ ಸುರಪುರದ ಸಣ್ಣ ಹಳ್ಳಿಯಿಂದ ಬಂದ ಸಾದಾ ಸೀದಾ ಮಹಿಳೆ ಮಲ್ಲಮ್ಮ. ಸುಮಾರು 15 ವರ್ಷಗಳ ಹಿಂದೆ ಜೀವನ ಕಟ್ಟಿಕೊಳ್ಳಲು ಕೂಲಿ ಕೆಲಸ ಮಾಡುತ್ತಿದ್ದ ಮಲ್ಲಮ್ಮ ಬಿಗ್‌ಬಾಸ್ ಎಂಬ ಖ್ಯಾತ ರಿಯಾಲಿಟಿ ಶೋ ದಲ್ಲಿ ಪಾಲ್ಗೊಂಡು ಇಡಿ ಕರ್ನಾಟಕ ಗುರ್ತಿಸುವ ಮಟ್ಟಿಗೆ ಆಗಿದ್ದಾರೆ. ಬಿಗ್‌ಬಾಸ್ ವೇದಿಕೆ ಮೇಲೆ ಮಲ್ಲಮ್ಮ ಅವರಿಗೆ ಲೆಮೆನ್ ಟೀ ಯಾವಾಗ […]

Continue Reading

ಇಳಿಕೆ ಬೆನ್ನಲ್ಲೆ ನಂದಿನಿ ತುಪ್ಪದ ಬೆಲೆ ಹೆಚ್ಚಳ: ಇಂದಿನಿಂದಲೆ ಜಾರಿ

ಬೆಂಗಳೂರು: ಜಿಎಸ್’ಟಿ ಇಳಿಕೆ ಖುಷಿಯಲ್ಲಿದ್ದ ರಾಜ್ಯದ ಗ್ರಾಹಕರಿಗೆ ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿ ಶಾಕ್ ನೀಡಿದೆ. ನಂದಿನಿ ತುಪ್ಪದ ದರ ಪ್ರತಿ ಲೀಟರ್​ಗೆ 90 ರೂ ಏರಿಕೆ ಮಾಡಿದೆ. ಇತ್ತೀಚಿಗಷ್ಟೆ ಜಿಎಸ್​ಟಿ ದರ ಇಳಿಕೆಯಾದ ನಂತರ ಕೆಎಂಎಫ್ ಹಾಲು ಉತ್ಪನ್ನಗಳ ದರ ಇಳಿಕೆ ಮಾಡಿತ್ತು. ನಂದಿನಿ ತುಪ್ಪದ ಬೆಲೆ 40 ರೂ ಇಳಿಕೆಯಾಗಿತ್ತು. ಆದರೆ ಈಗ ಗ್ರಾಹಕರಿಗೆ ಬಿಸಿ ತುಪ್ಪವಾಗಿದೆ. ಇಂದಿನಿಂದಲೆ ನೂತನ ದರ ಜಾರಿಗೆ ಬರಲಿದೆ ಎಂದು ತಿಳಿಸಿದೆ. ನಂದಿನಿ ತುಪ್ಪದ ಬೆಲೆ ಈ […]

Continue Reading

ವಿಮಾನ ಟಿಕೆಟ್ ಬುಕ್ ಮಾಡಿದ 48 ಗಂಟೆಯೊಳಗೆ ರದ್ದು, ತಿದ್ದುಪಡಿಗೆ ಅವಕಾಶ: ಶೀಘ್ರದಲ್ಲೇ ಹೊಸ ನಿಯಮ

ನವದೆಹಲಿ: ವಿಮಾನ ಟಿಕೆಟ್ ಕಾಯ್ದಿರಿಸಿದ 48 ಗಂಟೆಯೊಳಗೆ ಹೆಚ್ಚುವರಿ ಶುಲ್ಕವಿಲ್ಲದೆ ತಮ್ಮ ಟಿಕೆಟ್‌ಗಳನ್ನು ರದ್ದುಗೊಳಿಸಲು ಅಥವಾ ತಿದ್ದುಪಡಿ ಮಾಡಲು ಪ್ರಯಾಣಿಕರಿಗೆ ಅವಕಾಶ ನೀಡಲು ಶೀಘ್ರದಲ್ಲೇ ಹೊಸ ನಿಯಮ ಜಾರಿಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ನಿರ್ಧರಿಸಿದೆ. ಟಿಕೆಟ್ ಮರುಪಾವತಿ ಮಾನದಂಡಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಡಿಜಿಸಿಎ ಪ್ರಸ್ತಾಪಿಸಿದೆ. ಇದಲ್ಲದೆ, ಟ್ರಾವೆಲ್ ಏಜೆಂಟ್ ಅಥವಾ ಪೋರ್ಟಲ್ ಮೂಲಕ ಟಿಕೆಟ್ ಖರೀದಿಸಿದರೆ, ಏಜೆಂಟರು ನೇಮಕಗೊಂಡ ಪ್ರತಿನಿಧಿಗಳಾಗಿರುವುದರಿಂದ ಮರುಪಾವತಿ ಜವಾಬ್ದಾರಿ ವಿಮಾನಯಾನ ಸಂಸ್ಥೆಗಳ ಮೇಲಿರುತ್ತದೆ ಎಂದು ಹೊಸ ನಿಯಮದಲ್ಲಿ ಹೇಳಲಾಗಿದೆ. ವಿಮಾನಯಾನ ಸಂಸ್ಥೆಗಳು 21 […]

Continue Reading

ಇ-ಸ್ವತ್ತು ಸಮರ್ಪಕ ಅನುಷ್ಠಾನಕ್ಕಾಗಿ ಗ್ರಾ.ಪಂ ಮಟ್ಟದಲ್ಲಿ ಅಧಿಕಾರಿಗಳನ್ನು ಸಜ್ಜುಗೊಳಿಸಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಸುಮಾರು ಒಂದು ಕೋಟಿ ಆಸ್ತಿಗಳನ್ನು ಇ-ಸ್ವತ್ತು ತೆಕ್ಕೆಗೆ ತರುವ ಮೂಲಕ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು. ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇ-ಸ್ವತ್ತು ಸಮರ್ಪಕ ಅನುಷ್ಠಾನ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಈ ಸಂಬಂಧ ಹೊಸದಾಗಿ […]

Continue Reading

ಕೆ-ಸೆಟ್ ಪರೀಕ್ಷೆ ಸುಗಮ, ಶೇ.90ರಷ್ಟು ಹಾಜರು: ಕೆಇಎ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್-25 ರವಿವಾರ ರಾಜ್ಯದ 11 ಜಿಲ್ಲೆಗಳಲ್ಲಿ ಸುಗಮವಾಗಿ ನಡೆಯಿತು. ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳು ಕೈಗೊಂಡಿದ್ದರಿಂದ ಯಾವುದೆ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು 34 ವಿಷಯಗಳಿಗೆ ನಡೆದ ಕೆ-ಸೆಟ್ ಪರೀಕ್ಷೆಗೆ 1.34 ಲಕ್ಷ ಜನರು ಅರ್ಜಿ ಸಲ್ಲಿಸಿದ್ದರು. ಇವರ ಪೈಕಿ 1.21 ಲಕ್ಷ (ಶೇ.90) ಜನರು ಹಾಜರಾಗಿದ್ದರು ಎಂದು ವಿವರಿಸಿದ್ದಾರೆ. ಬೆಂಗಳೂರು, ಬಳ್ಳಾರಿ, […]

Continue Reading