ಬಸ್ ಬಾರದ್ದಕ್ಕೆ ಹಾಲಿನ ಗಾಡಿ ಹತ್ತಿದ ವಿದ್ಯಾರ್ಥಿಗಳು– ವಾಹನ ಪಲ್ಟಿ, 7 ಜನರಿಗೆ ಗಾಯ
ಮೈಸೂರು: ಬಸ್ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, ಬಸ್ ಬಾರದ ಹಿನ್ನೆಲೆಯಲ್ಲಿ ಹಾಲಿನ ವಾಹನ ಹತ್ತಿದ್ದರು, ಆ ವಾಹನ ಪಲ್ಟಿಯಾದ ಪರಿಣಾಮ 7 ಜನರು ಗಾಯಗೊಂಡಿರುವ ಘಟನೆ ಮೈಸೂರಿನ ಹುಣಸೂರು ತಾಲೂಕು ಸೋಮನಹಳ್ಳಿ ಬಳಿ ನಡೆದಿದೆ. ಹುಣಸೂರು ಬನ್ನಿಕುಪ್ಪೆ ಫ್ರೌಢಶಾಲೆಯ ತೆರಳುತ್ತಿದ್ದ ಮೂಕನಹಳ್ಳಿ ಗ್ರಾಮದ ಪಾಲಾಕ್ಷ, ವಿದ್ಯಾಚರಣ, ಅಪ್ಪು, ನಿತಿನ್, ಚಂದ್ರಶೇಖರ್, ಮನುಕುಮಾರ್, ಎಮ್ಮೆಕೊಪ್ಪಲಿನ ಸಂಜಯ್ ಗಾಯಗೊಂಡ ವಿದ್ಯಾರ್ಥಿಗಳು. ಗಾಯಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿದ್ಯಾರ್ಥಿ ಪಾಲಾಕ್ಷಗೆ ಗಂಭೀರ ಗಾಯವಾಗಿದ್ದು, ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳು, […]
Continue Reading