ಅನಾಥವಾಗಿ ಬಿದ್ದಿದ್ದ ಮಗುವನ್ನು ಸಾಕಿದ ಮಹಿಳೆ, ಆ ಮಗಳಿಂದಲೆ ಕೊಲೆಯಾದ ತಾಯಿ

ಭುವನೇಶ್ವರ: ಅಪ್ಪ-ಅಮ್ಮನಿಗೆ ಬೇಡವಾದ ಮಗು ಕಸದಬುಟ್ಟಿಯಲ್ಲಿ, ರಸ್ತೆಯ ಬದಿಯಲ್ಲಿ ಸೇರುತ್ತದೆ. ಇನ್ನು ಕೆಲವರು ಹೆಣ್ಣುಮಗು ಹುಟ್ಟಿತೆಂಬ ಕಾರಣಕ್ಕೆ ಅದನ್ನು ಕೊಲ್ಲುವವರೂ ಇದ್ದಾರೆ. ಆದರೆ ಒಡಿಶಾದ ಮಹಿಳೆ ರಾಜಲಕ್ಷ್ಮಿಕರ್ ಎಂಬುವವರಿಗೆ ಮಕ್ಕಳೆಂದರೆ ಜೀವ. ತಮಗೆ ಮಕ್ಕಳಾಗಲಿಲ್ಲವೆಂದು ಕೊರಗುತ್ತಿದ್ದ ಅವರಿಗೆ 13 ವರ್ಷದ ಹಿಂದೆ ರಸ್ತೆ ಬದಿಯಲ್ಲಿ 3 ದಿನದ ಹೆಣ್ಣುಮಗುವೊಂದು ಸಿಕ್ಕಿತ್ತು. ಕಾನೂನುಪ್ರಕಾರ ಆ ಮಗುವನ್ನು ದತ್ತು ಪಡೆದು ಆ ಅನಾಥ ಮಗುವಿಗೆ ತಾಯಿಯಾದರು. ಅಮ್ಮನಿಗೆ ಬೇಡವಾಗಿ ಬಿದ್ದಿದ್ದ ಆ ಹೆಣ್ಣು ಶಿಶುವಿನ ಜೀವನಕ್ಕೆ ಆಧಾರವಾದರು. ಒಳ್ಳೆಯ ಶಾಲೆಗೆ […]

Continue Reading

13 ವರ್ಷದ ವಿದ್ಯಾರ್ಥಿಯಿಂದ ಗರ್ಭಿಣಿಯಾದ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಕೋರ್ಟ್‌ ಅನುಮತಿ

ಗಾಂಧಿನಗರ: 13 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿ ಹೋಗಿ, ಆತನಿಂದಲೇ ಗರ್ಭಿಣಿಯಾಗಿ ಸದ್ಯ ಪೋಕ್ಸೊ ಕಾಯ್ದೆಯಡಿ ಬಂಧನದಲ್ಲಿರುವ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಗುಜರಾತ್‌ನ ಸೂರತ್‌ನ ವಿಶೇಷ ಪೋಕ್ಸೋ ನ್ಯಾಯಾಲಯ ಅನುಮತಿ ನೀಡಿದೆ. ಅಪ್ರಾಪ್ತ ವಯಸ್ಕನನ್ನು ಅಪಹರಿಸಿದ ಪ್ರಕರಣದಲ್ಲಿ ಶಿಕ್ಷಕಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದೆ, ಸದ್ಯ ಸೂರತ್‌ನ ಜೈಲಿನಲ್ಲಿದ್ದಾಳೆ. ಕೆಲವು ದಿನಗಳ ಹಿಂದೆ ಬೆಳಕಿಗೆ ಬಂದಿರುವ ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿತು. ಆಕೆಯ ಮಾನಸಿಕ ತೊಂದರೆಗಳನ್ನು ಗಣನೆಗೆ ತೆಗೆದುಕೊಂಡು ಈ ತೀರ್ಪು ನೀಡಲಾಗಿದೆ ಎಂದು […]

Continue Reading

ಐಸ್‌ಕ್ರೀಂನಲ್ಲಿ ಮಹಿಳೆಗೆ ಸಿಕ್ಕಿದ್ದೆನು ? ತೀವ್ರ ವಾಂತಿಯಿಂದ ಆಸ್ಪತ್ರೆಗೆ ದಾಖಲಾದ ಮಹಿಳೆ

ಅಹ್ಮದಾಬಾದ್‌: ಕಳೆದ ವರ್ಷ ಮಹಾರಾಷ್ಟ್ರದ ಮುಂಬೈನಲ್ಲಿ ವ್ಯಕ್ತಿಯೊಬ್ಬರಿಗೆ ಐಸ್‌ಕ್ರೀಂನಲ್ಲಿ ಮನುಷ್ಯನ ಬೆರಳೊಂದು ಸಿಕ್ಕಿ ಬೆಚ್ಚಿ ಬೀಳುವಂತೆ ಮಾಡಿತ್ತು. ತನಿಖೆಯ ಬಳಿಕ ಇದು ಐಸ್‌ಕ್ರೀಂ ಕಾರ್ಖಾನೆಯ ಕಾರ್ಮಿಕನ ಬೆರಳು ಎಂಬುದು ತಿಳಿದು ಬಂದಿತ್ತು. ಈ ಘಟನೆ ಜನಮಾನಸದಿಂದ ಮಾಸುವ ಮೊದಲೆ ಈಗ ಗುಜರಾತ್‌ನ ಅಹ್ಮದಾಬಾದ್‌ನ ಮಹಿಳೆಯೊಬ್ಬರು ಐಸ್‌ಕ್ರೀಂನಲ್ಲಿ ಸಿಕ್ಕ ವಸ್ತುವನ್ನು ನೋಡಿ ಅಸ್ವಸ್ಥಗೊಂಡಿದ್ದಾರೆ. ನಿರಂತರವಾಗಿ ವಾಂತಿ ಮಾಡಲು ಶುರು ಮಾಡಿದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಮಾನ್ಯವಾಗಿ ಖುಷಿ ಕ್ಷಣಗಳನ್ನು ಹಂಚಿಕೊಳ್ಳಲು ಅನೇಕರು ಐಸ್‌ಕ್ರೀಂ ಸೇವಿಸುತ್ತಾರೆ. ಆದರೆ ಗುಜರಾತ್‌ನ ಮಹಿಳೆಯೊಬ್ಬರಿಗೆ […]

Continue Reading

UPI ಪಾವತಿ ಬಂದ್: ಇಂದಿನಿಂದ ಪೆಟ್ರೋಲ್ ಪಂಪ್‌ಗಳಲ್ಲಿ ಹೊಸ ನಿಯಮ

ಮಹಾರಾಷ್ಟ್ರ: ಮೇ.10 ರಿಂದ ಪೆಟ್ರೋಲ್ ಪಂಪ್‌ಗಳಲ್ಲಿ UPI ಮತ್ತು ಕಾರ್ಡ್‌ಗಳ ಮೂಲಕ ಪಾವತಿಸುವುದು ಕಷ್ಟವಾಗಬಹುದು. ಪೆಟ್ರೋಲ್ ಪಂಪ್ ಮಾಲೀಕರು ಇಂದಿನಿಂದ ಡಿಜಿಟಲ್ ಪಾವತಿಗಳನ್ನು ಸ್ವೀಕರಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಪಂಪ್ ಮಾಲೀಕರು ಮತ್ತು ಅವರ ಸಂಘಟನೆಗಳು UPI ಮತ್ತು ಕಾರ್ಡ್ ಪಾವತಿಗಳನ್ನು ಸ್ವೀಕರಿಸುವದಿಲ್ಲ ಎಂದು ಹೇಳುತ್ತಿದ್ದಾರೆ. ಈ ರೀತಿಯ ಪಾವತಿಗಳಿಂದ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದ್ದಾರೆ. ಮೇ 10 ರಿಂದ UPI […]

Continue Reading

ಲಾಟರಿಯಿಂದ ಖರೀದಿಸಿದ ಜಮೀನಲ್ಲಿ ನಿಧಿ ಪತ್ತೆ: 20kg ತೂಕದ ಮಡಿಕೆಯಲ್ಲಿ ಸಿಕ್ಕಿತು ನಿಧಿ

ಭಾರತದಲ್ಲಿ ಹಲವು ಜನರಿಗೆ ನಿಧಿ ಸಿಕ್ಕಿದ ಉದಾಹರಣೆ ಇವೆ. ಎಷ್ಟೋ ಜನರು ನಿಧಿಗೋಸ್ಕರ ಅಪರಾಧ ಮಾಡಿ ಸಿಕ್ಕಿಬಿದ್ದಿದ್ದಾರೆ. ಆದರೆ ಇಲ್ಲೊರ್ವ ರೈತನಿಗೆ ಆತ ಇದ್ದಲ್ಲಿ ಅದೃಷ್ಟ ಎನ್ನುವದು ಒಂದಲ್ಲ, ಎರಡು ಬಾರಿ ಹುಡುಕಿಕೊಂಡು ಬಂದಿದೆ. ಈ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. ಆದರಿದು ಡಿಸೆಂಬರ್ 2019ರ ಸುದ್ದಿಯಾಗಿದ್ದು, ಇದೀಗ ಪ್ರೆಶ್ ಸುದ್ದಿ ಎಂಬಂತೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗುತ್ತಿದೆ. ಲಾಟರಿಯಲ್ಲಿ ಬಂದ ಹಣದಿಂದ ಜಮೀನು ಖರೀದಿಕೇರಳದ ಕಿಲಿಮನೂರಿನ 66 ವರ್ಷದ ರೈತ ಬಿ ರತ್ನಾಕರನ್ ಪಿಳ್ಳೈ […]

Continue Reading

ಕೂದಲೆಳೆ ಅಂತರದಲ್ಲಿ ಪಾರಾದ DMK ಸಂಸದ ರಾಜಾ

ಚೆನ್ನೈ: ಮೈಲಾಡುತುರೈನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಡಿಎಂಕೆ ಸಂಸದ ಎ ರಾಜಾ ಅವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಪಕ್ಷದ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿರುವಾಗ ಗಾಳಿ ಬೀಸುತ್ತಿತ್ತು. ಈ ವೇಳೆ ಬಲವಾದ ಗಾಳಿಯಿಂದಾಗಿ ವೇದಿಕೆಯ ಬಳಿ ಓವರ್‌ಹೆಡ್ ಫೋಕಸ್ ದೀಪಗಳು ಕುಸಿದು ಬಿದ್ದು ಡಯಾಜ್ ಮೇಲೆ ಬಿದ್ದಿದೆ. ಫೋಕಸ್‌ ದೀಪಗಳು ಬೀಳುವುದನ್ನು ನೋಡಿದ ರಾಜಾ ಅವರು ತಮ್ಮ ಎಡಗಡೆ ಸರಿದ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ. ಒಂದು ವೇಳೆ ಅವರು ಭಾಷಣ ಮಾಡುತ್ತಲೇ ಇರುತ್ತಿದ್ದರೆ ಗಾಯಗೊಳ್ಳುವ ಸಾಧ್ಯತೆ ಇತ್ತು. ಓವರ್‌ಹೆಡ್ […]

Continue Reading

ಮೇ.1 ರಿಂದ ದೇಶವಾಸಿಗಳಿಗೆ ಸಿಗಲಿವೆ 10 ಸೇವೆಗಳು ಫ್ರೀ, ಫ್ರೀ

ನವದೆಹಲಿ: ಪ್ರತಿವರ್ಷ ಸರ್ಕಾರ ದೇಶದ ಜನತೆಗೆ ಹೊಸ ಹೊಸ ಯೋಜನೆ ನೀಡುತ್ತದೆ. ಹಾಗೆ ಹಳೆಯ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವ ಆದೇಶ ಪ್ರಕಟಿಸುತ್ತಿರುತ್ತದೆ. 2025ರಲ್ಲಿ ಹಲವು ಯೋಜನೆಗಳನ್ನು ಪರಿಚಯಿಸಲಾಗಿದೆ, ಈ ಮೂಲಕ ಸಾಮಾನ್ಯ ಜನರ ಆರ್ಥಿಕ ಪರಿಸ್ಥಿತಿ ಸುಧಾರಿಸುವ ಉದ್ದೇಶ ಸರ್ಕಾರ ಹೊಂದಿರುತ್ತದೆ. ಇದರ ಜೊತೆಗೆ ದೇಶವಾಸಿಗಳಿಗೆ ಮೂಲಭೂತ ಸೌಕರ್ಯ ಒದಗಿಸುವ ಗುರಿ ಹೊಂದಿರುತ್ತವೆ. ಉಚಿತ ಪಡಿತರ ವಿತರಣೆ, ವಿದ್ಯುತ್, ಶಿಕ್ಷಣ, ಕೌಶಲ್ಯ ತರಬೇತಿ, ಪಿಂಚಣಿ, ತೆರಿಗೆ ಸೇರಿದಂತೆ ಇನ್ನಿತರ ಸೇವೆಗಳನ್ನು ಒಳಗೊಂಡಿರುತ್ತದೆ. ಮೇ 1ರಿಂದ ದೇಶದ ಜನತೆಗೆ […]

Continue Reading

ದಾಳಿ ಎಸಗಿದ ಉಗ್ರರಿಗೆ, ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿ ಶಿಕ್ಷೆ ಕೊಡುತ್ತೆವೆ: ಘರ್ಜಿಸಿದ ಮೋದಿ

ಪಾಟ್ನಾ: ಪಹಲ್ಗಾಮ್‌ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕಾರ್ಯಕ್ರಮದಲ್ಲಿ ಮಾತನಾಡುವಾಗ ಉಗ್ರರಿಗೆ ಎಚ್ಚರಿಕೆ ನೀಡಿದರು. ಪಹಲ್ಗಾಮ್ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಮೋದಿ ಭಾಷಣ ಆರಂಭಿಸಿದರು. ಇಂದು ಬಿಹಾರದ ನೆಲದಲ್ಲಿ ನಿಂತು ನಾನು ಇಡಿ ಜಗತ್ತಿಗೆ […]

Continue Reading

ಭಾರತದ ಮೊದಲ ಆನ್-ಬೋರ್ಡ್ ಎಟಿಎಂ ಪ್ರಯೋಗ ಯಶಸ್ವಿ: ಇನ್ನುಮುಂದೆ ರೈಲಿನಲ್ಲೂ ಎಟಿಎಂ

ಮುಂಬೈ: ದೇಶದಲ್ಲೆ ಮೊದಲ ಬಾರಿಗೆ ರೈಲಿನಲ್ಲಿ ಸ್ಥಾಪಿಸಲಾದ ಎಟಿಎಂನ (ATM) ಪ್ರಾಯೋಗಿಕ ಪರೀಕ್ಷೆ ಮಂಗಳವಾರ ಯಶಸ್ವಿಯಾಗಿ ನಡೆದಿದೆ. ಬ್ಯಾಂಕ್ ಆಫ್ ಮಹಾರಾಷ್ಟ್ರದ ಸಹಯೋಗದೊಂದಿಗೆ ಮನ್ಮಾಡ್‌ನಿಂದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ವರೆಗೆ ಸಂಚರಿಸುವ ಪಂಚವಟಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆದಿದೆ. ಈ ಪ್ರಾಯೋಗಿಕ ಪರೀಕ್ಷೆಯ ಬಳಿಕ ಈಶಾನ್ಯ ಗಡಿನಾಡು ರೈಲ್ವೆಗಳಲ್ಲಿ ಎಟಿಎಂಗಳನ್ನು ಪರಿಚಯಿಸಲು ನಿರ್ಧರಿಸಿದೆ. ನಾಸಿಕ್‌ನ ಮನ್ಮಾಡ್ ಮತ್ತು ಮುಂಬೈ ನಡುವೆ ಸಂಚರಿಸುವ ಪಂಚವಟಿ ಎಕ್ಸ್‌ಪ್ರೆಸ್‌ನ ಎಸಿ ಕೋಚ್‌ನಲ್ಲಿ ಎಟಿಎಂ ಸ್ಥಾಪಿಸಲಾಗಿದೆ. ರೈಲ್ವೆ ಅಧಿಕಾರಿಗಳ ಮಾಹಿತಿ ಪ್ರಕಾರ, ಪ್ರಾಯೋಗಿಕ […]

Continue Reading

ವಾಟ್ಸಪ್‌ ಫೋಟೋ ಡೌನ್‌ಲೋಡ್‌ ಮಾಡುವ ಮುನ್ನ ಎಚ್ಚರವಾಗಿರಿ: ಫೋನ್‌ ಹ್ಯಾಕ್‌ ಆಗಬಹುದು

ನವದೆಹಲಿ: ವಾಟ್ಸಪ್‌ನಲ್ಲಿ ಬರುವ ಎಲ್ಲಾ ಚಿತ್ರಗಳನ್ನು ಡೌನ್‌ಲೋಡ್‌ ಮಾಡುವ ಮುನ್ನ ಎಚ್ಚರವಾಗಿರಿ. ಡೌನ್‌ಲೋಡ್‌ ಆದ ಚಿತ್ರದಿಂದಲೇ ನಿಮ್ಮ ಫೋನ್‌ ಹ್ಯಾಕ್‌ ಆಗುವ ಸಾಧ್ಯತೆಯಿದೆ. ಇಲ್ಲಿಯವರೆಗೆ ಲಿಂಕ್‌, ಇತ್ಯಾದಿಗಳನ್ನು ಕಳುಹಿಸಿ ಸೈಬರ್‌ ಕಳ್ಳರು ಫೋನ್‌ ಹ್ಯಾಕ್‌ ಮಾಡುತ್ತಿದ್ದರು. ಆದರೆ ತಂತ್ರಜ್ಞಾನ ಮುಂದುವರಿದಂತೆ ಫೋಟೋವನ್ನು ಕಳುಹಿಸಿ ಹ್ಯಾಕ್‌ ಮಾಡುತ್ತಿರುವ ಪ್ರಕರಣ ಈಗ ಬೆಳಕಿಗೆ ಬಂದಿದೆ. ಹ್ಯಾಕರ್‌ಗಳು ಒಂದು ಫೋಟೋವನ್ನು ಸೃಷ್ಟಿಸಿ ಅದರಲ್ಲಿ ಮಾಲ್ವೇರ್‌ (ಕುತಂತ್ರಾಂಶ) ತುರುಕಿಸಿ ಕಳುಹಿಸುತ್ತಾರೆ. ಈ ಫೋಟೋವನ್ನು ವಾಟ್ಸಪ್‌ನಲ್ಲಿ ಯಾರೆಲ್ಲ ಡೌನ್‌ಲೋಡ್‌ ಮಾಡುತ್ತಾರೋ ಅವರ ಫೋನ್‌ ಹ್ಯಾಕ್‌ […]

Continue Reading