ದಾಳಿ ಎಸಗಿದ ಉಗ್ರರಿಗೆ, ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿ ಶಿಕ್ಷೆ ಕೊಡುತ್ತೆವೆ: ಘರ್ಜಿಸಿದ ಮೋದಿ

ಪಾಟ್ನಾ: ಪಹಲ್ಗಾಮ್‌ನಲ್ಲಿ ದಾಳಿ ಮಾಡಿದವರು ಮತ್ತು ಸಂಚು ರೂಪಿಸಿದವರ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಕಾರ್ಯಕ್ರಮದಲ್ಲಿ ಮಾತನಾಡುವಾಗ ಉಗ್ರರಿಗೆ ಎಚ್ಚರಿಕೆ ನೀಡಿದರು. ಪಹಲ್ಗಾಮ್ ದಾಳಿಯಲ್ಲಿ ಮೃತರಿಗೆ ಗೌರವ ಸಲ್ಲಿಸಲು 1 ನಿಮಿಷ ಮೌನ ಪ್ರಾರ್ಥನೆ ಮಾಡಿ ಮೋದಿ ಭಾಷಣ ಆರಂಭಿಸಿದರು. ಇಂದು ಬಿಹಾರದ ನೆಲದಲ್ಲಿ ನಿಂತು ನಾನು ಇಡಿ ಜಗತ್ತಿಗೆ […]

Continue Reading

ಭಾರತದ ಮೊದಲ ಆನ್-ಬೋರ್ಡ್ ಎಟಿಎಂ ಪ್ರಯೋಗ ಯಶಸ್ವಿ: ಇನ್ನುಮುಂದೆ ರೈಲಿನಲ್ಲೂ ಎಟಿಎಂ

ಮುಂಬೈ: ದೇಶದಲ್ಲೆ ಮೊದಲ ಬಾರಿಗೆ ರೈಲಿನಲ್ಲಿ ಸ್ಥಾಪಿಸಲಾದ ಎಟಿಎಂನ (ATM) ಪ್ರಾಯೋಗಿಕ ಪರೀಕ್ಷೆ ಮಂಗಳವಾರ ಯಶಸ್ವಿಯಾಗಿ ನಡೆದಿದೆ. ಬ್ಯಾಂಕ್ ಆಫ್ ಮಹಾರಾಷ್ಟ್ರದ ಸಹಯೋಗದೊಂದಿಗೆ ಮನ್ಮಾಡ್‌ನಿಂದ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್‌ವರೆಗೆ ಸಂಚರಿಸುವ ಪಂಚವಟಿ ಎಕ್ಸ್‌ಪ್ರೆಸ್‌ನಲ್ಲಿ ಪ್ರಾಯೋಗಿಕ ಪರೀಕ್ಷೆ ನಡೆದಿದೆ. ಈ ಪ್ರಾಯೋಗಿಕ ಪರೀಕ್ಷೆಯ ಬಳಿಕ ಈಶಾನ್ಯ ಗಡಿನಾಡು ರೈಲ್ವೆಗಳಲ್ಲಿ ಎಟಿಎಂಗಳನ್ನು ಪರಿಚಯಿಸಲು ನಿರ್ಧರಿಸಿದೆ. ನಾಸಿಕ್‌ನ ಮನ್ಮಾಡ್ ಮತ್ತು ಮುಂಬೈ ನಡುವೆ ಸಂಚರಿಸುವ ಪಂಚವಟಿ ಎಕ್ಸ್‌ಪ್ರೆಸ್‌ನ ಎಸಿ ಕೋಚ್‌ನಲ್ಲಿ ಎಟಿಎಂ ಸ್ಥಾಪಿಸಲಾಗಿದೆ. ರೈಲ್ವೆ ಅಧಿಕಾರಿಗಳ ಮಾಹಿತಿ ಪ್ರಕಾರ, ಪ್ರಾಯೋಗಿಕ […]

Continue Reading

ವಾಟ್ಸಪ್‌ ಫೋಟೋ ಡೌನ್‌ಲೋಡ್‌ ಮಾಡುವ ಮುನ್ನ ಎಚ್ಚರವಾಗಿರಿ: ಫೋನ್‌ ಹ್ಯಾಕ್‌ ಆಗಬಹುದು

ನವದೆಹಲಿ: ವಾಟ್ಸಪ್‌ನಲ್ಲಿ ಬರುವ ಎಲ್ಲಾ ಚಿತ್ರಗಳನ್ನು ಡೌನ್‌ಲೋಡ್‌ ಮಾಡುವ ಮುನ್ನ ಎಚ್ಚರವಾಗಿರಿ. ಡೌನ್‌ಲೋಡ್‌ ಆದ ಚಿತ್ರದಿಂದಲೇ ನಿಮ್ಮ ಫೋನ್‌ ಹ್ಯಾಕ್‌ ಆಗುವ ಸಾಧ್ಯತೆಯಿದೆ. ಇಲ್ಲಿಯವರೆಗೆ ಲಿಂಕ್‌, ಇತ್ಯಾದಿಗಳನ್ನು ಕಳುಹಿಸಿ ಸೈಬರ್‌ ಕಳ್ಳರು ಫೋನ್‌ ಹ್ಯಾಕ್‌ ಮಾಡುತ್ತಿದ್ದರು. ಆದರೆ ತಂತ್ರಜ್ಞಾನ ಮುಂದುವರಿದಂತೆ ಫೋಟೋವನ್ನು ಕಳುಹಿಸಿ ಹ್ಯಾಕ್‌ ಮಾಡುತ್ತಿರುವ ಪ್ರಕರಣ ಈಗ ಬೆಳಕಿಗೆ ಬಂದಿದೆ. ಹ್ಯಾಕರ್‌ಗಳು ಒಂದು ಫೋಟೋವನ್ನು ಸೃಷ್ಟಿಸಿ ಅದರಲ್ಲಿ ಮಾಲ್ವೇರ್‌ (ಕುತಂತ್ರಾಂಶ) ತುರುಕಿಸಿ ಕಳುಹಿಸುತ್ತಾರೆ. ಈ ಫೋಟೋವನ್ನು ವಾಟ್ಸಪ್‌ನಲ್ಲಿ ಯಾರೆಲ್ಲ ಡೌನ್‌ಲೋಡ್‌ ಮಾಡುತ್ತಾರೋ ಅವರ ಫೋನ್‌ ಹ್ಯಾಕ್‌ […]

Continue Reading

₹10, ₹500 ಹೊಸ ನೋಟು ಬಿಡುಗಡೆ ಶೀಘ್ರ: ಆರ್‌ಬಿಐ

ಮುಂಬೈ: ಶೀಘ್ರವೇ ಮಹಾತ್ಮಗಾಂಧಿ ಅವರ ಭಾವಚಿತ್ರ ಮತ್ತು ಗವರ್ನರ್ ಸಂಜಯ್ ಮಲ್ಹೊತ್ರಾ ಅವರ ಸಹಿ ಇರುವ ₹10 ಮತ್ತು ₹500 ಮುಖಬೆಲೆಯ ಹೊಸ ನೋಟುಗಳ ಸರಣಿಯನ್ನು ಚಲಾವಣೆಗೆ ಬಿಡುಗಡೆ ಮಾಡಲಾಗುವದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತಿಳಿಸಿದೆ. ಮಹಾತ್ಮಗಾಂಧಿ (ಹೊಸ) ಸರಣಿಯ ನೋಟುಗಳಮಾದರಿಯಲ್ಲಿಯೇ ಈ ಹೊಸ ನೋಟುಗಳು ಇರಲಿವೆ ಎಂದು ಹೇಳಿದೆ. ಗವರ್ನರ್ ಮಲ್ಹೊತ್ರಾ ಅವರ ಸಹಿ ಇರುವ ₹100 ಮತ್ತು ₹200 ಮುಖಬೆಲೆಯ ಹೊಸ ನೋಟುಗಳನ್ನೂ ಚಲಾವಣೆಗೆ ಬಿಡುಗಡೆ ಮಾಡುವದಾಗಿ ಕಳೆದ ತಿಂಗಳು ಆರ್‌ಬಿಐ […]

Continue Reading

3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್‌: ಹೆಣ್ಣು ಜನಿಸಿದರೆ 50 ಸಾವಿರ, ಗಂಡು ಜನಿಸಿದರೆ ಹಸು ಗಿಫ್ಟ್‌

ಅಮರಾವತಿ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ತೆಲುಗು ದೇಶಂ ಪಕ್ಷದ ಸಂಸದ ಕಾಳಿಸೆಟ್ಟಿ ಅಪ್ಪಲನಾಯ್ಡು ಅವರು, 3ನೇ ಮಗುವಿಗೆ ಜನ್ಮ ನೀಡುವ ಮಹಿಳೆಯರಿಗೆ ಬಂಪರ್‌ ಕೊಡುಗೆ ಘೋಷಣೆ ಮಾಡಿದ್ದಾರೆ. ಇದು ಆಂಧ್ರಪ್ರದೇಶದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ಪ್ರಕಾಶಂ ಜಿಲ್ಲೆಯ ಮಾರ್ಕಾಪುರದಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ, ಮಹಿಳೆಯೊಬ್ಬರು 3ನೇ ಮಗುವಿಗೆ ಜನ್ಮ ನೀಡಿದರೆ ವಿಶೇಷ ಉಡುಗೊರೆ ನೀಡಲಾಗುವುದು. ಹೆಣ್ಣು ಮಗುವಿಗೆ ಜನ್ಮ ನೀಡಿದರೆ ನನ್ನ ಸ್ವಂತ ವೇತನದಲ್ಲಿ 50 ಸಾವಿರ ರೂ, ಗಂಡು ಮಗುವಿಗೆ […]

Continue Reading

ಹಠಾತ್‌ ಎದೆನೋವು: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಆಸ್ಪತ್ರೆಗೆ ದಾಖಲು

ನವದೆಹಲಿ: ಎದೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ರವಿವಾರ ಮುಂಜಾನೆ ದಾಖಲಿಸಲಾಗಿದೆ. 73 ವರ್ಷ ವಯಸ್ಸಿನ ಅವರನ್ನು ತಡರಾತ್ರಿ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ದಾಖಲಿಸಲಾಯಿತು. ಎಐಐಎಂಎಸ್‌ನಲ್ಲಿ ಕಾರ್ಡಿಯಾಲಜಿ ವಿಭಾಗದ ಮುಖ್ಯಸ್ಥ ಡಾ.ರಾಜಿವ್ ನಾರಾಂಗ್ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಧನಕರ್‌ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ವೈದ್ಯರ ತಂಡವು ಅವರ ಆರೋಗ್ಯವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುತ್ತಿದೆ.

Continue Reading

10, 20 ನಾಣ್ಯಗಳ ಬಗ್ಗೆ ಕೇಂದ್ರ ಸರ್ಕಾರದ ಪ್ರಮುಖ ಘೋಷಣೆ

ಇತ್ತೀಚೆಗೆ ಕರೆನ್ಸಿ ಬಗ್ಗೆ ಹಲವು ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. 500 ರೂ ನೋಟುಗಳ ನಕಲಿ ಮಾರುಕಟ್ಟೆಯಲ್ಲಿ ಇರುವುದರಿಂದ ಆರ್‌ಬಿಐ ಅವುಗಳನ್ನು ನಿಷೇಧಿಸುತ್ತಿದೆ ಎಂಬ ಸುದ್ದಿ ವೈರಲ್ ಆಗಿತ್ತು. 350 ನೋಟುಗಳನ್ನು ಆರ್‌ಬಿಐ ಮುದ್ರಿಸುತ್ತಿದೆ ಎಂಬ ಸುದ್ದಿಯೂ ವೈರಲ್ ಆಗಿತ್ತು. ಇಂತಹ ಹಲವು ವದಂತಿಗಳಿಂದ ಜನರು ಗೊಂದಲಕ್ಕೊಳಗಾಗಿದ್ದಾರೆ. ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಬಗ್ಗೆ ಜನರಿಂದ ಬರುತ್ತಿರುವ ಪ್ರಶ್ನೆಗಳಿಗೆ ಆರ್‌ಬಿಐ ಉತ್ತರಿಸಬೇಕಾಗಿದೆ. ನಕಲಿ ನೋಟುಗಳು ಚಲಾವಣೆಯಲ್ಲಿವೆ, ದೊಡ್ಡ ನೋಟುಗಳನ್ನು ಮತ್ತೆ ರದ್ದುಗೊಳಿಸಲಾಗುವುದು ಎಂಬ ವದಂತಿಗಳಿಂದ ಜನರು ಆತಂಕಕ್ಕೊಳಗಾಗಿದ್ದಾರೆ. ಆದ್ದರಿಂದ […]

Continue Reading

ಉಪ್ಪಿಟ್ಟು ಬದಲು ಬಿರಿಯಾನಿ, ಚಿಕನ್‌ ಫ್ರೈ ಕೊಡಿ: ಅಂಗನವಾಡಿ ಬಾಲಕನ ಮನವಿಗೆ ಸಚಿವರ ಒಪ್ಪಿಗೆ

ತಿರುವನಂತಪುರಂ: ಅಂಗನವಾಡಿಯಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ ಮತ್ತು ಚಿಕನ್‌ ಫ್ರೈ ನೀಡುವಂತೆ ಬಾಲಕ ಮಾಡಿದ ಮನವಿಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಒಪ್ಪಿಗೆ ಸೂಚಿಸಿದ್ದಾರೆ. ಊಟದ ಮೆನುವಿನಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ, ಚಿಕನ್‌ ಫ್ರೈ ನೀಡಬೇಕು ಎಂದು ಪುಟ್ಟ ಬಾಲಕ ಮನವಿ ಮಾಡಿರುವ ವೀಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ವೀಡಿಯೋಗೆ ಸಚಿವರು ಸ್ಪಂದಿಸಿದ್ದಾರೆ. ಅಂಗನವಾಡಿಗಳಲ್ಲಿನ ಆಹಾರ ಮೆನುವನ್ನು ಪರಿಶೀಲಿಸಲು ಮತ್ತು ಪರಿಷ್ಕರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಶಂಕು ಎಂಬ ಮಗು ಮುಗ್ಧ […]

Continue Reading

ಸೈಫ್‌ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ಮೌಲ್ಯದ ಆಸ್ತಿ ಕೇಂದ್ರದ ವಶಕ್ಕೆ ?

ಭೋಪಾಲ್‌: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರ ಪಟೌಡಿ ಕುಟುಂಬಕ್ಕೆ ಸೇರಿದ 15 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿಗಳು ಶೀಘ್ರವೇ ಕೇಂದ್ರ ಸರ್ಕಾರದ ನಿಯಂತ್ರಣಕ್ಕೆ ಬರುವ ಸಾಧ್ಯತೆ ಹೆಚ್ಚಾಗಿದೆ. ಈ ಆಸ್ತಿಗಳ ಮೇಲೆ 2015ರಲ್ಲಿ ವಿಧಿಸಲಾಗಿದ್ದ ತಡೆಯಾಜ್ಞೆಯನ್ನು ಮಧ್ಯಪ್ರದೇಶ ಹೈಕೋರ್ಟ್‌ ತೆಗೆದುಹಾಕಿದೆ. ಇದರಿಂದಾಗಿ 1968ರ ಶತ್ರು ಆಸ್ತಿ ಕಾಯ್ದೆಯ ಅಡಿಯಲ್ಲಿ ಅವುಗಳನ್ನು ಸ್ವಾಧೀನಪಡಿಸಿಕೊಳ್ಳಲು ದಾರಿ ಮಾಡಿಕೊಟ್ಟಿದೆ. ಈ ಪ್ರಕರಣದ ವಿಚಾರಣೆ ನಡೆಸಿದ್ದ ಕೋರ್ಟ್‌ ಡಿ.13 ರಂದು, 2017 ತಿದ್ದುಪಡಿ ಮಾಡಿದ ಶತ್ರು ಆಸ್ತಿ ಕಾಯ್ದೆ […]

Continue Reading

ಪರಸ್ಪರ ಮದುವೆಯಾದ ಇಬ್ಬರು ಹುಡುಗಿಯರು, ಮುಂದೆನಾಯ್ತು ಗೊತ್ತಾ ?

ಮಧ್ಯಪ್ರದೇಶ: ಇಬ್ಬರು ಹುಡುಗಿಯರು ಪರಸ್ಪರ ಮದುವೆಯಾಗಿದ್ದಾರೆ, ಇಬ್ಬರು ಲಿವ್ ಇನ್ ರಿಲೇಶನ್ ಶಿಪ್ ಸರ್ಟಿಫಿಕೇಟ್ ಕೂಡ ಪಡೆದಿದ್ದಾರೆ. ಮಧ್ಯಪ್ರದೇಶದ ಮಂದಸೌರ್‌ನಿಂದ ಈ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಧ್ಯಪ್ರದೇಶದ ಮಂದಸೌರ್‌ನ ಭೈಸೋದಮಂಡಿ ಪ್ರದೇಶದಲ್ಲಿ ಇಬ್ಬರು ಬಾಲಕಿಯರ ವಿವಾಹವಾಗಿದ್ದಾರೆ. ಇಬ್ಬರಿಗೂ ಲಿವ್ ಇನ್ ರಿಲೇಶನ್ ಶಿಪ್ ಸರ್ಟಿಫಿಕೇಟ್ ಕೂಡ ಸಿಕ್ಕಿದ್ದು, ಮದುವೆಯ ವಿಧಿವಿಧಾನಗಳನ್ನು ಮುಗಿಸಿ ಪರಸ್ಪರ ಜೊತೆಯಾಗಿ ಬಾಳುವುದಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದರಲ್ಲಿ ಒಬ್ಬ ಹುಡುಗಿಯ ಹೆಸರು ಸೋನಂ, ಇನ್ನೊಬ್ಬ ಹುಡುಗಿಯ ಹೆಸರು ರೀನಾ, ರೀನಾ ವಯಸ್ಸು […]

Continue Reading