ಬೆಂಗಳೂರಿನಲ್ಲಿ ಮೋಡಗಳ ಮರೆಯಲ್ಲಿ ಮರೆಯಾಗಿರುವ ಚಂದ್ರ, ನೆಲಮಂಗಲದಲ್ಲಿ ಹುಣ್ಣಿಮೆ ಚಂದ್ರನ ದರ್ಶನ

ಬೆಂಗಳೂರು: ನಭೋಮಂಡಲದ ವಿಸ್ಮಯದ ಅದ್ಭುತ ಕಣ್ತುಂಬಿಕೊಳ್ಳಲು ಜನ ತುದಿಗಾಲಲ್ಲಿ ನಿಂತಿದ್ದಾರೆ. ಈಗಷ್ಟೇ ಚಂದ್ರಗ್ರಹಣದ ಪ್ರಕ್ರಿಯೆ ಆರಂಭವಾಗಿಬಿಟ್ಟಿದೆ. ರಾತ್ರಿ 9:57ರಿಂದ ಮಧ್ಯರಾತ್ರಿ 1:26ರ ವರೆಗೆ ಒಟ್ಟು ಮೂರುವರೆ ಗಂಟೆಗಳ ಕಾಲ ನಿಧಾನವಾಗಿ ಗ್ರಹಣ ಸಂಭವಿಸಲಿದೆ. ಸದ್ಯ ದೇಶದಲ್ಲಿ ಲಡಾಖ್‌ನಲ್ಲಷ್ಟೇ ಗ್ರಹಣ ಗೋಚರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರು, ತಮಿಳುನಾಡು ಸೇರಿ ನಾಲ್ಕು ಕಡೆಗಳಲ್ಲಿ ಮೋಡ ಕವಿದ ಹಿನ್ನೆಲೆಯಲ್ಲಿ ಚಂದ್ರ ಕಣ್ಮರೆಯಾಗಿದ್ದಾನೆ. ಆಗಾಗ್ಗೆ ಭುವಿಯತ್ತ ಇಣುಕಿ ಮತ್ತೆ ಮೋಡದಲ್ಲಿ ಮರೆಯಾಗುತ್ತಿದ್ದಾನೆ. ನೆಲಮಂಗಲದಿಂದ ಆಕಾಶದಲ್ಲಿ ಹುಣ್ಣಿಮೆ ಚಂದ್ರನ ದರ್ಶನವಾಗಿದೆ. ನೆಲಮಂಗಲ ತಾಲೂಕಿನ […]

Continue Reading

YouTube ನಿಂದ ಹಣ ಗಳಿಸುವುದು ಹೇಗೆ ? 2 ದಿನಗಳ ಸರ್ಕಾರಿ ತರಬೇತಿ

ಯೂಟ್ಯೂಬ್ ಕೇವಲ ವಿಡಿಯೋ ವೇದಿಕಯಲ್ಲ. ಅದು ಗಳಿಕೆಗೆ ಅತ್ಯುತ್ತಮ ಮೂಲವಾಗಿ ಬದಲಾಗಿದೆ. ಆದ್ದರಿಂದಲೇ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ತಮ್ಮದೆಯಾದ ಯೂಟ್ಯೂಬ್ ಚಾನೆಲ್ ಪ್ರಾರಂಭಿಸಲು ಬಯಸುತ್ತಾರೆ. ಆದರೆ ಸಮಸ್ಯೆಯೆಂದರೆ ಹೆಚ್ಚಿನ ಜನರಿಗೆ ಎಲ್ಲಿಂದ ಪ್ರಾರಂಭಿಸಬೇಕು ಮತ್ತು ಯಾವ ವಿಷಯಗಳಿಂದ ಜನರನ್ನು ಹೆಚ್ಚು ಆಕರ್ಷಿಸಬೇಕು ಎಂಬುದು ತಿಳಿದಿಲ್ಲ. ನೀವೂ ಕೂಡ ಇದೆ ರೀತಿ ಸಮಸ್ಯೆಯಲ್ಲಿದ್ದರೆ ಈ ಸುದ್ದಿ ನಿಮಗಾಗಿ. ಈಗ ನೀವು ಮನೆಯಲ್ಲಿ ಕುಳಿತು ಎರಡು ದಿನಗಳಲ್ಲಿ YouTube ಚಾನೆಲ್ ರಚಿಸುವ ಮತ್ತು ಅದರಿಂದ ಹಣ ಗಳಿಸುವ ತಂತ್ರವನ್ನು […]

Continue Reading

‌ಡಾ.ವಿಷ್ಣುವರ್ಧನ್ ಸಮಾಧಿ ಕೆಡವಿದವರ ಪ್ಲ್ಯಾನ್‌ ಉಲ್ಟಾ ಮಾಡಿ ಶಾಕ್‌ ಕೊಟ್ಟ ಸರ್ಕಾರ, ಆದೇಶ ಪತ್ರದಲ್ಲಿ ಏನಿದೆ ?

ಬೆಂಗಳೂರು: ಅಭಿಮಾನ್‌ ಸ್ಟುಡಿಯೋ ಹಾಗೂ ವಿಷ್ಣುವರ್ಧನ್‌ ಸಮಾಧಿ ಇದ್ದ ಜಾಗವನ್ನು ಸರ್ಕಾರ ಈಗ ಅರಣ್ಯ ಪ್ರದೇಶ ಎಂದು ಆದೇಶ ಹೊರಡಿಸಿದೆ. ಸರ್ಕಾರ ಹೊರಡಿಸಿದ ಆದೇಶ ಪತ್ರದಲ್ಲಿ ಏನಿದೆ ? ಬೆಂಗಳೂರು ದಕ್ಷಿಣ ತಾಲುಕು, ಕೆಂಗೇರಿ ಹೋಬಳಿ, ಮೈಲಸಂದ ಗ್ರಾಮದ ಸರ್ವೆ ನಂ.26ರಲ್ಲಿ ಅಭಿಮಾನ್ ಸ್ಟುಡಿಯೋಗೆ ನೀಡಿರುವ ಅರಣ್ಯ ಪ್ರದೇಶ ಆದೇಶವನ್ನು ರದ್ದು ಪಡಿಸಿ, ಹಿಂಪಡೆಯುವ ಬಗ್ಗೆ ಬೆಂಗಳೂರು ದಕ್ಷಿಣ ತಾಲೂಕು, ಕೆಂಗೇರಿ ಹೋಬಳಿ, ಮೈಲಸಂದ್ರ ಗ್ರಾಮದ ಸರ್ವೆ ನಂ.22 (78.3-18ಗು), ಸರ್ವೆ ನಂ.2 (b2ಎ-20ಗು)ರ ಪ್ರದೇಶವನ್ನು ಶುರಹಳ್ಳಿ […]

Continue Reading

ಗಣೇಶ ಹಬ್ಬದಂದು ಚಂದ್ರನನ್ನು ನೋಡಬಾರದು ಯಾಕೆ ?

ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳಿಗೆ ತನ್ನದೆಯಾದ ಮಹತ್ವವಿದೆ. ಒಂದೊಂದು ಹಬ್ಬಗಳ ಹಿಂದೆಯೂ ಅದರದೆಯಾದ ಕಥೆಗಳಿದ್ದು, ಗಣೇಶ ಹಬ್ಬಕ್ಕೂ ಕಥೆಯಿದೆ. ಈ ದಿನದಂದು ಚಂದ್ರನನ್ನು ನೋಡಬಾರದೆಂಬ ನಂಬಿಕೆ ಇದೆ. ಸಾಮಾನ್ಯವಾಗಿ ಚಂದ್ರನನ್ನು ಪ್ರತಿ ದಿನ ನಾವು ಗಮನಿಸುವುದಿಲ್ಲ. ಆದರೆ ಭಾದ್ರಪದ ಶುಕ್ಲದ ಚೌತಿಯ ದಿನದಂದು ಮಾತ್ರ ನೋಡಬಾರದು ಎಂದು ಅನಿಸಿದರೂ, ಆಕಸ್ಮಿಕವಾಗಿ ಚಂದ್ರನನ್ನು ನೋಡಿಯೇ ಬಿಡುತ್ತೆವೆ. ಅಂದು ಚಂದ್ರನನ್ನು ನೋಡಿದವರಿಗೆ ಅಪವಾದ ಬರುತ್ತದೆ. ಆದರೆ ಕೃಷ್ಣ ಪಕ್ಷದ ಚೌತಿಯ ಚಂದ್ರನನ್ನು ನೋಡಿದರೆ ಆ ಅಪವಾದ ದೂರವಾಗುತ್ತದೆ ಎಂಬ ನಂಬಿಕೆ ಇಂದಿಗೂ […]

Continue Reading

ಜಗತ್ತಿನ ಅತಿದೊಡ್ಡ ಉಚಿತ ಆಸ್ಪತ್ರೆ ಚಿಕ್ಕಬಳ್ಳಾಪುರದಲ್ಲಿ ಶೀಘ್ರ ಲೋಕಾರ್ಪಣೆ: ಇಲ್ಲಿ ಬಿಲ್ಲಿಂಗ್‌ ಕೌಂಟರೇ ಇರಲ್ವಂತೆ

ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೆನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಜಗತ್ತಿನಲ್ಲೇ ಅತಿ ದೊಡ್ಡ ಉಚಿತ ಆಸ್ಪತ್ರೆ ತಲೆ ಎತ್ತುತ್ತಿದೆ. ಮೊದಲ ಬಾರಿಗೆ ಜಗತ್ತಿನ ಎಲ್ಲಾ ಭಾಗದ ಎಲ್ಲಾ ಜನರಿಗೂ ಉಚಿತವಾಗಿ ವೈದ್ಯಕೀಯ ಸೇವೆ ಒದಗಿಸುವ ಬೃಹತ್‌ ಕಟ್ಟಡ ತಲೆ ಎತ್ತುತ್ತಿದೆ. ಸುಮಾರು 6,50,000 ಚದರಡಿ ವಿಸ್ತೀರ್ಣದಲ್ಲಿ ತಲೆ ಎತ್ತುತ್ತಿರುವ ಈ ಭವ್ಯ ಆಸ್ಪತ್ರೆಯಲ್ಲಿ 28 ವೈದ್ಯಕೀಯ ವಿಭಾಗಗಳು ಕಾರ್ಯನಿರ್ವಹಿಸಲಿವೆ. ಭಾರತದ ಮೊದಲ ಉಚಿತ ಗ್ರಾಮೀಣ ವೈದ್ಯಕೀಯ ಕಾಲೇಜಾಗಿ ಶ್ರೀ ಮಧುಸೂದನ ಸಾಯಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ 2023ರಲ್ಲಿ […]

Continue Reading

ದೇಶದ ಮುಖ್ಯಮಂತ್ರಿಗಳ ಆಸ್ತಿ ಮೌಲ್ಯದ ವರದಿ ಬಿಡುಗಡೆ: ಈಗ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು ಗೊತ್ತೆ ?

ನವದೆಹಲಿ: ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿ ಬಿಡುಗಡೆಯಾಗಿದೆ, ಇದರ ವಿಶ್ಲೇಷಣೆ ಪ್ರಕಾರ, ವ್ಯಾಪಕ ವ್ಯತ್ಯಾಸಗಳೊಂದಿಗೆ ಮಣಿಪುರವನ್ನು ಹೊರತುಪಡಿಸಿ ಭಾರತದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸೇರಿದಂತೆ 30 ಮುಖ್ಯಮಂತ್ರಿಗಳ ಸರಾಸರಿ ಆಸ್ತಿ 54.42 ಕೋಟಿ ರೂ.ಗಳಷ್ಟಿದೆ ಎಂದು ತಿಳಿದುಬಂದಿದೆ. 30 ಸಿಎಂಗಳ ಒಟ್ಟು ಆಸ್ತಿ 1,632 ಕೋಟಿ ಗಳಷ್ಟಿದೆ, 30 ಸಿಎಂಗಳಲ್ಲಿ ಇಬ್ಬರು (7%) ಕೋಟ್ಯಾಧಿಪತಿಗಳು, ಆಂಧ್ರಪ್ರದೇಶದ ನಾರಾ ಚಂದ್ರಬಾಬು ನಾಯ್ಡು, ಒಟ್ಟು ಆಸ್ತಿ 931 ಕೋಟಿ ರೂ ಮೌಲ್ಯದ ಆಸ್ತಿ ಹೊಂದಿದ್ದರೆ, ಅರುಣಾಚಲ […]

Continue Reading

100 ಕೋಟಿ ರೂ. ಬೆಲೆ ಬಾಳುವ ಕಾರಿನ ಒಡತಿ ನೀತಾ ಅಂಬಾನಿ, Audi A9 Chameleon ಕಾರಿನ ವಿಶೇಷತೆಗಳೇನು ?

ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಪತ್ನಿ ನೀತಾ ಅಂಬಾನಿ ಅವರ ಬಳಿ ಅತ್ಯಂತ ದುಬಾರಿ ಕಾರುಗಳು ಇವೆ. ಇದೀಗ ಅವರು ದುಬಾರಿ ಬೆಲೆಯ ( A9 Chameleon )ವಿಶೇಷ ಕಾರೊಂದನ್ನು ಖರೀದಿಸಿದ್ದಾರೆ. ನೀತಾ ಅಂಬಾನಿ ಈಗಾಗಲೇ ಆಡಿ A9 (Audi A9 Chameleon) ಕಾರನ್ನು ಹೊಂದಿದ್ದಾರೆ. ಇದರ ಮೌಲ್ಯ ಸುಮಾರು 100 ಕೋಟಿ ರೂ. ಈ ಕಾರು ತುಂಬಾ ವಿಶೇಷವಾಗಿದೆ. ಕಾರಿನ ವಿಶೇಷತೆಗಳು ಈ ಕಾರು ಊಸರವಳ್ಳಿಯಂತೆ ಬಣ್ಣಗಳನ್ನುಬದಲಾಯಿಸಬಹುದು. ಇದು ವಿಚಿತ್ರವೆನಿಸಬಹುದು, ಇದು ಸತ್ಯ. ಆದರೆ […]

Continue Reading

ಭಾರತದ ಅತ್ಯಂತ ದುಬಾರಿ ಕಾರು ಮುಖೇಶ್ ಅಂಬಾನಿಯವರದ್ದಲ್ಲ, ನೀತಾ ಅಂಬಾನಿಯವರದ್ದು, ಇದರ ಬೆಲೆ ಎಷ್ಟು ಕೋಟಿ ಗೊತ್ತಾ ?

ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ಅವರ ಕುಟುಂಬವು ಐಷಾರಾಮಿ ಕಾರುಗಳ ಸಂಗ್ರಹಕ್ಕೆ ಹೆಸರುವಾಸಿಯಾಗಿದೆ. ಆದರೆ ದೇಶದ ಅತ್ಯಂತ ದುಬಾರಿ ಕಾರು ಯಾರದ್ದು ಎಂದು ಊಹಿಸಬಹುದು, ಇದು ಮುಖೇಶ್ ಅಂಬಾನಿಯವರದ್ದಲ್ಲ, ಅವರ ಪತ್ನಿ ಮತ್ತು ಉದ್ಯಮಿ ನೀತಾ ಅಂಬಾನಿ ಅವರದ್ದಾಗಿದೆ. The Audi A9 Chameleon ಈ ಕಾರಿನ ಬೆಲೆ ಸುಮಾರು 100 ಕೋಟಿ ರೂ. ಇದು ಭಾರತದ ಅತ್ಯಂತ ದುಬಾರಿ ಕಾರು ಎಂದು ಪರಿಗಣಿಸಲಾಗಿದೆ. The Audi A9 Chameleon ಈ ಕಾರಿನ ವಿಶೇಷತೆ […]

Continue Reading

ಕೋಲಾರ ಮಹಿಳೆಯ ದೇಹದಲ್ಲಿ ವಿಶ್ವದಲ್ಲಿ ಎಲ್ಲೂ ಕಾಣಸಿಗದ ವಿಭಿನ್ನ ರಕ್ತ: ಸಿಆರ್​ಐಬಿ ರಕ್ತ ಗುಂಪಿನ ಬಗ್ಗೆ ನಿಮಗೆ ಗೊತ್ತಿದೆಯಾ

ಬೆಂಗಳೂರು: ವಿಜ್ಞಾನ ವಿಸ್ಮಯವೊಂದು ಕರ್ನಾಟಕದ ಕೋಲಾರದಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಮಹಿಳೆಯೊಬ್ಬರು ವಿಶ್ವದಲ್ಲೇ ಈವರೆಗೆ ಯಾರಲ್ಲೂ ಪತ್ತೆಯಾಗದ ರಕ್ತದ ಗುಂಪು ಹೊಂದಿರುವುದು ಬೆಳಕಿಗೆ ಬಂದಿದೆ. ಹೃದಯ ಶಸ್ತ್ರಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ 38 ವರ್ಷದ ಮಹಿಳೆಯೊಬ್ಬರು ಕೆಲವು ದಿನಗಳ ಹಿಂದೆ ದಾಖಲಾಗಿದ್ದರು. ಅವರ ರಕ್ತದ ಮಾದರಿ ಪರೀಕ್ಷೆಗೆ ಒಳಪಡಿಸಿದ ನಂತರ ವೈದ್ಯರು ಅಚ್ಚರಿಗೆ ಒಳಗಾಗಿದ್ದಾರೆ. ಮಹಿಳೆಯ ರಕ್ತದ ಗುಂಪು ಸಾಮಾನ್ಯವಾಗಿ ಎಲ್ಲರಲ್ಲೂ ಕಂಡುಬರುವ O Rh+ ಆಗಿತ್ತು. ಆದರೆ ವಿಶೇಷವೆಂದರೆ ಲಭ್ಯವಿರುವ ಯಾವುದೆ O+ ರಕ್ತ ಅವರ ರಕ್ತಕ್ಕೆ […]

Continue Reading

ದೀರ್ಘಾವಧಿಗೆ ಪ್ರಧಾನಿ: ಇಂದಿರಾ ಗಾಂಧಿ ಹಿಂದಿಕ್ಕಿದ ನರೇಂದ್ರ ಮೋದಿ

ಹೊಸದಿಲ್ಲಿ: ಸತತ ಅವಧಿಗೆ ಪ್ರಧಾನಿಯಾಗಿ ಸುದೀರ್ಘ‌ ಸೇವೆ ಸಲ್ಲಿಸಿದ ಹೆಗ್ಗಳಿಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರಕ್ಕೆ ಇಂದಿರಾ ಗಾಂಧಿ ದಾಖಲೆ ಮುರಿಯಲಿದ್ದಾರೆ. ಶುಕ್ರವಾರಕ್ಕೆ ಪ್ರಧಾನಿಯಾಗಿ 4,078 ದಿನಗಳು ಪೂರೈಸಲಿದ್ದಾರೆ. ಈ ಮೂಲಕ ಇಂದಿರಾ ಅವರ 4,077 ದಿನಗಳ ದಾಖಲೆ ಮುರಿಯಲಿದ್ದಾರೆ. ಇಂದಿರಾ ಗಾಂಧಿ ಅವರು 1966 ಜನವರಿ 24ರಿಂದ 1977 ಮಾರ್ಚ್‌ 24ರ ವರೆಗೆ ಸತತ ಪ್ರಧಾನಿ ಹುದ್ದೆಯಲ್ಲಿದ್ದರು. ಆ ದಾಖಲೆ ಈಗ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಗೆ ವರ್ಗಾವಣೆಯಾಗಲಿದೆ. ಅತಿ ದೀರ್ಘ‌ […]

Continue Reading