ಬ್ರೈನ್ ಟ್ಯೂಮರ್‌ಗೆ ಶಸ್ತ್ರಚಿಕಿತ್ಸೆಯೊಂದೆ ಪರಿಹಾರವೆ ? ಮಿಥ್ ಮತ್ತು ಫ್ಯಾಕ್ಟ್ಸ್ ಬಗ್ಗೆ ತಿಳಿದುಕೊಳ್ಳಿ

ಬ್ರೈನ್ ಟ್ಯೂಮರ್ ಎಂಬ ಪದವೆ ಭಯ ಮತ್ತು ಆತಂಕ ಹುಟ್ಟಿಸುತ್ತದೆ. ಇದರ ಬಗ್ಗೆ ಹೇಳುವುದೆ ಬೇಡ ಏಕೆಂದರೆ ಇದೊಂದು ಗಂಭೀರ ಕಾಯಿಲೆ ಎಂಬುದು ಎಲ್ಲರಿಗೂ ಸರ್ವೆ ಸಾಮಾನ್ಯವಾಗಿ ತಿಳಿದಿರುತ್ತದೆ. ಆದರೆ ಈ ಆರೋಗ್ಯ ಸಮಸ್ಯೆಯ ಬಗ್ಗೆ ಇರುವ ವಿಷಯಕ್ಕಿಂತ ಇಲ್ಲದಿರುವ ಸುಳ್ಳು ಸುದ್ದಿಗಳೇ ಹೆಚ್ಚು ಪ್ರಚಲಿತದಲ್ಲಿರುವುದರಿಂದ ಜನ ಯಾವುದನ್ನೂ ನಂಬಬೇಕು ಮತ್ತು ಯಾವುದು ಸುಳ್ಳು ಎಂಬುದರ ನಡುವೆ ಗೊಂದಲದಲ್ಲಿ ಇರುತ್ತಾರೆ. ಅಂತವುಗಳಲ್ಲಿ ಬ್ರೈನ್ ಟ್ಯೂಮರ್‌ಗೆ ಶಸ್ತ್ರಚಿಕಿತ್ಸೆಯೇ ಮದ್ದು ಎಂಬ ಮಾತು ಕೂಡ ಒಂದು. ಹಾಗಾದರೆ ಬ್ರೈನ್ ಟ್ಯೂಮರ್‌ […]

Continue Reading

ಜಪಾನ್ ಆಯ್ತು, ಈಗ ನೇಪಾಳದಿಂದಲೂ ಭಾರತದ ಮಾವಿನ ಹಣ್ಣಿಗೆ ನಿರ್ಬಂಧ

ಸುದ್ದಿ ಸಂಗ್ರಹ ಕಠ್ಮಂಡುಭಾರತದಿಂದ ಆಮದು ಮಾಡಿಕೊಳ್ಳುವ ಮಾವಿನ ಹಣ್ಣಿನ ಮೇಲೆ ನೇಪಾಳ ತಾತ್ಕಾಲಿಕ ನಿರ್ಬಂಧ ಹೇರಿದೆ. ಮಾವಿನ ಹಣ್ಣಿನಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದ ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನೇಪಾಳದ ಕ್ವಾರಂಟೈನ್ ಅಧಿಕಾರಿಗಳು ನಡೆಸಿದ ಪರೀಕ್ಷೆಯಲ್ಲಿ ಕೆಲವು ಮಾವಿನ ಹಣ್ಣಿನ ಸಾಗಣೆಗಳಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಕೀಟನಾಶಕ ಅಂಶಗಳು ಕಂಡುಬಂದಿವೆ. ಗ್ರಾಹಕರ ಆರೋಗ್ಯ ರಕ್ಷಣೆ ಮತ್ತು ಆಹಾರ ಸುರಕ್ಷತಾ ನಿಯಮಗಳ ಪಾಲನೆಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನೇಪಾಳ ಸರ್ಕಾರ ತಿಳಿಸಿದೆ. […]

Continue Reading

ಉಸಿರಿಗಾಗಿ ಪರಿಸರ ಸಂರಕ್ಷಿಸಿ: ಶಂಕರ ಡಾಂಗೆ

ಸುದ್ದಿ ಸಂಗ್ರಹ ಚಿತ್ತಾಪುರಪರಿಸರವನ್ನು ನಾವು ಕೇವಲ ಹಸಿರಿಗಾಗಿ ಅಲ್ಲ, ನಮ್ಮ ಉಸಿರಿಗಾಗಿ ಸಂರಕ್ಷಣೆ ಮಾಡಬೇಕು ಎಂದು ತಾಲೂಕ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಂಕರ ಡಾಂಗೆ ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಎನ್’ಸಿಸಿ ಘಟಕದ ಹಾಗೂ ಇಕೋ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನ ಕಾರ್ಯಕ್ರಮದಲ್ಲಿ ಸಸಿ ನೆಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾನವನ ಸ್ವಾರ್ಥಕ್ಕಾಗಿ ಪರಿಸರ ನಾಶವಾಗುತ್ತಿದೆ. ಹಸಿರು ವಾತಾವರಣ ಮಾಯವಾಗುತ್ತಿದೆ. ಹಲವು ರೀತಿಯ ಮಾಲಿನ್ಯಗಳಿಂದ ಪರಿಸರ […]

Continue Reading

ರಾಜ್ಯ ಪೊಲೀಸ್ ಇಲಾಖೆಯಿಂದ 3,395 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯ ಪೊಲೀಸ್ ಇಲಾಖೆಯ ಮಿಕ್ಕುಳಿದ (ಉಳಿದ ಮೂಲ) ವೃಂದದಲ್ಲಿನ ವಿವಿಧ ಜಿಲ್ಲಾ, ನಗರ ಹಾಗೂ ಘಟಕಗಳಲ್ಲಿ ಖಾಲಿ ಇರುವ ಒಟ್ಟು 3,395 ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ರಾಜ್ಯದ ಗೃಹ, ಮಾಹಿತಿ ತಂತ್ರಜ್ಞಾನ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ನೇಮಕಾತಿಯ ಪ್ರಮುಖ ಪ್ರಕ್ರಿಯೆಯಾದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸಲಿದ್ದು, ಆಫ್‌ಲೈನ್-ಒಎಂಆರ್ ಮಾದರಿಯಲ್ಲಿ ಪರೀಕ್ಷೆಗಳು […]

Continue Reading

6,000 ರೂ ಕೆಲಸಕ್ಕೆ ಸೇರಿದ್ದ ಇಂಜಿನಿಯರ್‌ ಬಳಿ 2 ಕೋಟಿ ಕ್ಯಾಶ್‌, 5 ಬಿಲ್ಡಿಂಗ್‌, 13 ಸೈಟು: ಬೆಚ್ಚಿಬಿದ್ದ ಅಧಿಕಾರಿಗಳು

ಸುದ್ದಿ ಸಂಗ್ರಹ ಭುವನೇಶ್ವರಕೆಲ ವರ್ಷಗಳ ಹಿಂದೆ 6,000 ರೂ. ವೇತನಕ್ಕೆ ಜೂನಿಯರ್‌ ಇಂಜಿನಿಯರ್‌ ಆಗಿ ಕೆಲಸಕ್ಕೆ ಸೇರಿದ್ದ ವ್ಯಕ್ತಿಯೊಬ್ಬರ ಬಳಿ ಬರೋಬ್ಬರಿ 2 ಕೋಟಿ ನಗದು ಹಣ, 5 ಬಹುಮಹಡಿ ಕಟ್ಟಡ ಮತ್ತು 14 ಸೈಟುಗಳಿರುವುದು ಪತ್ತೆಯಾಗಿದೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸರ್ಕಾರಿ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳ ತಂಡ ಎಂಜಿನಿಯರ್ ಬೈಕುಂಠ ನಾಥ್ ಬೆಹೆರಾಗೆ ಸಂಬಂಧಿಸಿದ 9 ಸ್ಥಳಗಳಲ್ಲಿ ದಾಳಿ ನಡೆಸಿದ ವೇಳೆ ಈ ರಹಸ್ಯ ಬಯಲಾಗಿದೆ. ಏಕಕಾಲಕ್ಕೆ ದಾಳಿ ನಡೆಸಿದ ಅಧಿಕಾರಿಗಳ ತಂಡ […]

Continue Reading

KGF ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಏಕಾಏಕಿ 50 ಸಿಬ್ಬಂದಿ ವರ್ಗಾವಣೆಗೆ ಆದೇಶ

ಸುದ್ದಿ ಸಂಗ್ರಹ ಕೋಲಾರಸಾರ್ವಜನಿಕ ಹಿತ ದೃಷ್ಠಿಯಿಂದ ಕೆಜಿಎಫ್ ಜಿಲ್ಲಾ ಪೊಲೀಸ್ ನಲ್ಲಿ‌ ಮೇಜರ್ ಸರ್ಜರಿ‌ ಮಾಡಲಾಗಿದೆ. ಏಕಾಏಕಿ 50 ಸಿಬ್ಬಂದಿಯನ್ನ ಸಾರ್ವತ್ರಿಕ ಹಿತ ದೃಷ್ಠಿಯಿಂದ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. 7 ಜನ ಸಹಾಯಕ ಸಬ್ ಇನ್ಸ್ ಪೆಕ್ಟರ್ ಸೇರಿ 43 ಜನ ಮುಖ್ಯಪೇದೆಗಳನ್ನ ವರ್ಗಾವಣೆ ಮಾಡಲಾಗಿದೆ. ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ ಅವರು ಪೊಲೀಸ್ ಠಾಣೆಗಳಲ್ಲಿ ಪಾರದರ್ಶಕ, ಜನ ಸ್ನೇಹಿ ಮಾಡುವ ಉದ್ದೇಶ ಹೊಂದಿದ್ದಾರೆ. ಹಾಗಾಗಿ ಹಲವು ವರ್ಷಗಳ ಕಾಲ ಒಂದೆ […]

Continue Reading

ಛತ್ತೀಸ್‌ಗಢದಲ್ಲಿ ಎಬೋಲಾ ಭೀತಿ: ಮೂವರು ಆಫ್ರಿಕಾ ಪ್ರಜೆಗಳಿಗೆ 21 ದಿನ ಕ್ವಾರಂಟೈನ್

ಸುದ್ದಿ ಸಂಗ್ರಹ ರಾಯ್ಪುರಇತ್ತೀಚಿಗೆ ಆಫ್ರಿಕಾದ ಹಲವೆಡೆ ಎಬೋಲಾ ವೈರಸ್ ಭೀತಿ ಹಬ್ಬಿಕೊಂಡಿತ್ತು. ಇದರ ನಡುವೆ ಇದೀಗ ಛತ್ತೀಸ್‌ಗಢದಲ್ಲಿ ಮೂವರು ಆಫ್ರಿಕಾ ಪ್ರಜೆಗಳನ್ನು 21 ದಿನಗಳ ಕಾಲ ಕ್ವಾರಂಟೈನ್‌ನಲ್ಲಿ ಇರಿಸಲಾಗಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಸಚಿವ ಶ್ಯಾಮ್ ಬಿಹಾರಿ ಜೈಸ್ವಾಲ್ ಮಾತನಾಡಿ, ಸದ್ಯ ಆಫ್ರಿಕಾದ ಮೂವರು ಪ್ರಜೆಗಳನ್ನು ದುರ್ಗ್‌ನಲ್ಲಿ ಕ್ವಾರಂಟೈನ್‌ನಲ್ಲಿ ಇರಿಸಲಾಗಿದ್ದು, ಆವರ ಆರೋಗ್ಯ ಸ್ಥಿತಿಗತಿಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಈವರೆಗೂ ಎಬೋಲಾ ವೈರಸ್ ಇರುವುದು ದೃಢಪಟ್ಟಿಲ್ಲ ಹಾಗೂ ಯಾವುದೆ ರೀತಿಯ ರೋಗದ ಲಕ್ಷಣಗಳು ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. […]

Continue Reading

ಇನ್ಮುಂದೆ ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ 10 ಗಂಟೆಯೊಳಗೆ ಹಾಜರಾಗಬೇಕು: ಸಿಎಸ್ ಆದೇಶ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಪಾರದರ್ಶಕ ಆಡಳಿತ ತರುವ ಉದ್ದೇಶದೊಂದಿಗೆ ಬಯೋಮೆಟ್ರಿಕ್‌ ವ್ಯವಸ್ಥೆ ಬದಲಾಗಿ ಕೃತಕ ಬುದ್ಧಿಮತ್ತೆ ಮತ್ತು ಜಿಪಿಎಸ್‌ ಆಧರಿತ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್‌ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಪ್ರತಿಯೊಬ್ಬ ಸರ್ಕಾರಿ ಅಧಿಕಾರಿ, ಸಿಬ್ಬಂದಿ ಇನ್ಮುಂದೆ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಗೆ ಹಾಜರಾಗಬೇಕು ಎಂದು ಶಾಲಿನಿ ರಜನೀಶ್‌ ಆದೇಶದಲ್ಲಿ ತಿಳಿಸಿದ್ದಾರೆ. ಸಿಎಂ ಡಿ.ಕೆ ಶಿವಕುಮಾರ್‌ ಅವರ ಸೂಚನೆ ಮೇರೆ ಆದೇಶ ಹೊರಡಿಸಿದ್ದಾರೆ. […]

Continue Reading

ಪಕ್ಷದ ನಾಯಕರಿಗೆ, ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದ ನೂತನ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಕಲಬುರಗಿ ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಸಂಪುಟದಲ್ಲಿ ರಾಜ್ಯದ ಗೃಹ ಇಲಾಖೆ, ಐಟಿಬಿಟಿ ಮತ್ತು ಇ-ಆಡಳಿತ ಇಲಾಖೆಗಳ ಸಚಿವರಾಗಿ ಕೆಲಸ ಮಾಡುವ ಮಹತ್ವದ ಜವಾಬ್ದಾರಿ ನೀಡಿರುವ ಕಾಂಗ್ರೆಸ್ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಡಿ.ಕೆ ಶಿವಕುಮಾರ, ಸಿದ್ದರಾಮಯ್ಯ, ರಂದೀಪ್ ಸುರ್ಜೆವಾಲ ರವರಿಗೆ ಕೃತಜ್ಞತೆ ಸಲ್ಲಿಸುತ್ತೆನೆ ಎಂದು ನೂತನ ಗೃಹ, ಐಟಿ/ಬಿಟಿ ಮತ್ತು ಇ-ಆಡಳಿತ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ವಿಶೇಷವಾಗಿ, ನನಗೆ ಸತತವಾಗಿ […]

Continue Reading

ಶಹಾಬಾದ್: ಕಾರಿನೊಳಗೆ ಉಸಿರುಗಟ್ಟಿ 3 ವರ್ಷದ ಮಗು ಸಾವು

ಸುದ್ದಿ ಸಂಗ್ರಹ ಶಹಾಬಾದ್ಕಾರಿನಲ್ಲಿ ಉಸಿರುಗಟ್ಟಿ ಮೂರು ವರ್ಷದ ಮಗು ಸಾವನಪ್ಪಿರುವ ಘಟನೆ ಶಹಾಬಾದ್ ತಾಲೂಕಿನ ತೊನಸನಹಳ್ಳಿ (ಎಸ್) ಗ್ರಾಮದಲ್ಲಿ ನಡೆದಿದೆ. ಕೊಟ್ಟುರೇಶ್ವರ ಎಂಬವರ ಮೂರು ವರ್ಷದ ಮಗು ಬಸವಪ್ರಭು ಮೃತ ದುರ್ದೈವಿ. ಮಗುವನ್ನು ಕರೆದುಕೊಂಡು ಶಾಲೆಗೆ ಕಾರಿನಲ್ಲಿ ಹೋಗಿದ್ದ ಪೋಷಕರು ಶಾಲೆ ಬಳಿ ಕಾರು ಪಾರ್ಕ್ ಮಾಡಿ ಲಾಕ್ ಮಾಡದೆ ಹೊಗಿದ್ದರು. ಈ ವೇಳೆ ಮಗು ಆಟವಾಡುತ್ತಾ ಕಾರಿನೊಳಗೆ ಹೋಗಿದೆ. ಆಗ ಕಾರಿನ ಎಲ್ಲಾ ಡೋರ್‌ಗಳು ಲಾಕ್ ಆಗಿವೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಮಗು ಎಲ್ಲಿ ಹೋಯಿತು ಎಂದು […]

Continue Reading