ಮರಕ್ಕೆ ಕಾರು ಡಿಕ್ಕಿ: ದಸ್ತಾಪುರ ಗ್ರಾಮದ ಇಬ್ಬರು ಸಾವು

ಸುದ್ದಿ ಸಂಗ್ರಹ ಕಾಳಗಿತಾಲೂಕಿನ ವಚ್ಚಾ–ಮತ್ತಿಮೂಡ ಕ್ರಾಸ್ ನಡುವಿನ ರಾಜ್ಯ ಹೆದ್ದಾರಿ ಪಕ್ಕದ ಮರವೊಂದಕ್ಕೆ ಕಾರು ಡಿಕ್ಕಿಯಾಗಿ ಒಳಗಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದು, ಒಬ್ಬ ಗಾಯಗೊಂಡಿದ್ದಾನೆ. ಕಾರಿನೊಳಗಿದ್ದ ಮೂವರು ಚಿಂಚೋಳಿ ತಾಲೂಕಿನವರಾಗಿದ್ದು, ದಸ್ತಾಪುರ ಗ್ರಾಮದ ಶಿವರಾಜ ಮಾರುತಿ ಓಂಕಾರ (24), ಅಣವಾರ ಗ್ರಾಮದ ಸಚಿನ ರಾಮಲಿಂಗ (30) ಮೃತರು. ಹೂವಿನಬಾವಿ (ಬಾಪುನಗರ) ಗ್ರಾಮದ ಶ್ರೀಕಾಂತ ಸುರೇಶ ಗಾಯಾಳು. ಕಾರು ಮರಕ್ಕೆ ಡಿಕ್ಕಿ ಹೊಡೆದ ಭೀಕರತೆ ಎಷ್ಟಿತ್ತೆಂದರೆ ಕಾರಿನ ಹಿಂಭಾಗದ ಚಕ್ರಗಳು ನೇತಾಡುತ್ತಿದ್ದವು. ಎಷ್ಟೊ ಸಮಯದ ವರೆಗೆ […]

Continue Reading

ಕಲಬುರಗಿ–ಬೆಂಗಳೂರು ವಿಮಾನಯಾನ ಪುನರಾರಂಭ

ಸುದ್ದಿ ಸಂಗ್ರಹ ಕಲಬುರಗಿಕಳೆದ ಎಂಟು ತಿಂಗಳಿಂದ ಸ್ಥಗಿತಗೊಂಡಿರುವ ಕಲಬುರಗಿ ಮತ್ತು ಬೆಂಗಳೂರು ನಡುವಣ ನಿತ್ಯ ವಿಮಾನ ಸೇವೆಗೆ ಜೂನ್‌ 10ರಿಂದ ಮತ್ತೆ ಚಾಲನೆ ಸಿಗಲಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸ್ಟಾರ್‌ ಏರ್‌ ಸಂಸ್ಥೆಯು, ನಿತ್ಯ ಸಂಜೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು ಸಂಜೆ 7.10ಕ್ಕೆ ಕಲಬುರಗಿ ತಲುಪಲಿದೆ. ಸಂಜೆ 7.40ಕ್ಕೆ ಕಲಬುರಗಿಯಿಂದ ಹೊರಟು ರಾತ್ರಿ 8.50ಕ್ಕೆ ಬೆಂಗಳೂರು ತಲುಪಲಿದೆ ಎಂದು ಸ್ಪಷ್ಟಪಡಿಸಿದೆ. ಅಲ್ಲದೆ ಜೂನ್ 10ರಿಂದ ಬುಕಿಂಗ್‌ ಅವಕಾಶ ನೀಡಿದೆ. ಈ ನಿರ್ಧಾರವು […]

Continue Reading

ವಿಶ್ವದಲ್ಲೆ ಅತ್ಯಂತ ಬಿಸಿ ನಗರ ಎಂಬ ಕುಖ್ಯಾತಿಗೆ ಪಾತ್ರವಾದ ಬಂಡಾ: 75 ವರ್ಷಗಳ ದಾಖಲೆ ಬ್ರೇಕ್

ಸುದ್ದಿ ಸಂಗ್ರಹ ಲಕ್ನೋಉತ್ತರ ಪ್ರದೇಶದ ಬುಂದೇಲ್‌ಖಂಡ ಪ್ರದೇಶದ ಬಂಡಾ ನಗರ ವಿಶ್ವದಲ್ಲೆ ಅತ್ಯಂತ ಗರಿಷ್ಠ ತಾಪಮಾನ ದಾಖಲಾದ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಇತ್ತೀಚೆಗಷ್ಟೆ ಬಂಡಾ ನಗರದಲ್ಲಿ ಬರೋಬ್ಬರಿ 48 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಈ ಮೂಲಕ ವಿಶ್ವದಲ್ಲೆ ಅತ್ಯಂತ ಗರಿಷ್ಠ ತಾಪಮಾನ ದಾಖಲಾದ ನಗರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಬಂಡಾ ನಗರದಲ್ಲಿ ಗರಿಷ್ಠ ಮಟ್ಟದ ತಾಪಮಾನ ದಾಖಲಾಗಿರುವುದು ಇದೆ ಮೊದಲಲ್ಲ. ಆದರೆ ಈ ಬಾರಿಯ ತಾಪಮಾನ ಹಳೆಯ ಎಲ್ಲಾ ದಾಖಲೆಗಳನ್ನು ಮುರಿದಿದೆ. ಇದಕ್ಕೂ ಮುನ್ನ […]

Continue Reading

ಸಹಸ್ರಾರು ಭಕ್ತರ ನಡುವೆ ಅದ್ಧೂರಿ ರಥೋತ್ಸವ

ಸುದ್ದಿ ಸಂಗ್ರಹ ಯಡ್ರಾಮಿತಾಲೂಕಿನ ಕಾಖಂಡಕಿ ಸದ್ಗುರು ಮಲ್ಲಾರಾಧ್ಯರ ಮತ್ತು ಮಹಾತ್ಮಾ ಕೋರಿಸಿದ್ಧೇಶ್ವರ ಭವ್ಯ ರಥೋತ್ಸವ ರವಿವಾರ ರಾತ್ರಿ ಸಹಸ್ರಾರು ಭಕ್ತರ ನಡುವೆ ಅದ್ಧೂರಿಯಾಗಿ ಜರುಗಿತು. ನಾಲವಾರ- ಕಾಖಂಡಕಿ ಉಭಯ ಮಠಗಳ ಪೀಠಾಧಿಪತಿ ಡಾ.ಸಿದ್ದತೋಟೇಂದ್ರ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಸಂಜೆ ಭವ್ಯ ರಥೋತ್ಸವ ಜರುಗಿತು. ರಥೋತ್ಸವದಲ್ಲಿ ಪಾಲ್ಗೊಂಡಿದ್ದ ಭಕ್ತರಿಂದ ಮಲ್ಲಾರಾಧ್ಯ ಮಹಾರಾಜ್ ಕೀ, ಕೋರಿಸಿದ್ಧೇಶ್ವರ ಮಹಾರಾಜ್ ಕೀ, ತೋಟೇಂದ್ರ ಮಹಾರಾಜ್ ಕೀ ಜೈ ಎಂಬ ಜಯಘೋಷ ಮುಗಿಲು ಮುಟ್ಟುವಂತಿತ್ತು. ಈ […]

Continue Reading

ವಿಜಯೇಂದ್ರ ಮೆಟ್ರೋ‌ ಪ್ರಯಾಣ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯ

ಸುದ್ದಿ ಸಂಗ್ರಹ ಚಿತ್ತಾಪುರ ವಿಜಯೇಂದ್ರ ಮೆಟ್ರೋ ಹತ್ತಿರುವ ಬಗ್ಗೆ ಮಾದ್ಯಮಗಳು ಪದೆ ಪದೆ ಸುದ್ದಿ ಬಿತ್ತರಿಸುತ್ತಿದ್ದು, ಆದರೆ ಈ ಪರಿಸ್ಥಿತಿಗೆ ಯಾರು ಕಾರಣ ಎಂದು ಯಾಕೆ ಕೇಳುತ್ತಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು‌ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು. ಮಾಡಬೂಳ ಗ್ರಾಮದ ಬಳಿ ನಿರ್ಮಾಣವಾಗಿರುವ ನೂತನ ಮೃಗಾಲಯ ಉದ್ಘಾಟನೆ ನೆರವೇರಿಸಿದ‌ ನಂತರ ಮಾಧ್ಯಮದ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,‌ ಮೋದಿ ವಿದೇಶದಿಂದ ತಂದ ಪ್ರಾಣಿಗಳು ಸತ್ತು ಹೋದವು. ಈಗ ನಾವು ತರುವ […]

Continue Reading

ಕಲ್ಯಾಣದಲ್ಲಿ ಹಸಿರು ಹೆಚ್ಚಿಸಲು ಆದ್ಯತೆ: ಈಶ್ವರ ಖಂಡ್ರೆ

ಸುದ್ದಿ ಸಂಗ್ರಹ ಚಿತ್ತಾಪುರಭೂಭಾಗದ ಶೇ 33ರಷ್ಟು ಹಸಿರು ಇರಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಹಸಿರು ಹೊದಿಕೆ ಬಹಳ ಕಡಿಮೆಯಿದ್ದು, ಅದನ್ನು ಹೆಚ್ಚಿಸಲು ಇನ್ನಷ್ಟು ಆದ್ಯತೆ ನೀಡಲಾಗುವುದು’ ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು. ತಾಲೂಕಿನ ಮಾಡಬೂಳ ಗ್ರಾಮದಲ್ಲಿ ಜಿಲ್ಲಾಡಳಿತ, ಅರಣ್ಯ ಇಲಾಖೆ, ಕೆಕೆಆರ್‌ಡಿಬಿ ಹಾಗೂ ಮೂರ್ತಿ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಸೋಮವಾರ ಸುಮಾರು 42 ಎಕರೆ 38 ಪ್ರದೇಶದ ವಿಸ್ತೀರ್ಣದಲ್ಲಿ 37.31 ಕೋಟಿ ವೆಚ್ಚದಲ್ಲಿ ನಿರ್ಮಾಣ […]

Continue Reading

ಕಾಖಂಡಕಿಯಲ್ಲಿ ತನಾರತಿ ಉತ್ಸವ: ಭಕ್ತರಿಂದ ಹರಕೆ ಸಮರ್ಪಣೆ ಸುದ್ದಿ ಸಂಗ್ರಹ ಕಲಬುರಗಿಯಡ್ರಾಮಿ ತಾಲೂಕಿನ ಶ್ರೀಕ್ಷೇತ್ರ ಕಾಖಂಡಕಿ ಸದ್ಗುರು ಮಲ್ಲಾರಾಧ್ಯ ಕೋರಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ತ ಶನಿವಾರ ಮಧ್ಯರಾತ್ರಿ ಭಕ್ತರು ತನಾರತಿ ಹೊತ್ತು ಗುರುದ್ವಯರಿಗೆ ತಮ್ಮ ಹರಕೆಯನ್ನು ತೀರಿಸಿದರು ಎಂದು ನಾಲವಾರ ಶ್ರೀ ಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ. ನಾಲವಾರ- ಕಾಖಂಡಕಿ ಮಠಗಳ ಪೀಠಾಧಿಪತಿ ಡಾ.ಸಿದ್ದತೋಟೆಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬಾದಾಮಿ ಅಮಾವಾಸ್ಯೆ ನಿಮಿತ್ತ ದಕ್ಷಿಣ ಭಾರತದ ಮಹಾದೀಪಮೇಳವೆಂದೆ ಪ್ರಖ್ಯಾತವಾದ […]

Continue Reading

ಬೈಕ್​ಗಳಲ್ಲಿ ಡೀಸೆಲ್ ಇಂಜಿನ್ ಏಕೆ ಇರುವುದಿಲ್ಲ ? ಪೆಟ್ರೋಲ್ ಮಾತ್ರ ಬಳಸುವುದರ ರಹಸ್ಯವೇನು ?

ಸುದ್ದಿ ಸಂಗ್ರಹ ನವದೆಹಲಿನೀವು ಯಾವತ್ತಾದರೂ ಬೈಕ್, ಸ್ಕೂಟಿಗಳಲ್ಲಿ ಡೀಸೆಲ್ ಇಂಜಿನ್ ಏಕೆ ಇರುವುದಿಲ್ಲ ? ಪೆಟ್ರೋಲ್ ಇಂಜಿನ್ ಮಾತ್ರ ಏಕೆ ಇರುತ್ತದೆ ಎಂಬುದನ್ನು ಯೋಚಿಸಿದ್ದಿರಾ ? ಬೈಕ್‌ಗಳಲ್ಲಿ ಪೆಟ್ರೋಲ್ ಬದಲಿಗೆ ಡಿಸೆಲ್ ಎಂಜಿನ್‌ ಬಳಸಿದರೆ ಏನಾಗುತ್ತದೆ ? ಎಂಬುದರ ವಿವರ ಇಲ್ಲಿದೆ. ಸಾಮಾನ್ಯವಾಗಿ, ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್‌ಗಳು ಒಂದೆ ರೀತಿ ಕಾರ್ಯನಿರ್ವಹಿಸುವುದಿಲ್ಲ, ಅವು ವಿಭಿನ್ನ ರೀತಿಯಲ್ಲಿ ಕಾರ್ಯನಿರ್ವಹಿಸುತ್ತವೆ. ಪೆಟ್ರೋಲ್ ಎಂಜಿನ್‌ನಲ್ಲಿ ಇಂಧನ ಹೊತ್ತಿಸಲು ಸ್ಪಾರ್ಕ್ ಪ್ಲಗ್ ಬಳಸಲಾಗುತ್ತದೆ. ಆದರೆ ಡೀಸೆಲ್ ಎಂಜಿನ್‌ನಲ್ಲಿ ಇದು ಕೆಲಸ ಮಾಡುವುದಿಲ್ಲ. […]

Continue Reading

ಇಂದಿನಿಂದ ಮಲ್ಲಾರಾಧ್ಯ ಕೋರಿಸಿದ್ದೇಶ್ವರ ಜಾತ್ರೆ: ನಾಳೆ ರಥೋತ್ಸವ

ಸುದ್ದಿ ಸಂಗ್ರಹ ಕಲಬುರಗಿಯಡ್ರಾಮಿ ತಾಲೂಕಿನ ಶ್ರೀ ಕ್ಷೇತ್ರ ಕಾಕಂಟಗಿ ಸದ್ಗುರು ಶ್ರೀ ಮಲ್ಲಾರಾಧ್ಯ ಕೋರಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಇಂದು ಮೇ.16 ಮತ್ತು 17ರಂದು ಪೀಠಾಧಿಪತಿ ಡಾ. ಸಿದ್ದತೋಟೆಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸನ್ನಿಧಿಯಲ್ಲಿ ನಡೆಯಲಿದೆ. ಪವಾಡ ಪುರುಷ, ಲೀಲಾಮೂರ್ತಿ ಮೂರ್ತಿ ಸದ್ಗುರು ಮಲ್ಲಾರಾಧ್ಯ ಮಹಾತ್ಮಾ ಕೋರಿಸಿದ್ದೇಶ್ವರ ಜಾತ್ರೆ ಪ್ರತಿ ವರ್ಷದ ಪದ್ಧತಿಯಂತೆ ಸಹಸ್ರಾರು ಭಕ್ತರ ಮಧ್ಯೆ ಸಂಭ್ರಮದಿಂದ ನಡೆಯಲಿದೆ. ನಾಲವಾರ- ಕಾಕಂಟಗಿ ಉಭಯ ಮಠದ ಪೀಠಾಧ್ಯಕ್ಷ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ಬಾದಾಮಿ ಅಮಾವಾಸ್ಯೆಯಂದು ಇಂದು ರಾತ್ರಿ […]

Continue Reading

ಮಹಿ ನಿವೃತ್ತಿ ಮುಚ್ಚಿಟ್ಟಿತಾ ಫ್ರಾಂಚೈಸಿ ? – ಸಿಎಸ್‌ಕೆ ಮೆಂಟರ್ ಆಗೋಕೆ ರೆಡಿನಾ ಧೋನಿ ?

ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಉಸಿರು ಮಹೇಂದ್ರ ಸಿಂಗ್‌ ಧೋನಿ ಅವರು 2026 ಐಪಿಎಲ್‌ನಲ್ಲಿ ನಿರಂತರ 11 ಪಂದ್ಯಗಳಿಗೂ ಗೈರಾಗುರುವುದು ಸಿಎಸ್‌ಕೆ ತಂಡದ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ತಾಲೀಮಿನಲ್ಲಿ ಸಕ್ರಿಯರಾಗಿ ಕಾಣಿಸಿಕೊಳ್ಳುತ್ತಿದ್ದರೂ, ಪಂದ್ಯದ ವೇಳೆ ಧೋನಿ ಅಲಭ್ಯರಾಗುತ್ತಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಫ್ರಾಂಚೈಸಿ ಮತ್ತು ನಾಯಕ ರುತುರಾಜ್ ಗಾಯಕ್ವಾಡ್ ಈ ಬಗ್ಗೆ ಸ್ಪಷ್ಟನೆ ನೀಡದ ಕಾರಣ, ಧೋನಿ ಸದ್ದಿಲ್ಲದೆ ನಿವೃತ್ತಿ ಪಡೆದಿದ್ದಾರೆಯೇ ಅಥವಾ ಕೇವಲ ಮೆಂಟರ್ ಪಾತ್ರಕ್ಕೆ ಸೀಮಿತವಾಗಿದ್ದಾರೆಯೇ ಎಂಬ ಚರ್ಚೆ ಶುರುವಾಗಿದೆ. ಇಂದು ಏಕನಾ ಕ್ರೀಡಾಂಗಣದಲ್ಲಿ […]

Continue Reading