ಮರಕ್ಕೆ ಕಾರು ಡಿಕ್ಕಿ: ದಸ್ತಾಪುರ ಗ್ರಾಮದ ಇಬ್ಬರು ಸಾವು
ಸುದ್ದಿ ಸಂಗ್ರಹ ಕಾಳಗಿತಾಲೂಕಿನ ವಚ್ಚಾ–ಮತ್ತಿಮೂಡ ಕ್ರಾಸ್ ನಡುವಿನ ರಾಜ್ಯ ಹೆದ್ದಾರಿ ಪಕ್ಕದ ಮರವೊಂದಕ್ಕೆ ಕಾರು ಡಿಕ್ಕಿಯಾಗಿ ಒಳಗಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದು, ಒಬ್ಬ ಗಾಯಗೊಂಡಿದ್ದಾನೆ. ಕಾರಿನೊಳಗಿದ್ದ ಮೂವರು ಚಿಂಚೋಳಿ ತಾಲೂಕಿನವರಾಗಿದ್ದು, ದಸ್ತಾಪುರ ಗ್ರಾಮದ ಶಿವರಾಜ ಮಾರುತಿ ಓಂಕಾರ (24), ಅಣವಾರ ಗ್ರಾಮದ ಸಚಿನ ರಾಮಲಿಂಗ (30) ಮೃತರು. ಹೂವಿನಬಾವಿ (ಬಾಪುನಗರ) ಗ್ರಾಮದ ಶ್ರೀಕಾಂತ ಸುರೇಶ ಗಾಯಾಳು. ಕಾರು ಮರಕ್ಕೆ ಡಿಕ್ಕಿ ಹೊಡೆದ ಭೀಕರತೆ ಎಷ್ಟಿತ್ತೆಂದರೆ ಕಾರಿನ ಹಿಂಭಾಗದ ಚಕ್ರಗಳು ನೇತಾಡುತ್ತಿದ್ದವು. ಎಷ್ಟೊ ಸಮಯದ ವರೆಗೆ […]
Continue Reading