7ನೇ ಕ್ಲಾಸ್ ವಿದ್ಯಾರ್ಥಿನಿಯ ರೇಪ್ ಮಾಡಿದ ಟ್ಯೂಷನ್ ಟೀಚರ್‌ಗೆ 10 ವರ್ಷ ಜೈಲು: ತೆಲಂಗಾಣ ಕೋರ್ಟ್ ಆದೇಶ

ಹೈದರಾಬಾದ್: 7ನೇ ಕ್ಲಾಸ್ ವಿದ್ಯಾರ್ಥಿನಿಯ ರೇಪ್ ಮಾಡಿದ ಟ್ಯೂಷನ್ ಟೀಚರ್‌ಗೆ ತೆಲಂಗಾಣ ವಿಶೇಷ ನ್ಯಾಯಾಲಯ 10 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಸುದೀರ್ಘ ವಿಚಾರಣೆಯ ನಂತರ ಶನಿವಾರ (ಅ.18) ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ವಿಶೇಷ ನ್ಯಾಯಾಲಯ ಶಿಕ್ಷಕ ದ್ರೋಣರಾಜು ಸುಬ್ರಹ್ಮಣ್ಯೇಶ್ವರ ರಾವ್‌ನ್ನು (60) ಅಪರಾಧಿ ಘೋಷಿಸಿ, 10 ವರ್ಷ ಜೈಲು ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. 2017ರ ಡಿಸೆಂಬರ್‌ನಲ್ಲಿ ಈ ಕೃತ್ಯ ನಡೆದಿದೆ. ಸಂತ್ರಸ್ತ ಬಾಲಕಿ ರಾಜೇಂದ್ರ ನಗರ […]

Continue Reading

ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ:10ನೇ ಪಾಸಾಗಿದ್ದರೆ ಸಾಕು

ಮೆಟ್ರಿಕ್ಯುಲೇಷನ್ ಮತ್ತು ಇಂಟರ್‌ಮಿಡಿಯೇಟ್‌ ಪಾಸಾದ ಮತ್ತು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿರುವವರಿಗೆ ಗುಡ್​​ನ್ಯೂಸ್​​ ಇಲ್ಲಿದೆ. ಭಾರತೀಯ ಸೇನೆಯು ಕ್ಲರ್ಕ್ ಮತ್ತು ಎಂಟಿಎಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಅರ್ಜಿ ಪ್ರಕ್ರಿಯೆಯು ಅಕ್ಟೋಬರ್ 11 ರಿಂದ ಪ್ರಾರಂಭವಾಗಿದ್ದು, ನವೆಂಬರ್ 15 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಸೇನೆಯ ಅಧಿಕೃತ ವೆಬ್‌ಸೈಟ್ indianarmy.nic.in ಭೇಟಿ ನೀಡುವ ಮೂಲಕ ಸಲ್ಲಿಸಬೇಕು. ಎಲೆಕ್ಟ್ರಾನಿಕ್ಸ್ ಮತ್ತು ಮೆಕ್ಯಾನಿಕಲ್ ಎಂಜಿನಿಯರ್‌ಗಳ ಮಹಾನಿರ್ದೇಶನಾಲಯ (DG EME) ಬಹು ವಹಿವಾಟುಗಳು ಮತ್ತು ವರ್ಗಗಳಲ್ಲಿ ವಿವಿಧ ಗ್ರೂಪ್ […]

Continue Reading

ʻನೊಬೆಲ್‌ ಶಾಂತಿ ಪ್ರಶಸ್ತಿʼಯನ್ನು ಟ್ರಂಪ್‌ಗೆ ಅರ್ಪಿಸಿದ ಕೊರಿನಾ ಮಚಾದೋ

ನವದೆಹಲಿ: 2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗಿದ್ದು, ಮಾರಿಯಾ ಕೊರಿನಾ ಮಚಾದೋ ಈ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿದ್ದಾರೆ. ವೆನೆಜುವೆಲಾದ ಜನರ ಪ್ರಜಾತಾಂತ್ರಿಕ ಹಕ್ಕುಗಳಿಗಾಗಿ ಮತ್ತು ಶಾಂತಿಗಾಗಿ ನಡೆಸಿದ ಹೋರಾಟಕ್ಕಾಗಿ ಮಾರಿಯಾ ಕೊರಿನಾ ಮಚಾದೋ ಅವರಿಗೆ 2025ರ ನೊಬೆಲ್ ಶಾಂತಿ ಪ್ರಶಸ್ತಿ ನೀಡಲಾಗಿದೆ ಎಂದು ನಾರ್ವೆಯ ನೊಬೆಲ್ ಸಮಿತಿ ತಿಳಿಸಿದೆ. ಈ ಕುರಿತು ಎಕ್ಸ್‌ ಪೋಸ್ಟ್‌ನಲ್ಲಿ ಹರ್ಷ ವ್ಯಕ್ತಪಡಿಸಿರುವ ಮಚಾದೋ, ನೊಬೆಲ್‌ ಶಾಂತಿ ಪಾರಿತೋಷಕವು ಎಲ್ಲಾ ವೆನೆಜುವೆಲಾ ಜನರ ಹೋರಾಟಕ್ಕೆ ಸಿಕ್ಕ ಮನ್ನಣೆಯಾಗಿದೆ. ಈ ಪುರಸ್ಕಾರವನ್ನು ವೆನೆಜುವೆಲಾದ […]

Continue Reading

ಬಿಗ್‌ಬಾಸ್‌ ಶೋ ಬಂದ್‌: ರಾತ್ರೋರಾತ್ರಿ ಮನೆಯಿಂದ ಎಲ್ಲಾ ಸ್ಪರ್ಧಿಗಳು ಹೊರಕ್ಕೆ

ರಾಮನಗರ: ಪರಿಸರ ನಿಯಮ ಉಲ್ಲಂಘನೆ ಆರೋಪದಲ್ಲಿ ಜಾಲಿವುಡ್‌ ಸ್ಟುಡಿಯೋಸ್‌ಗೆ ಬೀಗ ಬಿದ್ದಿದ್ದು, ಅಲ್ಲಿ ನಡೆಯುವ ಬಿಗ್‌ಬಾಸ್‌ ಶೋ ಕೂಡ ಬಂದ್‌ ಆಗಿದೆ. ಬಿಗ್‌ಬಾಸ್‌ ಸ್ಪರ್ಧಿಗಳು ಮನೆಯಿಂದ ಹೊರಬಂದಿದ್ದಾರೆ. ಅಧಿಕೃತವಾಗಿ ಬಿಗ್‌ಬಾಸ್‌ ಮನೆಗೆ ಬೀಗ ಹಾಕಲಾಗಿದೆ. ಸ್ಪರ್ಧೆಯಲ್ಲಿದ್ದ ಎಲ್ಲರನ್ನೂ ರಾತ್ರಿ ಮನೆಯಿಂದ ಹೊರಹಾಕಲಾಗಿದೆ. ಸ್ವತಃ ತಹಸೀಲ್ದಾರ್‌ ತೇಜಸ್ವಿನಿಯವರು ಮುಂದೆ ನಿಂತು ಸ್ಪರ್ಧಿಗಳನ್ನು ಹೊರಗೆ ಕರೆತಂದಿದ್ದಾರೆ. ಬಿಗ್‌ಬಾಸ್‌ ದಿಢೀರ್‌ ಸ್ಥಗಿತದಿಂದ ಸ್ಪರ್ಧಿಗಳು, ತಂತ್ರಜ್ಞರು ಸೇರಿದಂತೆ 700 ಕ್ಕೂ ಹೆಚ್ಚು ಜನರು ಮನೆಗೆ ವಾಪಸ್‌ ಆಗುವಂತಾಗಿದೆ. ಆರು ತಿಂಗಳ ಕಾಲ ಮೂರು […]

Continue Reading

ವಾಟ್ಸಾಪ್​​ನಲ್ಲಿ ಮದುವೆ ಇನ್ವಿಟೇಶನ್ ಬಂದರೆ ಓಪನ್ ಮಾಡಬೇಡಿ, ಖಾತೆಯಲ್ಲಿರುವ ಅಷ್ಟೂ ಹಣ ಹೋಗಬಹುದು ಎಚ್ಚರ

ಗುರುಗ್ರಾಮ: ತಂತ್ರಜ್ಞಾನ ಬದಲಾದಂತೆ ಸೈಬರ್ ಅಪರಾಧಿಗಳು ಕೂಡ ಹಣ ವಸೂಲಿಗೆ ಹಲವು ಹೊಸ ಟ್ರಿಕ್​ ಅಳವಡಿಸಿಕೊಳ್ಳುತ್ತಿದ್ದಾರೆ. ಜನರಿಗೆ ಅನುಮಾನ ಬರದಂತೆ ಹಣವನ್ನು ಲೂಟಿ ಮಾಡುತ್ತಿದ್ದಾರೆ. ವಾಟ್ಸಾಪ್​ನಲ್ಲಿ ಬಂದ ಮದುವೆ ಇನ್ವಿಟೇಷನ್ ಓಪನ್ ಮಾಡಿ ವ್ಯಕ್ತಿಯೊಬ್ಬ 97 ಸಾವಿರ ರೂ. ಕಳೆದುಕೊಂಡಿರುವ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಪರಿಚಯ ಇರುವವರಿಂದ ಅಲ್ಲ, ಅಪರಿಚಿತ ದೂರವಾಣಿ ಸಂಖ್ಯೆಯಿಂದ ಮದುವೆ ಆಮಂತ್ರಣ ಬಂದರೆ ಅದನ್ನು ಓಪನ್ ಮಾಡಲೇಬೇಡಿ. ಅಂತಹ ಲಿಂಕ್​ಗಳನ್ನು ಓಪನ್ ಮಾಡಿದರೆ ನಿಮಗೆ ಅರಿವಿಲ್ಲದೆ ಸೈಬರ್ ವಂಚಕರು ನಿಮ್ಮ ಖಾತೆಯಿಂದ ಹಣ […]

Continue Reading

ಜೋಡೆತ್ತು ಮಾಡ್ತಾ ನಮಗೂ ಜೋಡೆತ್ತು ಸಿಕ್ತು: ಮದ್ವೆ ಬಗ್ಗೆ ಚಿಕ್ಕಣ್ಣ ಫಸ್ಟ್ ರಿಯಾಕ್ಷನ್

ಹಾಸ್ಯ ನಟ ಚಿಕ್ಕಣ್ಣ ಸೀಕ್ರೆಟಾಗಿ ಮದ್ವೆ ನಿಶ್ಚಯ ಮಾಡಿಕೊಂಡು ಸುದ್ದಿಯಾಗಿದ್ದಾರೆ. ಇತ್ತೀಚೆಗಷ್ಟೇ ಹೂ ಮುಡಿಸುವ ಶಾಸ್ತ್ರ ನಡೆದು ಫೋಟೋಗಳು ವೈರಲ್ ಆಗಿದ್ದವು. ʻಜೋಡೆತ್ತುʼ ಸಿನಿಮಾ ಚಿತ್ರಕ್ಕೆ ಸಿದ್ಧತೆ ಮಾಡಿಕೊಂಡಿರುವ ಚಿಕ್ಕಣ್ಣ, ಮತ್ತೊಂದು ಕಡೆ ಮದ್ವೆ ತಯಾರಿ ನಡೆಸಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಸಿನಿಮಾ ಚಿತ್ರೀಕರಣ ಮುಗಿಯುವ ಹೊತ್ತಿಗೆ ನನ್ನ ಮದ್ವೆ ಕೂಡ ಆಗಿರುತ್ತೆ ಎಂದು ಚಿಕ್ಕಣ್ಣ ಹೇಳಿದರು. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ಮಹದೇವಪುರ ಗ್ರಾಮದ ಹುಡುಗಿ ಪಾವನಾ ಅವರನ್ನು ಚಿಕ್ಕಣ್ಣ ವರಿಸಲಿದ್ದು, ಇದು ಅರೇಂಜ್‌ ಮ್ಯಾರೇಜ್ […]

Continue Reading

ನಾಡಿನ ಕಲೆ, ಪರಂಪರೆಗೆ ಶರಣಸಿರಸಗಿ ಕೊಡುಗೆ ಅಪಾರ

ಕಲಬುರಗಿ: ಶರಣಸಿರಸಗಿ ಗ್ರಾಮವು ಪುರಾತನ ನಂದಿ ಬಸವಣ್ಣ, ಮಲ್ಲಿಕಾರ್ಜುನ, ಗಣೇಶ, ಹನುಮಾನ ದೇವಸ್ಥಾನ, ವೀರಗಲ್ಲುಗಳು ಹೊಂದಿವೆ, ಇಲ್ಲಿನ ಕಲೆ, ಪರಂಪರೆ ಪ್ರಮುಖವಾಗಿದೆ. ಮಹಾದಾಸೋಹಿ ಶ್ರೀ ಶರಣಬಸವೇಶ್ವರರು ಮೆಟ್ಟಿದ ಪವಿತ್ರ ಭೂಮಿ ಇದಾಗಿದೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ಶರಣಸಿರಸಗಿ ಗ್ರಾಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ-40ರ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ಪ್ರಾಚೀನ ಕಾಲದಲ್ಲಿ ಈ ಗ್ರಾಮವು ಕಲೆ, ಸಾಹಿತ್ಯ, ಸಂಗೀತ, […]

Continue Reading

ಆರೋಗ್ಯ ಸಂಜೀವಿನಿ ಯೋಜನೆಯ ಸದ್ಬಳಕೆ ಮಾಡಿಕೊಳ್ಳಿ: ಬಸವರಾಜ ಬಳೊಂಡಗಿ

ಕಲಬುರಗಿ: ರಾಜ್ಯ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಿದ್ದು, ಜಿಲ್ಲೆಯಲ್ಲಿರುವ ಸರ್ಕಾರಿ ನೌಕರರು ಹಾಗೂ ಅವರಕುಟುಂಬದವರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೊಂಡಗಿ ತಿಳಿಸಿದ್ದಾರೆ. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅ.1 ರಿಂದ ಜಾರಿಗೊಳಿಸಲಾಗಿದೆ. ಪತಿ-ಪತ್ನಿ ಸರ್ಕಾರಿ ನೌಕರರಾಗಿದ್ದಲ್ಲಿ ಒಬ್ಬರು ಮಾತ್ರ ವೇತನದಲ್ಲಿ ವಂತಿಕೆ ನೀಡಬೇಕು. ರಾಜ್ಯ ಸರ್ಕಾರದ ಅಧಿಕಾರಿ […]

Continue Reading

ಭಕ್ತಿ ಭಾವದಿಂದ ನಡೆದ ನಾಲವಾರ ಶ್ರೀಗಳ ಜನ್ಮದಿನೋತ್ಸವ

ಚಿತ್ತಾಪುರ: ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನೋತ್ಸವ ಮತ್ತು ಹಿಂದಿನ ಪೀಠಾಧಿಪತಿ ಲಿಂ.ತೋಟೇಂದ್ರ ಶಿವಯೋಗಿಗಳ ಪುಣ್ಯಾರಾಧನಾ ಮಹೋತ್ಸವವು ಆಯುಧ ಪೂಜೆಯ ದಿನದಂದು ಸಹಸ್ರಾರು ಭಕ್ತರ ಮಧ್ಯೆ ಭಕ್ತಿಭಾವದೊಂದಿಗೆ ನೆರವೇರಿತು. ಅತಿವೃಷ್ಟಿ, ಭೀಮಾ ನದಿಯ ಪ್ರವಾಹದಿಂದ ರೈತರು ಸಂಕಷ್ಟ ಪರಿಸ್ಥಿತಿಯಲ್ಲಿರುವುದರಿಂದ, ಜನ್ಮದಿನದ ಅದ್ಧೂರಿ ಆಚರಣೆಗೆ ಪೂಜ್ಯರು ತಡೆಯೊಡ್ಡಿದ್ದರು ಸಹ ಬುಧವಾರ ಪ್ರಾತಃ ಕಾಲದಿಂದಲೇ ತಂಡೋಪತಂಡವಾಗಿ ಸಹಸ್ರಾರು ಭಕ್ತರು ಶ್ರೀ ಮಠಕ್ಕೆ ಆಗಮಿಸಿ, ಪೂಜ್ಯರಿಗೆ ಗುರುವಂದನೆ ಸಲ್ಲಿಸಿದರು. ಮಠದ ಹಿಂದಿನ ಪೀಠಾಧಿಪತಿ ಲೀಲಾಮೂರ್ತಿ, […]

Continue Reading

ಅ.1 ರಂದು ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಜನ್ಮದಿನೋತ್ವವ ಪ್ರವಾಹ ಪರಿಸ್ಥಿತಿ ಹಿನ್ನೆಲೆ ಸರಳವಾಗಿ ಆಚರಣೆಗೆ ನಿರ್ಧಾರ

ಚಿತ್ತಾಪುರ: ಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ಕಲಬುರಗಿ ಜಿಲ್ಲೆಯ ಶ್ರೀಕ್ಷೇತ್ರ ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಹಿಂದಿನ ಪೀಠಾಧಿಪತಿ ಲಿಂ.ತೋಟೇಂದ್ರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಹಾಗೂ ಪ್ರಸ್ತುತ ಪೀಠಾಧಿಪತಿ ಪೂಜ್ಯ ಶ್ರೀ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಜನ್ಮದಿನೋತ್ಸವ ಕಾರ್ಯಕ್ರಮ ಬುಧವಾರ ಆಯುಧ ಪೂಜೆಯ ದಿನದಂದು ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀಮಠದ ಸಹಸ್ರಾರು ಸದ್ಭಕ್ತರು ಶ್ರೀಗಳ ಜನ್ಮದಿನಾಚರಣೆ ಕಾರ್ಯಕ್ರಮ ಅದ್ಧೂರಿಯಾಗಿ ಆಚರಣೆ ಮಾಡಲು ಎಲ್ಲಾ ಸಿದ್ಧತೆಗಳು ಮಾಡಿಕೊಂಡಿದ್ದರು.ಆದರೆ ಕಲ್ಯಾಣ ಕರ್ನಾಟಕದ ಭಾಗದಲ್ಲಿ ಅತಿವೃಷ್ಟಿ, […]

Continue Reading