ಲಂಚ ಪಡೆದ ಗ್ರಾ.ಪಂ ಕರವಸೂಲಿಗಾರ ಸಂತೋಷ ರಾಠೋಡ ಲೋಕಾಯುಕ್ತ ಬಲೆಗೆ

ಸುದ್ದಿ ಸಂಗ್ರಹ ಚಿತ್ತಾಪುರ ಯುಪಿಐ ಮೂಲಕ ಲಂಚ ಪಡೆದ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮ ಪಂಚಾಯಿತಿ ಕರ ವಸೂಲಿಗಾರ ಸಂತೋಷ ರಾಠೋಡ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕರದಾಳ ಪಂಚಾಯಿತಿ ವ್ಯಾಪ್ತಿಯ ಹನ್ನಿಕೇರಿ ಗ್ರಾಮದ ರಾಮನಾಯಕ ತಾಂಡಾ ನಿವಾಸಿ ಸವಿತಾ ಎಂಬುವವರಿಗೆ ಸರ್ಕಾರ ಡಾ. ಬಿ.ಆರ್‌ ಅಂಬೇಡ್ಕರ್‌ ನಿವಾಸ ಯೋಜನೆಯಡಿಯ ಮನೆ ಮಂಜೂರು ಮಾಡಿತ್ತು. ಆ ಮನೆ ಕಟ್ಟಡದ 3 ಹಾಗೂ 4ನೇ ಕಂತಿನ ಹಣ ಬಿಡುಗಡೆಗೆ ಬಿಲ್‌ ಕಲೆಕ್ಟರ್‌ ಸಂತೋಷ 22 ಸಾವಿರ ಲಂಚಕ್ಕೆ ಬೇಡಿಕೆ […]

Continue Reading

ನಾಲವಾರ ಗ್ರಾಮಕ್ಕೆ ಹೊರಟಿದ್ದಾಗ ಹಲಕರ್ಟಿ ಬಳಿ ಕಂದಕಕ್ಕೆ ಉರುಳಿದ KKRTC ಬಸ್

ಸುದ್ದಿ ಸಂಗ್ರಹ ವಾಡಿ ಚಾಲಕನ ನಿಯಂತ್ರಣ ತಪ್ಪಿ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ (KKRTC)ಯ ಬಸ್ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕಂದಕಕ್ಕೆ ಉರುಳಿದ ಘಟನೆ ಸೋಮವಾರ ಹಲಕರ್ಟಿ ಸಮೀಪ ಸಂಭವಿಸಿದೆ. ಕಲಬುರ್ಗಿಯಿಂದ ವಾಡಿ ಮಾರ್ಗವಾಗಿ ನಾಲವಾರ ಗ್ರಾಮಕ್ಕೆ ಹೊರಟಿದ್ದ KKRTC ಬಸ್ ಅಪಘಾತಕ್ಕಿಡಾಗಿದೆ. ಬಲರಾಮ ಚೌಕ್ ಮಾರ್ಗದ ಫ್ಲೈಓವರ್ ಹತ್ತಿರದ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ, ಪಕ್ಕದ ನಾಲೆಗೆ ಜಾರಿದೆ. ಬಸ್ಸಿನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಈ ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, […]

Continue Reading

ರಾಷ್ಟ್ರೀಯತೆಯ ಆದರ್ಶಗಳು ಅಜರಾಮರ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿ ರಾಷ್ಟ್ರಕ್ಕಾಗಿ ನಿಸ್ವಾರ್ಥ ಸೇವೆಯೇ ತನ್ನ ಧ್ಯೇಯವಾಗಿರಿಸಿಕೊಂಡಿದ್ದ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಆದರ್ಶಗಳು ದೇಶ ಭಕ್ತರ ಮನದಲ್ಲಿ ಎಂದೆಂದಿಗೂ ಅಜಾರಾಮರ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕ ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ 125ನೇಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ದಿನದಂದು ದೇಶಕ್ಕಾಗಿ ಅವರು ಮಾಡಿರುವ ತ್ಯಾಗ ಮತ್ತು ರಾಷ್ಟ್ರದ ಏಕತೆಗಾಗಿ ಅವರ ಕೊಡುಗೆ ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ […]

Continue Reading

ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ: ಕೆಕೆಆರ್‌ಟಿಸಿಯ ಚಾಲಕ ಮತ್ತು ಸಿಬ್ಬಂದಿ ಅಮಾನತು

ಸುದ್ದಿ ಸಂಗ್ರಹ ಕಲಬುರಗಿಕೆಕೆಆರ್‌ಟಿಸಿ ಬಸ್‌ನ ಹೆಡ್‌ಲೈಟ್ ಮಂದವಾಗಿದ್ದರಿಂದ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಬಸ್ ಚಾಲನೆ ಮಾಡಿ ಪ್ರಯಾಣಿಕರ ಜೀವದ ಜೊತೆಗೆ ಚೆಲ್ಲಾಟವಾಡಿದ ಘಟನೆ ಗಂಭೀರವಾಗಿ ಪರಿಗಣಿಸಿ ನಿಗಮದ ಕಲಬುರಗಿ ವಿಭಾಗ–1ರ ವಿಭಾಗೀಯ ನಿಯಂತ್ರಣಾಧಿಕಾರಿ ಬಸ್ ಚಾಲಕ ಮತ್ತು ಇಬ್ಬರು ತಾಂತ್ರಿಕ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿದ್ದಾರೆ. ಜುಲೈ 4ರಂದು ರಾತ್ರಿ ಕಲಬುರಗಿಯಿಂದ ಚಿಂಚೋಳಿಗೆ ಹೊರಟಿದ್ದ ಬಸ್‌ನ ಹೆಡ್‌ಲೈಟ್ ಸರಿಯಾಗಿ ದೀಪ ಹೊರಸೂಸುತ್ತಿರಲಿಲ್ಲ. ಹೀಗಾಗಿ ಬಸ್ ನಿರ್ವಾಹಕ ಮತ್ತು ಇತರ ಪ್ರಯಾಣಿಕರ ಮೊಬೈಲ್ ಟಾರ್ಚ್ ಬೆಳಕಲ್ಲಿ ಬಸ್ ಚಿಂಚೋಳಿ ತಲುಪಿತ್ತು. […]

Continue Reading

ಪೋಕ್ಸೊ ಆರೋಪಿ ಪರಾರಿ ಪ್ರಕರಣ: ಅಫಜಲಪುರ ಪಿಎಸ್ಐ ಅಮಾನತು

ಸುದ್ದಿ ಸಂಗ್ರಹ ಕಲಬುರಗಿಪೋಕ್ಸೊ ಪ್ರಕರಣದ ಆರೋಪಿ ಠಾಣೆಯಿಂದ ತಪ್ಪಿಸಿಕೊಂಡ ಹೋಗಿದ್ದ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ್ದಕ್ಕಾಗಿ ಅಫಜಲಪುರ ಠಾಣೆಯ ಪಿಎಸ್‌ಐ ಸೋಮಲಿಂಗ ಒಡೆಯರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಎಸ್ಪಿ ಅಡ್ಡೂರು ಶ್ರೀನಿವಾಸುಲು ಆದೇಶ ಹೊರಡಿಸಿದ್ದಾರೆ. ಬಾಲಕಿಯನ್ನು ಅಪಹರಿಸಿ ಪುಣೆಗೆ ಕರೆದೊಯ್ದಿದ್ದ ಆರೋಪಿ ಮಂಜುನಾಥ ಇಂಗಳೆ (23)ಯನ್ನು ಬಂಧಿಸಿ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆತರಲಾಗಿತ್ತು. ಈ ಸಂದರ್ಭದಲ್ಲಿ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿದ್ದ. ಘಟನೆಯ ಬೆನ್ನಲ್ಲೆ ಅಫಜಲಪುರ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ರವಿದಾಸ್ ಕಟ್ಟಿಮನಿ, ಕಾನ್‌ಸ್ಟೆಬಲ್‌ಗಳಾದ ಶಿವಣ್ಣ ಮತ್ತು ಪ್ರಶಾಂತ್ […]

Continue Reading

ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳಿವೆ: ತೇಗಲತಿಪ್ಪಿ

ಸುದ್ದಿ ಸಂಗ್ರಹ ಶಹಾಬಾದ್ ವಚನ ಸಾಹಿತ್ಯ ನಮ್ಮ ಬದುಕಿನ ಆದರ್ಶಗಳಾಗಿವೆ, ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳಿವೆ. ಅಂತಹ ವಚನ ಸಾಹಿತ್ಯವನ್ನು ಉಳಿಸಿ ಬೆಳೆಸಿ ಸಂರಕ್ಷಣೆ ಮಾಡಿದ ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ನಿಜವಾದ ಸಾಧಕರಾಗಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ್ ಪಾಟೀಲ್ ತೇಗಲತಿಪ್ಪಿ ಹೇಳಿದರು. ತಾಲೂಕಿನ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ವಚನ ಪಿತಾಮಹ ಡಾ.ಫ.ಗು ಹಳಕಟ್ಟಿ ಅವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ‘ವಚನ ಸಂರಕ್ಷಣಾ ದಿನದ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ […]

Continue Reading

ಕಿರುತೆರೆಗೆ ಎಂಟ್ರಿ ಕೊಟ್ಟ ಮಾಜಿ ಸಚಿವ ಬಿ.ಸಿ ಪಾಟೀಲ್

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಗೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಯರ ಜೀವನದ ಪವಿತ್ರ ಪಯಣವನ್ನು ಭಕ್ತರು ಕಣ್ತುಂಬಿ ಕೊಳ್ಳುತ್ತಿದ್ದಾರೆ. ರಾಯರ ಮಹಿಮೆಯನ್ನು ತೆರೆ ಮೇಲೆ ಅಚ್ಚುಕಟ್ಟಾಗಿ ಮೂಡಿಸುತ್ತಿರುವ ಈ ಕಥಾಹಂದರಕ್ಕೆ ಮನೆಮನೆಯಿಂದಲೂ ಉತ್ತಮ ಮೆಚ್ಚುಗೆ ಸಿಕ್ಕಿದೆ. ಕಳೆದ ವಾರದ ಕಥೆಯಲ್ಲಿ ಪೂರ್ವಾಶ್ರಮದ ಹೆಂಡತಿ ಸರಸ್ವತಿಗೆ ಸದ್ಗತಿ ಕೊಟ್ಟ ಸಂಚಿಕೆ ಮನದುಂಬಿ ಬಂತು. ಪ್ರೇಕ್ಷಕರನ್ನು ಅಲುಗಾಡದಂತೆ ಸರೆ ಹಿಡಿಯಿತು. ರಾಯರ ಪಾತ್ರದಲ್ಲಿ ಪರಿಕ್ಷೀತ್ ರ ನಟನೆ ರಾಯರನ್ನೇ ನೋಡಿದಷ್ಟು ಪ್ರೇಕ್ಷಕರು ಮೆಚ್ಚುಗೆ […]

Continue Reading

ಟೆಂಗಳಿ: ಮತದಾರರ ಪಟ್ಟಿಯ‌ ವಿಶೇಷ ತೀವ್ರ ಪರಿಷ್ಕರಣೆಗೆ ಚಾಲನೆ

ಸುದ್ದಿ ಸಂಗ್ರಹ ಕಾಳಗಿ ತಾಲೂಕಿನ ಟೆಂಗಳಿ ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್ಐಆರ್) ಕಾರ್ಯ ಬಿಎಲ್ಒಗಳು ಮನೆ ಮನೆಗೆ ತೆರಳಿ ಮತದಾರರ ಮಾಹಿತಿ ಸಂಗ್ರಹಿಸುವ ಕಾರ್ಯಕ್ಕೆ ಗ್ರಾಮ ಲೆಕ್ಕಾಧಿಕಾರಿ ಯೋಗೇಶ್ ಕಟ್ಟಿಮನಿ ಮಂಗಳವಾರ ಚಾಲನೆ‌ ನೀಡಿದರು. ವಾರ್ಡ್’ನ ಒಂದು ಕುಟುಂಬದ ಸದಸ್ಯರಿಗೆ ಎಸ್ಐಆರ್ ನಮೂನೆಗಳನ್ನು ವಿತರಿಸಿ, ಅವರಿಂದ ಮಾಹಿತಿ ಪಡೆಯಲಾಯಿತು. ಬಳಿಕ ಗ್ರಾಮ ಲೆಕ್ಕಾಧಿಕಾರಿ ಯೋಗೇಶ್ ಕಟ್ಟಿಮನಿ ಮಾತನಾಡಿ, ಮನೆಮನೆಗೆ ಅರ್ಜಿ ವಿತರಿಸಲಾಗುವುದು. ನಂತರ ಭರ್ತಿ ಮಾಡಿದ ಅರ್ಜಿಗಳನ್ನು ಪಡೆದು […]

Continue Reading

ಬಹಮನಿ ಇತಿಹಾಸ ಸಾರುವ ತಾಜ್ ಸುಲ್ತಾನಪುರದ ಗುಂಬಜ್‌ಗಳು

ಸುದ್ದಿ ಸಂಗ್ರಹ ಕಲಬುರಗಿ ಬಹಮನಿ ಸಾಮ್ರಾಜ್ಯದ ಕಲೆ, ಸಾಹಿತ್ಯ, ಸಂಸ್ಕೃತಿಯ ಇತಿಹಾಸ ಸಾರುವ ತಾಜ್ ಸುಲ್ತಾನಪುರದ ಗುಂಬಜ್‌ಗಳ ಕೊಡುಗೆ ಅಪಾರವಾಗಿದೆ ಎಂದು ಸಂಶೋಧಕ-ಸಾಹಿತಿ ಮತ್ತು ಕಲಬುರಗಿ ಜಿಲ್ಲಾ 22ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ತಾಲೂಕಿನ ತಾಜ್ ಸುಲ್ತಾನಪುರ ಗ್ರಾಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ ಆಯೋಜಿಸಿದ ಜಿಲ್ಲೆಯ ಐತಿಹಾಸಿಕ ಸ್ಥಳ ಪರಿಚಯಾತ್ಮಕ -53ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕಲಬುರಗಿ ನೆಲವು ಪ್ರಾಚೀನ ಕಾಲದಲ್ಲಿ ಕಲ್ಲಿನ ನೆಲ ಕಲಂಬುರಗಿ, ಬಹಮನಿಯರ ಕಾಲದಲ್ಲಿ […]

Continue Reading

ಅಫ್ಘಾನ್‌ನಲ್ಲಿ 6.2 ತೀವ್ರತೆಯ ಭೂಕಂಪ: ದೆಹಲಿ, ಜಮ್ಮು-ಕಾಶ್ಮೀರ, ಪಾಕ್‌ನಲ್ಲೂ ಕಂಪಿಸಿದ ಭೂಮಿ

ಸುದ್ದಿ ಸಂಗ್ರಹ ನವದೆಹಲಿಅಫ್ಘಾನಿಸ್ತಾನದ ಹಿಂದೂಕುಷ್‌ ಪ್ರದೇಶದಲ್ಲಿ ಇಂದು 6.2 ತೀವ್ರತೆಯ ಭೂಕಂಪ ಸಂಭವಿಸುದ್ದು, ದೆಹಲಿ, ಎನ್‌ಸಿಆರ್‌ ಹಾಗೂ ಜಮ್ಮು- ಕಾಶ್ಮೀರ ಪ್ರದೇಶಗಳಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಇದು ಜನರ ಆತಂಕಕ್ಕೂ ಕಾರಣವಾಗಿದೆ. ಶನಿವಾರ ಸಂಜೆ 6:04 ರ ಸುಮಾರಿಗೆ ಹಿಂದೂಕುಷ್‌ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಮಾಹಿತಿ ಪ್ರಕಾರ, ಈಶಾನ್ಯ ಅಫ್ಘಾನಿಸ್ತಾನದ ಕಲಾಫ್ಗನ್‌ನಿಂದ ಸುಮಾರು 81 ಕಿಮೀ ದೂರದಲ್ಲಿ, 215 ಕಿಮೀ ಆಳದಲ್ಲಿ ಕೇಂದ್ರಬಿಂದು ಪತ್ತೆಯಾಗಿದೆ. ಅಫ್ಘಾನ್‌ನಲ್ಲಿ ಭೂಕಂಪದಿಂದಾಗಿ ಪಾಕಿಸ್ತಾನ, ಉತ್ತರ ಭಾರತ, ಚೀನಾ, […]

Continue Reading