ತಲೆಗೂದಲಿಗೆ ಎಣ್ಣೆ ಹಚ್ಚದಿದ್ದಕ್ಕೆ ವಿದ್ಯಾರ್ಥಿನಿಯ ಕೂದಲು ಕಟ್: ಶಿಕ್ಷಕಿ ವಜಾ

ಗಾಂಧಿನಗರ: ತಲೆಗೂದಲಿಗೆ ಎಣ್ಣೆ ಹಚ್ಚದಿದ್ದಕ್ಕೆ ವಿದ್ಯಾರ್ಥಿನಿಯ ಕೂದಲು ಕತ್ತರಿಸಿದ ಘಟನೆ ಗುಜರಾತ್‌ನ ಖಾಸಗಿ ಶಾಲೆಯಲ್ಲಿ ನಡೆದಿದೆ. ಮಂಗಳವಾರ ವಿದ್ಯಾರ್ಥಿನಿ ಶಾಲೆಗೆ ತೆರಳಿದಾಗ ತಲೆಗೂದಲಿಗೆ ಎಣ್ಣೆ ಹಚ್ಚಿರಲಿಲ್ಲ. ಇದನ್ನು ಕಂಡ ದೈಹಿಕ ಶಿಕ್ಷಕಿ ವಿದ್ಯಾರ್ಥಿಯ ಕೂದಲನ್ನು ಬ್ಲೇಡ್‌ನಿಂದ ಕತ್ತರಿಸಿದ್ದಾರೆ. ಮನೆಗೆ ಮರಳಿದ ಮಗಳ ಕೂದಲು ಗಮನಿಸಿದಾಗ ಪೋಷಕರಿಗೆ ವಿಷಯ ತಿಳಿದಿದ್ದು, ಕೂಡಲೇ ಜಿಲ್ಲಾ ಶಿಕ್ಷಣ ಅಧಿಕಾರಿಗೆ ದೂರು ನೀಡಿದ್ದಾರೆ. ದೂರಿನನ್ವಯ ಅಧಿಕಾರಿಗಳು ಶಿಕ್ಷಕಿಯನ್ನು ವಜಾಗೊಳಿಸಿದ್ದಾರೆ. ಈ ಕುರಿತು ವಿದ್ಯಾರ್ಥಿನಿಯ ತಾಯಿ ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಚಿಕ್ಕ ಚಿಕ್ಕ ವಿಷಯಗಳಿಗೆ […]

Continue Reading

ಸಮೀಕ್ಷೆಯಲ್ಲಿ ಕಬ್ಬಲಿಗ, ಕೋಲಿ ಎಂದು ಬರೆಯಿಸಲು ಸಮಾಜದಿಂದ ಕರೆ

ಚಿತ್ತಾಪುರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಕೋಲಿ, ಕಬ್ಬಲಿಗ ಜಾತಿಯವರು ಕಡ್ಡಾಯವಾಗಿ ಜಾತಿ ಕಬ್ಬಲಿಗ ಎಂದು, ಉಪ ಜಾತಿ ಕೋಲಿ ಎಂದು ಬರೆಯಿಸಬೇಕು ಎಂದು ತಾಲೂಕು ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣಾ ಹೆಗಲೇರಿ ಮತ್ತು ಗೌರವಾಧ್ಯಕ್ಷ ರಾಮಲಿಂಗ ಬಾನರ ಸಮಾಜದ ಜನರಿಗೆ ಕರೆ ನೀಡಿದ್ದಾರೆ.‌ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಮೀಕ್ಷೆ ಮಾಡಲು ಮನೆ ಮನೆಗೆ ಸಮೀಕ್ಷೆದಾರರು ಬಂದಾಗ ಧರ್ಮ ಕೇಳಿದಾಗ ಹಿಂದೂ ಎಂದು, ಜಾತಿ ಕೇಳಿದಾಗ ಕಬ್ಬಲಿಗ […]

Continue Reading

ವಾಟ್ಸ್ಆ್ಯಪ್​ನಲ್ಲಿ ಬಂದಿದೆ ಹೊಸ ವಿಡಿಯೋ ನೋಟ್ಸ್ ಫೀಚರ್: ಬಳಸುವುದು ಹೇಗೆ ?

ಬೆಂಗಳೂರು: ವಾಟ್ಸ್​ಆ್ಯಪ್ ತನ್ನ​​ ಲಕ್ಷಾಂತರ ಬಳಕೆದಾರರಿಗಾಗಿ ಹೊಸ ವಿಡಿಯೋ ನೋಟ್ಸ್ ವೈಶಿಷ್ಟ್ಯ ಬಿಡುಗಡೆ ಮಾಡಿದೆ. ಈ ವಾಟ್ಸ್​ಆ್ಯಪ್ ​​ವೈಶಿಷ್ಟ್ಯವನ್ನು ಪ್ರಪಂಚದಾದ್ಯಂತ ಎಲ್ಲಾ ಆಂಡ್ರಾಯ್ಡ್ ಮತ್ತು ಐಒಎಸ್ ಬಳಕೆದಾರರಿಗೆ ಬಿಡುಗಡೆ ಮಾಡಲಾಗಿದೆ. ವಾಯ್ಸ್ ನೋಟ್​ಗಳಂತೆ, ನೀವು ಈಗ ಮೆಟಾದ ಅತಿದೊಡ್ಡ ತ್ವರಿತ ಸಂದೇಶ ವೇದಿಕೆಯಲ್ಲಿ ವಿಡಿಯೋ ನೋಟ್ಸ್ ಕಳುಹಿಸಬಹುದು. ನಿಮ್ಮ ಸ್ನೇಹಿತರು ಮತ್ತು ಸಂಬಂಧಿಕರಿಗೆ ಸಂದೇಶಗಳ ಮೂಲಕ ಶುಭ ಹಾರೈಸಲು ನೀವು ವಾಟ್ಸ್​ಆ್ಯಪ್​​ನಲ್ಲಿ 60 ಸೆಕೆಂಡುಗಳ ವಿಡಿಯೋ ಟಿಪ್ಪಣಿ ಕಳುಹಿಸಬಹುದು. ಈ ನವರಾತ್ರಿಯಲ್ಲಿ ದುರ್ಗಾ ಪೂಜೆಯ ಶುಭಾಶಯಗಳನ್ನು ವಿಡಿಯೋ […]

Continue Reading

ಅ.1ರಂದು ಡಾ.ಸಿದ್ಧತೋಟೇಂದ್ರ ಶಿವಾಚಾರ್ಯರ ಜನ್ಮದಿನೋತ್ಸವ, ನಾಳೆಯಿಂದ ನಾಲವಾರ ಮಠದಲ್ಲಿ ನವರಾತ್ರಿ ಸಂಭ್ರಮ

ಚಿತ್ತಾಪುರ: ಅ.1 ರಂದು ಮಹಾನವಮಿಯ ಆಯುಧಪೂಜೆಯಂದು, ತಾಲೂಕಿನ ಶ್ರೀಕ್ಷೇತ್ರ ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಹಿಂದಿನ ಪೀಠಾಧಿಪತಿ ಲಿಂ.ತೋಟೇಂದ್ರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಹಾಗೂ ಪ್ರಸ್ತುತ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನೋತ್ಸವ ಸಮಾರಂಭ ಅದ್ಧೂರಿಯಾಗಿ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ. ಪ್ರಸ್ತುತ ಪೂಜ್ಯರ ಜನ್ಮದಿನೋತ್ಸವ ಹಾಗೂ ಮಠದ ಹಿರಿಯ ಗುರುಗಳ ಪುಣ್ಯಸ್ಮರಣೋತ್ಸವ ಪ್ರಯುಕ್ತ ಶ್ರೀಮಠದಲ್ಲಿ ನಾಳೆಯಿಂದ ಪ್ರತಿನಿತ್ಯ ಲಿಂಗೈಕ್ಯ ತೋಟೇಂದ್ರ ಶಿವಯೋಗಿಗಳ ಕರ್ತೃ ಗದ್ದುಗೆಗೆ ರುದ್ರಾಭಿಷೇಕ,‌ ವಿಶೇಷ ಪೂಜೆ, ಮಹಾಮಂಗಳಾರತಿ ನಡೆಯಲಿದೆ ಎಂದರು. […]

Continue Reading

ಇಂದಿನಿಂದ ಉಳಿತಾಯ ಹಬ್ಬ: ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ ?

ದಸರಾ ಹಬ್ಬದ ಜೋಶ್‌ನಲ್ಲಿರುವ ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ‘ದಸರಾ ಗಿಫ್ಟ್‌’ ಕೊಟ್ಟಿದೆ. ಇಂದಿನಿಂದ ಹೊಸ ಜಿಎಸ್‌ಟಿ ದರ ಜಾರಿಗೆ ಬರಲಿದೆ. ಇದರಿಂದ ಅದೆಷ್ಟೋ ದಿನಬಳಕೆ ವಸ್ತುಗಳ ಬೆಲೆ ಕೈಗೆಟುಕುವ ದರದಲ್ಲಿ ಸಿಗಲಿದೆ. ದಿನನಿತ್ಯ ಬಳಸುವ ಬಹುತೇಕ ವಸ್ತುಗಳ ಬೆಲೆ ಕಡಿಮೆಯಾಗಿದೆ. ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆಯಾಗಿದೆ ? ಹಳೆಯ ದರ ಎಷ್ಟಿತ್ತು ? ಎಂಬುದರ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ. ಯಾವ ಉತ್ಪನ್ನಗಳ ಬೆಲೆ ಎಷ್ಟು ? ಈ ಉತ್ಪನ್ನಗಳ ಬೆಲೆಯೂ […]

Continue Reading

ಶಬರಿಮಲೆ ವಿಗ್ರಹದಿಂದ ಚಿನ್ನ ನಾಪತ್ತೆ: ತನಿಖೆಗೆ ಆದೇಶಿಸಿದ ಹೈಕೋರ್ಟ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಚಿನ್ನದ ಮೂರ್ತಿಗಳ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ದ್ವಾರಪಾಲಕ ವಿಗ್ರಹಕ್ಕೆ ಹೊದಿಸಿದ 42.8 ಕೆಜಿ ತೂಕದ ಕವಚದಲ್ಲಿ 4.5 ಕೆಜಿ ಚಿನ್ನ ನಾಪತ್ತೆಯಾಗಿದೆ. ಹಳೆಯ ತಾಮ್ರ ಮತ್ತು ಚಿನ್ನದ ಲೇಪನ ಮೂರ್ತಿಗಳ ತೂಕದಲ್ಲಿ ವ್ಯತ್ಯಾಸ ಕಂಡು ಬಂದಿದೆ ಎಂದು ಆಯುಕ್ತರು ಆರೋಪಿಸಿದ್ದಾರೆ. 2019ರಲ್ಲಿ ದೇವರ ಮೂರ್ತಿಗಳಿಗೆ ಪುನರ್‌ಲೇಪನ ಮಾಡಲಾಗಿತ್ತು. ಈ ವೇಳೆ ತಾಮ್ರದ ಮೂರ್ತಿಗೆ ಹೊದಿಸಿದ್ದ ಚಿನ್ನದ ಕವಚದಲ್ಲಿ 4.5 ಕೆಜಿ ಚಿನ್ನ ಕಳ್ಳತನವಾಗಿದೆ ಎಂಬ ಆರೋಪ ಕೇಳಿಬಂದಿದೆ. ಹೈಕೋರ್ಟ್‌ […]

Continue Reading

ಪೊಲೀಸ್ ವಾಹನದ ಕೀ ಕದ್ದು, ಮನೆಗೆ ಡ್ರಾಪ್ ಕೇಳಿದ ಕುಡುಕರು

ಭುವನೇಶ್ವರ: ಮದ್ಯದ ಅಮಲಿನಲ್ಲಿದ್ದವ ಯಾರ ಮಾತನ್ನೂ ಕೇಳುವುದಿಲ್ಲ ಎಂಬ ಮಾತಿದೆ. ಆದರೆ ಇಲ್ಲಿ ಇಬ್ಬರು ಭೂಪರು ಕಂಠಪೂರ್ತಿ ಮದ್ಯಸೇವಿಸಿ ಪೊಲೀಸರನ್ನೆ ಮನೆಗೆ ಡ್ರಾಪ್ ಮಾಡುವಂತೆ ಕೇಳಿರುವ ವಿಡಿಯೋವೊಂದು ವ್ಯಾಪಕ ವೈರಲ್ ಆಗುತ್ತಿದೆ. ಒಡಿಶಾದಲ್ಲಿ ಈ ಘಟನೆ ನಡೆದಿದ್ದು, ಮದ್ಯ ಸೇವಿಸಿದ ಇಬ್ಬರು ವ್ಯಕ್ತಿಗಳು ಪೊಲೀಸರಿಂದ ಅವರ ಕಾರಿನ ಕೀ ಕದ್ದಿದ್ದಾರೆ. ಬಳಿಕ ಬೊಲೆರೋ ಕಾರಿನೊಳಗೆ ಕುಳಿತು ತಮ್ಮನ್ನು ಮನೆಗೆ ಡ್ರಾಪ್ ಮಾಡುವಂತೆ ಒತ್ತಾಯಿಸಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ. ಪೊಲೀಸ್ ಅಧಿಕಾರಿ ವಾಹನದ ಕೀ ಕೊಡುವಂತೆ ಕೇಳಿದರೂ […]

Continue Reading

ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ: ಉತ್ತರ ಬಂಗಾಳ, ಭೂತಾನ್‌ನಲ್ಲೂ ಕಂಪನ

ದಿಸ್ಪುರ: ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಬಂಗಾಳ ಮತ್ತು ನೆರೆಯ ಭೂತಾನ್‌ನಲ್ಲೂ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರವು 5 ಕಿಲೋಮೀಟರ್ ಆಳದಲ್ಲಿದ್ದು, ಉದಲ್ಗುರಿ ಪಟ್ಟಣದಲ್ಲಿತ್ತು ಎಂದು ಭಾರತದ ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ. ಗುವಾಹಟಿಯಲ್ಲಿ ಭಯಭೀತರಾದ ನಿವಾಸಿಗಳು ತಮ್ಮ ಮನೆಗಳಿಂದ ಹೊರಗೆ ಓಡಿಹೋದರು. ಇಲ್ಲಿಯವರೆಗೆ ಯಾವುದೆ ಗಾಯ ಅಥವಾ ಆಸ್ತಿಪಾಸ್ತಿಗೆ ಹಾನಿಯಾದ ವರದಿಗಳಾಗಿಲ್ಲ. ಈಶಾನ್ಯವು ಹೆಚ್ಚಿನ ಭೂಕಂಪನ ವಲಯದಲ್ಲಿ ಬರುವುದರಿಂದ ಈ ಪ್ರದೇಶದಲ್ಲಿ ಭೂಕಂಪಗಳು ಆಗಾಗ್ಗೆ ಸಂಭವಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಯಾವುದೆ […]

Continue Reading

ಹಾಟ್ ಏರ್ ಬಲೂನ್ ಹಾರುವ ಮುನ್ನವೆ ಬೆಂಕಿ: ಮಧ್ಯಪ್ರದೇಶ ಸಿಎಂ ಬಚಾವ್

ಭೋಪಾಲ್‌: ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದ ಹಾಟ್ ಏರ್ ಬಲೂನ್‌ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂದಸೋರ್‌ನಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಮೋಹನ್ ಯಾದವ್ ಅವರು ಅಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಿಗ್ಗೆ (ಸೆ.13) ಮಂದಸೋರ್‌ನ ಗಾಂಧಿ ಸಾಗರ್ ಅರಣ್ಯ ಪ್ರದೇಶದಲ್ಲಿ ಮೋಹನ್ ಯಾದವ್ ಹಾಟ್‌ ಏರ್‌ ಬಲೂನ್‌ನಲ್ಲಿ ಹಾರಾಟ ನಡೆಸಲು ಸಿದ್ಧತೆ ನಡೆಸಿದ್ದರು. ಅಷ್ಟರಲ್ಲೆ ಎಂಜಿನ್‌ನ ಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೆ ಭದ್ರತಾ ಸಿಬ್ಬಂದಿ ಅವರನ್ನು ಕೆಳಗಿಳಿಸಿ, ಸುರಕ್ಷಿತ ಸ್ಥಳಕ್ಕೆ […]

Continue Reading

ಗಂಡನ ಪ್ರೀತಿ ಕಡಿಮೆಯಾಗಿದ್ದಕ್ಕೆ 40 ದಿನದ ಮಗುವಿನ ಬಾಯಿಗೆ ಟಿಶ್ಯೂ ಪೇಪರ್ ತುರುಕಿ ಕೊಂದ ತಾಯಿ

ಚೆನ್ನೈ: ತಾಯಿಯೇ ಮಗುವನ್ನು ಕೊಂದಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಗಂಡನ ಪ್ರೀತಿ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಈ ಕೃತ್ಯ ಎಸಗಿರೋದಾಗಿ ಮಹಿಳೆ ಹೇಳಿಕೆ ನೀಡಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಘಟನೆ ಸಂಬಂಧ ಪೊಲೀಸರು ಆರೋಪಿ ತಾಯಿಯನ್ನು ಬಂಧಿಸಿದ್ದಾರೆ. ಮಗುವನ್ನು ಕೊಂದ ಮಹಿಳೆಯನ್ನು ಬೆನಿತಾ ಜಯ ಅನ್ನಲ್ (20) ಎಂದು ಗುರುತಿಸಲಾಗಿದೆ. ಬೆನಿತಾ ಕನ್ಯಾಕುಮಾರಿ ಜಿಲ್ಲೆಯ ಕರುಂಗಲ್ ಬಳಿಯ ಬಾಲೂರ್ ಕಟ್ಟುವಿಲೈ ಪ್ರದೇಶದ ನಿವಾಸಿ. ಒಂದು ವರ್ಷದ ಹಿಂದೆ ದಿಂಡಿಗಲ್ ಜಿಲ್ಲೆಯ ಉತ್ತರ ವೇದಚಂದೂರಿನ ನಾಗಕೋಣನೂರು […]

Continue Reading