ದಿಗ್ಗಾಂವ ಗ್ರಾಮದ 120 ಮನೆಗಳಲ್ಲಿ ನುಗ್ಗಿದ ಮಳೆ ನೀರು, ತಹಸೀಲ್ದಾರ್ ಭೇಟಿ

ಚಿತ್ತಾಪುರ: ಮಂಗಳವಾರ ರಾತ್ರಿ ಸುರಿದ ಮಳೆಯಿಂದ ದಿಗ್ಗಾಂವ ಗ್ರಾಮದ 110 ರಿಂದ 120 ಮನೆಯೊಳಗೆ ಹಳ್ಳದ ನೀರು ನುಗ್ಗಿದೆ, ಇದರಿಂದ ಅಪಾರ ಪ್ರಮಾಣದ ಆಹಾರ ಸಾಮಗ್ರಿಗಳು ಹಾಳಾಗಿವೆ. ತಾಲೂಕಿನ ದಿಗ್ಗಾಂವ ಗ್ರಾಮಕ್ಕೆ ತಹಸೀಲ್ದಾರ್ ನಾಗಯ್ಯಹಿರೇಮಠ ಭೇಟಿ ನೀಡಿದರು. ಗ್ರಾಮದ ಸುಮಾರು 110 ರಿಂದ 120 ಮನೆಗಳಲ್ಲಿ ಮಳೆ ನೀರು ನುಗ್ಗಿದೆ, ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೆನೆ, ಹಾನಿಯಾದವರಿಗೆ ಸರ್ಕಾರದ ವತಿಯಿಂದ ಸಿಗಬೇಕಾದ ಪರಿಹಾರ ಕೊಡಲಾಗುವದು ಎಂದರು. ಚಿತ್ತಾಪುರ ವ್ಯಾಪ್ತಿಯಲ್ಲಿ 53.6 ಎಂಎಂ, ನಾಲವಾರದಲ್ಲಿ 20.2 ಎಂಎಂ, […]

Continue Reading

ತಾಯಿಯ ಸ್ಮರಣಾರ್ಥ ಮಕ್ಕಳಿಗೆ ಪಾಟಿ (ಸ್ಲೇಟು) ವಿತರಣೆ

ಕಾಳಗಿ: ಅಂಗನವಾಡಿ ಕಾರ್ಯಕರ್ತೆ ಪವಿತ್ರ ಪಾಟೀಲ ಅವರ ತಾಯಿಯ ಸ್ಮರಣಾರ್ಥ ಮಕ್ಕಳಿಗೆ ಪಾಟಿ (ಸ್ಲೇಟು) ವಿತರಿಸಿದರು. ತಾಲೂಕಿನ ತೆಂಗಳಿ ಗ್ರಾಮದ ಅಂಗನವಾಡಿ ಕೇಂದ್ರ – 1 ರ ಹಿಂದಿನ ಅಂಗನವಾಡಿ ಕಾರ್ಯಕರ್ತೆ ದಿ. ಹೀರಾಬಾಯಿ ಪಾಟೀಲ ಅವರ ಪ್ರಥಮ ಪುಣ್ಯ ಸ್ಮರಣೆ ನಿಮಿತ್ಯ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪಾಟಿ (ಸ್ಲೇಟು), ಪೆಣಿ ವಿತರಿಸಿ ಮಕ್ಕಳಿಗೆ ಸಿಹಿ ಹಂಚಲಾಯಿತು ಈ ಸಂದರ್ಭದಲ್ಲಿ ಅಂಗನವಾಡಿ ಕೇಂದ್ರದ ಸಹಾಯಕಿ ಕಸ್ತೂರಿಬಾಯಿ ಉಪಸ್ಥಿತರಿದ್ದರು.

Continue Reading

ಮಕ್ಕಳಿಗೆ ಪೌಷ್ಟಿಕ ಆಹಾರ ತುಂಬಾ ಅವಶ್ಯಕ: ಆರತಿ ತುಪ್ಪದ

ಚಿತ್ತಾಪುರ: ಗ್ರಾಮೀಣ ಭಾಗದ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ, ಹೀಗಾಗಿ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಬೇಕು ಎಂದು ಸಿಡಿಪಿಓ ಆರತಿ ತುಪ್ಪದ ಹೇಳಿದರು. ಪಟ್ಟಣದ ತಾ.ಪಂ ಸಭಾಂಗಣದಲ್ಲಿ ತಾಲೂಕಾ ಆಡಳಿತ ಮತ್ತು ಶಿಶು ಅಭಿವೃದ್ಧಿ ಅಭಿವೃದ್ಧಿ ಯೋಜನೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಪೋಷಣ ಮಾಸಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರತಿ ಅಂಗನವಾಡಿ ಕೇಂದ್ರದಲ್ಲಿ ದಿನಾಲೂ ಒಂದೊಂದು ಕಾರ್ಯಕ್ರಮ ಮಾಡುತ್ತೆವೆ, ಅಂಗನವಾಡಿ ಸ್ವಚ್ಛತೆ ಬಗ್ಗೆ, ಮಗುವಿನ ಆರೈಕೆ ಬಗ್ಗೆ ಮಗುವಿನ ತೂಕ ಹಾಕುವದು ಎಂದರು. ತಾಯಂದಿರ […]

Continue Reading

ಚಿತ್ತಾಪುರ ವೀರಶೈವ ಲಿಂಗಾಯತ ಮಹಾಸಭಾ ಪದಾಧಿಕಾರಿಗಳ ಆಯ್ಕೆ

ಚಿತ್ತಾಪುರ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು ಎಂದು ತಾಲೂಕು ಅಧ್ಯಕ್ಷ ನಾಗರಾಜ ಭಂಕಲಗಿ ಹೇಳಿದರು. ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿನ್ನೆ ತಾಲೂಕಾ ಕಾರ್ಯಕಾರಿ ಸಮಿತಿ ಸಭೆ ಕರೆದು ತಾಲೂಕು ಘಟಕಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳುತಾಲೂಕು ಘಟಕ: ಶಾಂತಣ್ಣ ಚಾಳೀಕಾರ ಅಳ್ಳೋಳ್ಳಿ, ಬಸವರಾಜ ಕಿರಣಗಿ, ವೆಂಕಟಮ್ಮ ಪಾಲಪ್ (ಉಪಾಧ್ಯಕ್ಷರು), ಆನಂದ ಪಾಟೀಲ ನರಿಬೋಳ (ಪ್ರಧಾನ ಕಾರ್ಯದರ್ಶಿ), ಈಶ್ವರ ಬಾಳಿ ರಾವೂರ, ಪ್ರಸಾದ […]

Continue Reading

ಮಾಡಬೂಳ: ಸ್ವಚ್ಛತಾ ಅಭಿಯಾನ ಕಾರ್ಯಕ್ರಮ

ಚಿತ್ತಾಪುರ: ಮಾಡಬೂಳ ಗ್ರಾಮ ಪಂಚಾಯತ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಜರುಗಿತು. ಕಾರ್ಯಕ್ರಮದಲ್ಲಿ ಸಿಡಿಪಿಓ ಆರತಿ ತುಪ್ಪದ, ಮೇಲ್ವಿಚಾರಕಿ ಶೀಲಾದೇವಿ ಅರಸ, ಗ್ರಾ.ಪಂ ಸದಸ್ಯರಾದ ರವಿ ಮಾಡಬೂಳ, ಲಕ್ಷ್ಮಿ ಪೂಜಾರಿ, ಕರ ವಸೂಲಿಗಾರ ರಮೇಶ ಶ್ರಿಗನ್, ಅಂಗನವಾಡಿ ಕಾರ್ಯಕರ್ತೆ ನಾಗಮ್ಮ, ಸಹಾಯಕಿ ವಿಜಯಲಕ್ಷ್ಮಿ ಆರೋಗ್ಯ ಕಾರ್ಯಕರ್ತೆ ಸಾವಿತ್ರಿ ಹಿರಿಮನಿ, ಬಾಲ ವಿಕಾಸ ಸಮಿತಿಯ ಅಧ್ಯಕ್ಷೆ ಹಾಲುಬಾಯಿ ಮಾಡಬೂಳಕರ್, ಬಾಲ ವಿಕಾಸ ಸಮಿತಿಯ ಸದಸ್ಯೆ ರೇಷ್ಮಾ ಚಂದ್ರಶೇಖರ, ಸ್ತ್ರೀಶಕ್ತಿ ಸಂಘದ ಸದಸ್ಯರಾದ ಸಮುದ್ರಬಾಯಿ ದೇವಿಂದ್ರ, ರೇಷ್ಮಾ ಉತ್ತಮಕುಮಾರ, ಪಾರ್ವತಿ […]

Continue Reading

ಮಳೆಗೆ ಧರೆಗುರುಳಿದ ಐತಿಹಾಸಿಕ ಮಳಖೇಡ ಕೋಟೆ

ಕಲಬುರಗಿ: ಸೇಡಂ ತಾಲೂಕಿನ ಮಳಖೇಡ ಗ್ರಾಮದ ಐತಿಹಾಸಿಕ ಕೋಟೆ ಶುಕ್ರವಾರ ರಾತ್ರಿ ಸುರಿದ ಮಳೆಗೆ ಧರೆಗುರುಳಿದೆ. ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಕೋಟೆಯ ಗೋಡೆಗಳಲ್ಲಿ ನೀರು ನಿಂತಿದೆ. ಶುಕ್ರವಾರ ರಾತ್ರಿಯಿಂದ ಮಳೆ ಆರಂಭಗೊಂಡಿದ್ದು ಶನಿವಾರವೂ ಮಳೆ ಮುಂದುವರೆದಿದೆ. ನಿಂರತ ಮಳೆಗೆ ಕೋಟೆ ಗೋಡೆಗಳು ತೇವಗೊಂಡಿದ್ದು, ಏಕಾಏಕಿ ನೀರು ಧುಮ್ಮಿಕ್ಕಿ ಬರುವಂತೆ ಕೋಟೆ ದಿಢೀರ್ ಕುಸಿದಿದೆ. ಇದರಿಂದ ಪಕ್ಕದಲ್ಲಿದ್ದ ನಿವಾಸಿಗಳು ಆತಂಕಗೊಂಡು, ಬೆಚ್ಚಿಬಿದ್ದಿದ್ದಾರೆ. ಕೋಟೆ ಪಕ್ಕದಲ್ಲೇ ಇರುವ ಶೌಚಾಲಯ ಕಡೆಗೆ ಮಹಿಳೆಯರು ತೆರಳುತ್ತಿದ್ದರು. ಕೋಟೆ […]

Continue Reading

ದಂಡಗುಂಡ ಬಸವಣ್ಣ ದೇವಸ್ಥಾನ ನಿರ್ಮಾಣಕ್ಕೆ 3 ಕೋಟಿ ಖರ್ಚು

ಚಿತ್ತಾಪುರ: ಧಾರ್ಮಿಕ ಕ್ಷೇತ್ರ ದಂಡಗುಂಡ ಬಸವಣ್ಣ ದೇವಸ್ಥಾನದ ಹಳೆಯ ಕಟ್ಟಡ ತೆರವುಗೊಳಿಸಿ ಹೊಸ ದೇವಸ್ಥಾನ ನಿರ್ಮಾಣ ಕಾಮಗಾರಿಗೆ ಈವರೆಗೂ 3 ಕೋಟಿ ಖರ್ಚಾಗಿದೆ. ಭಕ್ತರ ದೇಣಿಗೆ, ದಂಡಗುಂಡ ಗ್ರಾಮಸ್ಥರ ಸಹಕಾರ, ಬಸವಣ್ಣನ ಭಕ್ತರ ನೆರವಿನಿಂದ ಯಾವುದೇ ಅಡೆತಡೆಯಿಲ್ಲದೆ ಕಾಮಗಾರಿ ನಡೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಬಿ.ಜಿ ಪಾಟೀಲ ಹೇಳಿದರು. ತಾಲೂಕಿನ ದಂಡಗುಂಡ ಗ್ರಾಮದ ಬಸವಣ್ಣ ದೇವಸ್ಥಾನದ ಯಾತ್ರಿ ನಿವಾಸದಲ್ಲಿ ಗುರುವಾರ ಆಯೋಜಿಸಿದ್ದ ಜಾತ್ರೆಯ ಅಭಿನಂದನಾ ಸಭೆಯಲ್ಲಿ ಮಾತನಾಡಿದ ಅವರು, ಜಾತ್ರೆ, ಪಲ್ಲಕ್ಕಿ ಉತ್ಸವ ಅತ್ಯಂತ ಯಶಸ್ವಿಯಾಗಿದೆ. […]

Continue Reading

ಕನ್ನಡ ನಾಡಿನ ಇತಿಹಾಸದ ಪುಟ ತೆರೆಯುವ ಟೆಂಗಳಿ ಸ್ಮಾರಕಗಳು: ಮುಡಬಿ ಗುಂಡೆರಾವ

ಕಾಳಗಿ: ಕನ್ನಡ ನಾಡಿನ ಇತಿಹಾಸದ ಪುಟ ತೆರೆಯುವ ಟೆಂಗಳಿ ಸ್ಮಾರಕಗಳ ಕೊಡುಗೆ ಅಪಾರ. ನಾಡು, ನುಡಿ ಸಂಸ್ಕ್ರತಿ ಪರಿಚಯಿಸುವ ಕೆಲಸವಾಗಬೇಕು ಎಂದು ಸಂಶೋಧಕ ಸಾಹಿತಿ ಮುಡಬಿ ಗುಂಡೇರಾವ ಹೇಳಿದರು. ತಾಲೂಕಿನ ಟೆಂಗಳಿ ಗ್ರಾಮದ ವಿಶ್ವೇಶ್ವರಯ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಮ್ಮೂರು ನಮಗೆ ಮೇಲು ವಿಶೇಷ ಉಪನ್ಯಾಸ ಕಾರ್ಯಕ್ರಮಲ್ಲಿ ಸಂಶೋಧಕ ಸಾಹಿತಿ ಮುಡಬಿ ಗುಂಡೇರಾವ ಮಾತನಾಡಿ, ತೆಂಗಳಿಯ ಶಾಸನಗಳು, ದೇವಾಲಯಗಳು, ವೀರಗಲ್ಲು ಸ್ಮಾರಕಗಳು, ಪ್ರಾಚೀನ ಕನ್ನಡಿಗರ ಆಡಳಿತ, ಶಿಕ್ಷಣ, ಧರ್ಮ, ಆಧ್ಯಾತ್ಮ, ಸಮಾಜ ,ಆರ್ಥಿಕ ಸೇರಿದಂತೆ ಮುಂತಾದ ವಿವಿಧ […]

Continue Reading

ನೂತನ ಪೊಲೀಸ್ ಕಮಿಷನರ್ ಡಾ. ಶರಣಪ್ಪ ಎಸ್.ಡಿ ಅವರಿಗೆ ಸತ್ಕಾರ

ಕಲಬುರಗಿ: ನೂತನ ಪೊಲೀಸ್ ಕಮಿಷನರ್ ಡಾ. ಶರಣಪ್ಪ ಎಸ್.ಡಿ ಅವರಿಗೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸತ್ಕರಿಸಿ, ಶುಭಾಷಯ ಕೋರಲಾಯಿತು. ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿನಂದಿಸಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಖಜೂರಿ ಗ್ರಾಮದವರಾದ ತಾವು ಕಲಬುರಗಿ ಪೊಲೀಸ್ ಕಮಿಷನರ್ ಆಗಿ ಆಗಮಿಸಿದ್ದು, ನಮ್ಮ ಆಳಂದ ತಾಲೂಕು ಹಾಗೂ ಜಿಲ್ಲೆಯ ಸಮಸ್ತ ಜನತೆಗೆ ತುಂಬಾ ಹರ್ಷವಾಗಿದೆ. ತಮ್ಮ ಅಧಿಕಾರದಲ್ಲಿ ಇಲಾಖೆಯ ಕೀರ್ತಿಯ ಜೊತೆಗೆ ಜಿಲ್ಲೆಯ ಕೀರ್ತಿ ಹೆಚ್ಚಾಗುತ್ತದೆ. ಜಿಲ್ಲೆಯ […]

Continue Reading

ಕರದಾಳ ಪ್ರೌಢ ಶಾಲೆಯಲ್ಲಿ ಜನಪದ ಕಲರವ

ಚಿತ್ತಾಪುರ: ತಾಲೂಕಿನ ಕರದಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಕರ್ನಾಟಕ ಜಾನಪದ ಪರಿಷತ್ತು ತಾಲೂಕ ಘಟಕದ ವತಿಯಿಂದ ಶಾಲೆಗೊಂದು ಜಾನಪದ ಕಲರವ ಕಾರ್ಯಕ್ರಮ ಜರಗಿತು. ಗ್ರಾಮದ ಮುಖಂಡ ಶಿವಲಿಂಗಯ್ಯ ಸ್ವಾಮಿ ಮಠಪತಿ ಅವರು ಡ್ರಮ್ ಬಾರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜನಪದ ಕಲಾವಿದರಾದ ಭೀಮರಾಯ, ಮಲ್ಲಪ್ಪ ನಂಜೋಳಿ, ಸಂಗೀತ ಕಲಾವಿದೆ, ಶ್ರೀದೇವಿ ಹಿರೆಗೌಡ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಭೀಮರಾಯ ಅವರು ಮೊಹರಂ ಪದ, ಮಲ್ಲಪ್ಪ ನಂಜೋಳಿ ಅವರು ಭಜನೆ ಪದ, ಶ್ರೀದೇವಿ ಹಿರೆಗೌಡ ಅವರು ಜನಪದ […]

Continue Reading