ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಲು ಸಚಿವ ಪ್ರಿಯಾಂಕ್ ಖರ್ಗೆಗೆ ಮನವಿ

ಕಲಬುರ್ಗಿ: ಯಾವುದೆ ಗೌರವಧನವಿಲ್ಲದೆ ದುಡಿಯುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಸರ್ಕಾರಿ ಆದೇಶ ಹೊರಡಿಸುವಂತೆ ಆಗ್ರಹಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ/ಬಿಟಿ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾಪುರ ತಾಲೂಕು ಘಟಕದ ವತಿಯಿಂದ ಮನವಿ ಸಲ್ಲಿಸಲಾಯಿತು. ಕಲಬುರ್ಗಿಯಲ್ಲಿ ಸಚಿವರನ್ನು ಭೇಟಿಯಾದ ಪತ್ರಕರ್ತರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ 2024 – 25ರ ತಮ್ಮ ಬಜೆಟ್ ಭಾಷಣದಲ್ಲಿ […]

Continue Reading

ಪ್ರಾಥಮಿಕ ಶಾಲೆ, ಹಾಸ್ಟೆಲ್‌ಗ‌ಳಿಗೆ ಜಿಲ್ಲಾಧಿಕಾರಿ, ಸಿಇಓ ಭೇಟಿ

ಚಿತ್ತಾಪುರ: ವಸತಿ ನಿಲಯಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ವಾರಕ್ಕೆ ಒಂದು ಬಾರಿಯಾದರೂ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆಯ ಬಗ್ಗೆ ಪರಿಶೀಲಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರು ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ವಿವಿಧ ಸರ್ಕಾರಿ ವಸತಿ ನಿಲಯ, ಅಂಗನವಾಡಿ ಕೇಂದ್ರ, ಸರ್ಕಾರಿ ಆಸ್ಪತ್ರೆ ಸೇರಿದಂತೆ ಹಲವೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೇಲ್’ಗೆ ಭೇಟಿ ನೀಡಿ ಅಡುಗೆ ಕೋಣೆ, ಊಟದ ವ್ಯವಸ್ಥೆ, ತರಕಾರಿ, […]

Continue Reading

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕೋಲಿ ಸಮಾಜಕ್ಕೆ ನೀಡಿ

ಚತ್ತಾಪುರ:  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವ ಜಗದೇವ ಗುತ್ತೆದಾರ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದರಿಂದ ಖಾಲಿಯಾಗಲಿರುವ ಅಧ್ಯಕ್ಷ ಸ್ಥಾನಕ್ಕೆ ಕೋಲಿ ಸಮಾಜದ ಕಾಂಗ್ರೆಸ್ ಮುಖಂಡರನ್ನು ನೇಮಕ ಮಾಡಬೇಕು ಎಂದು ತಾಲೂಕು ಕೋಲಿ ಸಮಾಜದಿಂದ ಕೆಪಿಸಿಸಿ ಹಾಗೂ ಎಐಸಿಸಿ ಅಧ್ಯಕ್ಷರಿಗೆ ಆಗ್ರಹಿಸುತ್ತಿದ್ದೆವೆ ಎಂದು ತಾಲೂಕು ಕೋಲಿ ಸಮಾಜ ಅಧ್ಯಕ್ಷ ರಾಮಲಿಂಗ ಬಾನರ ಹೇಳಿದರು.   ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯದ ನಂತರ ಇಲ್ಲಿಯವರೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ಕೋಲಿ ಸಮಾಜದವರನ್ನು ನೇಮಕ ಮಾಡಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಪಕ್ಷದ ತತ್ವ, ಸಿದ್ಧಾಂತ, ಪಕ್ಷನಿಷ್ಠೆಯಿಂದ […]

Continue Reading