ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ: ದ್ವಿಚಕ್ರ ವಾಹನಗಳಿಗೆ 80 ರೂ. ದರ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಲಾಗಿದೆ. ಸಾರಿಗೆ ಇಲಾಖೆ ದರ ಏರಿಕೆ ಆದೇಶ ಪ್ರಕಟಿಸಿದೆ. ವಾಯು ಮಾಲಿನ್ಯ ಪರಿವೀಕ್ಷಣಾ ಕೇಂದ್ರಗಳಲ್ಲಿ ಪಿಯುಸಿ ಪತ್ರ ನೀಡುವಾಗ ನಡೆಯುವ ಪರೀಕ್ಷಾ ಶುಲ್ಕದಲ್ಲಿ ಪರಿಷ್ಕರಣೆ ಆಗಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ಯಾವುದಕ್ಕೆ ಎಷ್ಟು ದರ ?ದ್ವಿಚಕ್ರ ವಾಹನ: 65 ರೂ.ನಿಂದ 80 ರೂ.ಗೆ ಏರಿಕೆಆಟೋರಿಕ್ಷಾ: 75 ರೂ. – 80 ರೂ.ಪೆಟ್ರೋಲ್, ಎಲ್‌ಪಿಜಿ ಮತ್ತು ಸಿಎನ್‌ಜಿ ಚಾಲಿತ ಕಾರು: 115 ರೂ. – […]

Continue Reading

ಕಳ್ಳತನಕ್ಕೆ ಹೋದವನು ಮನೆಯಲ್ಲೆ ನಿದ್ದೆಗೆ ಜಾರಿದ ಭೂಪ: ಎದ್ದು ನೋಡಿದಾಗ ಎದುರಿಗೆ ಮನೆ ಮಾಲೀಕರಿದ್ದರು, ಮುಂದೇನಾಯ್ತು ?

ಸುದ್ದಿ ಸಂಗ್ರಹ ಹೈದರಾಬಾದ್‌ಮನೆಗೆ ನುಗ್ಗಬೇಕು, ಚಿನ್ನ, ಬೆಳ್ಳಿ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ದೋಚಬೇಕು, ಮಾಲೀಕರು ವಾಪಸ್ ಬರುವ ಮೊದಲೆ ಅಲ್ಲಿಂದ ಕಾಲ್ಕಿತ್ತಬೇಕು. ಇದು ಕಳ್ಳನೊಬ್ಬನ ಪ್ಲಾನ್ ಆಗಿತ್ತು. ಆದರೆ ಹೈದರಾಬಾದ್‌ನಲ್ಲಿ ನಡೆದ ಈ ಘಟನೆಯಲ್ಲಿ ಕಳ್ಳ ಮನೆಯಿಂದ ಹೊರಗೆ ಹೋಗಲೇ ಇಲ್ಲ. ಬದಲಾಗಿ, ಚಿನ್ನಾಭರಣ ಕದ್ದ ನಂತರ ಆತ ಅದೆ ಕೋಣೆಯಲ್ಲಿ ಆರಾಮವಾಗಿ ನಿದ್ದೆಗೆ ಜಾರಿದ್ದಾನೆ. ಮನೆಗೆ ವಾಪಸ್ ಬಂದ ಕುಟುಂಬಸ್ಥರಿಗೆ ಈ ದೃಶ್ಯ ನೋಡಿ ಶಾಕ್ ಆಗಿದೆ. ಚಿನ್ನಾಭರಣ ಪಕ್ಕದಲ್ಲಿಟ್ಟುಕೊಂಡು ಮಲಗಿದ ಕಳ್ಳಆರೋಪಿ ಅದೆ ಪ್ರದೇಶದ […]

Continue Reading

ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌: 170 ಕೋಟಿ ವೇತನ ಹಿಂಬಾಕಿ ಬಿಡುಗಡೆ

ಸುದ್ದಿ ಸಂಗ್ರಹ ಬೆಂಗಳೂರುಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ಕೊಟ್ಟಿದೆ. 170 ಕೋಟಿ ರೂ ವೇತನ ಹಿಂಬಾಕಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. 26 ತಿಂಗಳ ವೇತನ ಹಿಂಬಾಕಿಯ 1,271 ಕೋಟಿ ರೂ ಕೊಡಬೇಕಿತ್ತು. ಈ ಹಿಂದೆ ಸರ್ಕಾರ 450 ಕೋಟಿ ಬಿಡುಗಡೆ ಮಾಡಿತ್ತು. 821 ಕೋಟಿ ಹಿಂಬಾಕಿಯಲ್ಲಿ ಇಂದು ಮತ್ತೆ 170 ಕೋಟಿ ಬಿಡುಗಡೆ ಮಾಡಿದೆ. ಉಳಿದ 651 ಕೋಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡುವ ಭರವಸೆ ಸಾರಿಗೆ ಸಚಿವರು ನೀಡಿದ್ದಾರೆ. ಸಾರಿಗೆ ನೌಕರರಿಗೆ ಉಚಿತ […]

Continue Reading

ಚಿತ್ತಾಪುರ: ಜೂಜಾಟದ ಆರೋಪದಡಿ 39 ಜನರ ವಿರುದ್ಧ ಎಫ್‌ಐಆರ್‌

ಸುದ್ದಿ ಸಂಗ್ರಹ ಚಿತ್ತಾಪುರಪಟ್ಟಣ ಸೇರಿದಂತೆ ತಾಲೂಕಿನ ಭಾಗೋಡಿ, ಮುಡಬೂಳ, ಸೂಲಹಳ್ಳಿ ಗ್ರಾಮಗಳಲ್ಲಿ ಇಸ್ಪಿಟ್, ಮಟ್ಕಾ, ಕ್ರಿಕೆಟ್‌ ಬೆಟ್ಟಿಂಗ್‌ ಆಡಿದ ಪ್ರಕರಣಗಳಿಗೆ ಸಂಬಂಧಪಟ್ಟಂತೆ ಆ.2ರಿಂದ 11ವರೆಗೆ ಒಟ್ಟು 39 ಆರೋಪಿತರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಈ ಕುರಿತು 8 ಪ್ರಕರಣಗಳು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಜೂಜಾಟ, ಬೆಟ್ಟಿಂಗ್‌ ತಡೆಗಟ್ಟಲು ವಿಶೇಷ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಪಿಎಸ್ಐ ಮಂಜುನಾಥ ರೆಡ್ಡಿ, ಸಿಬ್ಬಂದಿ ಬಸವರಾಜ, ಅಜರುದ್ದೀನ್, ದತ್ತಾತ್ರೆಯ, ಅಯ್ಯಣ್ಣ, ಅನಿಲಕುಮಾರ, ಆನಂದ್ ಪಾಲ್ಗೊಂಡಿದ್ದರು.

Continue Reading

ಕಲಬುರಗಿ: 4.50 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಸುದ್ದಿ ಸಂಗ್ರಹ ಕಲಬುರಗಿನಗರದ ಕುಸನೂರು ರಸ್ತೆಯ ಅನ್ನಪೂರ್ಣೇಶ್ವರಿ ಕಾಲೊನಿಯಲ್ಲಿ ಮನೆಯ ಬಾಗಿಲಿನ ಕೊಂಡಿ ಮುರಿದ ಕಳ್ಳರು ಚಿನ್ನಾಭರಣ ಕದ್ದು ಪರಾರಿಯಾಗಿದ್ದಾರೆ. ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್‌ ಎಕ್ಸಿಕ್ಯುಟಿವ್‌ ಆಗಿರುವ ಪ್ರಸನ್ನ ಪುರಾಣಿಕ (39) ಚಿನ್ನಾಭರಣ ಕಳೆದುಕೊಂಡವರು. ಅವರು ಅನ್ನಪೂರ್ಣೇಶ್ವರಿ ಕಾಲೊನಿಯಲ್ಲಿ ಬಾಡಿಗೆ ಮನೆಯಲ್ಲಿ ತಾಯಿಯೊಂದಿಗೆ ನೆಲೆಸಿದ್ದರು. ತಾಯಿ ಆಗಸ್ಟ್‌ 7ರಂದು ಭಜನಾ ಮೇಳದೊಂದಿಗೆ ಪ್ರವಾಸಕ್ಕೆ ಹೋಗಿದ್ದರು. ನಾನು ಆಗಸ್ಟ್‌ 9ರಂದು ಸಂಜೆ ಸೇಡಂನಲ್ಲಿರುವ ತಮ್ಮನ ಭೇಟಿ ಮಾಡಲು ಹೋಗಿದ್ದೆ. ಆಗಸ್ಟ್‌ 10ರಂದು ರಾತ್ರಿ 8.30ರ ಸುಮಾರಿಗೆ ಬಂದು ನೋಡಿದಾಗ […]

Continue Reading

ಕಲಬುರಗಿ: ಬರ ಪರಿಸ್ಥಿತಿ ಅವಲೋಕಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಕಲಬುರಗಿಮಳೆಯ ಕೊರತೆಯಿಂದಾಗಿ ಜಿಲ್ಲೆಯ ವಿವಿಧೆಡೆ ಹಾನಿಗೀಡಾದ ಬೆಳೆಗಳನ್ನು ಗೃಹ ಹಾಗೂ ಬರ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವೀಕ್ಷಿಸಿ ರೈತರು, ಕೃಷಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ತಾಲೂಕಿನ ಅವರಾದ (ಬಿ) ಗ್ರಾಮದ ಹೊರವಲಯದಲ್ಲಿ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಚಿವರು ಮಳೆಯಿಲ್ಲದೆ ಮುರುಟಿ ಹೋಗುತ್ತಿದ್ದ ತೊಗರಿ ಮತ್ತು ಸೋಯಾ ಬೆಳೆಗಳನ್ನು ವೀಕ್ಷಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ಅಷ್ಟೆ ಅಲ್ಲದೆ ಎಲ್ ನಿನೊ ಪರಿಣಾಮದಿಂದಾಗಿ ರಾಜ್ಯದಾದ್ಯಂತ ಬರಗಾಲ ಆವರಿಸಿದೆ. ಎನ್ ಡಿಆರ್ ಎಫ್ […]

Continue Reading

ನೀನು ಕೊಲ್ಲದಿದ್ದರೆ ನಾನೇ ಕೊಲ್ತೀನಿ- ಪತಿಯನ್ನೆ ಮುಗಿಸಲು ಪತ್ನಿ-ಪ್ರಿಯಕರನ ಸ್ಕೆಚ್‌; ಚಾಟ್‌ ನೋಡಿ ಪೊಲೀಸರ ಮೊರೆ ಹೋದ ಗಂಡ

ಸುದ್ದಿ ಸಂಗ್ರಹ ತೆಲಂಗಾಣಪತ್ನಿ ಹಾಗೂ ಆಕೆಯ ಶಂಕಿತ ಪ್ರಿಯಕರ ಸೇರಿಕೊಂಡು ತನ್ನನ್ನ ಕೊಲೆ ಮಾಡಿ, ಅದನ್ನು ರಸ್ತೆ ಅಪಘಾತದಂತೆ ಬಿಂಬಿಸಲು ಸಂಚು ರೂಪಿಸಿದ್ದರು ಎಂದು ಆರೋಪಿಸಿ ತೆಲಂಗಾಣದ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣ ಇದೀಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಮಹಬೂಬಾಬಾದ್ ಜಿಲ್ಲೆಯ ಗ್ರಾಮವೊಂದರ ನಿವಾಸಿ ಗಾಡೆ ರಾಜೇಶ್ವರ ರಾವ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ತಮ್ಮ ಪತ್ನಿ ಭವಾನಿ ಹಾಗೂ ಖಮ್ಮಂನ ಕೊರಿಯರ್ ಡೆಲಿವರಿ ಏಜೆಂಟ್ ಸೈದುಲು ನಡುವೆ ನಡೆದಿರುವ ವಾಟ್ಸಾಪ್ ಮತ್ತು ಇನ್ಸ್ಟಾಗ್ರಾಮ್‌ […]

Continue Reading

ಲಿಪ್‌ಸ್ಟಿಕ್‌ನಲ್ಲಿ ಕ್ಯಾನ್ಸರ್‌ಕಾರಕ ಕೆಮಿಕಲ್ ಪತ್ತೆ: ಆಹಾರ ಸುರಕ್ಷತಾ ಇಲಾಖೆ ಪರಿಶೀಲನೆ

ಸುದ್ದಿ ಸಂಗ್ರಹ ಬೆಂಗಳೂರುಲಿಪ್‌ಸ್ಟಿಕ್ ಬಳಸುವ ಮಹಿಳೆಯರಿಗೆ ಇದೊಂದು ಶಾಕಿಂಗ್‌ ಸುದ್ದಿ. ಕರ್ನಾಟಕದ ಆಹಾರ ಸುರಕ್ಷತಾ ಇಲಾಖೆ ನಡೆಸಿದ ಪರಿಶೀಲನೆಯಲ್ಲಿ ಕೆಲವು ಲಿಪ್‌ಸ್ಟಿಕ್ ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಮತ್ತು ಲೋಹದ ಅಂಶಗಳು ಪತ್ತೆಯಾಗಿವೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಮಾರಾಟವಾಗುವ ಲಿಪ್‌ಸ್ಟಿಕ್‌ಗಳ ಮಾದರಿಗಳನ್ನು ಅಧಿಕಾರಿಗಳು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದ್ದಾರೆ. ಬ್ರಾಂಡೆಡ್ ಉತ್ಪನ್ನಗಳ ಜೊತೆಗೆ ರಸ್ತೆ ಬದಿ ಮಾರಾಟವಾಗುವ ಲಿಪ್‌ಸ್ಟಿಕ್‌ಗಳ ಸ್ಯಾಂಪಲ್‌ಗಳನ್ನೂ ಪರಿಶೀಲಿಸಲಾಗಿದೆ. ಪರಿಶೀಲನೆ ವೇಳೆ 23 ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿವೆ ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ. ಕೆಲವು […]

Continue Reading

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಗಲಾಟೆ: ವೀಕ್ಷಕರ ಎದುರೆ ಕಾರ್ಯಕರ್ತರ ಫೈಟಿಂಗ್

ಸುದ್ದಿ ಸಂಗ್ರಹ ಶಿವಮೊಗ್ಗನಗರದ ಕಾಂಗ್ರೆಸ್‌ ಭವನದಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರ ಆಯ್ಕೆ ಸಂಬಂಧ ನಡೆದ ಸಭೆಯಲ್ಲಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಎಐಸಿಸಿ ವೀಕ್ಷಕ ಶರತ್ ಎದುರಲ್ಲೆ ಕಾಂಗ್ರೆಸ್ ಕಾರ್ಯಕರ್ತರು ಕೈ-ಕೈ ಮಿಲಾಯಿಸಿಕೊಂಡಿದ್ದಾರೆ. ಸಭೆ ನಡೆಯುತ್ತಿದ್ದ ವೇಳೆ ಮುಖಂಡ ರಂಗೇಗೌಡರನ್ನು ಕಾಂಗ್ರೆಸ್ ಕಚೇರಿ ಸಭಾಂಗಣಕ್ಕೆ ಬಿಡದೆ ತಡೆಯಲಾಗಿದೆ. ಇದೆ ವಿಚಾರಕ್ಕೆ ದಕ್ಷಿಣ ಬ್ಲಾಕ್ ಅಧ್ಯಕ್ಷ ಕಲಿಂ ಪಾಷಾ ಬೆಂಬಲಿಗರು ಹಾಗೂ ಕಾಂಗ್ರೆಸ್ ಮುಖಂಡ ರಂಗೇಗೌಡ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭ ಕಲಿಂ ಪಾಷಾ ಬೆಂಬಲಿಗರು ರಂಗೇಗೌಡರ […]

Continue Reading

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ? – ಜಸ್ಟ್‌ 10 ಸೆಕೆಂಡ್‌ನಲ್ಲಿ ಚೆಕ್‌ ಮಾಡಿ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ವೋ ಎನ್ನುವ ಪ್ರಶ್ನೆ, ಆತಂಕ ನಿಮ್ಮನ್ನು ಕಾಡುತ್ತಿರಬಹುದು. ಆದರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ಚುನಾವಣಾ ಆಯೋಗ ಎಸ್‌ಐಆರ್‌ ಪ್ರಕ್ರಿಯೆಯ ಬಳಿಕ ವೆಬ್‌ಸೈಟ್‌ ರೂಪಿಸಿದೆ. ಈ ವೆಬ್‌ಸೈಟ್‌ನಲ್ಲಿ ನೀವು ನಿಮ್ಮ ಎಪಿಕ್‌ ನಂಬರ್‌ ನಮೂದಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಬಹುದು. ಒಂದು ವೇಳೆ ಈ ಸೈಟ್‌ನಲ್ಲಿ ಹೆಸರು ASDDO ಪಟ್ಟಿಗೆ ಸೇರ್ಪಡೆಯಾಗಿದ್ದರೆ ಮತದಾರರು […]

Continue Reading