ಶಿಕ್ಷಣದ ಜೊತೆಗೆ ಸಂಸ್ಕಾರ ಅಗತ್ಯ: ಅನೀಲ್ ಜಮಾದಾರ

ಸುದ್ದಿ ಸಂಗ್ರಹ ಚಿತ್ತಾಪುರಮಕ್ಕಳಲ್ಲಿ ಅಡಗಿರುವ ಸೂಪ್ತ ಪ್ರತಿಭೆ ಅನಾವರಣಗೊಳ್ಳುವುದು ವಾರ್ಷಿಕೋತ್ಸವ ಕಾರ್ಯಕ್ರಮದ ಮೂಲಕ. ಶಿಕ್ಷಣದ ಜೊತೆಗೆ ಸಂಸ್ಕಾರ ನೀಡುವುದು ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಬಾಲಭವನ ಉಪಾಧ್ಯಕ್ಷ ಅನೀಲ ಜಮಾದಾರ ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ನಡೆದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ 43ನೇ ವಾರ್ಷಿಕೋತ್ಸವ ಹಾಗೂ ಲಿo.ಸಿದ್ದಲಿಂಗ ಮಹಾಸ್ವಾಮಿಗಳ ಪುಣ್ಯಸ್ಮರಣೆ ಸಮಾರಂಭದಲ್ಲಿ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಕಲ್ಲಿನ ಗಣಿಗರಿಕೆಯಂತಹ ಗ್ರಾಮೀಣ ಭಾಗದಲ್ಲಿ ಕನ್ನಡ ಮಾಧ್ಯಮ ಶಾಲೆ ಜಿಲ್ಲೆಯಲ್ಲಿಯೆ ಮಾದರಿ ಎನ್ನುವಂತೆ ಬೆಳೆಸುತ್ತಿರುವುದು […]

Continue Reading

ಕಲಬುರಗಿ ಜಿಲ್ಲಾ ಬಿಜೆಪಿ ನೂತನ ಪದಾಧಿಕಾರಿಗಳಲ್ಲಿ ಚಿತ್ತಾಪುರ ಮತಕ್ಷೇತ್ರದ ನಾಲ್ವರಿಗೆ ಅವಕಾಶ‌

ಸುದ್ದಿ ಸಂಗ್ರಹ ಚಿತ್ತಾಪುರಕಲಬುರಗಿ ಗ್ರಾಮಾಂತರ ಜಿಲ್ಲೆಯ ಭಾರತೀಯ ಜನತಾ ಪಕ್ಷದ ಜಿಲ್ಲಾ ನೂತನ ಪದಾಧಿಕಾರಿಗಳಲ್ಲಿ ಚಿತ್ತಾಪುರ ಮತಕ್ಷೇತ್ರದ ನಾಲ್ಕು ಜನ ಮುಖಂಡರಿಗೆ ಅವಕಾಶ ನೀಡಲಾಗಿದೆ. ಬಿಜೆಪಿ ಪಕ್ಷದ ತಾಲೂಕು ಪದಾಧಿಕಾರಿಗಳಾಗಿ, ಜಿಲ್ಲಾ ಪದಾಧಿಕಾರಿಗಳಾಗಿ ಇವರುಗಳು ಈ ಹಿಂದೆ ಕೂಡ ಸೇವೆ ಸಲ್ಲಿಸಿದ್ದಾರೆ. ಶರಣುಜ್ಯೋತಿ ರಾವೂರ ಜಿಲ್ಲಾ ಉಪಾಧ್ಯಕ್ಷರಾಗಿ, ಬಸವರಾಜ ಬೆಣ್ಣೂರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾಗಿ, ಗಿರೀಶ್ ಭಜಂತ್ರಿ ಜಿಲ್ಲಾ ಕಾರ್ಯದರ್ಶಿಗಳಾಗಿ, ಚಂದ್ರಶೇಖರ ಪರಸರೆಡ್ಡಿ ಜಿಲ್ಲಾ ವಕ್ತಾರರಾಗಿ ಆಯ್ಕೆ ಮಾಡಲಾಗಿದೆ. ಜಿಲ್ಲಾ ಪದಾಧಿಕಾರಿಗಳ ಸ್ಥಾನಕ್ಕೆ ಯಾರು ಅರ್ಜಿ ಸಲ್ಲಿಸಿಲ್ಲ. […]

Continue Reading

ನಾಲವಾರ: ಸಾಂಸ್ಕೃತಿಕ ವೈಭವಕ್ಕೆ ಚಾಲನೆ ಮತ್ತು ಕಡಕೋಳ ಮಡಿವಾಳೇಶ್ವರ ಪುರಾಣ ಪ್ರಾರಂಭ

ಸುದ್ದಿ ಸಂಗ್ರಹ ನಾಲವಾರಕಲಬುರಗಿ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಶಿವಯೋಗಿಗಳ ಜಾತ್ರಾಮಹೋತ್ಸವದ ನಿಮಿತ್ಯ ಕಡಕೋಳದ ಮಡಿವಾಳೇಶ್ವರ ಪುರಾಣ ಪ್ರಾರಂಭೋತ್ಸವ, ಜಾತ್ರಾ ಮಹೋತ್ಸವದ ಭಿತ್ತಿ ಪತ್ರಗಳ ಬಿಡುಗಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಚಾಲನಾ ಸಮಾರಂಭವು ಗುರುವಾರ ಅತ್ಯಂತ ಅದ್ಧೂರಿಯಾಗಿ ನೆರವೇರಿತು. ಪೀಠಾಧಿಪತಿ ಪೂಜ್ಯ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಪಾವನ ಸಾನಿಧ್ಯದಲ್ಲಿ ಕರಡಕಲ್ಲ ಕೋರಿಸಿದ್ಧೇಶ್ವರ ಶಾಖಾ ಮಠದ ಶಾಂತರುದ್ರಮುನಿ ಮಹಾಸ್ವಾಮಿಗಳು ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ನಾಡಿನ ಪ್ರಖರ ಪ್ರವಚನಕಾರರೆಂದು ಪ್ರಖ್ಯಾತರಾದ ಸಿದ್ಧಬಸವಕಬೀರ […]

Continue Reading

ಜ.12 ರಂದು ಚಿತ್ತಾಪುರಕ್ಕೆ ಮುಖ್ಯಮಂತ್ರಿ ಆಗಮನ

ಸುದ್ದಿ ಸಂಗ್ರಹ ಚಿತ್ತಾಪುರಮತಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಅಡಿಗಲ್ಲು ಮತ್ತು ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಜ.12 ರಂದು ಪಟ್ಟಣಕ್ಕೆ ಆಗಮಿಸುತ್ತಿದ್ದು. ಬುಧವಾರ ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದ ಸ್ಥಳಕ್ಕೆ ಭೇಟಿಯಾಗಿ ಪರಿಶೀಲಿಸಿದರು. ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವ‌ರ್’ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರ್ ಶ್ರೀನಿವಾಸಲು ಅವರು ಕಾರ್ಯಕ್ರಮ ಆಯೋಜನೆ ಮಾಡಲು ಉದ್ದೇಶಿಸಿರುವ ಪಟ್ಟಣದ ಕಡೆಚೂರು ಮೈದಾನ ಪರಿಶೀಲನೆ ಮಾಡಿದರು. ವೇದಿಕೆ ನಿರ್ಮಾಣ, ಶಾಮೀಯಾನ, ಪೊಲೀಸ್ ಬ್ಯಾರಿಕೇಡ್, ಪಾರ್ಕಿಂಗ್ ಸ್ಥಳಗಳ ಹಾಗೂ ಹೆಲಿಕಾಪ್ಟರ್ […]

Continue Reading

ನಾಲವಾರ: ನಾಳೆಯಿಂದ ಧಾರ್ಮಿಕ ಸಾಂಸ್ಕೃತಿಕ ವೈಭವ, ಜ.18 ರಿಂದ ಕೋರಿಸಿದ್ಧೇಶ್ವರ ಜಾತ್ರಾ ಮಹೋತ್ಸವ

ಸುದ್ದಿ ಸಂಗ್ರಹ ಚಿತ್ತಾಪುರಕಲ್ಯಾಣ ಕರ್ನಾಟಕ ಭಾಗದ ಪ್ರಸಿದ್ಧ ಪುಣ್ಯಕ್ಷೇತ್ರ ಲಕ್ಷಾಂತರ ಭಕ್ತರ ಶ್ರದ್ಧಾ ಭಕ್ತಿಯ ಕೇಂದ್ರವಾಗಿರುವ ಕಲಬುರಗಿ ಜಿಲ್ಲೆಯ ನಾಲವಾರದ ಸದ್ಗುರು ಶ್ರೀ ಕೋರಿಸಿದ್ದೇಶ್ವರ ಶಿವಯೋಗಿಗಳ ಜಾತ್ರೆ ಜ.18 ಮತ್ತು 19ರಂದು ಅದ್ಧೂರಿಯಾಗಿ ನೆರವೇರಲಿದೆ. ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳ ಪಾವನ ದಿಗ್ದರ್ಶನದಲ್ಲಿ ನಡೆಯುವ ಜಾತ್ರಾ ಮಹೋತ್ಸವದ ಪ್ರಯುಕ್ತ 11 ದಿನ ಮುಂಚಿತವಾಗಿಯೇ ಜ.8 ರಿಂದ ಶ್ರೀಮಠದಲ್ಲಿ ಧಾರ್ಮಿಕ ಪ್ರವಚನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಲಿದೆ. ಜ.18ರಂದು ಅವರಾತ್ರಿ ಅಮಾವಾಸ್ಯೆ ದಿನದಂದು ಸಂಜೆ ಜಾತ್ರೆ ಉದ್ಘಾಟನೆ, ಶಿವಾನುಭವ […]

Continue Reading

ವಿಮಾನ ಪ್ರಯಾಣಿಕರ ಗಮನಕ್ಕೆ: ಇನ್ಮುಂದೆ ಫ್ಲೈಟ್‌ನಲ್ಲಿ ಪವರ್ ಬ್ಯಾಂಕ್ ಬಳಕೆಗೆ ನಿಷೇಧ

ಸುದ್ದಿ ಸಂಗ್ರಹ ನವದೆಹಲಿ ವಿಮಾನ ಪ್ರಯಾಣದ ವೇಳೆ ಲಿಥಿಯಂ ಬ್ಯಾಟರಿಗಳು ಬೆಂಕಿ ಹತ್ತಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ಪವರ್ ಬ್ಯಾಂಕ್‌ಗಳ ಬಳಕೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಹೊಸ ಮಾರ್ಗಸೂಚಿ ಹೊರಡಿಸಿದೆ. ಇತ್ತೀಚೆಗೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನವೊಂದು ಟೇಕ್-ಆಫ್ ಆಗುವ ಮುನ್ನ ಪ್ರಯಾಣಿಕರ ಪವರ್ ಬ್ಯಾಂಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅದೃಷ್ಟವಶಾತ್ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಯಾವುದೆ ಅನಾಹುತ ಸಂಭವಿಸಿರಲಿಲ್ಲ. ಈ ಘಟನೆಯ ಬೆನ್ನಲ್ಲೆ ಈ ಹೊಸ ‘ಡೆಂಜರಸ್ ಗುಡ್ಸ್ ಅಡ್ವೈಸರಿ […]

Continue Reading

ಎಣ್ಣೆ ಮತ್ತಲ್ಲಿ ತಿರುಪತಿ ದೇವಸ್ಥಾನದ ಗೋಪುರ ಏರಿ ತಿರುಪತಿಯಿಂದ ಕಿರಿಕ್‌

ಸುದ್ದಿ ಸಂಗ್ರಹ ತಿರುಪತಿ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ತಿರುಪತಿ ತಿರುಮಲ ದೇವಸ್ಥಾನದ ಗೋಪುರ ಏರಿ ಕಿರಿಕ್‌ ಮಾಡಿದ ಘಟನೆ ತಡರಾತ್ರಿ ನಡೆದಿದೆ. ಭಕ್ತರಂತೆ ದೇವಸ್ಥಾನ ಪ್ರವೇಶ ಮಾಡಿದ್ದ ಈತ ಟೆಂಟ್ ಕಂಬ್‌ಗಳನ್ನು ಹತ್ತಿ ನೇರವಾಗಿ ಗರ್ಭಗುಡಿಯ ಮೇಲಿರುವ ಗೋಪುರ ಏರಿದ್ದಾನೆ. ಗೋಪುರ ಮೇಲಿರುವ ಕಲಶಗಳಿರುವ ಜಾಗವನ್ನು ತಲುಪಿ ಮದ್ಯ ಕೊಡುವಂತೆ ವಿಚಿತ್ರ ಬೇಡಿಕೆ ಇಟ್ಟಿದ್ದಾನೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಪೆದ್ದಮಲ್ಲ ರೆಡ್ಡಿ ಕಾಲೋನಿಯ ಕುರ್ಮಾ ವಾಡಾದ ನಿವಾಸಿ ಕುಟ್ಟಡಿ ತಿರುಪತಿ(45) ಕಿರಿಕ್‌ ಮಾಡಿದ ವ್ಯಕ್ತಿಯಾಗಿದ್ದು ಕೊನೆಗೆ ಮನವೊಲಿಸಿ […]

Continue Reading

ಸಂಸದ ಗೋವಿಂದ ಕಾರಜೋಳ ಅವರಿಗೆ ಹೊಸ ವರ್ಷದ ಶುಭ ಕೋರಿದ ಹೊಸ್ಸೂರಕರ್

ಸುದ್ದಿ ಸಂಗ್ರಹ ಬೆಂಗಳೂರುಹೊಸ ವರ್ಷದ ಸುಸಂದರ್ಭದಲ್ಲಿ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸೂರಕರ್ ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರಿದರು. ನಂತರ ದೀಪಕ್ ಹೊಸ್ಸೂರಕರ್ ಮಾತನಾಡಿ, ಹೊಸ ವರ್ಷವು ನಿಮಗೆ ಹೊಸ ಗುರಿ, ಹೊಸ ಸಾಧನೆ, ಹೊಸ ಯಶಸ್ಸಿಗೆ ದಾರಿಯಾಗಲಿ. ನೀವು ಸಾಗುವ ದಾರಿ ಹೂವಿನ ಹಾಸಿಗೆಯಂತಿರಲಿ ಎಂಬ ಹಾರೈಕೆ ನನ್ನದು. ತಮಗೆ ಹಾಗೂ ತಮ್ಮ ಕುಟುಂಬಕ್ಕೆ ಹೊಸ ವರ್ಷದ ಹೃದಯಪೂರ್ವಕ ಶುಭಾಶಯಗಳು […]

Continue Reading

ತೋಟ್ನಳ್ಳಿ ಶ್ರೀ ದುರ್ಗಾದೇವಿ ಪಲ್ಲಕ್ಕಿ ಉತ್ಸವ ಪತ್ರಿಕೆ ಬಿಡುಗಡೆ‌

ಸುದ್ದಿ ಸಂಗ್ರಹ ತೋಟ್ನಳ್ಳಿಗ್ರಾಮದ ಶ್ರೀ ದುರ್ಗಾದೇವಿ ಪಲ್ಲಕ್ಕಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಡಾ.ತ್ರಿಮೂರ್ತಿ ಶಿವಾಚಾರ್ಯರ ನೇತೃತ್ವದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಬಿಡುಗಡೆ ಮಾಡಿದರು. ಆಮಂತ್ರಣ ಪತ್ರಿಕೆಯ ದಾಸೋಹಿಗಳಾದ ವಿಶ್ವನಾಥ ತೋಟ್ನಳ್ಳಿ, ಡಾ.ವಿವೇಕಾನಂದ ಬುಳ್ಳಾ ಮತ್ತು ಗ್ರಾಮದ ಹಿರಿಯರು ಉಪಸ್ಥಿತರಿದ್ದರು. ಸೇಡಂ ತಾಲೂಕಿನ ತೋಟ್ನಳ್ಳಿ ಗ್ರಾಮದಲ್ಲಿ ಜ.2 ರಂದು ಸಂಜೆ 5 ಗಂಟೆಗೆ ತೋಟ್ಟಳ್ಳಿ ಗ್ರಾಮದ ಮಹಾಂತೇಶ್ವರ ಮಠದಿಂದ ವಾದ್ಯಮೇಳದೊಂದಿಗೆ ದೇವಿಯ ದೇವಸ್ಥಾನದವರೆಗೆ ಪಲ್ಲಕ್ಕಿ ಉತ್ಸವಹಾಗೂ ದುರ್ಗಾದೇವಿಯ ಉತ್ಸವ ಮೂರ್ತಿಯನ್ನು ಬರಮಾಡಿ […]

Continue Reading

ಚಳಿಗೆ ಬಿಸಿಬಿಸಿಯಾಗಿ ತಿನ್ನಬೇಕು ಅಂತಾ ಅನಿಸುತ್ತಾ ? ಅಪ್ಪಿತಪ್ಪಿಯೂ ಸಂಜೆ 6 ಗಂಟೆಯ ನಂತರ ಈ ಆಹಾರಗಳು ತಿನ್ನಬೇಡಿ

ಸಂಜೆಯ ತಂಪಾದ ವಾತಾವರಣದಲ್ಲಿ ಬಿಸಿ ಬಿಸಿಯಾಗಿ ಖಾರವಾದ ಸ್ನಾಕ್ಸ್ ತಿನ್ನಬೇಕೆಂದು ಅನಿಸುವುದು ಸಹಜ. ಅದರಲ್ಲಿಯೂ ವಿಶೇಷವಾಗಿ ಚಳಿಗಾಲ ಮತ್ತು ಮಳೆಗಾಲದಲ್ಲಿ, ಮನಸ್ಸು ಸಮೊಸಾ, ಪಕೋಡಾ, ಬಜ್ಜಿ ಹೀಗೆ ಕರಿದ ತಿನಿಸುಗಳತ್ತ ಹೋಗುತ್ತದೆ. ಆದರೆ ನಿಮಗೆ ಗೊತ್ತಾ, ಈ ಆಹಾರಗಳ ತಿನ್ನುವ ಸಮಯ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಸಂಜೆ 6 ಗಂಟೆಯ ನಂತರ ನೀವು ಸೇವಿಸುವಂತಹ ಆಹಾರ ನಿಮ್ಮ ಜೀರ್ಣಕ್ರಿಯೆ ಮತ್ತು ಚಯಾಪಚಯ ಕ್ರಿಯೆಯ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ. […]

Continue Reading