ಇಂಟರ್‌ನೆಟ್ ಇಲ್ಲದಿದ್ದರೂ UPI ಮೂಲಕ ಹಣ ಪಾವತಿ ಮಾಡಬಹುದು: Tap and Pay ಹೇಗೆ ಸಾಧ್ಯ ?

ಇಂಟರ್‌ನೆಟ್ ಸಂಪರ್ಕವಿಲ್ಲದಿದ್ದರೂ ಯುಪಿಐ ಮೂಲಕ ಹಣ ಪಾವತಿಸುವ ದಿನಗಳು ಶೀಘ್ರದಲ್ಲೆ ಬರಲಿವೆ. ವಿಮಾನದಲ್ಲಿ ಪ್ರಯಾಣಿಸುತ್ತಿರುವಾಗ, ಭೂಗತ ಮೆಟ್ರೋ ನಿಲ್ದಾಣದಲ್ಲಿದ್ದಾಗ ಅಥವಾ ನೆಟ್‌ವರ್ಕ್ ಸಮಸ್ಯೆ ಇರುವ ಪ್ರದೇಶದಲ್ಲಿದ್ದರೂ ಮೊಬೈಲ್ ‘ಟ್ಯಾಪ್’ ಮಾಡುವ ಮೂಲಕ ಹಣ ಪಾವತಿಸಲು ಸಾಧ್ಯವಾಗುವ ಹೊಸ ವ್ಯವಸ್ಥೆಯನ್ನು ಭಾರತ ಅಭಿವೃದ್ಧಿಪಡಿಸುತ್ತಿದೆ. ವರದಿಗಳ ಪ್ರಕಾರ, ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ಇಂಟರ್‌ನೆಟ್ ಇಲ್ಲದೆಯೇ ಕಾರ್ಯನಿರ್ವಹಿಸುವ Offline Tap and Pay UPI ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುತ್ತಿದೆ. ಈ ಹೊಸ ತಂತ್ರಜ್ಞಾನ ಜಾರಿಯಾದರೆ ಭಾರತದ ಡಿಜಿಟಲ್ ಪಾವತಿ […]

Continue Reading

ಕಲಬುರಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ಅರ್ಜಿ ಆಹ್ವಾನ

ಸುದ್ದಿ ಸಂಗ್ರಹ ಕಲಬುರಗಿಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿಗೆ ಅತಿಥಿ ಉಪನ್ಯಾಸಕರು/ಅತಿಥಿ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ. ಚಿಂಚೋಳಿ ತಾಲೂಕಿನ ಅಣವಾರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನಲ್ಲಿ ರಸಾಯನಶಾಸ್ತ್ರ ವಿಷಯದ ಅತಿಥಿ ಉಪನ್ಯಾಸಕ, ಅಫಜಲಪುರ ತಾಲೂಕಿನ ಬಡದಾಳ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ರಸಾಯನಶಾಸ್ತ್ರ ಅತಿಥಿ ಉಪನ್ಯಾಸಕ […]

Continue Reading

ಶಹಾಬಾದ್: ಮಂಗಲಸಿಂಗ್ ಬೆಂಕಿತಾತಾ ಪದಗ್ರಹಣ

ಸುದ್ದಿ ಸಂಗ್ರಹ ಶಹಾಬಾದ್ತಾಲೂಕಿನ ಗೋಳಾ (ಕೆ) ಗ್ರಾಮದ ನಿಜಾಮ ಬಜಾರ ಬಡಾವಣೆಯ ಸದಾಶಿವ ಬೆಂಕಿತಾತ ಮಠಕ್ಕೆ ಕಿರಿಯ ಪೀಠಾಧಿಪತಿ ಸದ್ಗುರು ಮಂಗಲಸಿಂಗ್ ಬೆಂಕಿತಾತ ಅಧಿಕಾರ ವಹಿಸಿಕೊಂಡರು. ಜೇವರ್ಗಿ ತಾಲೂಕಿನ ಯನಗುಂಟಿಯ ಸದಾಶಿವ ಬೆಂಕಿತಾತ ಮಠದಿಂದ ಗುರುವಾರ ಸಂಜೆ ಪುರಪ್ರವೇಶ ಮಾಡಿದರು. ಸ್ಥಳೀಯ ನೂರಾರು ಭಕ್ತರು ಪುಷ್ಪವೃಷ್ಠಿಯೊಂದಿಗೆ ಭವ್ಯ ಸ್ವಾಗತ ಕೋರಿದರು. ಶ್ರೀಮಠದ ಕಿರಿಯ ಸ್ವಾಮಿಯಾಗಿ ಅಧಿಕಾರಿ ವಹಿಸಿಕೊಂಡ ನಂತರ ಪ್ರತಿ ಗುರುವಾರ, ಶುಕ್ರವಾರ, ರವಿವಾರ ಮತ್ತು ಅಮವಾಸ್ಯೆ ದಿನ ಶಹಾಬಾದ್ ಮಠದಲ್ಲಿ ಭಕ್ತರಿಗೆ ಲಭ್ಯವಿದ್ದು ಮತ್ತು ಮೂಲ […]

Continue Reading

ಮೋಹನ್ ಭಾಗವತ್‌ಗೆ ಸಾವರ್ಕರ್ ಕೃತಿ ನೀಡಿ ಗೌರವಿಸಿದ ಬಿಜೆಪಿಗರು

ಸುದ್ದಿ ಸಂಗ್ರಹ ವಾಡಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್)ದ ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಸ್ಥಳೀಯ ಬಿಜೆಪಿ ಮುಖಂಡರು ಅಪ್ರತಿಮ ದೇಶಭಕ್ತ, ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ಕೃತಿ ನೀಡಿ ಗೌರವಿಸಿದರು. ರಾಜ್ಯದ ವಿವಿಧೆಡೆ ಆಯೋಜನೆಗೊಂಡಿದ್ದ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಗುರುವಾರ ಸಂಜೆ ಉದ್ಯಾನ್‌ ಎಕ್ಸ್‌ಪ್ರೆಸ್ ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಿದ್ದ ವೇಳೆ ವಾಡಿ ರೈಲು ನಿಲ್ದಾಣದಲ್ಲಿ ಇಳಿದು ಬಿಜೆಪಿ ಸೇರಿದಂತೆ ಹಿಂದೂಪರ ಸಂಘಟನೆಗಳ ನೂರಾರು ಕಾರ್ಯಕರ್ತರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸುತ್ತಿದ್ದರು. ಈ ವೇಳೆ ವಾಡಿ […]

Continue Reading

ತನಾರತಿ ಹರಕೆ ಸಮರ್ಪಿಸಿದ ಭಕ್ತರು

ಸುದ್ದಿ ಸಂಗ್ರಹ ಚಿತ್ತಾಪುರ ಕತ್ತಲನ್ನು ಸೀಳಿ ಬೆಳಕಿನ ನದಿಯೇ ಹರಿಯುತ್ತಿರುವಂತೆ ಭಾಸವಾಯಿತು. ಸಾವಿರಾರು ಭಕ್ತರು ತಲೆಯ ಮೇಲೆ ಗೋದಿಹಿಟ್ಟಿನ ವಿಶೇಷ ಹಣತೆಗಳನ್ನು ಹೊತ್ತು ಮಠದ ಸುತ್ತ ಪ್ರದಕ್ಷಿಣೆ ಹಾಕಿದಾಗ ಆ ದೃಶ್ಯ ನೋಡಿದ ಪ್ರತಿಯೊಬ್ಬರ ಮನಸ್ಸು ಭಕ್ತಿಯಿಂದ ತುಂಬಿತು. ಕಲ್ಯಾಣ ಕರ್ನಾಟಕದ ಪವಿತ್ರ ಪುಣ್ಯಕ್ಷೇತ್ರವಾದ ತಾಲೂಕಿನ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ಮಣ್ಣೆತ್ತಿನ ಅಮಾವಾಸ್ಯೆಯ ಮಧ್ಯರಾತ್ರಿ ತನಾರತಿ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ದಕ್ಷಿಣ ಭಾರತದಲ್ಲೆ ‘ಮಹಾದೀಪಮೇಳ’ ಎಂದು ಪ್ರಸಿದ್ಧವಾಗಿರುವ ಈ ಉತ್ಸವವು ಇಷ್ಟಾರ್ಥಗಳು […]

Continue Reading

ಚಿತ್ತಾಪುರ: ಮತದಾರರ ಪಟ್ಟಿ ಪರಿಷ್ಕರಣೆ 100% ಅರ್ಜಿ ವಿತರಣೆ

ಸುದ್ದಿ ಸಂಗ್ರಹ ಚಿತ್ತಾಪುರಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಲ್ಲಿ ಚಿತ್ತಾಪುರ ಮತಕ್ಷೇತ್ರದ 257 ಮತಗಟ್ಟೆಗಳಲ್ಲಿ ಶೇ.100 ರಷ್ಟು ಅರ್ಜಿ ವಿತರಣೆ ಮಾಡಲಾಗಿದೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ತಿಳಿಸಿದ್ದಾರೆ. ಮತಕ್ಷೇತ್ರದ 257 ಮತಗಟ್ಟೆಗಳಲ್ಲಿ ಒಟ್ಟು 2,51,226 ಮತದಾರರಿದ್ದು ಮಂಗಳವಾರದವರೆಗೆ ಎಲ್ಲಾ ಮತದಾರರಿಗೆ ಅರ್ಜಿ ವಿತರಿಸಲಾಗಿದೆ. ನೀಡಿರುವ ಅರ್ಜಿಗಳನ್ನು ಭರ್ತಿ ಮಾಡಿಕೊಟ್ಟಿರುವ ಮತದಾರರ ಅರ್ಜಿಗಳ ಪೈಕಿ ಒಟ್ಟು 94,250 ಅರ್ಜಿಗಳನ್ನು ಡಿಜಿಟಲೈಸ್ ಮಾಡಲಾಗಿದ್ದು ಶೇ.37.52 ರಷ್ಟು ಸಾಧನೆಯಾಗಿದೆ ಎಂದು ಹೇಳಿದ್ದಾರೆ. ಬಿಎಲ್ಒಗಳು ತಮಗೆ ವಹಿಸಿರುವ ಮತಗಟ್ಟೆ […]

Continue Reading

ರಾವೂರ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಅಣಕು ಚುನಾವಣೆ: ಶೇ.92 ರಷ್ಟು ಮತದಾನ

ಸುದ್ದಿ ಸಂಗ್ರಹ ಶಹಾಬಾದ್ ಪ್ರಜಾಪ್ರಭುತ್ವದ ನಿಜವಾದ ಆಶಯ ಈಡೇರುವುದು ಉತ್ತಮ ನಾಯಕರ ಆಯ್ಕೆ ಪಾರದರ್ಶಕ ಚುನಾವಣೆ ಅವಲಂಬಿಸಿದೆ ಎಂದು ಕಾರ್ಯನಿರತ ಪತ್ರಕರ್ತ ಸಂಘದ ತಾಲೂಕ ಅಧ್ಯಕ್ಷ ಕೆ ರಮೇಶ ಭಟ್ ಹೇಳಿದರು. ತಾಲೂಕಿನ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಚುನಾವಣೆ ಸಾಕ್ಷರತಾ ಕ್ಲಬ್ ವತಿಯಿಂದ ತರಗತಿ ನಾಯಕತ್ವಕ್ಕಾಗಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ವಿಜೇತ ಮಕ್ಕಳಿಗೆ ಪ್ರಮಾಣಪತ್ರ ವಿತರಿಸಿ ಮಾತನಾಡಿದ ಅವರು, ಆಮಿಷದ ಮತದಾನ ಪ್ರಜಾಪ್ರಭುತ್ವದ ಆಶಯಗಳನ್ನು ಹಾಳುಮಾಡುತ್ತವೆ. ಆದ್ದರಿಂದ ಯಾವುದೆ ಚುನಾವಣೆಯಲ್ಲಿ ಯಾವುದೆ ಆಸೆ- ಆಮಿಷಕ್ಕೆ […]

Continue Reading

ಗಿನ್ನೀಸ್ ದಾಖಲೆಗಾಗಿ 6 ವರ್ಷದ ಮೊಮ್ಮಗಳಿಗೆ ಕಾರು ಚಲಾಯಿಸಲು ಕೊಟ್ಟ ತಾತ: ಸಬ್ ಇನ್ಸ್‌ಪೆಕ್ಟರ್‌ ವಿರುದ್ಧ FIR

ಸುದ್ದಿ ಸಂಗ್ರಹ ಹೈದರಾಬಾದ್ಗಿನ್ನೀಸ್ ದಾಖಲೆ ನಿರ್ಮಿಸಲು 6 ವರ್ಷದ ಮೊಮ್ಮಗಳಿಗೆ ಕಾರು ಚಲಾಯಿಸಲು ಬಿಟ್ಟಿದ್ದ ಸಬ್ ಇನ್ಸ್‌ಪೆಕ್ಟರ್‌ ವಿರುದ್ಧ ಪ್ರಕರಣ ದಾಖಲಾಗಿದೆ. ರವಿವಾರ ಜು.12 ರಂದು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವಿಶ್ವದ ಅತ್ಯಂತ ಕಿರಿಯ ಚಾಲಕಿ ಎಂಬ ಗಿನ್ನೀಸ್ ದಾಖಲೆ ನಿರ್ಮಿಸುವ ಉದ್ದೇಶದಿಂದ ಸಬ್ ಇನ್ಸ್‌ಪೆಕ್ಟರ್‌ ಪೂಜಾರಿ ತಿರುಪತಿ ಅವರು ಜನಸಂದಣಿಯುಳ್ಳ ರಸ್ತೆಯಲ್ಲಿ ಕಾರು ಚಲಾಯಿಸಲು ಬಿಟ್ಟಿದ್ದರು ಎಂದು ತಿಳಿದುಬಂದಿದೆ. ಸ್ಥಳೀಯರ ಮಾಹಿತಿ ಪ್ರಕಾರ, ತಮ್ಮ ಮಗುವನ್ನು ಕಾರಿನ ಸ್ಟೈರಿಂಗ್ ಮುಂದೆ ಕೂರಿಸಿಕೊಂಡು […]

Continue Reading

ಬಸ್‌ ನಿಲುಗಡೆಗೆ ಆಗ್ರಹಿಸಿ ಇಂದು ರಸ್ತೆ ತಡೆ

ಸುದ್ದಿ ಸಂಗ್ರಹ ಶಹಾಬಾದ್‌ ಶಹಾಬಾದ್‌ ಮಾರ್ಗವಾಗಿ ಸಂಚರಿಸುವ ಚಿತ್ತಾಪುರ, ಕಲಬುರಗಿ, ಯಾದಗಿರಿ ಮತ್ತು ರಾಯಚೂರಿಗೆ ತೆರಳುವ ಬಸ್‌ಗಳನ್ನು ಶಹಾಬಾದ್ ವಾಡಿ ಕ್ರಾಸ್ ಬಳಿ ನಿಲುಗಡೆ ಮಾಡಲು ಆಗ್ರಹಿಸಿ ಜುಲೈ 13 ರಂದು ಸೋಮವಾರ ಬೆಳಿಗ್ಗೆ 9 ಗಂಟೆಗೆ ಯಾದಗಿರಿ-ಕಲಬುರಗಿ ರಸ್ತೆ ತಡೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಸೋಷಿಯಲಿಸ್ಟ್ ಯೂನಿಟಿ ಸೆಂಟರ್‌ ಆಫ್‌ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸ್ಥಳೀಯ ಸಮಿತಿ ಸದಸ್ಯ ಜಗನ್ನಾಥ ಎಸ್‌.ಎಚ್ ತಿಳಿಸಿದ್ದಾರೆ. ಹಲವು ಬಾರಿ ಕೆಎಸ್‌ಆರ್‌ಟಿಸಿ ಜಿಲ್ಲಾ ನಿಯಂತ್ರಣ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ […]

Continue Reading

ಜು.14 ರಂದು ನಾಲವಾರದಲ್ಲಿ ತನಾರತಿ ವೈಭವ: ಆರಾಧ್ಯ ಗುರುವಿಗೆ ಹರಕೆ ಅರ್ಪಿಸಲಿರುವ ಭಕ್ತಸಾಗರ

ಸುದ್ದಿ ಸಂಗ್ರಹ ಚಿತ್ತಾಪುರ ಕಲ್ಯಾಣ ಕರ್ನಾಟಕ ಭಾಗದ ಲಕ್ಷಾಂತರ ಭಕ್ತರ ಶ್ರದ್ಧಾ ಕೇಂದ್ರವಾದ ಶ್ರೀಕ್ಷೇತ್ರ ನಾಲವಾರದಲ್ಲಿ ತಮ್ಮ ಹರಕೆ ಪೂರೈಸಿದರೆ ಪ್ರತೀಕವಾಗಿ ನೆರವೇರುವ ತನಾರತಿ ಸೇವೆಯನ್ನು ಆರಾಧ್ಯ ಸದ್ಗುರುವಿಗೆ ಸಲ್ಲಿಸುವ ವಿಶಿಷ್ಟ ಉತ್ಸವ ಮಂಗಳವಾರ ಮಧ್ಯರಾತ್ರಿ ಸಂಭ್ರಮದಿಂದ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಮಹದೇವ ಗಂವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶ್ರೀಕ್ಷೇತ್ರ ನಾಲವಾರದ ಸದ್ಗುರು ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ಪೀಠಾಧಿಪತಿ ಪರಮಪೂಜ್ಯ ಡಾ. ಸಿದ್ದತೋಟೆಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸನ್ನಿಧಿಯಲ್ಲಿ ಅತ್ಯಂತ ವೈಭವದಿಂದ ಶ್ರದ್ಧೆ ಭಕ್ತಿಯ ಮಧ್ಯೆ […]

Continue Reading