ಕೆಎಂಎಫ್‌ನ ರೈತ ತರಬೇತಿ ಹಣ ಸ್ವಂತ ಖಾತೆಗೆ ವರ್ಗಾಯಿಸಿಕೊಂಡ ಸಿಬ್ಬಂದಿ ಅಮಾನತು

ಸುದ್ದಿ ಸಂಗ್ರಹ ಬೆಂಗಳೂರುರೈತರು ಹಾಗೂ ಹಾಲು ಉತ್ಪಾದಕ ಸಹಕಾರ ಸಂಘಗ ಸದಸ್ಯರು, ಸಿಬ್ಬಂದಿಗೆ ತರಬೇತಿ ನೀಡುವ ಕರ್ನಾಟಕ ಹಾಲು ಮಹಾಮಂಡಲ ಮೈಸೂರು ತರಬೇತಿ ಕೇಂದ್ರದಲ್ಲಿ ಕಚೇರಿ ಲೆಕ್ಕ ಸಹಾಯಕ 60 ಲಕ್ಷ ಸ್ವಂತ ಖಾತೆಗೆ ಹಾಕಿಕೊಂಡು ದುರ್ಬಳಕೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಬ್ಯಾಂಕ್‌ನವರು ನೀಡಿದ ಮಾಹಿತಿ ಆಧರಿಸಿ ಎಚ್ಚೆತ್ತುಕೊಂಡು ಕರ್ನಾಟಕ ಹಾಲು ಮಹಾಮಂಡಲದ ಹಿರಿಯ ಅಧಿಕಾರಿಗಳು ಕೂಡಲೆ ಎಚ್ಚೆತ್ತುಕೊಂಡು ಸಿಬ್ಬಂದಿಯಿಂದ ಹಣವನ್ನು ಹಿಂದಕ್ಕೆ ಪಡೆಯಲಾಗಿದೆ. ಅಲ್ಲದೆ ಸಿಬ್ಬಂದಿ ಅಮಾನತುಗೊಳಿಸಲಾಗಿದ್ದು, ವಜಾಕ್ಕೂ ಪರಿಶೀಲಿಸಲಾಗುತ್ತಿದೆ. ಆಗಸ್ಟ್‌ 7ರ ಸಂಜೆ ಕೆಲಸ ಮುಗಿಸಿ […]

Continue Reading

ವಾಡಿ ಬಳಿ ಅರ್ಧರುಂಡ, ಬಲಗೈ ಇಲ್ಲದ ಯುವಕನ ಶವ ಪತ್ತೆ, ಕೊಲೆ ಶಂಕೆ

ಸುದ್ದಿ ಸಂಗ್ರಹ ಚಿತ್ತಾಪುರತಾಲೂಕಿನ ಕುಂದನೂರು ಗ್ರಾಮದ ಸಂಗಮೇಶ್ವರ ದೇವಸ್ಥಾನ ಬಳಿ ಅರ್ಧರುಂಡ ಮತ್ತು ಒಂದು ಬಲಗೈ ಇಲ್ಲದ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಆ ಮೃತ ದೇಹವನ್ನು ನಾಯಿಗಳು ಸುತ್ತುವರಿದು ಎಳೆದಾಡುತ್ತಿದ್ದವು. ನಾಯಿಗಳ ಗುಂಪು ಕಂಡ ಜನರು ಹೋಗಿ ನೋಡಿದ್ದಾರೆ. ತಕ್ಷಣ ನಾಯಿಗಳನ್ನು ಅಲ್ಲಿಂದ ಓಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತರನ್ನು ಶಹಾಬಾದ್‌ ಮೂಲದ ಮಹ್ಮದ್ ಫಯಾಜ್ (26) ಎಂದು ಗುರುತಿಸಲಾಗಿದೆ. ಈತ ಕಳೆದ ಕೆಲವು ದಿನಗಳ ಹಿಂದೆ ಶಹಾಬಾದ್‌ ಪಟ್ಟಣದ ಮನೆಯಿಂದ ನಾಪತ್ತೆಯಾಗಿದ್ದ. ಸ್ಥಳಕ್ಕೆ […]

Continue Reading

ಇನ್ನುಮುಂದೆ ಒಬ್ಬ ವ್ಯಕ್ತಿ ಹೆಸರಿಗೆ ಗರಿಷ್ಠ 9 ಸಿಮ್: ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ

ಸುದ್ದಿ ಸಂಗ್ರಹ ನವದೆಹಲಿಅಹಮದಾಬಾದ್‌ನಲ್ಲಿ ನಡೆದ 1.5 ಕೋಟಿ ರೂ. ಮೊತ್ತದ ‘ಬಾಸ್ ಸ್ಕ್ಯಾಮ್’ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರಿ ಸೈಬರ್ ಅಪರಾಧ ಜಾಲವೊಂದು ಪತ್ತೆಯಾಗಿದೆ. ಸೈಬರ್ ಅಪರಾಧಗಳಿಗೆ ಬಳಸಲಾಗುತ್ತಿದ್ದ ಸುಮಾರು 4,500 ಸಿಮ್ ಕಾರ್ಡ್‌ಗಳನ್ನು ಪೊಲೀಸರು ಪತ್ತೆಹಚ್ಚಿದ್ದು, ಈ ಜಾಲಕ್ಕೆ ಚೀನಾ ಮತ್ತು ಪಾಕಿಸ್ತಾನದೊಂದಿಗೆ ಸಂಪರ್ಕವಿರುವ ಶಂಕೆ ವ್ಯಕ್ತವಾಗಿದೆ. ಈ ಬೆನ್ನಲ್ಲೆ ದೇಶದಾದ್ಯಂತ ಸಿಮ್‌ ಕಾರ್ಡ್‌ಗಳನ್ನು ಖರೀದಿಸುವ ಪ್ರಕ್ರಿಯೆ ಕೇಂದ್ರ ಸರ್ಕಾರ ಮತ್ತಷ್ಟು ಬಿಗಿಗೊಳಿಸಿದೆ. ಸೈಬರ್‌ ವಂಚನೆ ತಡೆಯುವ ಸಲುವಾಗಿ ಕೇಂದ್ರ […]

Continue Reading

ವೇಸ್ಟ್‌ ಎಂದು ಎಸೆಯುವ ಬಾಳೆಹಣ್ಣಿನ ಸಿಪ್ಪೆ ಹೇಗೆಲ್ಲಾ ಮರುಬಳಕೆ ಮಾಡಬಹುದು ಎಂಬುದು ನಿಮಗೆ ಗೊತ್ತಾ ?

ಭಾರತದಲ್ಲಿ ಬಾಳೆಹಣ್ಣನ್ನು ವ್ಯಾಪಕವಾಗಿ ಸೇವಿಸಲಾಗುತ್ತದೆ. ವರ್ಷಪೂರ್ತಿ ಲಭ್ಯವಿರುವ ಈ ಹಣ್ಣು ತುಂಬಾನೆ ಅಗ್ಗವೂ ಹೌದು. ಹಾಗಾಗಿ ಹೆಚ್ಚಿನವರು ಹಣ್ಣುಗಳಲ್ಲಿ ಬಾಳೆಹಣ್ಣನ್ನೆ ಖರೀದಿಸಲು ಇಷ್ಟಪಡುತ್ತಾರೆ. ಆದರೆ ಬಹುತೇಕ ಎಲ್ಲರೂ ಬಾಳೆಹಣ್ಣನ್ನು ತಿಂದ ಬಳಿಕ ಅದರ ಸಿಪ್ಪೆಯನ್ನು ಕಸದ ಬುಟ್ಟಿಗೆ ಎಸೆದುಬಿಡುತ್ತಾರೆ. ಹೀಗೆ ಎಸೆಯುವ ಬದಲು ಇದನ್ನು ಸಹ ಮರುಬಳಕೆ ಮಾಡಬಹುದು. ಬಾಳೆಹಣ್ಣಿನ ಸಿಪ್ಪೆ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದ್ದು, ಇವುಗಳನ್ನು ತ್ವಚೆಯ ಆರೈಕೆಯಿಂದ ಹಿಡಿದು ಗಿಡಗಳಿಗೆ ಗೊಬ್ಬರ, ಕ್ಲೀನಿಂಗ್‌ ಕಾರ್ಯಗಳ ವರೆಗೆ ಹಲವು ರೀತಿಯಲ್ಲಿ ಮರುಬಳಕೆ […]

Continue Reading

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಮನೆ ಮೇಲೆ ಇಡಿ ದಾಳಿ

ಸುದ್ದಿ ಸಂಗ್ರಹ ಬೆಂಗಳೂರು ಕೆಪಿಎಸ್‌ಸಿ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಮನೆ ಮೇಲೆ ಇಡಿ ದಾಳಿ ನಡೆಸಿದೆ. ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಕೋಟ್ಯಂತರ ಅವ್ಯಹಾರ ಹಿನ್ನೆಲೆಯಲ್ಲಿ ಇಡಿ ದಾಳಿ ನಡೆಸಿದೆ. 13 ಕಡೆಯಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ನೇಮಕಾತಿಯಲ್ಲಿ ಇದ್ದ ಮಧ್ಯವರ್ತಿಗಳ ಮನೆಯ ಮೇಲೂ ದಾಳಿ ನಡೆದಿದೆ. APS ಪಶುವೈದ್ಯಾಧಿಕಾರಿಗಳ ಹುದ್ದೆಗೆ ಅಂತಿಮ ಆಯ್ಕೆ ಪಟ್ಟಿಗೆ ಮಧ್ಯವರ್ತಿಗಳು 80 ಲಕ್ಷ ಡಿಮ್ಯಾಂಡ್ ಮಾಡಿದ್ದರು. ಟಾಪ್ ಲಿಸ್ಟ್ನಲ್ಲಿ ಅಮಾನತಾಗಿದ್ದ […]

Continue Reading

ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ

ಸುದ್ದಿ ಸಂಗ್ರಹ ಕಾಳಗಿ ವಿದ್ಯಾರ್ಥಿಗಳು ಆತ್ಮ ವಿಶ್ವಾಸ, ಪರಿಶ್ರಮದಿಂದ ಯಶಸ್ಸು ಕಂಡುಕೊಳ್ಳಲು ಸಾಧ್ಯ ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಅಧ್ಯಕ್ಷ ಅಬ್ದುಲ್ ರೌಫ್ ಆಫಖಾನ್ ಹೇಳಿದರು.‌ ತಾಲೂಕಿನ ಟೆಂಗಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ 8, 9 ಮತ್ತು 10ನೇ‌ ತರಗತಿಯ ವಿದ್ಯಾರ್ಥಿಗಳು ನಿರಂತರ ಪರಿಶ್ರಮದಿಂದ ಪ್ರಸಕ್ತ ಸಾಲಿನ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರನ್ನು ಕರ್ನಾಟಕ ರಕ್ಷಣಾ ವೇದಿಕೆ ‘ಸನ್ಮಾನ ಸಮಾರಂಭ’ದಲ್ಲಿ ಸನ್ಮಾನಿಸಿ ಗೌರವಿಸಿ, ಮಾತನಾಡಿದ ಅವರು, ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ವಿದ್ಯಾರ್ಥಿಗಳು […]

Continue Reading

ಯೋಧರ ಸೇವೆ, ತ್ಯಾಗ ಪ್ರತಿಯೊಬ್ಬರು ಅರಿಯಬೇಕು: ಡಾ.ಸಂತೋಷ ಪಾಟೀಲ

ಸುದ್ದಿ ಸಂಗ್ರಹ ಶಹಾಬಾದ್ದೇಶದ ಗಡಿಗಳಲ್ಲಿ ಹಗಲು ರಾತ್ರಿ ಎನ್ನದೆ ಕರ್ತವ್ಯ ನಿರ್ವಹಿಸುತ್ತಿರುವ ಯೋಧರ ಸೇವೆ ಮತ್ತು ತ್ಯಾಗವನ್ನು ಪ್ರತಿಯೊಬ್ಬರು ಅರಿಯಬೇಕು, ಗೌರವಿಸಬೇಕು ಎಂದು ಸಮುದಾಯ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿ ಡಾ.ಸಂತೋಷ ಪಾಟೀಲ್ ಹೇಳಿದರು. ನಗರದ ಚವ್ಹಾಣ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಎನ್‌ಸಿ ಇಂಗಿನಶೆಟ್ಟಿ ಶಾಲೆಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ತ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕೆ ಅನೇಕ ಮಹನೀಯರು ತಮ್ಮ ಜೀವನವನ್ನೆಮುಡುಪಾಗಿಟ್ಟು ಹೋರಾಡಿದ್ದಾರೆ, ಅವರ ತ್ಯಾಗ- ಬಲಿದಾನದ ಫಲವಾಗಿ ಇಂದು […]

Continue Reading

ಟ್ರಾಫಿಕ್‌ ಪೊಲೀಸ್‌ ಮೇಲೆ ಜೆಡಿಎಸ್‌ ನಾಯಕನ ದರ್ಪ

ಸುದ್ದಿ ಸಂಗ್ರಹ ಬೆಂಗಳೂರುನಗರದಲ್ಲಿ ಟ್ರಾಫಿಕ್‌ ಪೊಲೀಸ್‌ ಮೇಲೆ ಜೆಡಿಎಸ್‌ ನಾಯಕ ಗೊಟ್ಟಿಗೆರೆ ಮಂಜ ದರ್ಪ ತೋರಿರುವ ಘಟನೆ ನಡೆದಿದೆ. ನನ್ನ ಗಾಡಿಯನ್ನೆ ಸ್ಟಾಪ್‌ ಮಾಡ್ತಿಯಾ ಅಂತ ಟ್ರಾಫಿಕ್‌ ಪೊಲೀಸ್‌ ಮೇಲೆ ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಮಂಜ ಹಲ್ಲೆಗೆ ಯತ್ನಿಸಿದ್ದಾರೆಂಬ ಆರೋಪ ಕೇಳಿಬಂದಿದೆ. ಸಿಬ್ಬಂದಿಯ ಕೊರಳ ಪಟ್ಟಿ ಹಿಡಿದು ಜಗಳ ಮಾಡುತ್ತಿರುವ ದೃಶ್ಯ ವೀಡಿಯೋದಲ್ಲಿ ಹರಿದಾಡಿದೆ. ಗೊಟ್ಟಿಗೆರೆ ಬಳಿ ಟ್ರಾಫಿಕ್ ಸಿಬ್ಬಂದಿ ನಿಂತಿದ್ದರು. ಆ ಸಂದರ್ಭದಲ್ಲಿ ಕೊಟ್ಟಿಗೆರೆ ಮಂಜ ಎಂಬವರ ವಾಹನವನ್ನು ಪೊಲೀಸ್ ಸಿಬ್ಬಂದಿ ಸ್ಟಾಪ್ ಮಾಡಿದ್ದಾರೆ. […]

Continue Reading

ಆಯತಪ್ಪಿ ಕೊಡಚಾದ್ರಿ ಬೆಟ್ಟದಿಂದ ಬಿದ್ದ ಪ್ರವಾಸಿಗ: ಜೀಪ್ ಚಾಲಕರಿಂದ ಉಳಿಯಿತು ಜೀವ

ಸುದ್ದಿ ಸಂಗ್ರಹ ಶಿವಮೊಗ್ಗಕೊಡಚಾದ್ರಿ ಬೆಟ್ಟದಿಂದ ಆಯತಪ್ಪಿ ಕೆಳಗೆ ಬಿದಿದ್ದ ಪ್ರವಾಸಿಗನನ್ನು ಜೀಪ್ ಚಾಲಕರರು ರಕ್ಷಣೆ ಮಾಡುವಲ್ಲಿ ಯಶಸ್ಸಿಯಾಗಿದ್ದು, ಪ್ರವಾಸಿ ಜೀಪ್ ಚಾಲಕರ ಸಮಯ ಪ್ರಜ್ಞೆಯಿಂದ ಪ್ರವಾಸಿಗನ ಜೀವ ಉಳಿದಿರುವ ಘಟನೆ ಹೊಸನಗರ ತಾಲೂಕಿನಲ್ಲಿ ನಡೆದಿದೆ. ಕುಮುಟಾ ಮೂಲದ ಪ್ರದೀಪ್ ಕೆಳಗೆ ಬಿದ್ದಿರುವ ಪ್ರವಾಸಿಗ. ಹೊಸನಗರ ತಾಲೂಕಿನ ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸ ಬಂದಿದ್ದ ಪ್ರದೀಪ್ ಕೊಡಚಾದ್ರಿಯ ಶಂಕರಾಚಾರ್ಯ ಪೀಠದ ಸಮೀಪ ತೆರಳುವಾಗ ತಲೆ ಸುತ್ತಿದ್ದರಿಂದ ಆಯತಪ್ಪಿ 60 ಅಡಿ ಕೆಳಗೆ ಬಿದ್ದಿದ್ದಾನೆ. ಕೂಡಲೆ ಪೊಲೀಸರು ಮತ್ತು ಅರಣ್ಯಾಧಿಕಾರಿಗಳಿಗೆ ಪ್ರವಾಸಿಗರು […]

Continue Reading

ಬಾಲಕಿ ಅತ್ಯಾಚಾರ ಪ್ರಕರಣ: ಶಿಕ್ಷಕನಿಗೆ 25 ವರ್ಷ ಶಿಕ್ಷೆ ಪ್ರಕಟ

ಸುದ್ದಿ ಸಂಗ್ರಹ ಚಿತ್ತಾಪುರ ಯಡ್ರಾಮಿ ತಾಲೂಕಿನಲ್ಲಿ ಬಂಜಾರ ಸಮಾಜದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದ ಅಪರಾಧಿ ಶಿಕ್ಷಕನಿಗೆ ನ್ಯಾಯಾಲಯವು 25 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು, ಸಮಾಜದಲ್ಲಿ ಕಟ್ಟೆಚ್ಚರದ ಸಂದೇಶ ನೀಡಿದಂತಾಗಿದೆ ಎಂದು ಬಂಜಾರ ಸಮಾಜದ ಯುವ ಮುಖಂಡ ಜಗದೀಶ ಚವ್ಹಾಣ ಹೇಳಿದ್ದಾರೆ‌. ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾಲಕಿಗೆ ಅತ್ಯಾಚಾರ ಮಾಡಿದ್ದನ್ನು ಉಗ್ರವಾಗಿ ಖಂಡಿಸಿ ಆರೋಪಿಗೆ ಶಿಕ್ಷೆ ಕೊಡಿಸುವುದಕ್ಕೆ ಸಮಾಜದ ಅನೇಕರು ಧ್ವನಿ ಎತ್ತಿ ಕಾನೂನು ಹೋರಾಟ ನಡೆಸಿದ್ದು ಯಶಸ್ವಿಯಾಗಿದೆ. ಎಂದರು.   

Continue Reading