ಬೆಂಗಳೂರು ಏರ್‌ಪೋರ್ಟ್‌ನಲ್ಲಿ 50 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಸೀಜ್: ಐವರು ಅರೆಸ್ಟ್

ಸುದ್ದಿ ಸಂಗ್ರಹ ಬೆಂಗಳೂರು ಇಲ್ಲಿನ ಕೆಂಪೆಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  50 ಲಕ್ಷ ರೂ. ಮೌಲ್ಯದ ನಕಲಿ ಸಿಗರೇಟ್ ಬಾಕ್ಸ್‌ಗಳನ್ನು ಪೊಲೀಸರು ವಶಕ್ಕೆ ಪಡೆದು, 5 ಮಂದಿಯನ್ನು ಬಂಧಿಸಿದ್ದಾರೆ. ಅಬ್ದುಲ್ ಬಷೀದ್ ಹಾಗೂ ಮಗ ಮೊಹಮದ್ ಅಶೀಕ್ ಸೇರಿದಂತೆ ಮಹಮದ್ ಅನ್ಸರ್, ಮಹಮದ್ ಅನ್ಸಾರಿ, ಗುಲಾಮ್ ಹುಸೇನ್ ಖಾನ್ ಬಂಧಿತ ಆರೋಪಿಗಳು. ನಕಲಿ ಸಿಗರೇಟ್ ಜಾಲದ ಬಗ್ಗೆ ಅನ್ವೇಷ್ ಐಪಿಆರ್ ಸಂಸ್ಥೆ ನೀಡಿದ ದೂರಿನ ಮೇರೆಗೆ ತಂದೆ ಹಾಗೂ ಮಗ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು […]

Continue Reading

ಸೇತುವೆಯಿಂದ ಹಳ್ಳಕ್ಕೆ ಬಿದ್ದ ಬಸ್‌: ಮೂವರ ಕೈಕಾಲು ಮುರಿತ, ಹಲವರಿಗೆ ಗಾಯ

ಸುದ್ದಿ ಸಂಗ್ರಹ ಶಿವಮೊಗ್ಗ ಭದ್ರಾವತಿಯ ಕಾಗೇಹಳ್ಳದ ಬಳಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದಿದೆ. ಈ ಅಪಘಾತದಲ್ಲಿ ಮೂವರು ಪ್ರಯಾಣಿಕರ ಕೈ, ಕಾಲು ಮುರಿದಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ದಾವಣಗೆರೆಯಿಂದ ಭದ್ರಾವತಿಗೆ ಬಸ್ ಬರುತ್ತಿತ್ತು. ಕಾಗೆಹಳ್ಳದ ಬಳಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯಿಂದ ಹಳ್ಳಕ್ಕೆ ಬಿದ್ದಿದೆ. ಇಂದು ಮಧ್ಯಾಹ್ನ ಸುಮಾರು 12:30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಚಾಲಕ‌, ಕಂಡಕ್ಟರ್‌ ಸೇರಿ ಒಟ್ಟು 35 ಜನ ಪ್ರಯಾಣಿಕರು […]

Continue Reading

8 ಲಕ್ಷ ಮೌಲ್ಯದ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಣೆ: 600 ಚೀಲಗಳಿದ್ದ ಲಾರಿ ಜಪ್ತಿ

ಸುದ್ದಿ ಸಂಗ್ರಹ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹಾಲಾಪುರದಿಂದ ಅಂದಾಜು 8 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಲಾರಿಯನ್ನು  ಪೊಲೀಸರು ಜಪ್ತಿ ಮಾಡಿದ್ದಾರೆ. ಖಚಿತ ಮಾಹಿತಿ ಮೇರೆಗೆ ಲಾರಿಯನ್ನು ಹಿಂಬಾಲಿಸಿ, ಕವಿತಾಳ-ಮಸ್ಕಿ ರಸ್ತೆಯ ಜಂಗಮರ ಹಳ್ಳಿ ಕ್ರಾಸ್ ಬಳಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಈ ವೇಳೆ 600 ಅಕ್ಕಿ ಚೀಲಗಳಿದ್ದ ಲಾರಿಯನ್ನು ಜಪ್ತಿ ಮಾಡಿದ್ದಾರೆ. ಅಂದಾಜು 8 ಲಕ್ಷ ರೂ. ಮೌಲ್ಯದ 30 ಟನ್ ಪಡಿತರ ಅಕ್ಕಿಯಿದ್ದ 600 ಚೀಲಗಳನ್ನು ಪೊಲೀಸರು […]

Continue Reading

ಹಿಂದೂ-ಮುಸ್ಲಿಮರ ಭಾವೈಕ್ಯ ತಾಣ ತೊನಸನಳ್ಳಿ

ಸುದ್ದಿ ಸಂಗ್ರಹ ಶಹಾಬಾದ್​ ತೊನಸನಳ್ಳಿ ಮಠ ಭಕ್ತರಿಗೆ ಬೇಡಿದ್ದನ್ನು ಕೊಡುವ ಹಾಗೂ ಭಾವೈಕ್ಯತೆಯ ಸ್ಥಾನವಾಗಿದೆ. ಇಲ್ಲಿ ಎಲ್ಲ ಧರ್ಮದವರು ಭಕ್ತರಾಗಿದ್ದು, ಜಿಲ್ಲೆಯಲ್ಲಿ ಒಂದು ವಿಶಿಷ್ಟ ಭಾವೈಕ್ಯತೆಯ ಸ್ಥಾನವಾಗಬೇಕು ಎಂದು 10ನೇ ಪೀಠಾಧಿಪತಿ ಡಾ.ಮಲ್ಲಣ್ಣಪ್ಪ ಸ್ವಾಮಿಗಳು ಹೇಳಿದರು. ತೊನಸನಳ್ಳಿ (ಎಸ್​) ಗ್ರಾಮದ ಸದ್ಗುರು ಮಲ್ಲಣ್ಣಪ್ಪ ಮಹಾರಾಜ, ಶ್ರೀ ಅಲ್ಲಮಪ್ರಭು ಹಾಗೂ ಹಜರತ್​ ಸುಲ್ತಾನ್​ ಅಹ್ಮದ್​ ಶಾಹವಲಿ ಅವರ ಜಾತ್ರೋತ್ಸವ ನಿಮಿತ್ತ ಶನಿವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಧರ್ಮಸಭೆಯಲ್ಲಿ ನೇತೃತ್ವ ವಹಿಸಿ ಆಶೀರ್ವಚನ ನೀಡಿದ ಅವರು, ಇಲ್ಲಿ ರಾತ್ರಿ ಗಂಧೋತ್ಸವ ನಡೆಯುತ್ತದೆ, […]

Continue Reading

ಸೈಬರ್‌ ವಂಚಕರ ಖೆಡ್ಡಾಕ್ಕೆ ಬಿದ್ದು ಕೋಟಿ ರೂಪಾಯಿ ಕಳೆದುಕೊಂಡ ಭೂಪ

ಸುದ್ದಿ ಸಂಗ್ರಹ ಚಿಕ್ಕಮಗಳೂರು ಕಡೂರು ತಾಲೂಕಿನ ಶಿವಪುರ ಗ್ರಾಮದ ವ್ಯಕ್ತಿಯೊಬ್ಬ ಅಲ್ಪ ಅವಧಿಯಲ್ಲಿ ಹೆಚ್ಚಿನ ಲಾಭ ಮಾಡುವ ಆಸೆಗೆ ಬಿದ್ದು, ಆನ್‌ಲೈನ್‌ ಟ್ರೇಡಿಂಗ್‍ ನಂಬಿ 1,28,10,000 ರೂ. ಹಣ ಕಳೆದುಕೊಂಡಿದ್ದಾನೆ. ಗ್ರಾಮದ ಕಲ್ಲೇಗೌಡ ಹಣ ಕಳೆದುಕೊಂಡ ನತದೃಷ್ಟ. ಈತ ಫೇಸ್ಬುಕ್‌ನಲ್ಲಿ ಟ್ರೇಡಿಂಗ್ ಲಿಂಕ್ ನೋಡಿದ್ದ. ಅದನ್ನ ಕ್ಲಿಕ್‌ ಮಾಡಿ ಬಳಿಕ ವಾಟ್ಸಾಪ್‌ನಲ್ಲಿ ಗ್ರೂಪ್‌ ಒಂದಕ್ಕೆ ಸೇರಿದ್ದ. ಅಲ್ಲಿಂದ ಟ್ರೇಡಿಂಗ್ ಲಿಂಕ್‍ನಲ್ಲಿ ಅಕೌಂಟ್ ತೆರೆದಿದ್ದ. ಆರಂಭದಲ್ಲಿ 60 ಸಾವಿರ ರೂ. ಹಣ ಹಾಕಿದ್ದ. ಈ ವೇಳೆ 17,800 ರೂ. […]

Continue Reading

ವಾಡಿಯಲ್ಲಿ ಮನ್ ಕೀ ಬಾತ್ ವೀಕ್ಷಣೆ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್ ಕೀ ಬಾತ್‌’ನ 132ನೇ ಸಂಚಿಕೆಯನ್ನು ಮುಖಂಡರು ವೀಕ್ಷಿಸಿದರು. ಪ್ರಧಾನಮಂತ್ರಿಯವರು ಪ್ರಸ್ತುತ ನಡೆಯುತ್ತಿರುವ ಇಸ್ರೇಲ್-ಇರಾನ್-ಅಮೇರಿಕಗಳ ಯುದ್ಧ ಮತ್ತು ಅದರ ಪರಿಣಾಮವಾಗಿ ಉಂಟಾಗಬಹುದಾದ ತೈಲ ಮತ್ತು ಅನಿಲ ಬಿಕ್ಕಟ್ಟಿನ ಬಗ್ಗೆ ಮಾತನಾಡಿದರು. ಕರೋನಾದಂತಹ ಕಠಿಣ ಪರಿಸ್ಥಿತಿಯನ್ನು ನಾವು ಹೇಗೆ ಎದುರಿಸಿದೆವೋ, ಹಾಗೆಯೇ ಪ್ರಸ್ತುತ ಜಾಗತಿಕ ಸವಾಲುಗಳಿಂದಲೂ ನಾವು ಹೊರಬರಲಿದ್ದೆವೆ ಎಂಬ ಭರವಸೆಯ ಮಾತುಗಳನ್ನು ಆಲಿಸಿ, ಅವರು ದೇಶಕ್ಕಾಗಿ ತೆಗೆದುಕೊಳ್ಳುತ್ತಿರುವ ದಿಟ್ಟ ನಿರ್ಧಾರಗಳನ್ನು ಬಿಜೆಪಿ ಅಧ್ಯಕ್ಷ […]

Continue Reading

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಸತ್ಕರಿಸಿದ ಟಿಎಪಿಸಿಎಂಎಸ್ ಅಧ್ಯಕ್ಷ ದೇವಿಂದ್ರ ಅರಣಕಲ್

ಸುದ್ದಿ ಸಂಗ್ರಹ ಚಿತ್ತಾಪುರ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ (TAPCMS)ಕ್ಕೆ ಅವಿರೋಧವಾಗಿ ಆಯ್ಕೆಯಾದ ನೂತನ ಅಧ್ಯಕ್ಷ ದೇವಿಂದ್ರ ಅರಣಕಲ್ ಅವರು ಬೆಂಗಳೂರಿನ ಸರ್ಕಾರಿ ಗೃಹ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಿಗೆ ಬುದ್ಧನ ಪ್ರತಿಮೆ ನೀಡಿ ಗೌರವಿಸಿದ ದೇವಿಂದ್ರ ಅರುಣಕಲ್ ಅವರು, ಸಹಕಾರ ಸಂಘದ ಮುಂದಿನ ಕಾರ್ಯವೈಖರಿ ಹಾಗೂ ರೈತರ ಹಿತರಕ್ಷಣೆ […]

Continue Reading

14 ಸಾವಿರ ಉದ್ಯೋಗಿಗಳನ್ನು ತೆಗೆಯಲು ಮುಂದಾದ ನೋಕಿಯಾ

ಸುದ್ದಿ ಸಂಗ್ರಹ ಹೆಲ್ಸಿಂಕಿ ಒಂದು ಕಾಲದಲ್ಲಿ ವಿಶ್ವದ ನಂಬರ್‌ 1 ಫೋನ್‌ ತಯಾರಕಾ ಕಂಪನಿ ಫಿನ್ಲೆಂಡ್‌ ಮೂಲದ ನೋಕಿಯಾ 14 ಸಾವಿರ ಉದ್ಯೋಗಿಗಳನ್ನು ತೆಗೆಯಲು ಮುಂದಾಗಿದೆ. ನೋಕಿಯಾ ತನ್ನ ಜಾಗತಿಕ ಉದ್ಯೋಗಿಗಳ ಸಂಖ್ಯೆಯಲ್ಲಿ ಶೇ.20ರಷ್ಟು ಕಡಿಮೆ ಮಾಡಲು ಸಿದ್ಧತೆ ನಡೆಸುತ್ತಿದೆ. ಪ್ರಸ್ತುತ ವಿಶ್ವಾದ್ಯಂತ 74 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳಿದ್ದು ಭಾರತದಲ್ಲೆ ಸುಮಾರು 17 ಸಾವಿರ ನೌಕರರಿದ್ದಾರೆ. ನೋಕಿಯಾದ ಭಾರತದ ಕಾರ್ಯಕ್ಷಮತೆ ಕುಸಿತದಲ್ಲಿದೆ. 2025ರ ನಾಲ್ಕನೇ ತ್ರೈಮಾಸಿಕದಲ್ಲಿ ಕಂಪನಿಯ ನಿವ್ವಳ ಮಾರಾಟ ಆದಾಯ ವರ್ಷದಿಂದ ವರ್ಷಕ್ಕೆ 15%ರಷ್ಟು ಕುಸಿದು […]

Continue Reading

ವಾಡಿಯಲ್ಲಿ ಜನಸಂಪರ್ಕ ಸಭೆ ನಡೆಸಲು ಒತ್ತಾಯ

ಸುದ್ದಿ ಸುದ್ದಿ ಸಂಗ್ರಹ ವಾಡಿ ಪಟ್ಟಣದ ವ್ಯಾಪ್ತಿಯ ಜನರ ಕುಂದು ಕೊರತೆಗಳನ್ನು ಅರಿತು ಬಗೆಹರಿಸಲು ಜಿಲ್ಲಾಧಿಕಾರಿಗಳು ಪಟ್ಟಣದಲ್ಲಿ ಜನಸಂಪರ್ಕ ಸಭೆ ನಡೆಸಲು ಸಮಯ ನೀಡಬೇಕು ಎಂದು ಸ್ಥಳೀಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಒತ್ತಾಯಾಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಫೌಜಿಯಾ ಬಿ.ತರನ್ನುಮ್ ಅವರಿಗೆ ಪತ್ರ ಬರೆದಿರುವ ಅವರು, ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬೃಹತ್ ಸಿಮೆಂಟ್ ಕಂಪನಿ ಹಾಗೂ ಜಂಕ್ಷನ್ ರೈಲ್ವೆ ನಿಲ್ದಾಣ ಇರುವ ದೊಡ್ಡ ನಗರವಾಗಿದೆ. ಅಷ್ಟೆ ದೊಡ್ಡ ಪ್ರಮಾಣದಲ್ಲಿ ಜನರು ವಿವಿಧ ಸಮಸ್ಯೆಗಳಿಂದ […]

Continue Reading

ಅಂಬೇಡ್ಕರ್‌ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷರಾಗಿ ರಾಜೇಶ್ ಯನಗುಂಟಿಕರ್ ಆಯ್ಕೆ 

ಸುದ್ದಿ ಸಂಗ್ರಹ ಶಹಾಬಾ‌ದ್ ಡಾ.ಬಿ.ಆರ್ ಅಂಬೇಡ್ಕರ್‌ ಅವರ 135ನೇ ಜಯಂತ್ಯೋತ್ಸವ ಸಮಿತಿಯ ತಾಲೂಕು ಅಧ್ಯಕ್ಷರಾಗಿ ರಾಜೇಶ ಯನಗುಂಟಿಕರ ಮತ್ತು ಗೌರವ ಅಧ್ಯಕ್ಷರಾಗಿ ವಸಂತ ಕೆ ಕಾಂಬಳೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಮುಖಂಡರಾದ ಮಲ್ಲಣ್ಣ ಮಸ್ಕಿ, ಸತೀಶ ಕೋಬಾಳಕರ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಅದ್ದೂರಿಯಾಗಿ ಆಚರಿಸಲು ಸಮಿತಿ ರಚಿಸಲಾಗಿದೆ ಎಂದರು. ಮಲ್ಲಣ್ಣ ಮರತೂರ, ಶಿವಶಾಲ ಪಟ್ಟಣಕರ್‌, ಸುಭಾಷ ಸಾಕ್ರೆ, ಮಲ್ಲಿಕಾರ್ಜುನ ಕಟ್ಟಿ, ಮೋಹನ ಹಳ್ಳಿ, […]

Continue Reading