6 ಜನರಿಂದ ಬಾಲಕಿ ಮೇಲೆ ನಿರಂತರ ಅತ್ಯಾಚಾರ: ಮೂವರು ಕಾಮುಕರ ಬಂಧನ

ಕೋಲಾರ: ಬಾಲಕಿಯೊಬ್ಬಳ ಮೇಲೆ ನಿರಂತರ ಪ್ರತ್ಯೇಕವಾಗಿ 6 ಜನ ಅತ್ಯಾಚಾರವೆಸಗಿರುವುದು ಕೋಲಾರ ಜಿಲ್ಲೆಯ ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ರಾಹುಲ್, ನಾಗೇಶ್ ಮತ್ತು ಪುನೀತ್ ಎಂದು ಗುರುತಿಸಲಾಗಿದೆ. ತಲೆಮರೆಸಿಕೊಂಡಿರುವ ಚೇತನ್, ಕಿರಣ್, ಮಹೇಂದ್ರಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಬಾಲಕಿ ನೀಡಿದ ಹೇಳಿಕೆ ಆಧರಿಸಿ 6 ಜನರ ವಿರುದ್ದ ಜು.18 ರಂದು ಕೋಲಾರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Continue Reading

ಆ.10 ರಂದು ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಆ.10 ರಂದು ನಮ್ಮ ಮೆಟ್ರೋ ಯೆಲ್ಲೋ ಲೈನ್ ಉದ್ಘಾಟನೆ ಮಾಡಲಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಕೇಂದ್ರ ಸಚಿವ ಮನೋಹರ ಲಾಲ್ ಮಾಹಿತಿ ನೀಡಿದ್ದಾರೆ. ಇದರ ಜೊತೆಗೆ ಮೆಟ್ರೋ ಫೇಸ್ 3ಗೂ ಮೋದಿ ಅವರು ಆವತ್ತೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದ ವರೆಗಿನ ಹಳದಿ ಮಾರ್ಗ ಸುಮಾರು 19.5 ಕಿ.ಮೀ ಇದ್ದು, ಸಂಚಾರ ಮುಕ್ತಕ್ಕೆ ಸಿದ್ಧವಾಗಿದೆ. ಈ ಮಾರ್ಗ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರ, ಎಲೆಕ್ಟ್ರಾನಿಕ್ ಸಿಟಿಗೆ ಸಂಪರ್ಕ ಕಲ್ಪಿಸಲಿದೆ. ಪ್ರತಿದಿನ […]

Continue Reading

ಅತ್ಯಾಚಾರ ಕೇಸಲ್ಲಿ ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು – ಸಂತ್ರಸ್ತೆಗೆ 11 ಲಕ್ಷ ಪರಿಹಾರ

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣದಲ್ಲಿ ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅತ್ಯಾಚಾರ ಸಂತ್ರಸ್ತೆಗೆ 11 ಲಕ್ಷ ಪರಿಹಾರ ನೀಡುವಂತೆ ಕೋರ್ಟ್ ಆದೇಶ ಹೊರಡಿಸಿದೆ. ಪ್ರಕರಣದ ವಾದ-ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ (ಸೆಷನ್ಸ್) ನ್ಯಾಯಾಲಯವು, ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ತೀರ್ಪು ನೀಡಿತ್ತು. ಶಿಕ್ಷೆ ಪ್ರಮಾಣ ಶನಿವಾರ ಪ್ರಕಟಿಸಿದೆ. ನ್ಯಾ. ಗಜಾನನ ಭಟ್ ಅವರಿದ್ದ ಪೀಠವು, ಅಪರಾಧಿಗೆ ಜೀವನ ಪರ್ಯಂತ ಕಾರಾಗೃಹ ವಾಸ ಶಿಕ್ಷೆ ಪ್ರಕಟಿಸಿದೆ. ಅಪರಾಧಿ […]

Continue Reading

ದೇಹದ ಆರೋಗ್ಯವೇ ದೇಶದ ನಿಜವಾದ ಸಂಪತ್ತು: ಸಿದ್ದಲಿಂಗ ಶ್ರೀ

ಚಿತ್ತಾಪುರ: ಭಗವಂತ ಸುಂದರವಾದ ದೇಹವನ್ನು ಕೊಟ್ಟಿದ್ದಾನೆ. ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಮೂಲಕ ದೇಹವನ್ನು ಸದೃಢ ಮಾಡಿಕೊಳ್ಳಬೇಕು. ದೇಹದ ಆರೋಗ್ಯವೇ ದೇಶದ ನಿಜವಾದ ಸಂಪತ್ತು ಎಂದು ರಾವೂರ ಶ್ರೀ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಸಮೀಪದ ರಾವೂರ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ದಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ‘ವ್ಯಸನ ಮುಕ್ತ ದಿನಾಚರಣೆ’ ಉದ್ದೇಶಿಸಿ ಮಾತನಾಡಿದ ಅವರು, ಇಳಕಲ್ ಮಹಾoತ ಶಿವಯೋಗಿಗಳು ಮಹಾಂತ ಜೋಳಿಗೆ ಮೂಲಕ ಜನರನ್ನು ವ್ಯಸನದಿಂದ ದೂರವಿಡುವ ಪ್ರಯತ್ನ ಮಾಡಿದರು. ವಿವಿಧ ಚಟಗಳಿಂದ ನಿತ್ಯ […]

Continue Reading

ಕಸ ಗುಡಿಸುತ್ತಿದ್ದವನ ಬಳಿ 100 ಕೋಟಿ ರೂ. ಆಸ್ತಿ

ಕೊಪ್ಪಳ: ನಗರದ ಕೆಆರ್‌ಐಡಿಎಲ್‌ (ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ) ದಲ್ಲಿ ಕೆಲವು ವರ್ಷ ಹೊರಗುತ್ತಿಗೆ ಆಧಾರದ ಮೇಲೆ ಕಚೇರಿಯಲ್ಲಿ ಸಹಾಯಕನಾಗಿ ಸೇವೆ ಸಲ್ಲಿಸಿದ್ದನು, ಯಲಬುರ್ಗಾ ತಾಲೂಕಿನ ಬಂಡಿ ಗ್ರಾಮದ ಕಳಕಪ್ಪ ನಿಡಗುಂದಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದು, ಈ ವೇಳೆ 24 ಮನೆಗಳು, 50 ನಿವೇಶನ, 40 ಎಕರೆ ಜಮೀನು, ಬಂಗಾರ, ಬೆಳ್ಳಿ ಸೇರಿದಂತೆ ಒಟ್ಟು 100 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಮೊದಲು ಕಸ ಗುಡಿಸುವ […]

Continue Reading

UPI ಬಳಕೆಯಲ್ಲಿ ಇಂದಿನಿಂದ ಈ ಬದಲಾವಣೆಗಳು, ಎಚ್ಚರವಿರಲಿ

ನವದೆಹಲಿ: ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (NPCI) 2025 ಆಗಸ್ಟ್ 1ರಿಂದ ಏಕೀಕೃತ ಪಾವತಿ ಇಂಟರ್ಫೇಸ್ (UPI)ಗಾಗಿ ಹಲವಾರು ಹೊಸ ನಿಯಮಗಳು ಪರಿಚಯಿಸಲಿದೆ. ಈ ಬದಲಾವಣೆಗಳು ವ್ಯವಸ್ಥೆಯ ಕಾರ್ಯಕ್ಷಮತೆಯನ್ನು ಸುಧಾರಿಸುವದು, ಪ್ರತಿಕ್ರಿಯೆ ಸಮಯವನ್ನು ವೇಗಗೊಳಿಸುವುದು ಮತ್ತು ಡಿಜಿಟಲ್ ಪಾವತಿಗಳ ಉತ್ತಮ ನಿಯಂತ್ರಣವನ್ನು ಖಚಿತಪಡಿಸಿಕೊಳ್ಳುವ ಗುರಿ ಹೊಂದಿವೆ. ಈ ಬದಲಾವಣೆಗಳು ಯೂಸರ್‌ಗಳು ಮತ್ತು Google Pay, PhonePe ಮತ್ತು Paytm ನಂತಹ ಅಪ್ಲಿಕೇಶನ್‌ಗಳ ಮೇಲೆ ಪರಿಣಾಮ ಬೀರುತ್ತವೆ. ಹೆಚ್ಚುತ್ತಿರುವ UPI ಪಾವತಿಗಳನ್ನು ಸರಾಗವಾಗಿ ನಿರ್ವಹಿಸಲು ಬ್ಯಾಂಕುಗಳು ಮತ್ತು ಅಪ್ಲಿಕೇಶನ್‌ಗಳಿಗೆ […]

Continue Reading

ಕೋಲಾರ ಮಹಿಳೆಯ ದೇಹದಲ್ಲಿ ವಿಶ್ವದಲ್ಲಿ ಎಲ್ಲೂ ಕಾಣಸಿಗದ ವಿಭಿನ್ನ ರಕ್ತ: ಸಿಆರ್​ಐಬಿ ರಕ್ತ ಗುಂಪಿನ ಬಗ್ಗೆ ನಿಮಗೆ ಗೊತ್ತಿದೆಯಾ

ಬೆಂಗಳೂರು: ವಿಜ್ಞಾನ ವಿಸ್ಮಯವೊಂದು ಕರ್ನಾಟಕದ ಕೋಲಾರದಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ಮಹಿಳೆಯೊಬ್ಬರು ವಿಶ್ವದಲ್ಲೇ ಈವರೆಗೆ ಯಾರಲ್ಲೂ ಪತ್ತೆಯಾಗದ ರಕ್ತದ ಗುಂಪು ಹೊಂದಿರುವುದು ಬೆಳಕಿಗೆ ಬಂದಿದೆ. ಹೃದಯ ಶಸ್ತ್ರಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ 38 ವರ್ಷದ ಮಹಿಳೆಯೊಬ್ಬರು ಕೆಲವು ದಿನಗಳ ಹಿಂದೆ ದಾಖಲಾಗಿದ್ದರು. ಅವರ ರಕ್ತದ ಮಾದರಿ ಪರೀಕ್ಷೆಗೆ ಒಳಪಡಿಸಿದ ನಂತರ ವೈದ್ಯರು ಅಚ್ಚರಿಗೆ ಒಳಗಾಗಿದ್ದಾರೆ. ಮಹಿಳೆಯ ರಕ್ತದ ಗುಂಪು ಸಾಮಾನ್ಯವಾಗಿ ಎಲ್ಲರಲ್ಲೂ ಕಂಡುಬರುವ O Rh+ ಆಗಿತ್ತು. ಆದರೆ ವಿಶೇಷವೆಂದರೆ ಲಭ್ಯವಿರುವ ಯಾವುದೆ O+ ರಕ್ತ ಅವರ ರಕ್ತಕ್ಕೆ […]

Continue Reading

ಪತ್ರಿಕೆಗಳ ಓದುಗರ ಸಂಖ್ಯೆ ಕುಸಿದಿಲ್ಲ ಬದಲಿಗೆ ಹೆಚ್ಚಾಗಿದೆ

ಚಿತ್ತಾಪುರ: ಪತ್ರಿಕೆಗಳು ಜ್ಞಾನದ ಬುತ್ತಿಯಾಗಿದ್ದು ಮರಳಿ ಪ್ರವರ್ಧಮಾನಕ್ಕೆ ಬರುತ್ತಿವೆ. ಹೀಗಾಗಿ ಪತ್ರಿಕೆಗಳು ಯಾವತ್ತು ಮುಚ್ಚುವುದಿಲ್ಲ. ಓದುಗರ ಸಂಖ್ಯೆ ಕುಸಿದಿಲ್ಲ. ಬದಲಿಗೆ ಹೆಚ್ಚಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ ಹೇಳಿದರು. ಪಟ್ಟಣದ ತಾ‌.ಪಂ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪತ್ರಿಕೆಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಆದರೆ ಪ್ರಸ್ತುತ ದಿನಗಳಲ್ಲಿ ಅನೇಕ ಸಂಕಷ್ಟ ಹಾಗೂ ಸವಾಲುಗಳು ಎದುರಿಸಲಾತ್ತಿದೆ ಎಂದು […]

Continue Reading

ಧರ್ಮಸ್ಥಳ ಕೇಸ್‌ ತನಿಖೆ ನಡೆಯುತ್ತಿರುವಾಗಲೇ SIT ಮುಖ್ಯಸ್ಥ ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆ

ಬೆಂಗಳೂರ: ಕರ್ನಾಟಕದ ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಾಂತಿ ಅವರು ಧರ್ಮಸ್ಥಳದ ನಿಗೂಢ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವಾಗಲೇ ಕೇಂದ್ರ ಸೇವೆಗೆ ಆಯ್ಕೆಯಾಗಿದ್ದಾರೆ. ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತು ಹಾಕಲಾಗಿದೆ ಎಂಬ ದೂರಿಗೆ ಸಂಬಂಧಪಟ್ಟಂತೆ ರಾಜ್ಯ ಸರ್ಕಾರದ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವವನ್ನು ಪ್ರಣಬ್ ಮೊಹಂತಿ ವಹಿಸಿದ್ದಾರೆ. ಈ ಸಂಬಂಧ ತನಿಖೆ ಚುರುಕುಗೊಂಡಿರುವಾಗಲೇ ಪ್ರಣಬ್ ಮೊಹಾಂತಿ ಅವರು ಸಿಬಿಐ ಮತ್ತು ಎನ್‌ಐಎ ನಂತಹ ಸಂಸ್ಥೆಗಳ ಮಹಾನಿರ್ದೇಶಕರಾಗುವ ಅರ್ಹತೆ ಪಡೆದಿದ್ದಾರೆ. ಒಂದು ವೇಳೆ ಅವರು […]

Continue Reading

ಆಳಂದ ಸಾಸಿರ ನಾಡಿನ ಕೀರ್ತಿ ಹೆಚ್ಚಿಸಿದ ಲಾಡ ಚಿಂಚೋಳಿ ಸ್ಮಾರಕಗಳು: ಮುಡುಬಿ ಗುಂಡೇರಾವ

ಕಲಬುರಗಿ: ಆಲಂದಿ ಸಾಸಿರ ನಾಡಿನ ಕೀರ್ತಿ ಹೆಚ್ಚಿಸಿದ ಲಾಡ ಚಿಂಚೋಳಿ ಸ್ಮಾರಕಗಳ ಕೊಡುಗೆ ಅಪಾರವಾಗಿದೆ ಎಂದು ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಆಳಂದ ತಾಲೂಕಿನ ಲಾಡ ಚಿಂಚೋಳಿ ಗ್ರಾಮದಲ್ಲಿ ಪ್ರಾಚೀನ ಸಿದ್ದೇಶ್ವರ ದೇವಾಲಯದಲ್ಲಿ ಬಸವೇಶ್ವರ ಸೇವಾ ಬಳಗ ಆಯೋಜಿಸಿದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ- 25ರಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ಈ ಗ್ರಾಮವು ಆಲಂದಿ ಸಾಸಿರ ಅಂದರೆ ಸಾವಿರ ಹಳ್ಳಿಗಳಿಗೆ ರಾಜಧಾನಿಯಾಗಿದ್ದ ಆಳಂದ ಪಟ್ಟಣದ ಆಡಳಿತಕ್ಕೆ ಸೇರಿತ್ತು, ಕಲ್ಯಾಣ […]

Continue Reading