ಉತ್ತಮ ಬದುಕಿಗೆ ಶರಣರ ವಚನಗಳು ಸ್ಫೂರ್ತಿ: ನಾಗೇಂದ್ರ ಮಸೂತಿ

ಕಲಬುರಗಿ: ಮನುಷ್ಯನ ಜೀವನದಲ್ಲಿ ನೆಮ್ಮದಿ ಹಾಗೂ ಬದುಕು ನಡೆಸಲು ಶರಣರ ವಚನಗಳು ಸ್ಫೂರ್ತಿಯಾಗಿವೆ ಎಂದು ಉಪನ್ಯಾಸಕ ನಾಗೇಂದ್ರ ಮಸೂತಿ ಹೇಳಿದರು. ನಗರದ ಜಯನಗರ ಬಡಾವಣೆಯ ಸೋಮಶೇಖರ ಮಾಲಿ ಪಾಟೀಲ ಮನೆಯಲ್ಲಿ ರವಿವಾರ ವಚನೋತ್ಸವ ಪ್ರತಿಷ್ಠಾನ ಟ್ರಸ್ಟ್ ವತಿಯಿಂದ ಶ್ರಾವಣ ಮಾಸದ ಪ್ರಯುಕ್ತ ಮನೆಯಂಗಳಗಳಲ್ಲಿ ಶ್ರಾವಣ ವಚನೋತ್ಸವ ಕಾರ್ಯಕ್ರಮ ನಿಮಿತ್ಯ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಉಪನ್ಯಾಸ ಮಾಲೆ ಸಮಾರಂಭದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ವಚನಗಳಲ್ಲಿ ಜ್ಞಾನ ಅಡಗಿದೆ ಎಂದರು. ದೈರ್ಯದಿಂದ ಬದುಕು ನಡೆಸಲು ಶರಣರ […]

Continue Reading

15 ತಿಂಗಳ ಮಗುವನ್ನು ಬಸ್‌ ನಿಲ್ದಾಣದಲ್ಲಿ ಬಿಟ್ಟು ಇನ್ಸ್ಟಾಗ್ರಾಂ ಪ್ರೇಮಿಯ ಜೊತೆ ಓಡಿ ಹೋದ ತಾಯಿ

ನಲಗೊಂಡ: 15 ತಿಂಗಳ ಗಂಡು ಮಗುವನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ತಾಯಿಯೊಬ್ಬಳು ಪ್ರೇಮಿಯ ಜೊತೆಗೆ ಓಡಿ ಹೋದ ಅಮಾನವೀಯ ಘಟನೆ ತೆಳಂಗಾಣದ ನಲಗೊಂಡದಲ್ಲಿ ನಡೆದಿದೆ. ಘಟನೆಯ ಸಂಪೂರ್ಣ ದೃಶ್ಯ ಬಸ್‌ ನಿಲ್ದಾಣದಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವಿಡಿಯೋ ನೋಡಿದ ಅನೇಕರು ತಾನೆ ಹೆತ್ತ ಪುಟ್ಟ ಮಗುವನ್ನು ನಡುಬೀದಿಯಲ್ಲಿ ಬಿಟ್ಟು ಹೋಗಿ, ಅಮ್ಮನೆಂಬ ಮಮತೆಯ ಸ್ಥಾನಕ್ಕೆ ಕಳಂಕ ತಂದಿರುವ ಮಹಿಳೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಬಸ್‌ ನಿಲ್ದಾಣದಲ್ಲಿ ಮಹಿಳೆ ಈ ಕೃತ್ಯ […]

Continue Reading

ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಗರ ಪಂಚಮಿ ಹಬ್ಬ ಆಚರಣೆ

ಚಿತ್ತಾಪುರ: ಹಿಂದೂ ಧರ್ಮದ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿ ಹಬ್ಬವನ್ನು ನಮ್ಮ ಶಾಲೆಯಲ್ಲಿ ಶಾಲಾ ಶಿಕ್ಷಕಿಯರು ಮತ್ತು ವಿದ್ಯಾರ್ಥಿನಿಯರು ನಾಗರ ಮೂರ್ತಿಗೆ ಹಾಲನ್ನು ಎರೆಯು ಮೂಲಕ ಹಬ್ಬದ ಪರಂಪರೆಯನ್ನು ಶಾಲೆಯಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಲೆಯ ಸಹ ಕಾರ್ಯದರ್ಶಿ ಮತ್ತು ಮುಖ್ಯಗುರು ಪ್ರೀಯಾಂಕ, ಜಂಟಿ ಕಾರ್ಯದರ್ಶಿ ಬಸವರಾಜ ಪಿ.ಬಿ, ಶಿಕ್ಷಕರಾದ ಮಹಾದೇವ, ದೇವೆನ್, ಕಾಶೀಮ್ ಅಲೀ, ಸಲೀಮ್, ಅಶ್ವಿನಿ, ಶ್ರೀಮತಿ.ವಸಂತ , ನಂಧೂರಕರ್, ಅಮ್ರೀನ್ ಬೇಗಂ, ಅಂಬಿಕಾ, ಅಂಕಿತ, ಬಸಮ್ಮ, ಸಾಧನ ಶಿಲ್ಪಿ, ಬಸಮ್ಮ […]

Continue Reading

ಒಳ ಮೀಸಲಾತಿ ಜಾರಿ ಮಾಡಿ ಇಲ್ಲವೆ ಮಾದಿಗರಿಗೆ 6% ಮೀಸಲಾತಿ ಕೊಡಿ

ಚಿತ್ತಾಪುರ: ಒಳ ಮೀಸಲಾತಿಗಾಗಿ ಆಗಸ್ಟ್ 1ರಂದು ಕಲಬುರಗಿ ನಗರದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಚಿತ್ತಾಪುರ ಮತ್ತು ವಾಡಿ ಪಟ್ಟಣದಿಂದ 3 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸಲಿದ್ದಾರೆ ಎಂದು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸ್ಸೂರಕರ್ ಮತ್ತು ಸಮಾಜದ ಹಿರಿಯ ಮುಖಂಡ ರಾಜು ಮುಕ್ಕಣ್ಣ ಹೇಳಿದರು. ಈ ಬೃಹತ್ ಪ್ರತಿಭಟನೆಯಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸಬೇಕು. ಒಳ ಮೀಸಲಾತಿ ಜಾರಿಗಾಗಿ ಮಾದಿಗರು ಮೂರುವರೆ ದಶಕಗಳಿಂದ ಹೋರಾಟ ನಡೆಸುತ್ತಿದ್ದರು ರಾಜ್ಯ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿ ಮಾಡುತ್ತಿಲ್ಲ […]

Continue Reading

ವಾಡಿ ಪಟ್ಟಣದಲ್ಲಿ ಕಲುಷಿತ ನೀರು ಪೂರೈಕೆ: ವೀರಣ್ಣ ಯಾರಿ ಆಕ್ರೋಶ

ವಾಡಿ: ಪಟ್ಟಣದಲ್ಲಿ ಮತ್ತೆ ರಾಡಿ ನೀರು ಪೂರೈಕೆಯಾಗುತ್ತಿರುವದರಿಂದ ಸಾರ್ವಜನಿಕರು ಅನಿವಾರ್ಯವಾಗಿ ಕಲುಷಿತ ನೀರನ್ನೆ ಬಳಸುವ ಪರಿಸ್ಥಿತಿ ಮುಂದುವರೆದಿದೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಪುರಸಭೆ ಕಾರ್ಯವೈಖರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಇದನ್ನು ಗಂಭೀರವಾಗಿ ಪರಿಗಣಿಸಿ, ಸಾರ್ವಜನಿಕ ಹಿತಾಸಕ್ತಿಗಾದರೂ ಕ್ರಮಕೈಗೊಳ್ಳಿ ಎಂದು ಸುಮಾರು ಸಲ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರದ ಮೂಲಕ ಗಮನಕ್ಕೆ ತಂದರು ಇದುವರೆಗೆ ಅದೆ ಪರಿಸ್ಥಿತಿ ಮುಂದುವರೆದಿದೆ. ಶಾಶ್ವತ ಕುಡಿಯುವ ನೀರಿನ ಯೋಜನೆಯಡಿ ನೀರು ಶುದ್ಧೀಕರಣ ಘಟಕ ನಿರ್ಮಾಣವಾದರು ಸಹ ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಿಯಿಂದ ನೀರು […]

Continue Reading

ಪಕ್ಷ ಅಧಿಕಾರಕ್ಕೆ ತರಲು 5 ವರ್ಷ ಕಷ್ಟ ಪಟ್ಟಿದ್ದು ನಾನು, ಕೃಷ್ಣ CM ಆದ್ರು: ನಾನು ಸಲ್ಲಿಸಿದ ಸೇವೆ ನೀರಲ್ಲಿ ಹೋಮ ಮಾಡಿದಂತಾಯಿತು

ವಿಜಯಪುರ: ಮುಖ್ಯಮಂತ್ರಿ ಸ್ಥಾನ ಕೈತಪ್ಪಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪರೋಕ್ಷವಾಗಿ ನೋವು ತೋಡಿಕೊಂಡಿದ್ದಾರೆ. ಬಿಎಲ್​​ಡಿ ಸಂಸ್ಥೆಯ ಸಂಸ್ಥಾಪಕ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಈ ಹಿಂದೆ ರಾಜ್ಯದ ಮುಖ್ಯಮಂತ್ರಿ ಆಗುವ ಅವಕಾಶ ಇತ್ತು. ಆದರೆ ಅದು ಕೈ ತಪ್ಪಿತು. 1999ರಲ್ಲಿ ಸಿಎಂ ಆಗೋದು ಕೈತಪ್ಪಿತು. ನಾನು ವಿಧಾನಸಭಾದ ವಿರೋಧ ಪಕ್ಷದ ನಾಯಕನಾಗಿ ಹೋರಾಟ ಮಾಡಿದೆ. 4 ತಿಂಗಳ ಹಿಂದೆ ಪಕ್ಷ ಸೇರಿದ್ದ ಎಸ್.ಎಂ ಕೃಷ್ಣ ಮುಖ್ಯಮಂತ್ರಿ ಆದರು ಎಂದು […]

Continue Reading

ರಾಷ್ಟ್ರಕ್ಕೆ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಕೊಡುಗೆ ಅಪಾರ

ಕಲಬುರಗಿ: ರಾಷ್ಟ್ರದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸಿರುವ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಕೊಡುಗೆ ಅಪಾರವಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಖಾದ್ರಿ ಚೌಕ್‌ನಲ್ಲಿರುವ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ರವಿವಾರ ಜರುಗಿದ ‘ಡಾ.ಎ.ಪಿ.ಜೆ. ಅಬ್ದುಲ್ ಕಲಾಂರ ಪುಣ್ಯ ಸ್ಮರಣೆ’ಯ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿ, ವಿಜ್ಞಾನಿಯಾಗಿ, ರಾಷ್ಟ್ರಪತಿಯಾಗಿ, ತತ್ವಜ್ಞಾನಿಯಾಗಿ, ಶಿಕ್ಷಣ ತಜ್ಞರಾಗಿ, ಕ್ಷಿಪಣಿಯ ರೂವಾರಿಯಾಗಿ, ಧೀಮಂತ ಧುರಿಣರಾಗಿ, ಯುವ ಜನತೆಯ ದಾರಿ ದೀಪವಾಗಿದ್ದಾರೆ ಎಂದರು. […]

Continue Reading

ಶೈಕ್ಷಣಿಕ ಕ್ಷೇತ್ರದ ಸಾಧಕ ಚನ್ನಬಸಪ್ಪ ಗಾರಂಪಳ್ಳಿಗೆ ಗೌರವ ಸತ್ಕಾರ

ಕಲಬುರಗಿ: ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ಸ್ವಾತಿ ಮತ್ತು ಶಿವಾ ಶಾಲೆಗಳನ್ನು ಪ್ರಾರಂಭಿಸಿ, ಬಡ, ಮಧ್ಯಮ ವರ್ಗದ ಸಾವಿರಾರು ವಿದ್ಯಾರ್ಥಿಗಳ ಬದುಕು ಕಟ್ಟಿಕೊಟ್ಟ, ಕಳೆದ 19 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಅಮೋಘ ಸಾಧನೆ ಮಾಡಿರುವ ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ ಅವರಿಗೆ ಸ್ವಾತಿ ಪ್ರೌಢ ಶಾಲೆಯ ಆವರಣದಲ್ಲಿ ರವಿವಾರ ಜರುಗಿದ ಕಾರ್ಯಕ್ರಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸತ್ಕರಿಸಿ, ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಎಚ್.ಬಿ ಪಾಟೀಲ್, ನರಸಪ್ಪ ಬಿರಾದಾರ ದೇಗಾಂವ, ಶಿವಯೋಗೆಪ್ಪಾ ಎಸ್.ಬಿರಾದಾರ, ಸಂಗೀತಾ ಸಾಲಿ […]

Continue Reading

ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಪಾಲಕರ ಪಾತ್ರ ಪ್ರಮುಖ

ಕಲಬುರಗಿ: ಮಕ್ಕಳನ್ನು ದೇಶದ ಅಮೂಲ್ಯ ಮಾನವ ಸಂಪನ್ಮೂಲವಾಗಿಸಿ, ಸಮಾಜದ ದೊಡ್ಡ ಆಸ್ತಿಯನ್ನಾಗಿಸಿ, ಉತ್ತಮ ಭವಿಷ್ಯ ನಿರ್ಮಾಣದಲ್ಲಿ ಪಾಲಕರ ಪಾತ್ರ ಪ್ರಮುಖವಾಗಿದೆ. ಎಂದು ಎಂದು ಚಿಂತಕ ನರಸಪ್ಪ ಬಿರಾದಾರ ದೇಗಾಂವ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ‘ಸ್ವಾತಿ ಪ್ರೌಢಶಾಲೆ’ಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ರವಿವಾರ ಜರುಗಿದ ‘ರಾಷ್ಟೀಯ ಪಾಲಕರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳು ತಮ್ಮ ಪಾಲಕ-ಪೋಷಕರ ಶ್ರಮ ಮರೆಯಬಾರದು. ಅವರ ಇಳಿ ವಯಸ್ಸಿನಲ್ಲಿ ಪಾಲಕರಿಗೆ ಆರೈಕೆ ಮಾಡಬೇಕು ಎಂದರು. ಉಪನ್ಯಾಸಕ ಎಚ್.ಬಿ […]

Continue Reading

ಆದಾಯ ಪ್ರಮಾಣ ಪತ್ರ ಪಡೆಯಲು ಹೋದ ವ್ಯಕ್ತಿಗೆ ಶಾಕ್​: ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಜಾತಿಗೆ ಸೇರಿಸಿದ ಕಲಬುರಗಿ ಅಧಿಕಾರಿಗಳು

ಕಲಬುರಗಿ: ಕೆಲ ಸಂದರ್ಭಗಳಲ್ಲಿ ಪ್ರಮಾಣ ಪತ್ರದಲ್ಲಿ ಹೆಸರು, ವಿಳಾಸ ಅಥವಾ ಫೋಟೋ ಬದಲಾವಣೆ ಆಗಿರುವುದನ್ನು ನಾವು ನೋಡಿದ್ದೆವೆ. ಆದರೆ ಕಲಬುರಗಿಯಲ್ಲಿ ವಿಚಿತ್ರ ಘಟನೆ ನಡೆದಿದೆ. ತಹಸೀಲ್ದಾರ್ ​ ಕಚೇರಿ ಅಧಿಕಾರಿಗಳ ಎಡವಟ್ಟಿನಿಂದ ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಧರ್ಮಕ್ಕೆ ಸೇರಿಸಿ ಪ್ರಮಾಣ ಪತ್ರ ವಿತರಣೆ ಮಾಡಲಾಗಿದೆ. ತಪ್ಪು ಸರಿಪಡಿಸುವಂತೆ ಸೂಚಿಸಿದರೂ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲವೆಂದು ಆರೋಪ ಕೇಳಿಬಂದಿದೆ. ಜಾತಿ ಕಾಲಂನಲ್ಲಿ ಮುಸ್ಲಿಂ ಅಂತಾ ಉಲ್ಲೇಖ‌ ಕಲಬುರಗಿಯ ರಾಮತೀರ್ಥ ನಗರದ ಮಹಾಂತಪ್ಪ ಕೊತ್ಲೆ ಎಂಬ ವ್ಯಕ್ತಿ ವೀರಶೈವ ಲಿಂಗಾಯತ ಸಮುದಾಯದವರು. ಇವರು […]

Continue Reading