ಆದಾಯ ಪ್ರಮಾಣ ಪತ್ರ ಪಡೆಯಲು ಹೋದ ವ್ಯಕ್ತಿಗೆ ಶಾಕ್​: ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಜಾತಿಗೆ ಸೇರಿಸಿದ ಕಲಬುರಗಿ ಅಧಿಕಾರಿಗಳು

ಕಲಬುರಗಿ: ಕೆಲ ಸಂದರ್ಭಗಳಲ್ಲಿ ಪ್ರಮಾಣ ಪತ್ರದಲ್ಲಿ ಹೆಸರು, ವಿಳಾಸ ಅಥವಾ ಫೋಟೋ ಬದಲಾವಣೆ ಆಗಿರುವುದನ್ನು ನಾವು ನೋಡಿದ್ದೆವೆ. ಆದರೆ ಕಲಬುರಗಿಯಲ್ಲಿ ವಿಚಿತ್ರ ಘಟನೆ ನಡೆದಿದೆ. ತಹಸೀಲ್ದಾರ್ ​ ಕಚೇರಿ ಅಧಿಕಾರಿಗಳ ಎಡವಟ್ಟಿನಿಂದ ಹಿಂದೂ ವ್ಯಕ್ತಿಯನ್ನು ಮುಸ್ಲಿಂ ಧರ್ಮಕ್ಕೆ ಸೇರಿಸಿ ಪ್ರಮಾಣ ಪತ್ರ ವಿತರಣೆ ಮಾಡಲಾಗಿದೆ. ತಪ್ಪು ಸರಿಪಡಿಸುವಂತೆ ಸೂಚಿಸಿದರೂ ಅಧಿಕಾರಿಗಳು ತಲೆಕೆಡಿಸಿಕೊಂಡಿಲ್ಲವೆಂದು ಆರೋಪ ಕೇಳಿಬಂದಿದೆ. ಜಾತಿ ಕಾಲಂನಲ್ಲಿ ಮುಸ್ಲಿಂ ಅಂತಾ ಉಲ್ಲೇಖ‌ ಕಲಬುರಗಿಯ ರಾಮತೀರ್ಥ ನಗರದ ಮಹಾಂತಪ್ಪ ಕೊತ್ಲೆ ಎಂಬ ವ್ಯಕ್ತಿ ವೀರಶೈವ ಲಿಂಗಾಯತ ಸಮುದಾಯದವರು. ಇವರು […]

Continue Reading

ವಾಡಿ: ರಾಷ್ಟ್ರ ಧ್ವಜದೊಂದಿಗೆ ಕಾರ್ಗಿಲ್ ವಿಜಯೋತ್ಸವ

ವಾಡಿ: ಪಟ್ಟಣದ ಮೌಲಾನಾ ಅಬ್ದುಲ್ ಕಲಾಂ ಅಜಾದ್ ವೃತ್ತದಲ್ಲಿ ಬಿಜೆಪಿ ಪಕ್ಷದ ಮುಖಂಡರು ಶನಿವಾರ 26ನೇ ಕಾರ್ಗಿಲ್ ವಿಜಯ ದಿನಾಚರಣೆ ನಿಮಿತ್ಯ ರಾಷ್ಟ್ರ ಧ್ವಜದೊಂದಿಗೆ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪ್ರತಿ ವರ್ಷ ಜು.26 ರಂದು ನಾವೆಲ್ಲರು ಸ್ಮರಿಸಿ, ಗೌರವಿಸಬೇಕಾದ ದಿನ. ಶತ್ರುರಾಷ್ಟ್ರ ದಾಳಿಯಿಂದ ಸದಾ ನಮ್ಮ ತಾಯ್ನಾಡಿನಲ್ಲಿ ನಾವುಗಳು, ಕೆಚ್ಚೆದೆಯ ನಮ್ಮ ವೀರಸೈನಿಕರ ತ್ಯಾಗ, ಬಲಿದಾನದ ಫಲವಾಗಿ ಇಂದು ಸುರಕ್ಷಿತವಾಗಿದ್ದೆವೆ ಎಂದರು. ನಾವು ಕಾರ್ಗಿಲ್ ಯುದ್ಧವನ್ನು ಮರೆಯಲು ಸಾಧ್ಯವಿಲ್ಲ. ಈ […]

Continue Reading

ದಂಡೋತಿ: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ, ಅಪಾರ ಹಾನಿ

ಕಲಬುರಗಿ: ಕೆಲವು ದಿನಗಳಿಂದ ಬಿಟ್ಟು ಬಿಡದೆಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜಿಲ್ಲೆಯವಿವಿಧ ತಾಲೂಕಿನಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ,ಅದರಲ್ಲೂ ದಂಡೋತಿ ಗ್ರಾಮದಲ್ಲಿ ಎರಡು ಮನೆಯ ಗೋಡೆ ಕುಸಿದು ಬಿದ್ದ ಪರಿಣಾಮ ಅಪಾರ ಪ್ರಮಾಣದ ಹಾನಿಯುಂಟಾಗಿದೆ. ಜಿಲ್ಲೆಯ ಚಿತ್ತಾಪುರ ತಾಲೂಕಿನ ದಂಡೋತಿ ಗ್ರಾಮದ ಮುಹಮ್ಮದ್ ರಫೀಕ್ ರಸೂಲ್ ಸಾಬ್ ಡೋಂಗಾ ಹಾಗೂ ಪುಥಲಿ ಬೇಗಂ ಹುಸೇನ್ ಸಾಬ್ ಡೋಂಗಾ ಎನ್ನುವವರ ಮನೆಯ ಗೋಡೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಈ ಸಂದರ್ಭದಲ್ಲಿ ದಂಡೋತಿ ಗ್ರಾಮ ಘಟಕದ ಕರವೇ ಅಧ್ಯಕ್ಷ ಮೈನೋದ್ದೀನ್ ಮಾತನಾಡಿ, ಕಳೆದ ಕೆಲವು […]

Continue Reading

ಆಧುನಿಕ ಕನ್ನಡ ಸಾಹಿತ್ಯದ ಶ್ರೇಷ್ಟ ಕಾದಂಬರಿಕಾರ ಡಾ.ಎಸ್.ಎಲ್ ಭೈರಪ್ಪ

ಕಲಬುರಗಿ: ಡಾ.ಎಸ್.ಎಲ್ ಭೈರಪ್ಪನವರು ಆಧುನಿಕ ಕನ್ನಡ ಸಾಹಿತ್ಯದ ಶ್ರೇಷ್ಟ ಕಾದಂಬರಿಕಾರರು ಮತ್ತು ಲೇಖಕರು ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ್ ಹೇಳಿದರು.  ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಡಾ.ಎಸ್.ಎಲ್ ಭೈರಪ್ಪನವರ 94ನೇ ಜನುಮ ದಿನಾಚರಣೆ’ ಪ್ರಯುಕ್ತ ‘ಡಾ.ಎಸ್.ಎಲ್ ಭೈರಪ್ಪನವರ ಬದುಕು-ಬರಹ’ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಅವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ […]

Continue Reading

ಯುವಕರು ಸೈನಿಕರಂತೆ ದೇಶ ಸೇವೆ ಮಾಡಲಿ

ಕಲಬುರಗಿ: ದೇಶದ ಪ್ರತಿಯೊಬ್ಬರಲ್ಲಿ ಯುವಕರು ಸೈನಿಕರಂತೆ ದೇಶದ ರಕ್ಷಣೆ, ಒಳಿತಿಗಾಗಿ ಸೇವೆ ಸಲ್ಲಿಸುವುದು ಅಗತ್ಯವಾಗಿದೆ ಎಂದು ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ ಮಾಜಿ ಸೈನಿಕ ಶಿವಶರಣಪ್ಪ ಎಸ್ ತಾವರಖೇಡ್ ಯುವಕರಿಗೆ ಸಲಹೆ ನೀಡಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ‘26ನೇ ಕಾರ್ಗಿಲ್ ವಿಜಯ ದಿನಾಚರಣೆ’ ಅಂಗವಾಗಿ ಏರ್ಪಡಿಸಿದ್ದ ‘ಕಾರ್ಗಿಲ್ ವಿಜಯೋತ್ಸವದ ಯಶೋಗಾಥೆ’ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮಗಿಷ್ಟವಾದ ಯಾವುದೆ ಕೋರ್ಸ ಅಧ್ಯಯನ ಮಾಡಿಕೊಂಡು, ಕ್ಷೇತ್ರದಲ್ಲಿ […]

Continue Reading

ಶರಣ ಸಾಹಿತ್ಯಕ್ಕೆ ಜಯದೇವಿ ತಾಯಿ ಲಿಗಾಡೆ ಕೊಡುಗೆ ಅನನ್ಯ

ಕಲಬುರಗಿ: ಕರ್ನಾಟಕದ ಗಡಿ ಭಾಗದಲ್ಲಿನ ಮರಾಠಿ ಪ್ರಾಬಲ್ಯದಿಂದ ಕನ್ನಡವನ್ನು ಉಳಿಸಿ, ಬೆಳೆಸುವಲ್ಲಿ ಮತ್ತು ಶರಣ ಸಾಹಿತ್ಯದ ರಕ್ಷಕರಾಗಿ ತಮ್ಮದೆಯಾದ ಅಮೂಲ್ಯವಾದ ಕೊಡುಗೆಯನ್ನು ಶರಣೆ ಜಯದೇವಿ ತಾಯಿ ಲಿಗಾಡೆಯವರು ನೀಡಿದ್ದಾರೆ ಎಂದು ಉಪನ್ಯಾಸಕ, ಶರಣ ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಶರಣೆ ಜಯದೇವಿ ತಾಯಿ ಲಿಗಾಡೆಯವರ ಸ್ಮರಣೋತ್ಸವ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಆಧ್ಯಾತ್ಮ ಚಿಂತಕಿ, ಸಮಾಜ […]

Continue Reading

ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಸಾಧನೆಯ ಶಿಖರಕ್ಕೆರಲು ಸಾಧ್ಯ: ಡಾ.ಶಿವಶರಣಪ್ಪ ಗೌಡಪ್ಪ

ಚಿತ್ತಾಪುರ: ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಮತ್ತು ನಿರಂತರ ಪ್ರಯತ್ನದ ಫಲವಾಗಿ ಜೀವನದಲ್ಲಿ ಸಾಧನೆಯ ಶಿಖರಕ್ಕೆರಲು ಸಾಧ್ಯ ಎಂದು ಕಲಬುರಗಿ ಕೃಷಿ ಮಹಾವಿದ್ಯಾಲಯದ ಡೀನ್ ಡಾ.ಶಿವಶರಣಪ್ಪ ಗೌಡಪ್ಪ ಹೇಳಿದರು. ತಾಲೂಕಿನ ಭಾಗೋಡಿ ಗ್ರಾಮದ ಶಾಂತಲಿಂಗೇಶ್ವರ ಮಠದಲ್ಲಿ ಯುವ ಕೃಷಿ ವೈಭವದ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳಲ್ಲಿ ಸಮಯ ಪ್ರಜ್ಞೆ, ದೈರ್ಯ, ಆತ್ಮವಿಶ್ವಾಸ ಇರಬೇಕು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಅರಿವುಮೂಡಿಸುವ ಕೆಲಸ ಮಾಡಬೇಕು, ಶಿಕ್ಷಕರು ಮಾರ್ಗದರ್ಶನ ಮಾಡಬೇಕು […]

Continue Reading

ದಾಳಿ ವೇಳೆ ಅರಣ್ಯ ಅಧಿಕಾರಿ ಮನೆಯಲ್ಲಿದ್ದ ಹಣ ಎಣಿಸಿ ಎಣಿಸಿ ಅಧಿಕಾರಿಗಳು ಸುಸ್ತು

ಭುವನೇಶ್ವರ: ಭ್ರಷ್ಟ ಅಧಿಕಾರಿಗಳ ಹೆಡೆಮುರಿ ಕಟ್ಟಲು ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಮುಂದಾಗಿದ್ದು ಇದರ ಭಾಗವಾಗಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರ ಮನೆಯ ಮೇಲೆ ಶುಕ್ರವಾರ(ಜು.25) ವಿಜಿಲೆನ್ಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ಈ ವೇಳೆ ಅಧಿಕಾರಿಯ ಮನೆಯಲ್ಲಿ ಚಿನ್ನದ ನಾಣ್ಯ ಸೇರಿದಂತೆ ಕೋಟ್ಯಾಂತರ ಮೌಲ್ಯದ ನಗದು ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿರುವ ಆರೋಪದ ಮೇಲೆ ವಿಜಿಲೆನ್ಸ್ ಅಧಿಕಾರಿಗಳು ಶುಕ್ರವಾರ ಕೊರಾಪುಟ್ ಜಿಲ್ಲೆಯ ಜೆಪೋರ್ ಅರಣ್ಯ ವಿಭಾಗದ ಜೇಪೋರ್ ಅರಣ್ಯ ಶ್ರೇಣಿಯ ಉಪ ರೇಂಜರ್ ರಾಮ […]

Continue Reading

ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಯ ಜೀವ ವಿಮೆಯ 2 ಲಕ್ಷ ರೂ ಹಸ್ತಾಂತರ

ಕಾಳಗಿ: ಪ್ರಧಾನ ಮಂತ್ರಿ ಜೀವನ್ ಜ್ಯೋತಿ ವಿಮೆಯ ನಾಮನಿರ್ದೇಶಿತ ಅರುಣಕುಮಾರ ಕಡ್ಲಿ ಅವರಿಗೆ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಪ್ರವೀಣಕುಮಾರ ಜೆ.ಎಚ್ 2 ಲಕ್ಷ ರೂ. ಚೆಕ್ ವಿತರಿಸಿದರು. ತಾಲೂಕಿನ ತೆಂಗಳಿ ಗ್ರಾಮದ ಅಣ್ಣೆಮ್ಮ ಅರುಣಕುಮಾರ್ ಕಡ್ಲಿ ಅಸುನಿಗಿದ ಕಾರಣ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಯ ನಾಮನಿರ್ದೇಶಿತ ಅರುಣಕುಮಾರ ಕಡ್ಲಿ ಅವರಿಗೆ 2 ಲಕ್ಷ ರೂ. ಚೆಕ್ ವಿತರಿಸಲಾಯಿತು. ಬ್ಯಾಂಕ ಖಾತೆ ಹೊಂದಿರುವ ಗ್ರಾಹಕರು ಕೇಂದ್ರ ಸರ್ಕಾರದ ಯೋಜನೆಗಳಾದ ಪಿಎಂಜೆಜೆಬಿವೈ 436 ರೂ. ಮತ್ತು […]

Continue Reading

ದೀರ್ಘಾವಧಿಗೆ ಪ್ರಧಾನಿ: ಇಂದಿರಾ ಗಾಂಧಿ ಹಿಂದಿಕ್ಕಿದ ನರೇಂದ್ರ ಮೋದಿ

ಹೊಸದಿಲ್ಲಿ: ಸತತ ಅವಧಿಗೆ ಪ್ರಧಾನಿಯಾಗಿ ಸುದೀರ್ಘ‌ ಸೇವೆ ಸಲ್ಲಿಸಿದ ಹೆಗ್ಗಳಿಕೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರಕ್ಕೆ ಇಂದಿರಾ ಗಾಂಧಿ ದಾಖಲೆ ಮುರಿಯಲಿದ್ದಾರೆ. ಶುಕ್ರವಾರಕ್ಕೆ ಪ್ರಧಾನಿಯಾಗಿ 4,078 ದಿನಗಳು ಪೂರೈಸಲಿದ್ದಾರೆ. ಈ ಮೂಲಕ ಇಂದಿರಾ ಅವರ 4,077 ದಿನಗಳ ದಾಖಲೆ ಮುರಿಯಲಿದ್ದಾರೆ. ಇಂದಿರಾ ಗಾಂಧಿ ಅವರು 1966 ಜನವರಿ 24ರಿಂದ 1977 ಮಾರ್ಚ್‌ 24ರ ವರೆಗೆ ಸತತ ಪ್ರಧಾನಿ ಹುದ್ದೆಯಲ್ಲಿದ್ದರು. ಆ ದಾಖಲೆ ಈಗ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರಿಗೆ ವರ್ಗಾವಣೆಯಾಗಲಿದೆ. ಅತಿ ದೀರ್ಘ‌ […]

Continue Reading