ರಾವೂರ: 25 ರಿಂದ ಆ.22ರ ವರೆಗೆ ಶ್ರಾವಣ ಸತ್ಸಂಗ ಕಾರ್ಯಕ್ರಮ

ರಾವೂರ: ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದಲ್ಲಿ ಪವಿತ್ರ ಶ್ರಾವಣ ಮಾಸದ ಅಂಗವಾಗಿ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಒಂದು ತಿಂಗಳ ಪರ್ಯಂತ ಶ್ರಾವಣ ಸತ್ಸಂಗ ಕಾರ್ಯಕ್ರಮ ಸಂಜೆ 7 ರಿಂದ 7.30ರ ವರೆಗೆ ನಡೆಯಲಿದೆ ಎಂದು ಶ್ರೀಮಠದ ಕಾರ್ಯದರ್ಶಿ ಡಾ.ಗುಂಡಣ್ಣ ಬಾಳಿ ತಿಳಿಸಿದ್ದಾರೆ. ಜುಲೈ 25 ರಿಂದ ಆಗಸ್ಟ್ 22ರ ವರೆಗೆ ಶ್ರಾವಣ ಸತ್ಸಂಗ ಕಾರ್ಯಕ್ರಮ ನಡೆಯಲಿದೆ. ಸತ್ಸಂಗಕ್ಕೆ ಬರುವವರು ಬಿಳಿ ಬಣ್ಣದ ಅಂಗಿ, ಬಿಳಿ ಬಣ್ಣದ ಲುಂಗಿ ಧರಿಸಿ ಬರಬೇಕು. ಸತ್ಸಂಗ ಕಾರ್ಯಕ್ರಮದಲ್ಲಿ […]

Continue Reading

ತೇವಾಂಶ ಕಾಪಾಡಿ ಬೆಳೆಗಳ ಸಂರಕ್ಷಣೆ ಅಗತ್ಯ

ಕಲಬುರಗಿ: ತುಂತುರು ಅಥವಾ ಹನಿ ನೀರಾವರಿ ಮೂಲಕ ನೀರು ಉಪಯೋಗಿಸುವುದು ಸೇರಿದಂತೆ ಮತ್ತಿತರ ಕ್ರಮಗಳನ್ನು ಅನುಸರಿಸಿ, ಬೆಳೆಯನ್ನು ಕಾಪಾಡಬೇಕು ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್.ಬಿರಾದಾರ ರೈತರಿಗೆ ಸಲಹೆ ನೀಡಿದರು. ಸುಂಟನೂರ ಕ್ರಾಸ್ ಸಮೀಪದ ಪ್ರಗತಿಪರ ರೈತ ಸಂತೋಷ ಹಿರಮಶೆಟ್ಟಿ ತೋಟದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಕೃಷಿ ಕ್ಷೇತ್ರ ಭೇಟಿ ಮತ್ತು ರೈತರಿಗೆ ಸಲಹೆಗಳು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ಮಳೆಯಾಗಬೇಕಾಗಿದ್ದು. ಆದರೆ ಜಿಲ್ಲೆಯ ಬಹುತೇಕ ಕಡೆ ಮಳೆಯ ಅಭಾವವಿದೆ. ನಮ್ಮ […]

Continue Reading

ರಾಷ್ಟ್ರ ಧ್ವಜ ದೇಶದ ಸಾರ್ವಭೌಮತೆಯ ಸಂಕೇತ

ಕಲಬುರಗಿ: ಕೇಸರಿ, ಬಿಳಿ, ಹಸಿರು ಬಣ್ಣ ಮತ್ತು ನಡುವೆ ಅಶೋಕ ಚಕ್ರವಿರುವ ಭಾರತ ದೇಶದ ತ್ರಿವರ್ಣ ಧ್ವಜವು ಭಾರತದಲ್ಲಿರುವ ಎಲ್ಲರಿಗೂ ಒಂದೆಯಾಗಿರುವ ಹೆಮ್ಮೆಯ, ಗೌರವ, ಸಮಾನತೆ ಹಾಗೂ ಸಾರ್ವಭೌಮತೆ ಸಾರುವ ಚಿಹ್ನೆಯಾಗಿದೆ. ಅದನ್ನು ಪ್ರತಿಯೊಬ್ಬರು ಗೌರವಿಸಬೇಕು ಎಂದು ಪ್ರಾಚಾರ್ಯ ರವೀಂದ್ರಕುಮಾರ ಸಿ ಬಟಗೇರಿ ಹೇಳಿದರು. ಜಿಲ್ಲೆಯ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್’ಎಸ್’ಎಸ್ ಘಟಕದ ವತಿಯಿಂದ ಮಂಗಳವಾರ ಜರುಗಿದ ‘ರಾಷ್ಟ್ರ ಧ್ವಜ ಅಂಗೀಕಾರ ದಿನಾಚರಣೆ’ ಕಾರ್ಯಕ್ರಮದಲ್ಲಿ ಧ್ವಜಾ ಅರಳಿಸಿ, ನಂತರ […]

Continue Reading

ರಾಷ್ಟ್ರ ಧ್ವಜ ದೇಶದ ಸಮಾನತೆ, ಗೌರವದ ಪ್ರತೀಕ

ಕಲಬುರಗಿ: ಕೇಸರಿ, ಬಿಳಿ, ಹಸಿರು ಬಣ್ಣ ಹಾಗೂ ನಡುವೆ ಅಶೋಕ ಚಕ್ರವಿರುವ ಭಾರತ ದೇಶದ ತ್ರಿವರ್ಣ ಧ್ವಜವು ಭಾರತದಲ್ಲಿರುವ ಎಲ್ಲರಿಗೂ ಒಂದೆಯಾಗಿರುವ ಹೆಮ್ಮೆಯ, ಗೌರವ, ಸಮಾನತೆ ಮತ್ತು ಸಾರ್ವಭೌಮತೆ ಸಾರುವ ಚಿಹ್ನೆಯಾಗಿದೆ ಎಂದು ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ನವಾಬಖಾನ್ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಸಂಜೆ ಜರುಗಿದ ‘ರಾಷ್ಟ್ರ ಧ್ವಜ ಅಂಗೀಕಾರ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದ […]

Continue Reading

ಜಂಕ್ ಫುಡ್‌  ಸೇವನೆಯಿಂದ ಆರೋಗ್ಯದ ಮೇಲೆ ದುಷ್ಪರಿಣಾಮ: ಡಾ. ಅನುಪಮಾ ಕೇಶ್ವಾರ

ಕಲಬುರಗಿ: ಜಂಕ್ ಫುಡ್‌ ಸೇವನೆ ಮಾಡುವುದು ಬೇಡ ಎಂದು ವೈದ್ಯಾಧಿಕಾರಿ ಡಾ. ಅನುಪಮಾ ಎಸ್. ಕೇಶ್ವಾರ ಹೇಳಿದರು.    ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ಜಂಕ್ ಫುಡ್‌ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಜಂಕ್ ಫುಡ್’ನಲ್ಲಿ ಹೆಚ್ಚಿನ ಕೊಬ್ಬು, ಸಕ್ಕರೆ, ಉಪ್ಪು ಮತ್ತು ಕಡಿಮೆ ಪೌಷ್ಟಿಕಾಂಶದ ಮೌಲ್ಯವನ್ನು ಹೊಂದಿರುತ್ತವೆ. ಅತಿಯಾಗಿ ಜಂಕ್ ಫುಡ್ ಸೇವನೆಯಿಂದ ಬೊಜ್ಜು, ಮಧುಮೇಹ ಮತ್ತು ಹೃದಯ ಸಂಬಂಧಿತ ಕಾಯಿಲೆಗಳಂತಹ […]

Continue Reading

20 ವರ್ಷಗಳಲ್ಲಿ 100ಕ್ಕೂ ಹೆಚ್ಚು ಕಾರುಗಳನ್ನು ಕದ್ದ ಕಳ್ಳ, ಐಷಾರಾಮಿ ಜೀವನ ನಡೆಸುತ್ತಿದ್ದ ಎಂಬಿಎ ಪದವೀಧರ ಸಿಕ್ಕಿ ಬಿದ್ದದ್ದು ಹೇಗೆ ಗೊತ್ತಾ ?

ಚೆನ್ನೈ: 100 ಕ್ಕೂ ಹೆಚ್ಚು ಕಾರುಗಳನ್ನು ಕದ್ದು ರಾಜಸ್ಥಾನ ಮತ್ತು ನೇಪಾಳದಲ್ಲಿ ಮಾರಾಟ ಮಾಡಿ ಐಷಾರಾಮಿ ಜೀವನ ನಡೆಸುತ್ತಿರುವ ಕಳ್ಳನೊಬ್ಬ 20 ವರ್ಷಗಳ ನಂತರ ಕಳ್ಳತನ ಪ್ರಕರಣವೊಂದರಲ್ಲಿ ಸಿಕ್ಕಿ ಬಿದ್ದು ಪೊಲೀಸರ ಅತಿಥಿಯಾಗಿದ್ದಾನೆ. ರಾಜಸ್ಥಾನದ ಸತೇಂದ್ರ ಸಿಂಗ್ ಶೇಖಾವತ್ ಬಂಧಿತ. ಈತ ಕಳೆದ 20 ವರ್ಷಗಳಲ್ಲಿ 100 ಕ್ಕೂ ಹೆಚ್ಚು ಐಷಾರಾಮಿ ಕಾರುಗಳನ್ನು ಕದ್ದಿದ್ದಾನೆ. ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ, ಪುದುಚೇರಿ ಸೇರಿದಂತೆ ಮುಂತಾದ ರಾಜ್ಯಗಳಲ್ಲಿ ಆಧುನಿಕ ಉಪಕರಣಗಳನ್ನು ಬಳಸಿ ಕಾರುಗಳನ್ನು ಕದ್ದು ರಾಜಸ್ಥಾನ ಮತ್ತು ನೇಪಾಳದಲ್ಲಿ ಮಾರಾಟ […]

Continue Reading

20 ರೂಪಾಯಿಗಾಗಿ ತಾಯಿಯನ್ನು ಕೊಂದ ಪಾಪಿ ಮಗ

ಚಂಡೀಘಡ: 20 ರೂ. ಕೊಡಲು ನಿರಾಕರಿಸಿದ ತಾಯಿಯನ್ನು ಪಾಪಿ ಮಗನೊಬ್ಬ ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹರಿಯಾಣದ ನೂಹ್ ಜಿಲ್ಲೆಯಲ್ಲಿ ನಡೆದಿದೆ. ಜೈಸಿಂಗ್‌ಪುರ ಗ್ರಾಮದ ನಿವಾಸಿ ರಜಿಯಾ (56) ಹತ್ಯೆಯಾದ ತಾಯಿ. ಮಗ ಜಮ್ಶದ್ ಕೊಲೆ ಮಾಡಿದ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ಜಮ್ಶದ್ ಗಾಂಜಾ ವ್ಯಸನಿಯಾಗಿದ್ದ. ಆರೋಪಿಯು ಶನಿವಾರ ರಾತ್ರಿ ತಾಯಿ ಬಳಿ 20 ರೂ. ಕೇಳಿದ್ದ. ರಜಿಯಾ ಹಣ ನೀಡಲು ನಿರಾಕರಿಸಿದ್ದಕ್ಕೆ ಕೊಡಲಿಯಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದ. ಬಳಿಕ ರಾತ್ರಿಯಿಡಿ ತಾಯಿಯ […]

Continue Reading

ಭಾರತ ರತ್ನ ಪ್ರಶಸ್ತಿ ಪಡೆದವರಿಗೆ ಸಿಗುವ ಸೌಲಭ್ಯ ಒಂದಾ, ಎರಡಾ, ಕೇಳಿದರೆ ದಂಗಾಗುತ್ತಿರಾ

ಭಾರತ ರತ್ನವು ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾಗಿದೆ. ಜಾತಿ, ಮತ, ಲಿಂಗ ಅಥವಾ ಧರ್ಮ ಎಂದು ನೋಡದೆ, ಸಮಾಜಕ್ಕೆ ಅಸಾಧಾರಣ ಕೊಡುಗೆ ನೀಡಿದವರಿಗೆ ಈ ಪ್ರಶಸ್ತಿ ನೀಡಲಾಗುತ್ತದೆ. ಪ್ರತಿವರ್ಷ ಗರಿಷ್ಠ ಮೂರು ಜನರು ಈ ಪ್ರಶಸ್ತಿಗೆ ಭಾಜನರಾಗುತ್ತಾರೆ. ಈ ಪ್ರಶಸ್ತಿ ಪಡೆದವರು ವಿವಿಧ ಸೌಲಭ್ಯಗಳು ಪಡೆಯುತ್ತಾರೆ, ಆದರೆ ಈ ಪ್ರಶಸ್ತಿ ಹೆಸರನ್ನು ತಮ್ಮ ಹೆಸರಿಗೆ ಮೊದಲು ಅಥವಾ ಕೊನೆಯಲ್ಲಿ ಬಳಸಲು ಅನುಮತಿಯಿಲ್ಲ. ಈ ಪ್ರಶಸ್ತಿ ಆರಂಭವಾಗಿದ್ದು ಯಾವಾಗ ? 2 ಜನವರಿ 1954 ರಂದು ಭಾರತದ ಮೊದಲ […]

Continue Reading

300 ಜನರಿದ್ದ ದೋಣಿಗೆ ಬೆಂಕಿ: ಜೀವ ಉಳಿಸಿಕೊಳ್ಳಲು ಸಮುದ್ರಕ್ಕೆ ಹಾರಿದ ಪ್ರಯಾಣಿಕರು

ಇಂಡೋನೇಷ್ಯಾದ ಉತ್ತರ ಸುಲವೇಸಿಯಲ್ಲಿರುವ ತಾಲಿಸ್ ದ್ವೀಪದ ಬಳಿ ಇಂದು (ಜು.20) ಮನಾಡೊ ಬಂದರಿಗೆ ಹೋಗಲು, ಸುಮಾರು 300 ಜನರನ್ನು ಹೊತ್ತೊಯ್ಯುತ್ತಿದ್ದ ದೋಣಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕನಿಷ್ಠ ಐದು ಜನ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಬೆಂಕಿಯಿಂದ ಪಾರಾಗಲು ಕೆಲವು ಪ್ರಯಾಣಿಕರು ಸಮುದ್ರಕ್ಕೆ ಹಾರಿದ್ದಾರೆ, ಅನೇಕರು ಕೆಎಂ ಬಾರ್ಸಿಲೋನಾ ವಿಎ ಹೆಸರಿನ ದೋಣಿಯಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 150 ಜನರನ್ನು ರಕ್ಷಿಸಲಾಗಿದೆ, ಅವರನ್ನು ರಕ್ಷಣಾ ಸಿಬ್ಬಂದಿ ಮತ್ತು ಸ್ಥಳೀಯ ಮೀನುಗಾರಿಕಾ ದೋಣಿಗಳ ಜಂಟಿ ತಂಡವು ರಕ್ಷಣೆ ಮಾಡಿದೆ. ರಕ್ಷಣಾ […]

Continue Reading

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮೈಲಿಗಲ್ಲು ಚಂದ್ರಯಾನ-3: ಎಚ್.ಬಿ ಪಾಟೀಲ

ಕಲಬುರಗಿ: ಭೂಮಿಯ ಏಕೈಕ ನೈಸರ್ಗಿಕ ಉಪಗ್ರಹವಾದ ಚಂದ್ರನಿಗೂ ಭೂಮಿಗೆ ನಂಟು. ಚಂದ್ರನಲ್ಲಿರುವ ವಾತಾವರಣ, ಅಲ್ಲಿನ ಮಾಹಿತಿಯ ಬಗ್ಗೆ ವ್ಯಾಪಕವಾಗಿ ಸಂಸೋಧನೆ ಜರುಗುತ್ತಿದ್ದು, ಈ ನಿಟ್ಟನಿಲ್ಲಿ ಭಾರತ ಇತ್ತೀಚಿಗೆ ಚಂದ್ರಯಾನ-3ರ ಮೂಲಕ ಭಾರತ ಬಾಹ್ಯಾಕಾಶ ಕ್ಷೇತ್ರದಲ್ಲಿ ಮೈಲಿಗಲ್ಲನ್ನು ಸ್ಥಾಪಿಸಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆ, ಶಿವಾ ವಿದ್ಯಾ ಮಂದಿರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಏರ್ಪಡಿಸಲಾಗಿದ್ದ ‘ವಿಶ್ವ ಚಂದ್ರ’ ದಿನಾಚರಣೆಯಲ್ಲಿ ಮಾತನಾಡಿದ ಅವರು, ಮಾನವ ಪ್ರಥಮ […]

Continue Reading