ಕನ್ನಡವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲು ಶ್ರಮಿಸಿದ ಗೋಕಾಕ್: ಎಚ್.ಬಿ ಪಾಟೀಲ

ಕಲಬುರಗಿ: ಕವಿ, ಕಾದಂಬರಿಕಾರ, ವಾಗ್ಮಿ, ವಿಮರ್ಶಕ, ಶಿಕ್ಷಣ ತಜ್ಞ, ಪ್ರಾಂಶುಪಾಲ, ಉಪ ಕುಲಪತಿ, ಸಾಂಸ್ಕೃತಿಕ ರಾಯಭಾರಿ, ಕನ್ನಡಪರ ಚಳುವಳಿಗಾರರಾಗಿ ಹೀಗೆ ಹಲವು ವಿಧಗಳಲ್ಲಿ ಕನ್ನಡಕ್ಕಾಗಿ ಸೇವೆ ಸಲ್ಲಿಸಿ, ಕನ್ನಡವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲು ಶ್ರಮಿಸಿದ ಡಾ.ವಿ.ಕೃ ಗೋಕಾಕ್‌ರ ಕೊಡುಗೆ ಅಮೋಘವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಡಬರಾಬಾದ ಕ್ರಾಸ್ ಸಮೀಪದ ಅಲ್ಲಮ ಪ್ರಭು ನಗರದಲ್ಲಿರುವ ನೀಲಕಂಠೇಶ್ವರ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ರಾಜ್ಯೋತ್ಸವ ಮಾಸಾಚರಣೆಯ ಸರಣಿ ಉಪನ್ಯಾಸ-11ರಲ್ಲಿ ‘ಕನ್ನಡಕ್ಕೆ ಗೋಕಾಕರ […]

Continue Reading

ವಿದ್ಯಾರ್ಥಿಗಳು ಪಠ್ಯದ ಜೊತೆ ಆಟೋಟಗಳಲ್ಲಿ ಭಾಗವಹಿಸಿ: ಅಲ್ಲಮ ಪ್ರಭು ಪಾಟೀಲ್

ಕಲಬುರಗಿ: ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಮಾತ್ರ ಸೀಮಿತವಾಗಬಾರದು. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆ, ಆಟೋಟಗಳಲ್ಲಿ ಭಾಗವಹಿಸಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಮತ್ತು ಮಾನಸಿಕ ವ್ಯಾಯಾಮ ದೊರೆಯುತ್ತದೆ ಎಂದು ಶಾಸಕ ಅಲ್ಲಮ ಪ್ರಭು ಪಾಟೀಲ್ ಹೇಳಿದರು. ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಪದವಿ ಪೂರ್ವ ಕಾಲೇಜುಗಳ ರಾಜ್ಯ ಮಟ್ಟದ ಬಾಲಕರ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆಯಲ್ಲಿ ಭಾಗವಹಿಸಿ, ನಮ್ಮ ನಾಡು, ದೇಶದ ಕೀರ್ತಿ ತರಬೇಕು ಎಂದರು. ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲವು […]

Continue Reading

ಸ್ವತಂತ್ರ ಭಾರತದ ಅತ್ಯಂತ ದುರ್ಬಲ ಗೃಹ ಸಚಿವ ಅಮಿತ್ ಶಾ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸ್ವತಂತ್ರ ಭಾರತದ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವರು ಯಾರಾದರೂ ಇದ್ದರೆ ಅದು ಅಮಿತ್ ಶಾ ಎಂದು ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವತಂತ್ರ ಭಾರತದಲ್ಲಿ ಅತ್ಯಂತ ದುರ್ಬಲ, ಅಸಮರ್ಥ ಗೃಹ ಸಚಿವರು ಯಾರಾದರೂ ಇದ್ದರೆ ಅದು ಅಮಿತ್ ಶಾ. ಪುಲ್ವಾಮಾ ಆಯ್ತು, ಮಣಿಪುರ ಆಯ್ತು, ಪಹಲ್ಗಾಮ್, ಇದೀಗ ದೆಹಲಿ ಹೀಗೆ ಸಾಕಷ್ಟು ಆಗಿದೆ. ಚುನಾವಣಾ ಭಾಷಣದಲ್ಲಿ ಬಾಂಗ್ಲಾದೇಶದವರು ಒಳಗೆ ಬರ್ತಾರೆ ಅಂತಾರೆ, ಆದರೆ ಈಗ ಆಡಳಿತ ನಡೆಸುತ್ತಿರುವವರು ಯಾರು ? […]

Continue Reading

ಸರ್ಕಾರದಿಂದ ಹೈ ಅಲರ್ಟ್: ಲಕ್ಷಾಂತರ ಆಂಡ್ರಾಯ್ಡ್ ಫೋನ್‌ಗಳು ಹ್ಯಾಕ್ ಆಗುವ ಸಾಧ್ಯತೆ

ಬೆಂಗಳೂರು: ದೇಶದ ಲಕ್ಷಾಂತರ ಆಂಡ್ರಾಯ್ಡ್ ಬಳಕೆದಾರರಿಗೆ CERT-In ಹೊಸ ಎಚ್ಚರಿಕೆ ನೀಡಿದೆ. ಭಾರತ ಸರ್ಕಾರದ ಸೈಬರ್ ಭದ್ರತಾ ತಂಡ (CERT-In) ಆಂಡ್ರಾಯ್ಡ್ ಬಳಕೆದಾರರಿಗೆ ಪ್ರಮುಖ ಸೈಬರ್ ದಾಳಿಯ ಬೆದರಿಕೆಯ ಬಗ್ಗೆ ಎಚ್ಚರಿಕೆ ನೀಡಿದೆ. ಆಂಡ್ರಾಯ್ಡ್ ಫೋನ್‌ಗಳಲ್ಲಿ ಹಲವಾರು ದುರ್ಬಲತೆಗಳು ಕಂಡುಬಂದಿವೆ, ಇದು ಹ್ಯಾಕರ್‌ಗಳಿಗೆ ನಮ್ಮ ಫೋನನ್ನು ವಶಕ್ಕೆ ಪಡೆಯಲು ಅವಕಾಶ ಮಾಡಿಕೊಡುತ್ತದೆ. ಇತ್ತೀಚೆಗೆ ನೀಡಲಾದ ಈ ಸಲಹೆಯಲ್ಲಿ, ಸರ್ಕಾರಿ ಸಂಸ್ಥೆಯು ಹ್ಯಾಕರ್‌ಗಳು ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಂನಲ್ಲಿರುವ ಈ ದುರ್ಬಲತೆಗಳನ್ನು ಬಳಸಿಕೊಳ್ಳಬಹುದು ಮತ್ತು ವಂಚನೆಗಳನ್ನು ನಡೆಸಬಹುದು ಎಂದು ಹೇಳಿದೆ. […]

Continue Reading

ನಾಡು-ನುಡಿಗೆ ಡಾ.ಕೆ.ಶಿವರಾಮ ಕಾರಂತರ ಕೊಡುಗೆ ಅಪಾರ

ಸುದ್ದಿ ಸಂಗ್ರಹ ಕಲಬುರಗಿ ಕಾದಂಬರಿಕಾರ, ಪರಿಸರವಾದಿ, ಪ್ರಗತಿಶೀಲ ಚಿಂತಕ, ಯಕ್ಷಗಾನ ತಜ್ಞ, ಸ್ವಾತಂತ್ರ್ಯ ಹೋರಾಟಗಾರ, ಚಿತ್ರ ನಿರ್ದೇಶಕ ಹೀಗೆ ಹತ್ತು ಹಲವು ಕ್ಷೇತ್ರಗಳ ಮೂಲಕ ಜ್ಞಾನಪೀಠ ಪ್ರಶಸ್ತಿ ಪುರಷ್ಕೃತ ಮೇರು ಸಾಹಿತಿ ಡಾ.ಕೆ.ಶಿವರಾಮ ಕಾರಂತ ಅವರು ನಾಡಿಗೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ್ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಕನ್ನಡ ರಾಜ್ಯೋತ್ಸವ ಮಾಸಾಚರಣೆ ಸರಣಿ […]

Continue Reading

ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ

ಕಲಬುರಗಿ: ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ಸಹಯೋಗದೊಂದಿಗೆ ಸೋಮವಾರ ಜರುಗಿದ “ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ”ಯಲ್ಲಿ ಕಾನೂನು ಪಾಲನೆಯ ಪ್ರತಿಜ್ಞೆ ವಿಧಿ ಸ್ವೀಕರಿಸಲಾಯಿತು. ಈ ಸಂದರ್ಭದಲ್ಲಿ ಪ್ರಾಚಾರ್ಯ ರವೀಂದ್ರಕುಮಾರ ಸಿ. ಬಟಗೇರಿ, ಎನ್.ಎಸ್.ಎಸ್ ಅಧಿಕಾರಿ ಎಚ್.ಬಿ ಪಾಟೀಲ್, ಉಪನ್ಯಾಸಕರಾದ ಅಸ್ಮಾ ಜಬೀನ್, ಸುವರ್ಣಲತಾ ಭಂಡಾರಿ, ಮಲ್ಲಿಕಾರ್ಜುನ ದೊಡ್ಡಮನಿ, ಲಿಂಗರಾಜ ಹಿರೇಗೌಡ, ಪ್ರದಸ ಪ್ರೇಮಾ ಸುರಪುರ, ಅತಿಥಿ ಉಪನ್ಯಾಸಕರಾದ ವೀರೇಶ ಸಾಹು ಗೋಗಿ, ನಾರಾಯಣಸ್ವಾಮಿ, ಅಲಿಯಾ ತಬಸ್ಸುಮ್, ಶಿವಶರಣಪ್ಪ […]

Continue Reading

ಕಲಬುರಗಿ: ವಿವಿಧ ಸಂಘಟಕರಿಗೆ ಗೌರವ ಸತ್ಕಾರ

ಕಲಬುರಗಿ: ನಗರದ ಎಸ್.ಎಂ ಪಂಡಿತ ರಂಗ ಮಂದಿರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಕಲಿಕಾ ಸ್ನೇಹಿ ಶಿಕ್ಷಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಿತು. ನಗರದ ಎಸ್.ಎಂ ಪಂಡಿತ ರಂಗ ಮಂದಿರದಲ್ಲಿ ಸುಜಯ್ ಎಜುಕೇಶನಲ್ & ವೆಲ್ಪೇರ್ ಸೊಸೈಟಿ’ ವತಿಯಿಂದ ರವಿವಾರ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ‘ಕಲಿಕಾ ಸ್ನೇಹಿ ಶಿಕ್ಷಕ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ವಿವಿಧ ಸಂಘಟನೆಯವರಾದ ಎಚ್.ಬಿ ಪಾಟೀಲ್, ನರಸಪ್ಪ ಬಿರಾದಾರ ದೇಗಾಂವ, ನರಸಪ್ಪ ರಂಗೋಲಿ, ಎಂ.ಬಿ ನಿಂಗಪ್ಪ, ದೇವೇಂದ್ರಪ್ಪ ಗಣಮುಖಿ, ಅಪ್ಪಾಸಾಬ ತೀರ್ಥೆ, ಭಾನುಕುಮಾರ ಗಿರೇಗೋಳ್ […]

Continue Reading

ಕಲಬುರಗಿ ಕಾರ್ಯನಿರತ ಪತ್ರಕರ್ತರ ಸಂಘ: 4ನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಬಾಬುರಾವ್ ಯಡ್ರಾಮಿ ಆಯ್ಕೆ

ಕಲಬುರಗಿ: ಕಾರ್ಯನಿರತ ಪತ್ರಕರ್ತರ ಸಂಘದಚುನಾವಣೆಯಲ್ಲಿ ಬಾಬುರಾವ್ ಯಡ್ರಾಮಿ 4ನೇ ಬಾರಿಗೆ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. 170 ಮತಗಳನ್ನು ಪಡೆಯುವ ಮೂಲಕ ಬಾಬುರಾವ್‌ ಯಡ್ರಾಮಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯ ಕಾರ್ಯಕಾರಣಿ ಸದಸ್ಯರಾಗಿ ರಾಜು ಉದನೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಭೀಮಾಶಂಕರ್ ಫಿರೋಜಾಬಾದ, ಜಿಲ್ಲಾ ಉಪಾಧ್ಯಕ್ಷರಾಗಿಅರುಣಕುಮಾರ್ ಕದಂ, ಶಿವರಂಜನ್ ಸತ್ಯಂಪೇಟೆ,ಹನಮಂತರಾವ್ ಭೈರಮಡಗಿ, ಜಿಲ್ಲಾ ಕಾರ್ಯದರ್ಶಿಯಾಗಿ ವಾಸುದೇವ್ ಚವ್ಹಾಣ, ಅನೀಲ್ ಸ್ವಾಮಿ, ಬಾಬುರಾವ್‌ ಕೋಬಾಳ ಮತ್ತು ಜಿಲ್ಲಾ ಖಜಾಂಚಿಯಾಗಿ ಅಶೋಕ ಕಪನೂರ ಆಯ್ಕೆಯಾಗಿದ್ದಾರೆ. ಜಿಲ್ಲಾ ಕಾರ್ಯಕಾರಣಿ ಸದಸ್ಯರಾಗಿ […]

Continue Reading

ತೊಗರಿ ಕಾಯಿ ಕೊರಕದ ಸಮಗ್ರ ಹತೋಟಿ ಮಾಡಿ

ಕಲಬುರಗಿ: ಅಧಿಕ ಮಳೆಯಾಗಿದ್ದರಿಂದ ಕೆಲವೆಡೆ ತೊಗರಿ ಬೆಳೆ ನಾಶವಾಗಿದೆ. ಇನ್ನೂ ಕೆಲವೆಡೆ ಬೆಳೆಗೆ ಗೊಡ್ಡು, ಹಳದಿ ಬಣ್ಣಕ್ಕೆ ತಿರುಗಿರುವುದು, ಕಪ್ಪು ಚುಕ್ಕೆ ರೋಗದ ಜೊತೆಗೆ ಕೀಟಗಳ ಬಾಧೆ ಕಂಡುಬರುತ್ತಿದೆ ಎಂದು ನಿವೃತ್ತ ಕೃಷಿ ಅಧಿಕಾರಿ ಶಿವಯೋಗೆಪ್ಪಾ ಎಸ್. ಬಿರಾದಾರ ರೈತರಿಗೆ ಸಲಹೆ ನೀಡಿದರು.  ಜಿಲ್ಲೆಯ ಸುಂಟನೂರ ಗ್ರಾಮದ ಹೊಲವೊಂದರಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಸಾಯಂಕಾಲ ಜರುಗಿದ ‘ತೊಗರಿ ಬೆಳೆ ಕ್ಷೇತ್ರ ಭೇಟಿ, ವೀಕ್ಷಣೆ ಹಾಗೂ ರೈತರಿಗೆ ಸಲಹೆಗಳು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೀಟಗಳ […]

Continue Reading

ಫಿಟ್ಸ್ ಬಂದು ರಸ್ತೆಯಲ್ಲಿ ಒದ್ದಾಡುತ್ತಿದ್ದ ಬಾಲಕನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ ಖಂಡ್ರೆ

ಬೀದರ್: ಫಿಟ್ಸ್ ಬಂದು ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಬಾಲಕನನ್ನು ಆಸ್ಪತ್ರೆಗೆ ಸೇರಿಸಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಮಾನವೀಯತೆ ಮೆರೆದಿದ್ದಾರೆ. ಬೀದರ್‌ನ ಹೊರವಲಯದ ಶಾಪೂರ್ ಗೇಟ್ ಬಳಿ ಈ ಘಟನೆ ನಡೆದಿದೆ. ಸಚಿವ ಈಶ್ವರ್ ಖಂಡ್ರೆ ಹೈದರಾಬಾದ್ ಏರ್‌ಪೋರ್ಟ್‌ಗೆ ಹೋಗುತ್ತಿದ್ದರು, ಈ ವೇಳೆ ರಸ್ತೆಯಲ್ಲಿ ಫಿಟ್ಸ್ ಬಂದು ಬಾಲಕನೋರ್ವ ಸೈಕಲ್ ಮೇಲಿಂದ ಬಿದ್ದು ಒದ್ದಾಡುತ್ತಿದ್ದ. ಇದನ್ನು ಗಮನಿಸಿದ ಸಚಿವರು ಕಾರು ನಿಲ್ಲಿಸಿ, ಬಾಲಕನನ್ನು ಕೂಡಲೇ ಆಟೋದಲ್ಲಿ ಬ್ರೀಮ್ಸ್ ಆಸ್ಪತ್ರೆಗೆ ಕಳಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ […]

Continue Reading