ಸಗರ ನಾಡಿನ ಅನರ್ಘ್ಯ ರತ್ನ ಕಡಿಕೋಳ ಮಡಿವಾಳಪ್ಪ: ಮುಡುಬಿ ಗುಂಡೇರಾವ

ಕಲಬುರಗಿ: ತತ್ವಪದಕಾರ ಕಡಿಕೋಳ ಮಡಿವಾಳಪ್ಪನವರು ಬಿದನೂರಲ್ಲಿ ಜನಿಸಿ, ಚಿಣಮಗೇರಾದಲ್ಲಿ ತತ್ವಪದ ರಚಿಸಿ, ಕಡಕೋಳದಲ್ಲಿ ನೆಲೆನಿಂತು ತತ್ವ ಪದಗಳ ಶಿಖರವಾಗಿದ್ದಾರೆ. ಅವರು ಸಗರ ನಾಡಿನ ಅನರ್ಘ್ಯ ರತ್ನವಾಗಿದ್ದಾರೆ ಎಂದು ಸಂಶೋಧಕ ಸಾಹಿತಿ-ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಅಫಜಲಪುರ ತಾಲೂಕಿನ ಬಿದನೂರು ಗ್ರಾಮದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-23ರಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಕಡಿಕೋಳ ಮಡಿವಾಳಪ್ಪನವರು ಸಾವಿರಾರು ತತ್ವಪದಗಳನ್ನು ರಚಿಸುವ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕಲ್ಯಾಣ ಕರ್ನಾಟಕದ […]

Continue Reading

ಸಿಗಂದೂರು ಸೇತುವೆ ವಿಶೇಷತೆಗಳೇನು ? ಕೇಬಲ್ ಬ್ರಿಡ್ಜ್​’ನ ಹಲವು ಪ್ರಯೋಜನ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಶರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಅಂಬಾರಗೋಡ್ಲು – ಕಳಸವಳ್ಳಿ – ಸಿಗಂಧೂರು ಸಂಪರ್ಕಿಸುವ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆಯಾಗುತ್ತಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಸೇತುವೆಯನ್ನು ಲೋಕಾರ್ಪಣೆಗೊಳಿಸುತ್ತಿದ್ದಾರೆ. ಸುಮಾರು 2.1 ಕಿಲೋಮೀಟರ್​​ ಉದ್ದವಿರುವ ಈ ಸೇತುವೆ ದೇಶದ ಎರನೇ ಅತಿದೊಡ್ಡ ಕೇಬಲ್ ಆಧಾರಿತ ಸೇತುವೆಯಾಗಿದೆ. ಸಿಂಗದೂರು ಸೇತುವೆಯ ವಿಶೇಷತೆಗಳು ಮತ್ತು ಪ್ರಯೋಜನಗಳು

Continue Reading

UPI ಬಳಕೆಯಲ್ಲಿ ಭಾರತ ಇಡಿ ಜಗತ್ತಿಗೆ ಮಾದರಿ: ಅಂತರರಾಷ್ಟ್ರೀಯ ಹಣಕಾಸು ನಿಧಿ ಶ್ಲಾಘನೆ

ಭಾರತವು ತ್ವರಿತ ಪಾವತಿ ವ್ಯವಸ್ಥೆಯಲ್ಲಿ ಇಡಿ ಜಗತ್ತಿಗೆ ಮಾದರಿಯಾಗಿದ್ದು, ನಗದು ಬಳಕೆಯನ್ನು ಕಡಿಮೆ ಮಾಡುವಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಮೆಚ್ಚುಗೆ ವ್ಯಕ್ತಪಡಿಸಿದೆ. ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ (ಯುಪಿಐ) ಮೂಲಕ ಪ್ರತಿ ತಿಂಗಳು 18 ಶತಕೋಟಿ ವಹಿವಾಟುಗಳು ನಡೆಯುತ್ತಿವೆ. ಇದರ ಪರಿಣಾಮವಾಗಿ ನಗದು ಬಳಕೆ ಗಣನೀಯವಾಗಿ ಕುಸಿತಕ್ಕೊಳಗಾಗಿದೆ. ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಉತ್ತೇಜಿಸಲು ಸರ್ಕಾರ ಕೈಗೊಂಡ ಕ್ರಮಗಳು ಅತ್ಯಂತ ಯಶಸ್ವಿಯಾಗಿದ್ದು, ನಗದು ರಹಿತ ವಹಿವಾಟುಗಳಿಗೆ ಉತ್ತೇಜನ ನೀಡಿವೆ ಎಂದು ಐಎಂಎಫ್ ಅಭಿಪ್ರಾಯಪಟ್ಟಿದೆ. […]

Continue Reading

ಇನ್ನುಮುಂದೆ ಸರ್ಕಾರಿ ಬಸ್ಸಿನಲ್ಲಿ ಪ್ರಾಣಿಗಳ ಜೊತೆಗೆ ಟಯರ್‌, ಫ್ರಿಡ್ಜ್‌, ವಾಷಿಂಗ್‌ ಮೆಷಿನ್‌ ಸಾಗಿಸಬಹುದು, ಯಾವುದಕ್ಕೆ ಎಷ್ಟು ದರ ?

ಬೆಂಗಳೂರು: ಇನ್ನುಮುಂದೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಾಣಿಗಳು, ಫ್ರಿಡ್ಜ್‌, ವಾಷಿಂಗ್‌ ಮೆಷಿನ್‌ ಸಹ ಸಾಗಿಸಬಹುದು. ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿ ಈಗ ಆದಾಯ ಸಂಗ್ರಹಿಸಲು ನಾನಾ ದಾರಿ ಹುಡುಕುತ್ತಿರುವ ಕೆಎಸ್‌ಆರ್‌ಟಿಸಿ ಲಗೇಜ್‌ಗೆ ಹೊಸ ದರ ನಿಗದಿ ಮಾಡಿದೆ. ಗರಿಷ್ಠ 30 ಕೆಜಿ ಮೇಲೆ ಲಗೇಜ್‌ ಇದ್ದರೆ ಕಡ್ಡಾಯವಾಗಿ ಹಣವನ್ನು ಪಾವತಿ ಮಾಡಲೇಬೇಕಾಗುತ್ತದೆ. ನಾಯಿಯನ್ನ ಚೈನಿನಲ್ಲಿ ಬಿಗಿದು ಕಾಳಜಿಯೊಂದಿಗೆ ಬಸ್ಸಿನಲ್ಲಿ ಸಾಗಿಸಬಹುದು. ವಯಸ್ಕರು 30 ಕೆಜಿ, ಮಕ್ಕಳು 15 ಕೆಜಿ ತೂಕದ ಲಗ್ಗೇಜ್ ಬಸ್ಸಿನಲ್ಲಿ ಕೊಂಡೊಯ್ಯಬಹುದು. ಪ್ರಯಾಣಿಕರು 4 ಅಥವಾ […]

Continue Reading

ಕುಂತಳ ನಾಡಿನ ಕಿರೀಟ ಭೈರಾಮಡಗಿ: ಮುಡುಬಿ ಗುಂಡೇರಾವ

ಕಲಬುರಗಿ: ಪ್ರಾಚೀನ ಕರ್ನಾಟಕದ ಆಡಳಿತದ ಘಟಕವಾಗಿದ್ದ ಕುಂತಳ ನಾಡಿನ ಪ್ರಮುಖ ಧಾರ್ಮಿಕ, ಶೈಕ್ಷಣಿಕ, ವಾಣಿಜ್ಯ ಕೇಂದ್ರವಾಗಿ ಮೆರೆದ ಭೈರಾಮಡಗಿಯು ಕುಂತಳ ನಾಡಿನ ಕಿರೀಟವಾಗಿ ಇತಿಹಾಸದಲ್ಲಿ ವಿಜ್ರಂಭಿಸಿದೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಹೇಳಿದರು. ಜಿಲ್ಲೆಯ ಅಫಜಲಪುರ ತಾಲೂಕಿನ ಭೈರಾಮಡಗಿಯ ಐತಿಹಾಸಿಕ ಕಾಲಭೈರೇಶ್ವರ ದೇವಾಲಯದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-22ರಲ್ಲಿ ವಿಶೇಷ ಉಪನ್ಯಾಸ ನೀಡುತ್ತ ಮಾತನಾಡಿದ ಅವರು, ಗ್ರಾಮದಲ್ಲಿ ದೊರೆಯುವ ವೀರಗಲ್ಲುಗಳು, ಮಹಾಸತಿಗಲ್ಲುಗಳು, ಶಿಲ್ಪಗಳು, ಚದುರಿಬಿದ್ದ ದೇವಾಲಯದ ಸ್ಥಂಭಗಳು, […]

Continue Reading

ಮದುವೆಯಾದ ಮೂರೇ ತಿಂಗಳಲ್ಲಿ ಗಂಡನನ್ನು ಕೃಷ್ಣಾ ನದಿಗೆ ತಳ್ಳಿದ ಪತ್ನಿ

ರಾಯಚೂರು: ತಾಲೂಕಿನ ಗುರ್ಜಾಪುರ ಬಳಿಯ ಕೃಷ್ಣಾ ನದಿಯ ಬ್ರಿಜ್‌ ಕಂ ಬ್ಯಾರೇಜ್‌ ಮೇಲೆ ಫೋಟೋ ತೆಗೆಸಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಆತನ ಪತ್ನಿಯೇ ಶನಿವಾರ ನದಿಗೆ ತಳ್ಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೂರು ತಿಂಗಳ ಹಿಂದೆಯಷ್ಟೆ ಮದುವೆಯಾಗಿರುವ ನವದಂಪತಿ ಸೇತುವೆ ಮಾರ್ಗದಿಂದ ತೆರಳುವ ಸಂದರ್ಭದಲ್ಲಿ ಬ್ಯಾರೇಜ್‌ ಮೇಲೆ ಮೇಲೆ ನಿಂತು ಫೋಟೋ ತೆಗೆಸಿಕೊಳ್ಳಲು ನಿರ್ಧರಿಸಿದ್ದಾರೆ. ಮೊದಲು ಪತ್ನಿಯ ಫೋಟೋ ತೆಗೆದ ಪತಿ ಬಳಿಕ ತನ್ನ ಫೋಟೋ ತೆಗೆಯುವಂತೆ ಪತ್ನಿಗೆ ಹೇಳಿದ್ದಾನೆ. ಸೇತುವೆ ಕಟ್ಟೆಯ ಮೇಲೆ ನಿಲ್ಲಿಸಿ ಸಮೀಪದಿಂದ ಪೋಟೋ […]

Continue Reading

ಕನ್ನಡ ನಾಡಿಗೆ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ: ಎಚ್.ಬಿ ಪಾಟೀಲ

ಕಲಬುರಗಿ: ಕನ್ನಡ ನಾಡಿಗೆ ತನ್ನದೆಯಾದ ಭವ್ಯವಾದ ಇತಿಹಾಸ, ಪರಂಪರೆ ಇದೆ. ನಾನಾ ಭಾಗಗಳಾಗಿ ಹರಿದು ಹಂಚಿ ಹೋಗಿದ್ದ ನಾಡನ್ನು, ಅಖಂಡವಾಗಿ ಏಕೀಕರಣಗೊಳಿಸಲು ನಿರಂತರವಾಗಿ ಶ್ರಮಿಸಿದ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಡಬರಾಬಾದ ಕ್ರಾಸ್ ಸಮೀಪದ ಪ್ರಭುದೇವ ನಗರದಲ್ಲಿರುವ ನೀಲಕಂಠೇಶ್ವರ ಪ್ರಾಥಮಿಕ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘ಆಲೂರು ವೆಂಕಟರಾಯರ 145ನೇ ಜನ್ಮ ದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಅವರು, […]

Continue Reading

ಅತಿಸಾರ, ಬೇಧಿ ತಡೆಗಟ್ಟಲು ಜಿಂಕ್ ಮತ್ತು ಓಆರ್‌ಎಸ್ ನೀಡಿ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಮಳೆಗಾಲ ಆರಂಭವಾಗಿದ್ದು ವಾತಾವರಣದಲ್ಲಿ ಬದಲಾವಣೆಯಿಂದ ಮಕ್ಕಳಲ್ಲಿ ಕೆಲ ಸಮಸ್ಯೆಗಳು ಕಂಡುಬುರುತ್ತವೆ. ಅತಿಸಾರ, ಭೇದಿ, ಅಶಕ್ತತೆ, ವಾಂತಿಯಂತಹ ಮುಂತಾದ ಕೆಲ ಸಾಮಾನ್ಯ ಕಾಯಿಲೆಗಳು ಬರುತ್ತವೆ. ಅಂತಹ ಮಕ್ಕಳಿಗೆ ಜಿಂಕ್ ಮಾತ್ರೆ ಮತ್ತು ಓಆರ್‌ಎಸ್ ದ್ರಾವಣವನ್ನು ನೀಡುವ ಮೂಲಕ ಅತಿಸಾರ, ಬೇಧಿ ತಡೆಗಟ್ಟಬಹುದಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆರೋಗ್ಯ ಅಭಿಯಾನ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗ ಇವಗಳ ವತಿಯಿಂದ ಜೂನ್-16 […]

Continue Reading

ರಾವೂರ: ಶಾಲಾ ಚುನಾವಣೆಯಲ್ಲಿ ಗೆದ್ದು ಬೀಗಿದ ವಿದ್ಯಾರ್ಥಿ ನಾಯಕರು

ಚಿತ್ತಾಪುರ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಡೆಯುವ ಚುನಾವಣೆ ಹಾಗೂ ಮತದಾನದ ಅರಿವು ಮೂಡಿಸಲು ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಹಮ್ಮಿಕೊಳ್ಳಲಾದ ಶಾಲಾ ಸಂಸತ್ ಚುನಾವಣೆಯಲ್ಲಿ ಮಕ್ಕಳು ಗೆದ್ದು ಗೆಲುವಿನ ನಗೆ ಬೀರಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಮಕ್ಕಳ ಅಣಕು ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ಮತಯಂತ್ರದಲ್ಲಿ ಚಲಾಯಿಸಿ ತರಗತಿ ನಾಯಕರನ್ನು ಆಯ್ಕೆ ಮಾಡಿಕೊಂಡರು. ಒಟ್ಟು 10 ಮತ ಕೇಂದ್ರಗಳಲ್ಲಿ ನಡೆದ ಚುನಾವಣೆಯಲ್ಲಿ 520 ಮತದಾರರ ಪೈಕಿ 500 ಮಕ್ಕಳು ತಮ್ಮ ಮತ ಚಲಾಯಿಸಿದರು. ಶೇ.96 ರಷ್ಟು […]

Continue Reading

6 ಶಾಲೆಯಲ್ಲಿ ಒಬ್ಬ,12 ಕಡೆ ಇಬ್ಬರು ವಿದ್ಯಾರ್ಥಿಗಳು

ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳ ಸಂಖ್ಯೆ ಐದಕ್ಕಿಂತ ಕಡಿಮೆ ಇರುವ ಸರ್ಕಾರಿ ಶಾಲೆಗಳನ್ನು ಪಕ್ಕದ ಸರ್ಕಾರಿ ಶಾಲೆಗಳಿಗೆ ವಿಲೀನ ಮಾಡಬೇಕು ಎನ್ನುವ ವಿಚಾರ ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದೆ. ಜಿಲ್ಲೆಯಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ಸುಮಾರು 100ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿವೆ. ಅಚ್ಚರಿ ಎಂದರೆ ಕೇವಲ ಒಬ್ಬ ಮತ್ತು ಇಬ್ಬರು ವಿದ್ಯಾರ್ಥಿಗಳನ್ನು ಹೊಂದಿರುವ 18 ಸರ್ಕಾರಿ ಪ್ರಾಥಮಿಕ ಶಾಲೆಗಳು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಈಗಾಗಲೆ ಈ ಶಾಲೆಗಳು ಕಾರ್ಯಾರಂಭವಾಗಿವೆ. ಜಿಲ್ಲೆಯ 6 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಬ್ಬರು ಮತ್ತು 12 […]

Continue Reading