KSRTC ಬಸ್‌ಗೆ ಏಕಾಏಕಿ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಪಾರು

ಸುದ್ದಿ ಸಂಗ್ರಹ ಚಿಕ್ಕಬಳ್ಳಾಪುರಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸರ್ಕಾರಿ ಬಸ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಬಸ್ ಸಂಪೂರ್ಣ ಸುಟ್ಟುಹೋದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಎಂ.ಗೊಲ್ಲಹಳ್ಳಿ ಗ್ರಾಮದ ಬಳಿ ನಡೆದಿದೆ. ಅದೃಷ್ಟವಶಾತ್ ಚಾಲಕನ ಸಮಯಪ್ರಜ್ಞೆಯಿಂದ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೌರಿಬಿದನೂರು ಕೆಎಸ್‌ಆರ್‌ಟಿಸಿ ಘಟಕಕ್ಕೆ ಸೇರಿದ ಬಸ್ ನಗರದಿಂದ ಮರಿಪಡಿಗು ಗ್ರಾಮದತ್ತ ತೆರಳುತ್ತಿತ್ತು. ಎಂ.ಗೊಲ್ಲಹಳ್ಳಿ ಗ್ರಾಮದ ಸಮೀಪ ಬರುತ್ತಿದ್ದ ವೇಳೆ ಬಸ್‌ನಲ್ಲಿ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ತಕ್ಷಣ ಬಸ್’ನ್ನು […]

Continue Reading

ಕರ್ನಾಟಕದ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ: ದ್ವಿಚಕ್ರ ವಾಹನಗಳಿಗೆ 80 ರೂ. ದರ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ವಾಹನಗಳ ಮಾಲಿನ್ಯ ಪರೀಕ್ಷಾ ಶುಲ್ಕ ಹೆಚ್ಚಳ ಮಾಡಲಾಗಿದೆ. ಸಾರಿಗೆ ಇಲಾಖೆ ದರ ಏರಿಕೆ ಆದೇಶ ಪ್ರಕಟಿಸಿದೆ. ವಾಯು ಮಾಲಿನ್ಯ ಪರಿವೀಕ್ಷಣಾ ಕೇಂದ್ರಗಳಲ್ಲಿ ಪಿಯುಸಿ ಪತ್ರ ನೀಡುವಾಗ ನಡೆಯುವ ಪರೀಕ್ಷಾ ಶುಲ್ಕದಲ್ಲಿ ಪರಿಷ್ಕರಣೆ ಆಗಿದ್ದು, ಇಂದಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ಯಾವುದಕ್ಕೆ ಎಷ್ಟು ದರ ?ದ್ವಿಚಕ್ರ ವಾಹನ: 65 ರೂ.ನಿಂದ 80 ರೂ.ಗೆ ಏರಿಕೆಆಟೋರಿಕ್ಷಾ: 75 ರೂ. – 80 ರೂ.ಪೆಟ್ರೋಲ್, ಎಲ್‌ಪಿಜಿ ಮತ್ತು ಸಿಎನ್‌ಜಿ ಚಾಲಿತ ಕಾರು: 115 ರೂ. – […]

Continue Reading

ವಾಡಿ: ಸಂಗೊಳ್ಳಿ ರಾಯಣ್ಣ ಜಯಂತಿ ಆಚರಣೆ

ಸುದ್ದಿ ಸಂಗ್ರಹ ವಾಡಿ ಶೌರ್ಯ, ಪರಾಕ್ರಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಯೊಬ್ಬರಿಗೂ ಸ್ಪೂರ್ತಿಯ ಚಿಲುಮೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾ ದೇಶಪ್ರೇಮಿ‌. ಕರುನಾಡಲ್ಲಿ ಬ್ರಿಟಿಷರನ್ನು ನಡುಗಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ 229ನೇ ಜಯಂತ್ಯುತ್ಸವವನ್ನು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ಸಂಗೊಳ್ಳಿ ರಾಯಣ್ಣನ ಹೆಸರು ಕೇಳಿದರೆ ಸಾಕು ಈಗಲೂ ಮೈಯಲ್ಲಿ ದೇಶಭಕ್ತಿಯ ರಕ್ತ ಪುಟಿದೇಳುತ್ತದೆ ಎಂದರು. ರಾಯಣ್ಣ, ಬ್ರಿಟಿಷರ ವಿರುದ್ಧ ರಣಕಹಳೆ ಮೊಳಗಿಸಿದ್ದ ವೀರ ಮಹಿಳೆ ಕಿತ್ತೂರು […]

Continue Reading

ವಾಡಿ: ಬಿಜೆಪಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮ

ಸುದ್ದಿ ಸಂಗ್ರಹ ವಾಡಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಧ್ವಜಾರೋಹಣ ನೇರವೇರಿಸಿ ಮಾತನಾಡಿ ಅವರು, ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುತ್ತಾ, 2047ರ ವೇಳೆಗೆ ಭಾರತವನ್ನು ಸಂಪೂರ್ಣ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಪ್ರತಿಯೊಬ್ಬರು ಸಂಕಲ್ಪ ತೊಡುವ ಸಂದರ್ಭ ಇದಾಗಿದೆ. ಈ ಒಂದು ಸಂಕಲ್ಪದೊಂದಿಗೆ 80ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕಾಗಿದೆ ಎಂದರು. ಬಿಜೆಪಿ ಹಿರಿಯ ಮುಖಂಡ ಬಸವರಾಜ ಪಂಚಾಳ ಮಾತನಾಡಿ,ಭಾರತದ […]

Continue Reading

ದೇಶದ ಅಭಿವೃದ್ಧಿ ಪ್ರತಿಯೊಬ್ಬರ ಜವಾಬ್ದಾರಿ‌

ಸುದ್ದಿ ಸಂಗ್ರಹ ಶಹಾಬಾದ್ವಿದ್ಯಾರ್ಥಿಗಳು ಮತ್ತು ಯುಜನತೆಯಲ್ಲಿ ದೇಶ ಮೊದಲು ಎಂಬ ಭಾವನೆ ಮೂಡಿಸಿ ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರು ತಮ್ಮ ಜವಾಬ್ದಾರಿ ನಿರ್ವಹಿಸುವಂತಾಗಬೇಕು ಎಂದು ಶಾಲೆಯ ಮುಖ್ಯಗುರು ಸಿಸ್ಟರ್ ಲೋವಿಟಾ ಹೇಳಿದರು.‌ ನಗರದ ಎಮ್‌ಸಿಸಿ ಕಾನ್ವೆಂಟ್ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಬಂದ ಕೆಲವು ದಶಕಗಳ ಕಾಲ, ಬಡತನ, ಆರೋಗ್ಯ ಸಂಬಂಧಿತ ಸಮಸ್ಯೆ, ವೈಜ್ಞಾನಿಕ- ತಂತ್ರಜ್ಞಾನದ ಕೊರತೆ ಮತ್ತು ಆಹಾರದ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳಿಂದ ಹಿಂದುಳಿದ ದೇಶವಾಗಿತ್ತು. ಆದರೆ ಇಂದು […]

Continue Reading

ಜೇವರ್ಗಿ: ಪಿಯು ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಸುದ್ದಿ ಸಂಗ್ರಹ ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಾಲಕರ ಸರ್ಕಾರಿ ಪ್ರೌಢ ಶಾಲೆ ಮತ್ತು ಸರ್ಕಾರಿ ಉರ್ದು ಪ್ರೌಢ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಶನಿವಾರ ಸಂಭ್ರಮದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ, ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣನವರ ಜನ್ಮದಿನೋತ್ಸವ ಜರುಗಿತು. ಕಾಲೇಜಿನ ಪ್ರಾಚಾರ್ಯ ಮಲ್ಲಿಕಾರ್ಜುನ ದೊಡ್ಡಮನಿ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು. ಈ ಸಂದರ್ಭದಲ್ಲಿ ಉರ್ದು ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಜಯಶ್ರೀ ಎಸ್.ಪಾಟೀಲ, ಬಾಲಕರ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಶಾಂತಾಬಾಯಿ […]

Continue Reading

ಕಳ್ಳತನಕ್ಕೆ ಹೋದವನು ಮನೆಯಲ್ಲೆ ನಿದ್ದೆಗೆ ಜಾರಿದ ಭೂಪ: ಎದ್ದು ನೋಡಿದಾಗ ಎದುರಿಗೆ ಮನೆ ಮಾಲೀಕರಿದ್ದರು, ಮುಂದೇನಾಯ್ತು ?

ಸುದ್ದಿ ಸಂಗ್ರಹ ಹೈದರಾಬಾದ್‌ಮನೆಗೆ ನುಗ್ಗಬೇಕು, ಚಿನ್ನ, ಬೆಳ್ಳಿ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ದೋಚಬೇಕು, ಮಾಲೀಕರು ವಾಪಸ್ ಬರುವ ಮೊದಲೆ ಅಲ್ಲಿಂದ ಕಾಲ್ಕಿತ್ತಬೇಕು. ಇದು ಕಳ್ಳನೊಬ್ಬನ ಪ್ಲಾನ್ ಆಗಿತ್ತು. ಆದರೆ ಹೈದರಾಬಾದ್‌ನಲ್ಲಿ ನಡೆದ ಈ ಘಟನೆಯಲ್ಲಿ ಕಳ್ಳ ಮನೆಯಿಂದ ಹೊರಗೆ ಹೋಗಲೇ ಇಲ್ಲ. ಬದಲಾಗಿ, ಚಿನ್ನಾಭರಣ ಕದ್ದ ನಂತರ ಆತ ಅದೆ ಕೋಣೆಯಲ್ಲಿ ಆರಾಮವಾಗಿ ನಿದ್ದೆಗೆ ಜಾರಿದ್ದಾನೆ. ಮನೆಗೆ ವಾಪಸ್ ಬಂದ ಕುಟುಂಬಸ್ಥರಿಗೆ ಈ ದೃಶ್ಯ ನೋಡಿ ಶಾಕ್ ಆಗಿದೆ. ಚಿನ್ನಾಭರಣ ಪಕ್ಕದಲ್ಲಿಟ್ಟುಕೊಂಡು ಮಲಗಿದ ಕಳ್ಳಆರೋಪಿ ಅದೆ ಪ್ರದೇಶದ […]

Continue Reading

ಸಾರಿಗೆ ನೌಕರರಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್‌: 170 ಕೋಟಿ ವೇತನ ಹಿಂಬಾಕಿ ಬಿಡುಗಡೆ

ಸುದ್ದಿ ಸಂಗ್ರಹ ಬೆಂಗಳೂರುಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ಕೊಟ್ಟಿದೆ. 170 ಕೋಟಿ ರೂ ವೇತನ ಹಿಂಬಾಕಿಯನ್ನು ಸರ್ಕಾರ ಬಿಡುಗಡೆ ಮಾಡಿದೆ. 26 ತಿಂಗಳ ವೇತನ ಹಿಂಬಾಕಿಯ 1,271 ಕೋಟಿ ರೂ ಕೊಡಬೇಕಿತ್ತು. ಈ ಹಿಂದೆ ಸರ್ಕಾರ 450 ಕೋಟಿ ಬಿಡುಗಡೆ ಮಾಡಿತ್ತು. 821 ಕೋಟಿ ಹಿಂಬಾಕಿಯಲ್ಲಿ ಇಂದು ಮತ್ತೆ 170 ಕೋಟಿ ಬಿಡುಗಡೆ ಮಾಡಿದೆ. ಉಳಿದ 651 ಕೋಟಿಯನ್ನು ಹಂತ ಹಂತವಾಗಿ ಬಿಡುಗಡೆ ಮಾಡುವ ಭರವಸೆ ಸಾರಿಗೆ ಸಚಿವರು ನೀಡಿದ್ದಾರೆ. ಸಾರಿಗೆ ನೌಕರರಿಗೆ ಉಚಿತ […]

Continue Reading

ರಾಜ್ಯದ ರೇಷನ್‌ ಕಾರ್ಡ್‌ದಾರರಿಗೆ ಶಾಕಿಂಗ್‌ ಸುದ್ದಿ: ಇ-ಕೆವೈಸಿ ಮಾಡದಿದ್ರೆ ಕಾರ್ಡ್‌ನಿಂದ ಹೆಸರು ಡಿಲೀಟ್‌

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದ ಪಡಿತರ ಚೀಟಿದಾರರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಸರ್ಕಾರದ ಆದೇಶ ಪಾಲಿಸದಿದ್ದರೆ ರೇಷನ್ ಕಾರ್ಡ್‌ನಲ್ಲಿ ಹೆಸರು ಡಿಲೀಟ್‌ ಆಗಲಿದೆ. ರೇಷನ್‌ ಕಾರ್ಡ್‌ದಾರರು ಇ-ಕೆವೈಸಿ (e-KYC) ಮಾಡಿಸಬೇಕು ಎಂದು ಆರೋಗ್ಯ ಇಲಾಖೆ ಕಳೆದ ತಿಂಗಳು ಆದೇಶ ಮಾಡಿತ್ತು. ಆದರೆ ಒಂದೂವರೆ ತಿಂಗಳಾದ್ರು 10% ಜನ ಕೂಡ ಆದೇಶ ಪಾಲನೆ ಮಾಡಿಲ್ಲ. ರೇಷನ್ ಕಾರ್ಡ್‌ನಲ್ಲಿ ಹೆಸರು ಡಿಲೀಟ್‌ ಆದರೆ ಗ್ಯಾರಂಟಿ ಯೋಜನೆಯ ಸೌಲಭ್ಯ ಕೂಡ ಸಿಗಲ್ಲ. 2.67 ಕೋಟಿ ರೇಷನ್ ಕಾರ್ಡ್ ಪೈಕಿ ಇ-ಕೆವೈಸಿ ಆಗಿರೋದು ಬರಿ […]

Continue Reading

ತಿರಂಗ ನಮ್ಮ ಹೃದಯಬಡಿತ: ವೀರಣ್ಣ ಯಾರಿ

ಸುದ್ದಿ ಸಂಗ್ರಹ ವಾಡಿ ‘ತಿರಂಗ’ ಕೇವಲ ಒಂದು ಧ್ವಜವಲ್ಲ ಇದು ನಮ್ಮೆಲ್ಲರ ಹೃದಯಬಡಿತವಾಗಿದೆ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಹರ ಗರ್ ತಿರಂಗಾ ಅಭಿಯಾನದ ಭಾಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನಮ್ಮೆಲ್ಲರ ಸ್ವಾಭಿಮಾನದ ಹೆಮ್ಮೆ, ಏಕತೆ ಮತ್ತು ತಾಯ್ನಾಡಿನ ಮೇಲಿನ ಪ್ರೀತಿಯನ್ನು‌ ಈ ತಿರಂಗ ಅಭಿಯಾನ ಪ್ರತಿಬಿಂಬಿಸುತ್ತದೆ ಎಂದರು. ಸ್ವಾತಂತ್ರ್ಯೋತ್ಸವದ ಮುನ್ನ ನಾವೆಲ್ಲರೂ ನಮ್ಮಗಳ ನಿವಾಸದ ಮೇಲೆ ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಹಾರಿಸಿ, ನಮ್ಮ ರಾಷ್ಟ್ರಧ್ವಜವನ್ನು ಗೌರವಿಸಲು ಮತ್ತು […]

Continue Reading