ಮಾತೆಯ ಮಮತೆಯ ಸವಿಯುಂಡವರೇ ಧನ್ಯರು: ಡಾ.ಲೀಲಾದೇವಿ ಆರ್ ಪ್ರಸಾದ್

ಸುದ್ದಿ ಸುದ್ದಿ ಸಂಗ್ರಹ ಚಿತ್ತಾಪುರ ಜಗತ್ತಿನಲ್ಲಿ ಮಾತೆಯ ಪ್ರೀತಿಯಷ್ಟು ನಿಷ್ಕಲ್ಮಶವಾದದ್ದು ಮತ್ತೊಂದಿಲ್ಲ. ಅವಳ ಮಮತೆಯ ಸವಿಯನ್ನುಂಡವರೇ ಧನ್ಯರು ಎಂದು ಮಾಜಿ ಮಂತ್ರಿ,ಸ್ವಾತಂತ್ರ್ಯ ಹೋರಾಟಗಾರ್ತಿ ಡಾ.ಲೀಲಾದೇವಿ ಆರ್ ಪ್ರಸಾದ ಹೇಳಿದರು. ತಾಲೂಕಿನ ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದಲ್ಲಿ ಗುರುವಾರ ನಡೆದ ಶ್ರೀಮಠದ ಅನ್ನಪೂರ್ಣೆ, ಲಿಂ.ಗೌರಮ್ಮ ತಾಯಿಯವರ ಪುಣ್ಯೆಸ್ಮರಣೋತ್ಸವ ಹಾಗೂ ಮಾತೋಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಸಕ್ತ ಸಾಲಿನ ಮಾತೋಶ್ರೀ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಜಗತ್ತಿನಲ್ಲಿ ಪ್ರತಿಫಲವನ್ನು ನಿರೀಕ್ಷಿಸದೇ ಪ್ರೀತಿ ಕೊಡುವ ಏಕೈಕ ಜೀವ ಎಂದರೆ […]

Continue Reading

ಚಿನ್ನಾಭರಣ ಕಳ್ಳತನ, ಗಾಂಜಾ ಸಾಗಾಟ: ಪ್ರತ್ಯೇಕ ಪ್ರಕರಣಗಳಲ್ಲಿ 69 ಲಕ್ಷ ಮೌಲ್ಯದ ವಸ್ತು ಜಪ್ತಿ, ನಾಲ್ವರು ಅರೆಸ್ಟ್

ಸುದ್ದಿ ಸಂಗ್ರಹ ಬೀದರ್ ಜಿಲ್ಲೆಯಲ್ಲಿ ಚಿನ್ನಾಭರಣ ಕಳ್ಳತನ, ಗಾಂಜಾ ಸಾಗಾಟದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿ, 69 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಹೈದ್ರಾಬಾದ್‌ನಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. 83 ಕೆ.ಜಿ 670 ಗ್ರಾಂನ ಒಟ್ಟು 41 ಲಕ್ಷ ರೂ.ಗೂ ಅಧಿಕ ಮೌಲ್ಯದ ಗಾಂಜಾ ಜಪ್ತಿ ಮಾಡಿದ್ದಾರೆ. ಓರ್ವ ಆರೋಪಿ ಬಂಧಿಸಿದ್ದು, ಇನ್ನೊರ್ವ ಆರೋಪಿ ಪರಾರಿಯಾಗಿದ್ದಾನೆ. ಈ ಕುರಿತು ಮನ್ನಳ್ಳಿ ಪೊಲೀಸ್ […]

Continue Reading

ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ: 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF

ಸುದ್ದಿ ಸಂಗ್ರಹ ಬೆಂಗಳೂರು ಕರ್ನಾಟಕದ ಹೆಮ್ಮೆಯ ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ ಆರ್‌ಸಿಬಿ ತಂಡದ ಜೊತೆ ಕೆಎಂಎಫ್‌ ಒಪ್ಪಂದ ಮಾಡಿಕೊಂಡಿದೆ. ರನ್‌ ಮಿಷಿನ್‌ ವಿರಾಟ್‌ ಕೊಹ್ಲಿ ಸೇರಿ ಮೂರು ಆಟಗಾರರ ಭಾವಚಿತ್ರ ಬಳಸಲು 1 ವರ್ಷಕ್ಕೆ ಒಪ್ಪಂದ ಮಾಡಿಕೊಂಡಿದ್ದು, ಬರೋಬ್ಬರಿ 4.80 ಕೋಟಿ ರೂ. ಕೆಎಂಎಫ್‌ ವೆಚ್ಚ ಮಾಡಿದೆ. ಆರ್‌ಸಿಬಿಗೆ ಕನ್ನಡಿಗರ ಹೆಮ್ಮೆಯ ನಂದಿನಿ ಬ್ರ್ಯಾಂಡ್‌ ಅಧಿಕೃತ ಡೈರಿ ಪಾರ್ಟ್ನರ್ ಆಗಿದೆ. ಅತಿ ಹೆಚ್ಚಿನ ಫ್ಯಾನ್ಸ್ ಹೊಂದಿರುವ ಆರ್‌ಸಿಬಿ ತಂಡಕ್ಕೆ ಹೆಮ್ಮೆಯ ನಂದಿನಿ ಪಾರ್ಟ್ನರ್‌ ಆಗಿರುವ ಬಗ್ಗೆ ಕೆಎಂಎಫ್ […]

Continue Reading

ಕ್ಷಯರೋಗ ಮುಕ್ತ ಭಾರತ-2030ಕ್ಕೆ ಸಹಕಾರ ಅಗತ್ಯ: ಡಾ.ಅನುಪಮಾ ಕೇಶ್ವಾರ

ಸುದ್ದಿ ಸಂಗ್ರಹ ಕಲಬುರಗಿ ‘ಕ್ಷಯರೋಗ ಮುಕ್ತ ಭಾರತ-2030’ಕ್ಕೆ ಆರೋಗ್ಯ ಇಲಾಖೆಯ ಜೊತೆಗೆ ಸಮುದಾಯದ ಸಹಕಾರ ಅಗತ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿನ ಶಹಾಬಜಾರ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಮಂಗಳವಾರ ಜರುಗಿದ ‘ವಿಶ್ವ ಕ್ಷಯರೋಗ ನಿರ್ಮಲನಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಜಾಗೃತಿಯ ಕರಪತ್ರ ವಿತರಿಸಿ, ಮಾತನಾಡಿದ ಅವರು, ಎರಡು ವಾರ ಅಥವಾ ಹೆಚ್ಚಿನ ಅವಧಿಯ ಕೆಮ್ಮು, ಕಫದ ಜೊತೆಗೆ ರಕ್ತ ಕಾಣಿಸುವುದು, ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಜ್ವರ […]

Continue Reading

ಮಳಖೇಡದಲ್ಲಿ ಮಾ.26ರಿಂದ 28 ರವರೆಗೆ ಉರೂಸ್ ಸಂಭ್ರಮ

ಸುದ್ದಿ ಸಂಗ್ರಹ ಸೇಡಂತಾಲೂಕಿನ ಮಳಖೇಡದಲ್ಲಿರುವ ಹಝರತ್ ಸೈಯದ್ ಶಾಹ್ ಖಲಿಫತ್ ಊರ್ ರಹಮಾನ್ ಖಾದ್ರಿ ದುರ್ಗಾ ಶರೀಫ್’ನಲ್ಲಿ ಮಾ.26ರಿಂದ 28ರವರೆಗೆ ವಾರ್ಷಿಕ ಉರೂಸ್ ಶರೀಫ್ (ಜಾತ್ರೆ) ಜರುಗಲಿದೆ ಎಂದು ಹಝರತ್ ಅಲ್ ಹಜ್ ಸೈಯದ್ ಶಾಹ ಮುಸ್ತಫಾ ಖಾದ್ರಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.26ರಂದು ರಾತ್ರಿ 8.30ಕ್ಕೆ ಗುರುವಾರ ಹಲಖಾ (ಪ್ರಾರ್ಥನೆ) ಮತ್ತು ಗುಸುಲ್ ಶರೀಫ್ (ಗದ್ದುಗೆಗೆ ಅಭಿಷೇಕ), 27ರಂದು ಸಂದಲ್ ನಡೆಯುವುದು, ಮಳಖೇಡ, ಹೂಡಾ(ಬಿ), ಸಂಗಾವಿ, ಮಳಖೇಡ ಸ್ಟೇಷನ್ ಕೂನ್ನೂರ ಮತ್ತು ದಿಗ್ಗಾಂವ್ ಗ್ರಾಮಗಳಿಂದ […]

Continue Reading

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆ ಎಚ್ಚರಿಕೆ

ಸುದ್ದಿ ಸಂಗ್ರಹ ಬೆಂಗಳೂರು ಮುಂದಿನ ಮೂರು ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದೆ. ಕಲಬುರಗಿ, ಯಾದಗಿರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯಿದೆ. ಭಾರಿ ಮಳೆ ಹಿನ್ನೆಲೆ ಕಲಬುರಗಿ, ಯಾದಗಿರಿ, ರಾಯಚೂರು, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Continue Reading

ಲಿಂ.ಗೌರಮ್ಮ ತಾಯಿಯವರ ಪುಣ್ಯಸ್ಮರಣೋತ್ಸವ: ಉಚಿತ ನೇತ್ರ ತಪಾಸಣೆ, ಮಾತೋಶ್ರೀ ಪ್ರಶಸ್ತಿ ಪ್ರದಾನ

ಸುದ್ದಿ ಸಂಗ್ರಹ ಚಿತ್ತಾಪುರನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಅನ್ನಪೂರ್ಣೇಶ್ವರಿಯಂದೆ ಗೌರವಿಸಲ್ಪಡುತ್ತಿದ್ದ, ಪ್ರಸ್ತುತ ಪೀಠಾಧಿಪತಿ ಪರಮಪೂಜ್ಯ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಾತೆ ಲಿಂ.ಗೌರಮ್ಮ ತಾಯಿಯವರ ಪುಣ್ಯಸ್ಮರಣೋತ್ಸವ ಹಾಗೂ ಮಾತೋಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಮಾ.26ರಂದು ಗುರುವಾರ ಸಂಜೆ 5 ಗಂಟೆಗೆ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ. ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಪಾವನ ಸಾನಿಧ್ಯದಲ್ಲಿ ನಡೆಯುವ ಈ ಸಮಾರಂಭದಲ್ಲಿ ಮಾಜಿ ಮಂತ್ರಿಗಳು, ಶರಣತತ್ವ ಪ್ರಸಾರಕ್ಕಾಗಿ ಶ್ರಮಿಸುತ್ತಿರುವ ಹಿರಿಯ ಮುತ್ಸದ್ಧಿ ಲೀಲಾದೇವಿ ಆರ್ ಪ್ರಸಾದ್ ಅವರಿಗೆ ಪ್ರಸಕ್ತ […]

Continue Reading

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ: ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

ಸುದ್ದಿ ಸಂಗ್ರಹ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಗರದಲ್ಲಿ ಸಂಜೆ ಸುರಿದ ಬಿರುಗಾಳಿ ಸಹಿತ ಮಳೆಗೆ ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಣೆಬೆನ್ನೂರಿನ ಗೌರಿಶಂಕರ ನಗರದಲ್ಲಿ ಮಳೆ ಸುರಿದ ಪರಿಣಾಮ ರಸ್ತೆಯ ಮೇಲೆ ಹಾಗೂ ಮನೆಯ ಮುಂಭಾಗ ಮರಗಳು ಹಾಗೂ ವಿದ್ಯುತ್ ಕಂಬಗಳು ಬಿದ್ದಿವೆ. ಮಳೆ ಬೀಳುವ ಸಮಯದಲ್ಲಿ ಜನರು ಇಲ್ಲದಿದ್ದರಿಂದ ಭಾರಿ ಅನಾಹುತಗಳು ತಪ್ಪಿವೆ. ವಿದ್ಯುತ್ ಕಂಬಗಳು ಬಿದ್ದ ಹಿನ್ನೆಲೆ ವಿದ್ಯುತ್ ವ್ಯತ್ಯಯ ಉಂಟಾಗಿ ಜನರಿಗೆ ಸಮಸ್ಯೆ ಉಂಟಾಯಿತು. ಅಲ್ಲದೆ ರಸ್ತೆಗಳ ಮೇಲೆ ಕಂಬಗಳು […]

Continue Reading

8,931 ದಿನಗಳ ಆಡಳಿತ: ಸಿಎಂ, ಪಿಎಂ ಆಗಿ ಮೋದಿ ಐತಿಹಾಸಿಕ ದಾಖಲೆ

ಸುದ್ದಿ ಸಂಗ್ರಹ ನವದೆಹಲಿ ದೇಶದಲ್ಲಿ ಚುನಾಯಿತ ಸರ್ಕಾರದ ಅತ್ಯಂತ ದೀರ್ಘಾವಧಿಯ ಮುಖ್ಯಸ್ಥರಾಗುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ರಾಜಕೀಯದಲ್ಲಿ ಐತಿಹಾಸಿಕ ಮೈಲಿಗಲ್ಲು ಸಾಧಿಸಿದ್ದಾರೆ. ದಾಖಲೆಯೊಂದಿಗೆ ಪ್ರಧಾನಿ ಮೋದಿ, ಸಿಕ್ಕಿಂನ ಮುಖ್ಯಮಂತ್ರಿಯಾಗಿ 8,930 ದಿನಗಳ ಕಾಲ ಅಧಿಕಾರ ವಹಿಸಿಕೊಂಡಿದ್ದ ಪವನ್ ಕುಮಾರ್ ಚಾಮ್ಲಿಂಗ್ ಅವರನ್ನು ಹಿಂದಿಕ್ಕಿದ್ದಾರೆ. ಗುಜರಾತ್ ಸಿಎಂ ಆಗಿ ಮತ್ತು ಪ್ರಧಾನಿಯಾಗಿ ತಮ್ಮ ಒಟ್ಟು ಅಧಿಕಾರವಧಿಯಲ್ಲಿ 8,931 ದಿನ ಪೂರ್ಣಗೊಳಿಸಿದ್ದಾರೆ. ಈ ಮೈಲಿಗಲ್ಲನ್ನು ಅಪರೂಪದ ಮತ್ತು ಮಹತ್ವದ ಸಾಧನೆಯೆಂದು ಪರಿಗಣಿಸಲಾಗಿದೆ. ಅಲ್ಲದೆ ದಶಕಗಳ ನಿರಂತರ […]

Continue Reading

ಚಿನ್ನದ ದರ ದಾಖಲೆಯ ಕುಸಿತ: ಏರಿದ್ದ ಚಿನ್ನದ ಬೆಲೆ ದಿಢೀರ್‌ ಇಳಿಕೆಗೆ ಕಾರಣ ಏನು ?

ಸುದ್ದಿ ಸಂಗ್ರಹ ನವದೆಹಲಿ ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಂಡ ಬೆನ್ನಲ್ಲೆ ಚಿನ್ನ ಬೆಳ್ಳಿಯ ಮಾರುಕಟ್ಟೆ ಭಾರಿ ಪತನಗೊಂಡಿದೆ. ಇಂದು ಕೇವಲ 3 ಗಂಟೆಯಲ್ಲೊ ಲೋಹ ಮಾರಕಟ್ಟೆಯಲ್ಲಿ ಒಟ್ಟಾರೆಯಾಗಿ 2 ಟ್ರಿಲಿಯನ್ ಡಾಲರ್‌(ಅಂದಾಜು 167.6 ಲಕ್ಷ ಕೋಟಿ ರೂ.) ಹೂಡಿಕೆ ಕರಗಿದೆ ಎಂದು ದಿ ಕೊಬೈಸ್ಸಿ ಲೆಟರ್‌ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ಅಮೂಲ್ಯ ಲೋಹಗಳಲ್ಲಿ ಇದೀಗ ವಿಚಿತ್ರವಾದ ಸಂಗತಿಯೊಂದು ನಡೆಯುತ್ತಿದೆ. ಯಾರೋ ದೊಡ್ಡ ಹೂಡಿಕೆದಾರರು ಭಾರಿ ಪ್ರಮಾಣದಲ್ಲಿ ಹೂಡಿಕೆ ಹಿಂದಕ್ಕೆ ಪಡೆಯುತ್ತಿದ್ದಾರೆ ಎಂದು ಅನುಮಾನ ವ್ಯಕ್ತಪಡಿಸಿದೆ. ದಾಖಲೆ ಕುಸಿತವಾಗಿದ್ದು ಯಾಕೆ […]

Continue Reading