ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿ ದರೋಡೆ: ಗನ್ ತೋರಿಸಿ 3 ಕೆಜಿ ಚಿನ್ನಾಭರಣ ದೋಚಿದ ಗ್ಯಾಂಗ್

ಕಲಬುರಗಿ: ಹಾಡಹಗಲೇ ಜ್ಯುವೆಲರಿ ಶಾಪ್‌ಗೆ ನುಗ್ಗಿದ ದರೋಡೆಕೊರರು ಮಾಲೀಕನಿಗೆ ಮಾರಕಾಸ್ತ್ರಗಳನ್ನು ತೋರಿಸಿ 2 ರಿಂದ 3 ಕೆಜಿ ಚಿನ್ನಾಭರಣ ದೋಚಿರುವ ಘಟನೆ ಕಲಬುರಗಿ ನಗರದ ಸರಾಫ್ ಬಜಾರ್‌ನಲ್ಲಿ ನಡೆದಿದೆ. ನಗರದಲ್ಲಿರುವ ಚಿನ್ನದ ಅಂಗಡಿಗೆ ಇಂದು ಮಧ್ಯಾಹ್ನ 12:30ರ ಸುಮಾರಿಗೆ 4 ಜನ ದರೋಡೆಕೋರರು ಗ್ರಾಹಕರ ಸೋಗಿನಲ್ಲಿ ನುಗ್ಗಿದ್ದರು. ಬಳಿಕ ಅಂಗಡಿ ಮಾಲೀಕ ಸಬಕಾ ಮಾಲೀಕ್ ಅವರಿಗೆ ಗನ್ ಹಾಗೂ ಮಾರಕಾಸ್ತ್ರ ತೋರಿಸಿ, ಆತನ ಕೈ ಕಾಲು ಕಟ್ಟಿ ಬಾಯಿಗೆ ಸೆಲ್ಲೊ ಟೆಪ್ ಸುತ್ತಿ ಎರಡುವರೆ ಕೆಜಿಗೂ ಅಧಿಕ […]

Continue Reading

ಅನಾಮಧೇಯ ಭಕ್ತನಿಂದ ಶಿರಡಿ ಸನ್ನಿಧಿಗೆ 59 ಲಕ್ಷದ ಚಿನ್ನದ ಕಿರೀಟ ಸೇರಿ 65 ಲಕ್ಷ ಮೌಲ್ಯದ ಆಭರಣ ದಾನ

ಮುಂಬೈ: ಗುರುಪೂರ್ಣಿಮೆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ದೇವಸ್ಥಾನಕ್ಕೆ ಅನಾಮಧೇಯ ಭಕ್ತರೊಬ್ಬರು 59 ಲಕ್ಷದ ಚಿನ್ನದ ಕಿರೀಟ ಸೇರಿದಂತೆ 65 ಲಕ್ಷ ರೂ. ಮೌಲ್ಯದ ಆಭರಣಗಳನ್ನು ದಾನವಾಗಿ ನೀಡಿದ್ದು, ಬಾಬಾ ಕೃಪೆಗೆ ಪಾತ್ರರಾಗಿದ್ದಾರೆ. ದೇಣಿಗೆ ನೀಡಲಾದ 65 ಲಕ್ಷ ರೂ. ಮೌಲ್ಯದ ಆರಭರಣಗಳ ಪೈಕಿ 566 ಗ್ರಾಂ ತೂಕದ 59 ಲಕ್ಷ ಮೌಲ್ಯದ ಚಿನ್ನದ ಕಿರೀಟ, 54 ಗ್ರಾಂ ತೂಕದ ಚಿನ್ನದ ಹೂವುಗಳು (ಆಭರಣ), 2 ಕೆಜಿ ತೂಕದ ಬೆಳ್ಳಿಯ ಹಾರ ಸೇರಿವೆ. ಆಭರಣವನ್ನು ಬಾಬಾಗೆ ಅರ್ಪಿಸುವಾಗ ಭಕ್ತರು […]

Continue Reading

ಪೂಜ್ಯ ಶರಣಬಸವ ಸ್ವಾಮೀಜಿಯವರಿಗೆ ಗುರುವಂದನೆ

ಕಲಬುರಗಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸವ ಬೆಳವಿಯಯ ಚರಂತೇಶ್ವರ ವಿರಕ್ತ ಮಠದ ಪೂಜ್ಯ ಶರಣಬಸವ ಸ್ವಾಮೀಜಿ ಅವರಿಗೆ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುಪೂರ್ಣಿಮೆ ಪ್ರಯುಕ್ತ ಗುರುವಾರ ನಗರದ ಜಯ ನಗರದಲ್ಲಿರುವ ಅನುಭವ ಮಂಟಪದಲ್ಲಿ ಗೌರವಿಸಿ, ಗುರುವಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಡಾ.ವಿಲಾಸವತಿ ಎಸ್.ಖೂಬಾ, ಎಚ್.ಬಿ ಪಾಟೀಲ, ಶಿವಯೋಗೆಪ್ಪಾ ಎಸ್. ಬಿರಾದಾರ, ರೇವಯ್ಯ ಮಠಪತಿ, ಚನ್ನಬಸವರಡ್ಡಿ, ಶಿವಕುಮಾರ ಬಿದರಿ, ರೇವಣಸಿದ್ದಪ್ಪ ಪಾಟೀಲ, ಬಿ.ಎಂ.ಪಾಟೀಲ ಕಲ್ಲೂರ, ರಮೇಶ ಪಾಟೀಲ, ಪರಮೇಶ್ವರ ಪಾಟೀಲ ಸೇರಿದಂತೆ ಅನೇಕರು ಇದ್ದರು.

Continue Reading

ಆಸ್ಪತ್ರೆಯಲ್ಲಿ ಸತ್ತಿದೆ ಎಂದ ಕಂದಮ್ಮ ಅಂತ್ಯಕ್ರಿಯೆಗೂ ಮುನ್ನ ಜೀವಂತ

ಮಹಾರಾಷ್ಟ್ರ: ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ನಿರ್ಲಕ್ಷ್ಯದ ಆರೋಪದ ಮೇಲೆ ಸತ್ತಿದೆ ಎಂದು ಘೋಷಿಸಿದ ನವಜಾತ ಶಿಶು ಸುಮಾರು 12 ಗಂಟೆಗಳ ನಂತರ, ಅಂತ್ಯಕ್ರಿಯೆಗಿಂತ ಕೆಲವೇ ಕ್ಷಣಗಳ ಮೊದಲು ಜೀವಂತವಾಗಿ ಪತ್ತೆಯಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಈ ಘಟನೆ ಅಂಬಾಜೋಗೈನಲ್ಲಿರುವ ಸ್ವಾಮಿ ರಮಾನಂದ ತೀರ್ಥ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಜುಲೈ 7ರ ರಾತ್ರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ನವಜಾತ ಶಿಶು ರಾತ್ರಿ 8:00 ಗಂಟೆ ಸುಮಾರಿಗೆ ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ, […]

Continue Reading

ಬೆಳಗುಂಪಾ: ಅಭಿನವ ಪರ್ವತೇಶ್ವರ ಶ್ರೀಗಳಿಗೆ ಗುರುವಂದನೆ

ಚಿತ್ತಾಪುರ: ತಾಲೂಕಿನ ಸುಕ್ಷೇತ್ರ ಬೆಳಗುಂಪಾದ ಅಭಿನವ ಪರ್ವತೇಶ್ವರ ಶಿವಾಚಾರ್ಯರಿಗೆ ಶ್ರೀ ಮಠದ ಭಕ್ತರಿಂದ ಗುರುಪೂರ್ಣಿಮೆ ಪ್ರಯುಕ್ತ ಗುರುವಾರ ಗುರುವಂದನೆ ಜರುಗಿತು. ಈ ಸಂದರ್ಭದಲ್ಲಿ ರೇವಯ್ಯ ಮಠಪತಿ, ಎಚ್.ಬಿ ಪಾಟೀಲ, ಶಿವಯೋಗೆಪ್ಪಾ ಎಸ್. ಬಿರಾದಾರ, ರೇವಣಸಿದ್ದಯ್ಯ ಹೊಸಮಠ, ಶಿವರಾಜ ಮಾಲಿ ಪಾಟೀಲ, ಉಮಾಕಾಂತ ಗಂಗಾಣಿ, ಸುಗಯ್ಯ ಹಿರೇಮಠ, ಬಾಬುರಾವ ಶೀಲವಂತ, ಹಣಮಂತರಾವ ಬಿರಾದಾರ, ನಾಗೇಶ ಶಿವಗೋಳ, ಬಸವರಾಜ ಕುಲಕರ್ಣಿ, ಚನ್ನಬಸವ ರೆಡ್ಡಿ ಸೇರಿದಂತೆ ಅನೇಕರು ಇದ್ದರು.

Continue Reading

ಶರಣ ಹಡಪದ ಅಪ್ಪಣ್ಣನವರ ಕೊಡುಗೆ ಅನನ್ಯ     

ಕಲಬುರಗಿ: ಹಡಪದ ಅಪ್ಪಣ್ಣನವರು ಹನ್ನೆರಡನೇ ಶತಮಾನದ ಪ್ರಮುಖ ವಚನಕಾರರು ಮತ್ತು ಬಸವಣ್ಣನವರ ನಿಕಟವರ್ತಿ. ಸಾಮಾಜಿಕ ಸುಧಾರಣೆಗಾಗಿ ಶ್ರಮಿಸಿದವರು ಎಂದು ಶರಣ ಚಿಂತಕ ದತ್ತು ಹಡಪದ ಹೇಳಿದರು.  ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ಶರಣ ಹಡಪದ ಅಪ್ಪಣ್ಣನವರ 891ನೇ ಜಯಂತಿಯಲ್ಲಿ ಮಾತನಾಡಿದ ಅವರು, ಹಡಪದ ಅಪ್ಪಣ್ಣನವರ ವಚನಗಳು ಇಂದಿಗೂ ಪ್ರಸ್ತುತವಾಗಿವೆ ಎಂದರು.          ಉಪನ್ಯಾಸಕ […]

Continue Reading

ಗುರುವಿನ ಸ್ಥಾನ ಎಲ್ಲದಕ್ಕಿಂತಲೂ ದೊಡ್ಡದು: ಸಿದ್ದಲಿಂಗ ಶ್ರೀ

ಚಿತ್ತಾಪುರ: ಭೂಮಿಯ ಮೇಲಿನ ಎಲ್ಲಾ ವೃತ್ತಿಗಳಲ್ಲಿ ಗುರುವಿನ ಸ್ಥಾನ ತುಂಬಾ ದೊಡ್ಡದು ಎಂದು ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಪೂಜ್ಯ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯಲ್ಲಿ ಗುರುಪೂರ್ಣಿಮೆ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಗುರುವಂದನಾ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಯಾರು ಜನರ ಅಂಧಕಾರ, ಮೌಢ್ಯತೆ ದೂರ ಮಾಡುತ್ತಾರೋ, ಯಾರು ಉತ್ತಮ ಜೀವನಕ್ಕೆ ಸೂಕ್ತ ಮಾರ್ಗದರ್ಶನ ನೀಡುವರೋ ಅವರು ನಿಜವಾದ ಗುರುಗಳು. ಶಿವಾಜಿಗೆ ಗುರು ರಾಮದಾಸರ ಮಾರ್ಗದರ್ಶನದ ಪ್ರಭಾವ ಬೀರಿತ್ತು. […]

Continue Reading

ವಾಡಿ: ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು. ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಹನ್ನೆರಡನೆ ಶತಮಾನದ ಕ್ರಾಂತಿಯಲ್ಲಿ ಶಿವಶರಣ ಹಡಪದ ಅಪ್ಪಣ್ಣನವರು ಮುಂಚೂಣಿಯಲ್ಲಿದ್ದರು. ಶರಣ ಕಾಯಕ ಬದುಕು ಯುವ ಪೀಳಿಗೆಗೆ ದಾರಿದೀಪವಾಗಬೇಕು. ಶರಣರು ಯಾತಕ್ಕಾಗಿ ಹೋರಾಟ ಮಾಡಿದರು, ಅದರ ಉದ್ದೇಶ ಬಗ್ಗೆ ಇಂದು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕಿದೆ. ಅವರ ವಚನವನ್ನು ಆಳವಾಗಿ ಅಧ್ಯಯನ ಮಾಡಿದಾಗ ಮಾತ್ರ ಇವೆಲ್ಲವೂ ಸಾಧ್ಯವಾಗುವುದು. ಕಾಯಕ ನಿಷ್ಠೆಗೆ ಹೆಸರಾದ ಹಡಪದ […]

Continue Reading

ಬಿಗ್ ಬಾಸ್​ಗೆ ಸ್ಪರ್ಧಿಗಳನ್ನು ಆಯ್ಕೆ ಮಾಡುವವರ ಹೆಸರು ರಿವೀಲ್ ಮಾಡಿದ ಪ್ರಥಮ್

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12ಕ್ಕೆ ವೇದಿಕೆ ಸಜ್ಜಾಗುತ್ತಿದೆ. ಕೆಲವೇ ತಿಂಗಳುಗಳಲ್ಲಿ ಶೋ ಆರಂಭವಾಗಲಿದೆ. ಕಲರ್ಸ್ ಕನ್ನಡ ಹಾಗೂ ಬಿಗ್ ಬಾಸ್ ಟೀಮ್ ಈ ಬಾರಿಯೂ ಕಿಚ್ಚ ಸುದೀಪ್ ಅವರೆ ನಿರೂಪಕರಾಗಿ ಬಿಗ್ ಬಾಸ್ ಮುನ್ನಡೆಸಲಿದ್ದಾರೆ ಎಂಬ ಸ್ಪಷ್ಟನೆ ಕೊಟ್ಟಿದ್ದಾರೆ. ಇದರ ಬೆನ್ನಲ್ಲೇ ತೆರೆಮರೆಯಲ್ಲಿ ಬಿಗ್ ಬಾಸ್ 12 ಕೆಲಸಗಳು ಶುರುವಾಗಿದೆ. ಈಗಾಗಲೆ ಕೆಲ ಕಂಟೆಸ್ಟೆಂಟ್​ಗಳ ಹೆಸರು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಾಮಾನ್ಯವಾಗಿ ಬಿಗ್ ಬಾಸ್ ಆರಂಭವಾಗುವಾಗ ಶೋಗೆ ಸ್ಪರ್ಧಿಗಳನ್ನು ಯಾರು ಆಯ್ಕೆ ಮಾಡುತ್ತಾರೆ […]

Continue Reading

ಇಂಟರ್‌ನೆಟ್, ವೈಫೈ ಇರದೆ ಬಳಸುವ ಹೊಸ ಮೆಸೆಂಜರ್ App ತಂದ ಜಾಕ್ ಡೋರ್ಸಿ

ಬೆಂಗಳೂರು: ಜನಪ್ರಿಯ ಸಾಮಾಜಿಕ ಜಾಲತಾಣ ಟ್ವಿಟರ್‌ನ (ಇಂದಿನ ಎಕ್ಸ್‌) ಸಹ ಸ್ಥಾಪಕ ಜಾಕ್ ಡೋರ್ಸಿ ಕ್ರಾಂತಿಕಾರಿ ಎನ್ನಬಹುದಾದ ಹೆಜ್ಜೆಯೊಂದಿಗೆ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಇಂಟರ್‌ನೆಟ್ ಇಲ್ಲದೆ, ಸೆಟ್‌ಲೈಟ್ ಸಂಪರ್ಕ ಇಲ್ಲದೆ, ವೈಫೈನೂ ಇಲ್ಲದೆ ಕಾರ್ಯನಿರ್ವಹಿಸಬಹುದಾದ ಹೊಸ ಮೆಸೆಂಜರ್ ಆಪ್ ಒಂದನ್ನು ಡೋರ್ಸಿ ಅವರು ಅಭಿವೃದ್ಧಿಪಡಿಸಿರುವುದಾಗಿ ವರದಿಯಾಗಿದೆ. ಬಿಟ್ ಚಾಟ್ ಎಂಬ ಪಿ2ಪಿ ಮೆಸೆಂಜರ್‌ ಆಪ್‌ ಅನ್ನು ಜಾಕ್ ಡೊರ್ಸಿ ಬಿಡುಗಡೆ ಮಾಡಿದ್ದಾರೆ. ಸದ್ಯ ಈ ಆಯಪ್ ಆಯಪಲ್ ಐ ಸ್ಟೋರ್‌ನಲ್ಲಿ ಟೆಸ್ಟ್‌ ಮೋಡ್‌ನಲ್ಲಿ ಮಾತ್ರ ಲಭ್ಯವಿದೆ. […]

Continue Reading