ವಿಮಾನ ಟಿಕೆಟ್ ಬುಕ್ ಮಾಡಿದ 48 ಗಂಟೆಯೊಳಗೆ ರದ್ದು, ತಿದ್ದುಪಡಿಗೆ ಅವಕಾಶ: ಶೀಘ್ರದಲ್ಲೇ ಹೊಸ ನಿಯಮ

ನವದೆಹಲಿ: ವಿಮಾನ ಟಿಕೆಟ್ ಕಾಯ್ದಿರಿಸಿದ 48 ಗಂಟೆಯೊಳಗೆ ಹೆಚ್ಚುವರಿ ಶುಲ್ಕವಿಲ್ಲದೆ ತಮ್ಮ ಟಿಕೆಟ್‌ಗಳನ್ನು ರದ್ದುಗೊಳಿಸಲು ಅಥವಾ ತಿದ್ದುಪಡಿ ಮಾಡಲು ಪ್ರಯಾಣಿಕರಿಗೆ ಅವಕಾಶ ನೀಡಲು ಶೀಘ್ರದಲ್ಲೇ ಹೊಸ ನಿಯಮ ಜಾರಿಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ನಿರ್ಧರಿಸಿದೆ. ಟಿಕೆಟ್ ಮರುಪಾವತಿ ಮಾನದಂಡಗಳಲ್ಲಿ ಗಮನಾರ್ಹ ಬದಲಾವಣೆಗಳನ್ನು ಡಿಜಿಸಿಎ ಪ್ರಸ್ತಾಪಿಸಿದೆ. ಇದಲ್ಲದೆ, ಟ್ರಾವೆಲ್ ಏಜೆಂಟ್ ಅಥವಾ ಪೋರ್ಟಲ್ ಮೂಲಕ ಟಿಕೆಟ್ ಖರೀದಿಸಿದರೆ, ಏಜೆಂಟರು ನೇಮಕಗೊಂಡ ಪ್ರತಿನಿಧಿಗಳಾಗಿರುವುದರಿಂದ ಮರುಪಾವತಿ ಜವಾಬ್ದಾರಿ ವಿಮಾನಯಾನ ಸಂಸ್ಥೆಗಳ ಮೇಲಿರುತ್ತದೆ ಎಂದು ಹೊಸ ನಿಯಮದಲ್ಲಿ ಹೇಳಲಾಗಿದೆ. ವಿಮಾನಯಾನ ಸಂಸ್ಥೆಗಳು 21 […]

Continue Reading

ಇ-ಸ್ವತ್ತು ಸಮರ್ಪಕ ಅನುಷ್ಠಾನಕ್ಕಾಗಿ ಗ್ರಾ.ಪಂ ಮಟ್ಟದಲ್ಲಿ ಅಧಿಕಾರಿಗಳನ್ನು ಸಜ್ಜುಗೊಳಿಸಿ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿನ ಸುಮಾರು ಒಂದು ಕೋಟಿ ಆಸ್ತಿಗಳನ್ನು ಇ-ಸ್ವತ್ತು ತೆಕ್ಕೆಗೆ ತರುವ ಮೂಲಕ ಮನೆ ಹಾಗೂ ನಿವೇಶನಗಳನ್ನು ಸಕ್ರಮಗೊಳಿಸುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಲು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದರು. ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇ-ಸ್ವತ್ತು ಸಮರ್ಪಕ ಅನುಷ್ಠಾನ ಹಾಗೂ ಇನ್ನಿತರ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಈ ಸಂಬಂಧ ಹೊಸದಾಗಿ […]

Continue Reading

ಮಾನವ ಕಂಪ್ಯೂಟರ್ ಶಕುಂತಲಾ ದೇವಿ: ಎಚ್.ಬಿ ಪಾಟೀಲ

ಕಲಬುರಗಿ: ಶಕುಂತಲಾ ದೇವಿಯವರನ್ನು ಗಣಿತದ ಸಂಕೀರ್ಣ ಸಮಸ್ಯೆಗಳನ್ನು ಕ್ಯಾಲ್ಕುಲೇಟರ್‌ಗಿಂತ ವೇಗವಾಗಿ ಪರಿಹರಿಸುವ ಸಾಮರ್ಥ್ಯದಿಂದಾಗಿ ಮಾನವ ಕಂಪ್ಯೂಟರ್ ಎಂದು ಕರೆಯಲಾಗಿದ್ದು, ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಪಡೆದವರು. ಶಕುಂತಲಾ ದೇವಿಯವರು ನಮ್ಮ ನಾಡು, ದೇಶದ ಕೀರ್ತಿ ವಿಶ್ವದೆಲ್ಲೆಡೆ ಪಸರಿಸಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು.   ನಗರದ ಆಳಂದ ರಸ್ತೆಯ ಖಾದ್ರಿ ಚೌಕ್ ನಲ್ಲಿರುವ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಮಾನವ ಕಂಪ್ಯೂಟರ್ ಶಕುಂತಲಾ ದೇವಿಯವರ 96ನೇ […]

Continue Reading

ಆರೇ ವರ್ಷಕ್ಕೆ ಕಲಬುರಗಿ ಬೆಂಗಳೂರು ವಿಮಾನ ಸಂಚಾರ ಬಂದ್‌

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಹೆಬ್ಬಾಗಿಲು ಎಂದು ಕರೆಯಸಿಕೊಳ್ಳುವ ಜಿಲ್ಲೆ ಕಲಬುರಗಿ. ಇದೀಗ ಕಲಬುರಗಿಯ ವಿಮಾನ ನಿಲ್ದಾಣಕ್ಕೆ ಸೂತಕದ ಛಾಯೆ ಆವರಿಸಿದೆ. ಆರಂಭವಾಗಿ ಆರೇ ವರ್ಷಕ್ಕೆ ವಿಮಾನ ಹಾರಾಟವಿಲ್ಲದೆ ವಿಮಾನ ನಿಲ್ದಾಣವೇ ಬಂದ್ ಆಗಿದೆ. ಹೀಗಾಗಿ ಆ ಭಾಗದ ಜನರ ದಶಕದ ಕನಸು ಆರೇ ವರ್ಷಕ್ಕೆ ಮಣ್ಣುಪಾಲಾದಂತಾಗಿದೆ. ಕಲಬುರಗಿಯಿಂದ ಬೆಂಗಳೂರು ಸಂಪರ್ಕಿಸುತ್ತಿದ್ದ ಏಕೈಕ ವಿಮಾನ ಹಾರಾಟ ಸ್ಟಾರ್ ಏರ್‌ ಸಂಸ್ಥೆ ನಿಲ್ಲಿಸಿದೆ. ಅಕ್ಟೋಬರ್‌ 15 ರಿಂದ ಸೇವೆ ಸ್ಥಗಿತಗೊಳಿಸಿದೆ. ಈಗ ಒಂದೇ ಒಂದು ವಿಮಾನವೂ ಸಹ ಕಲಬುರಗಿ […]

Continue Reading

ಪಾಕಿಸ್ತಾನದಲ್ಲಿ ಕೇವಲ 20 ರೂ ಸಿಗುತ್ತೆ ಹೊಟೇಲ್‌ ರೂಂ, ಇದರ ಅವಸ್ಥೆ ಹೇಗಿದೆ ಗೊತ್ತಾ ?

ನವದೆಹಲಿ: ಪಾಕಿಸ್ತಾನದಲ್ಲಿ ಸಾಕಷ್ಟು ವಿಚಾರದಲ್ಲಿ ಅವ್ಯವಸ್ಥೆ ಹೊಂದಿರುವ ವಿಚಾರಗಳು ನಮಗೆಲ್ಲ ತಿಳಿದೆ ಇದೆ. ಅಂತೆಯೇ ಇದೀಗ ಪಾಕಿಸ್ತಾನದ ಪೇಶಾವರದಲ್ಲಿರುವ ಹೊಟೇಲ್ ಒಂದರಲ್ಲಿ ವಿಶ್ವದಲ್ಲೆ ಅತಿ ಅಗ್ಗದ ದರದ ಸೇವೆ ನೀಡುತ್ತಿದೆ ಎಂಬ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಒಂದು ರಾತ್ರಿ ಈ ಹೊಟೇಲ್’ನಲ್ಲಿ ತಂಗಲು ಕೇವಲ 20 ರೂ ದರ ನಿಗದಿ ಮಾಡಿದೆ. ಇಷ್ಟು ಕಡಿಮೆ ದರದಲ್ಲಿ ತಂಗುವ ವ್ಯವಸ್ಥೆ ಮಾಡಿದ್ದು ಕಂಡು ನೆಟ್ಟಿಗರು ಅಚ್ಚರಿಗೊಂಡಿದ್ದಾರೆ. ನಮ್ಮ ದೇಶದಲ್ಲೇ ಅತಿ ಕಡಿಮೆಗೆ ಸ್ಟೇ ಮಾಡಲು ರೂಮ್ […]

Continue Reading

ಮಹಿಳಾ ಏಕದಿನ ವಿಶ್ವಕಪ್ ಟ್ರೋಫಿ ಗೆದ್ದ ಭಾರತ ತಂಡಕ್ಕೆ ಸಿಕ್ಕ ಬಹುಮಾನ ಎಷ್ಟು ಕೋಟಿ ?

ಮುಂಬೈ: ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ರವಿವಾರ ನಡೆದ 2025ರ ಮಹಿಳಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಮಣಿಸಿದ ಭಾರತೀಯ ಮಹಿಳಾ ತಂಡ, ಚೊಚ್ಚಲ ಬಾರಿಗೆ ವಿಶ್ವಕಪ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದೆ. ಈ ಐತಿಹಾಸಿಕ ಗೆಲುವಿನೊಂದಿಗೆ ತಂಡವು ದಾಖಲೆಯ ಮೊತ್ತದ ಬಹುಮಾನ ತನ್ನದಾಗಿಸಿಕೊಂಡಿದೆ. ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಘೋಷಿಸಿದಂತೆ, ಚಾಂಪಿಯನ್ ಭಾರತ ತಂಡವು ಬರೋಬ್ಬರಿ 39.78 ಕೋಟಿ ರೂ (4.48 ಮಿಲಿಯನ್ ಡಾಲರ್‌) ಬಹುಮಾನ ಪಡೆಯಲಿದೆ. ಇದು ಮಹಿಳಾ […]

Continue Reading

ಬಿಹಾರ ಚುನಾವಣೆ: ಕೊಳಕ್ಕೆ ಧುಮುಕಿ ಮೀನು ಹಿಡಿದ ರಾಹುಲ್‌

ಪಾಟ್ನಾ: ಬಿಹಾರ ಚುನಾವಣಾ ಪ್ರಚಾರದಲ್ಲಿರುವ ರಾಹುಲ್‌ ಗಾಂಧಿ ಇಂದು ಬೇಗುಸರೈಯ ಹಳ್ಳಿಯ ಕೊಳದಲ್ಲಿ ಮೀನು ಹಿಡಿದು ಸುದ್ದಿಯಾಗಿದ್ದಾರೆ. ತಮ್ಮ ಭಾಷಣವನ್ನು ಮುಗಿಸಿದ ನಂತರ ರಾಹುಲ್ ಸುಮಾರು 3 ಕಿ.ಮೀ. ದೂರ ಪ್ರಯಾಣ ಬೆಳೆಸಿ, ಬೇಗುಸರೈ ವಿಧಾನಸಭಾ ಕ್ಷೇತ್ರದ ಭರ್ರಾ ಗ್ರಾಮಕ್ಕೆ ತೆರಳಿದರು. ಕೊಳ ತಲುಪಿದ ರಾಹುಲ್ ಬಲೆ ಬೀಸುತ್ತಿರುವ ಮೀನುಗಾರರನ್ನು ಭೇಟಿ ಮಾಡಲು ಸಣ್ಣ ದೋಣಿ ಹತ್ತಿದರು. ಈ ಸಂದರ್ಭದಲ್ಲಿ ಕನ್ಹಯ್ಯ ಕುಮಾರ್‌ ನೀರಿಗೆ ಹಾರಿದಾಗ ರಾಹುಲ್ ಹಾರಿದರು. ಈ ವೇಳೆ ಅಲ್ಲಿ ಸೇರಿದ್ದ ಗ್ರಾಮಸ್ಥರು ಚಪ್ಪಾಳೆ […]

Continue Reading

ಕೆ-ಸೆಟ್ ಪರೀಕ್ಷೆ ಸುಗಮ, ಶೇ.90ರಷ್ಟು ಹಾಜರು: ಕೆಇಎ

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್-25 ರವಿವಾರ ರಾಜ್ಯದ 11 ಜಿಲ್ಲೆಗಳಲ್ಲಿ ಸುಗಮವಾಗಿ ನಡೆಯಿತು. ಪರೀಕ್ಷಾ ಅಕ್ರಮಗಳನ್ನು ತಡೆಯಲು ಬಿಗಿ ಕ್ರಮಗಳು ಕೈಗೊಂಡಿದ್ದರಿಂದ ಯಾವುದೆ ಅಹಿತಕರ ಘಟನೆಗಳು ವರದಿಯಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಟ್ಟು 34 ವಿಷಯಗಳಿಗೆ ನಡೆದ ಕೆ-ಸೆಟ್ ಪರೀಕ್ಷೆಗೆ 1.34 ಲಕ್ಷ ಜನರು ಅರ್ಜಿ ಸಲ್ಲಿಸಿದ್ದರು. ಇವರ ಪೈಕಿ 1.21 ಲಕ್ಷ (ಶೇ.90) ಜನರು ಹಾಜರಾಗಿದ್ದರು ಎಂದು ವಿವರಿಸಿದ್ದಾರೆ. ಬೆಂಗಳೂರು, ಬಳ್ಳಾರಿ, […]

Continue Reading

ಕೆ-ಸೆಟ್ ಪರೀಕ್ಷೆ: ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ ಬಿಚ್ಚಿಸಿದ ಸಿಬ್ಬಂದಿ

ಬಳ್ಳಾರಿ: ಇಂದು ಕೆ-ಸೆಟ್ ಪರೀಕ್ಷೆ ಹಿನ್ನೆಲೆ ಬಳ್ಳಾರಿಯಲ್ಲಿ ವಿದ್ಯಾರ್ಥಿಗಳ ಕಿವಿಯೋಲೆ, ಮೂಗುತಿ, ಕೈಕಡಗ ಸೇರಿದಂತೆ ಮೈಮೇಲೆ ಹಾಕಿಕೊಂಡಿರೋ ದೇವರ ದಾರವನ್ನು ಸಹ ಬಿಚ್ಚಿಸಿ ಅಭ್ಯರ್ಥಿಗಳನ್ನು ಒಳಗೆ ಕಳುಹಿಸಿದ ಘಟನೆ ನಡೆದಿದೆ. ಕಿವಿಯೋಲೆ, ಮೂಗುತಿ ಹಾಗೂ ದೇವರ ದಾರ ಬಿಚ್ಚಿಸಿದ್ದಕ್ಕೆ ಕೆಲ ಪರೀಕ್ಷಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದರು. ಅಸಮಾಧಾನದ ನಡುವೆಯೂ ಅನಿವಾರ್ಯವಾಗಿ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾದರು. ಇನ್ನೂ ಪರೀಕ್ಷೆ ಮುಗಿಸಿಕೊಂಡು ಹೊರಬಂದ ಬಳಿಕ ಪ್ರತಿಕ್ರಿಯೆ ನೀಡಿದ ಪರೀಕ್ಷಾರ್ಥಿಗಳು ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ದ ಅಸಮಾಧಾನ ಹೊರಹಾಕಿದರು. ಕಿವಿಯೋಲೆ, ಮೂಗುತಿ ಬಿಚ್ಚಿಸಿದ್ದು […]

Continue Reading

ಕಲರ್ಸ್ ಕನ್ನಡ ವಾಹಿನಿಯ ಧಾರಾವಾಹಿಗಳಲ್ಲಿ ಈ ತಿಂಗಳು ಪೂರ್ತಿ ಕನ್ನಡ ಹಬ್ಬ

ಕಲರ್ಸ್ ಕನ್ನಡ ವಾಹಿನಿಯು ಕನ್ನಡ ರಾಜ್ಯೋತ್ಸವವನ್ನು ಧಾರಾವಾಹಿಗಳಲ್ಲಿ ವಿಶಿಷ್ಟವಾಗಿ ಆಚರಿಸಲಿದೆ. ಕತೆಗಳಲ್ಲಿ ಕನ್ನಡತನ ತರುವ ಈ ಪ್ರಯತ್ನವನ್ನು ಪ್ರೋಮೋದಲ್ಲಿ ನೋಡಿರುವ ಕನ್ನಡದ ವೀಕ್ಷಕರು ಮೆಚ್ಚಿಕೊಂಡಿದ್ದಾರೆ. ಒಟ್ಟಿನಲ್ಲಿ ನವೆಂಬರ್ ತಿಂಗಳು ಪೂರ್ತಿ ಕನ್ನಡದ ಸಂಭ್ರಮ ಕಲರ್ಸ್ ಕನ್ನಡದ ಧಾರಾವಾಹಿಗಳಲ್ಲಿ ಜೋರಾಗಿ ನಡೆಯಲಿದೆ. ಪ್ರೇಮ ಕಾವ್ಯ, ರಾಮಾಚಾರಿ, ಮುದ್ದು ಸೊಸೆ, ಗಂಧದ ಗುಡಿ, ಭಾಗ್ಯಲಕ್ಷ್ಮಿ, ಭಾರ್ಗವಿ LLB, ನಂದ ಗೋಕುಲ ಧಾರಾವಾಹಿಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ಕಂಪು ಹರಡಲಿದೆ. ರಾಮಾಚಾರಿಚಾರು ದೇವಸ್ಥಾನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡುತ್ತಾಳೆ ಮತ್ತು ಮಗುವಿಗೆ […]

Continue Reading