ಟ್ರ್ಯಾಕ್ಟರ್‌ಗೆ ಬಾಡಿಗೆ ನೀಡಲು ಹಣವಿಲ್ಲದೆ ಸ್ವತಃ ನೊಗ-ನೇಗಿಲು ಹೊತ್ತ ವೃದ್ಧ ದಂಪತಿಯ ನೆರವಿಗೆ ಧಾವಿಸಿದ ಸಚಿವ

ಮುಂಬೈ: ಸಾಲ ಮಾಡಿಕೊಂಡ ಕಾರಣ ಎತ್ತು, ಟ್ರ್ಯಾಕ್ಟರ್‌ಗೆ ಬಾಡಿಗೆ ನೀಡಲು ಹಣವಿಲ್ಲದೆ, ಕಾರ್ಮಿಕರಿಗೆ ಕೂಲಿ ನೀಡಲು ಸಾಧ್ಯವಾಗದ ಕಾರಣ ಸ್ವತಃ ನೊಗ-ನೇಗಿಲು ಹೊತ್ತ ವೃದ್ಧ ದಂಪತಿಯ ವಿಡಿಯೊ ಇತ್ತೀಚೆಗೆ ವೈರಲ್‌ ಆಗಿತ್ತು. ಈ ವಿಡಿಯೊ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿ ದೇಶವೇ ಮರುಗಿತ್ತು. ಬೆಳೆ ನಾಶವಾದ ಹಿನ್ನೆಲೆಯಲ್ಲಿ ಸಾಲ ಮಾಡಿದ್ದರಿಂದ ಅನಿವಾರ್ಯವಾಗಿ 75 ವರ್ಷದ ಪತಿ ನೊಗ ಹೊತ್ತಿದ್ದರೆ, 65 ವರ್ಷದ ಪತ್ನಿ ನೇಗಿಲು ಹಿಡಿದು ನೆಲ ಹದ ಮಾಡುತ್ತಿರುವುದು ವಿಡಿಯೊದಲ್ಲಿ ಕಂಡು ಬಂದಿತ್ತು. ಇದೀಗ ಸಚಿವರೊಬ್ಬರು ಈ […]

Continue Reading

ಸಹಕಾರಿ ಚಳುವಳಿಯ ಯಶಸ್ವಿಗೆ ಜನರ ಸಕ್ರಿಯ ಭಾಗವಹಿಸುವಿಕೆ ಅಗತ್ಯ

ಕಲಬುರಗಿ: ಭಾರತದಲ್ಲಿ ಸಹಕಾರಿ ಚಳುವಳಿ ಆರಂಭವಾಗಿ ಶತಮಾನ ಕಳೆದರು ಕೂಡಾ ಅದರ ತತ್ವ, ಆಶಯ ಜನಸಾಮಾನ್ಯರಿಗೆ ಮುಟ್ಟುತ್ತಿಲ್ಲ. ‘ತಾನು ಎಲ್ಲರಿಗಾಗಿ, ಎಲ್ಲರೂ ತನಗಾಗಿ’ ಎಂಬ ಸಹಕಾರದ ತತ್ವದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸಹಕಾರಿ ಸಂಘಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಅವುಗಳ ಸದುಪಯೋಗ ಪಡೆದುಕೊಂಡು ಸಹಕಾರಿ ಚಳುವಳಿಯ ಯಶಸ್ವಿಯಲ್ಲಿ ಸಕ್ರಿಯವಾಗಿ ಭಾಗವಹಿಸುವಿಕೆ ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ್ ಹೇಳಿದರು. ಜಿಲ್ಲೆಯ ಶಹಾಬಾದ ತಾಲೂಕಿನ ಭಂಕೂರ್‌ನ ಕೆರಿಯಮ್ಮ ದೇವಸ್ಥಾನದ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ […]

Continue Reading

ಅರಣ್ಯ ಇಲಾಖೆಯಲ್ಲಿ 540 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಖಂಡ್ರೆ

ಕಲಬುರಗಿ: ಅರಣ್ಯ ಇಲಾಖೆಯಲ್ಲಿ 6000 ಹುದ್ದೆಗಳು ಖಾಲಿ ಇದ್ದು, ಅದರಲ್ಲಿ 540 ಹುದ್ದೆಗಳ ಭರ್ತಿ ಆರಂಭವಾಗಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 540 ಹುದ್ದೆಗಳ ಜೊತೆಗೆ 340 ಹುದ್ದೆಗಳ ನೇಮಕಾತಿಗೆ ಮುಂದಾಗಲಾಗುವುದು ಎಂದರು.‌ ಮಲೆಮಹದೇಶ್ವರ ಬೆಟ್ಟದಲ್ಲಿ ಹುಲಿಗಳ ಸಾವು ಪ್ರಕರಣ ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಹುಲಿಗಳಿಗೆ ವಿಷಪ್ರಾಷನ ಮಾಡಿದ್ದು ವರದಿಯಲ್ಲಿ ಗೊತ್ತಾಗಿದೆ. ಪ್ರಮುಖವಾಗಿ ಕರ್ತವ್ಯ ಲೋಪ ಆರೋಪದ ಮೇಲೆ ಇಬ್ಬರು ಅಧಿಕಾರಿಗಳ ಸಸ್ಪೆಂಡ್ ಮಾಡಿದ್ದೆವೆ.‌ ಓರ್ವ ಅಧಿಕಾರಿ ಅಮಾನತಿಗೆ ಡಿಪಿಎಆರ್‌ ಇಲಾಖೆಗೆ […]

Continue Reading

ಸೆಟ್ಟೇರಿತು ದೆವ್ವದ ಕಥೆ

ಬೆಂಗಳೂರು: ಕೌರವ ವೆಂಕಟೇಶ್‌ ನಾಯಕನಾಗಿ ನಟಿಸುತ್ತಿರುವ ‘ಒಂದು ಸುಂದರ ದೆವ್ವದ ಕಥೆ’ ಚಿತ್ರ ಸೆಟ್ಟೇರಿದೆ. ಹಿರಿಯ ನಟಿ ಲೀಲಾವತಿ ಅವರ ಸ್ಮಾರಕದ ಮುಂದೆ ಮೊದಲ ದೃಶ್ಯಕ್ಕೆ ನಟ ವಿನೋದ್ ರಾಜ್ ಅವರು ಕ್ಲಾಪ್ ಮಾಡಿದರು. ಎಂ.ಆರ್ ಕಪಿಲ್ ಚಿತ್ರ ನಿರ್ದೇಶಿಸುತ್ತಿದ್ದಾರೆ. 35 ವರ್ಷಗಳ ಹಿಂದೆ ನಾನು ಕೌರವ ವೆಂಕಟೇಶ್ ಅವರ ವಿದ್ಯಾರ್ಥಿ ಆಗಿದ್ದೆ. ಈಗ ಅವರ ಸಿನಿಮಾ ನಿರ್ದೇಶಿಸುವ ಅವಕಾಶ ದೊರೆತಿದೆ. ಇದೊಂದು ವಿಭಿನ್ನ ಶೀರ್ಷಿಕೆ, ಸಿನಿಮಾದಲ್ಲೂ ವಿಭಿನ್ನತೆಯಿದೆ. ಶಿಕ್ಷಣ ಕುರಿತು ಒಂದು ಗಟ್ಟಿಯಾದ ಕಥೆಯಿದೆ. ವಿದ್ಯಾರ್ಥಿಗಳಿಗೆ […]

Continue Reading

ಯುವಕರು ವಿವೇಕಾನಂದರ ಆದರ್ಶ ಅಳವಡಿಸಿಕೊಳ್ಳಿ: ಡಾ.ಸದಾನಂದ ಪೆರ್ಲ

ಕಲಬುರಗಿ: ರಾಷ್ಟ್ರದ ಅಭಿವೃದ್ಧಿಗೆ ಯುವಕರ ಪಾತ್ರ ಪ್ರಮುಖವಾಗಿದೆ. ಯುವ ಸಮೂಹದ ಚೇತನಾ ಶಕ್ತಿಯಾದ ವಿವೇಕಾನಂದರ ಆದರ್ಶ, ಸಂದೇಶವನ್ನು ಪ್ರತಿಯೊಬ್ಬ ಯುವಕರು ಅಳವಡಿಸಿಕೊಂಡರೆ ಸದೃಢ ರಾಷ್ಟ್ರ ನಿರ್ಮಾಣವಾಗಲು ಸಾಧ್ಯ ಎಂದು ಆಕಾಶವಾಣಿ ಕಾರ್ಯಕ್ರಮದ ನಿವೃತ್ತ ಮುಖ್ಯಸ್ಥ ಡಾ.ಸದಾನಂದ ಪೆರ್ಲ ಹೇಳಿದರು. ನಗರದ ಗಂಗಾ ನಗರದ ವಿವೇಕಾನಂದ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜಸೇವಾ ಬಳಗದ ವತಿಯಿಂದ ಜರುಗಿದ ‘ಸ್ವಾಮಿ ವಿವೇಕಾನಂದರ 123ನೇ ಸ್ಮರಣೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿವೇಕಾನಂದರು ವಿಶ್ವಕ್ಕೆ ಹೊಸ ಬೆಳಕು ನೀಡಿದವರು. ಅವರ ಒಂದೊಂದು ಮಾತು ಯುವಕರಿಗೆ […]

Continue Reading

ಜ.5 ರಂದು ಸುನಾಮಿ ಭವಿಷ್ಯ ನುಡಿದ ಬಾಬ ವಂಗಾ, ನಿನ್ನೆ ಪ್ರಿಡಿಕ್ಷನ್ ನಿಜವಾದ ಬೆನ್ನಲ್ಲೆ ಆತಂಕ

ಟೊಕಿಯೋ: ಭೂಕಂಪ, ಸುನಾಮಿ, ಪ್ರವಾಹ ಸೇರಿದಂತೆ ಹಲವು ಪ್ರಾಕೃತಿಕ ವಿಕೋಪಗಳ ಕುರಿತು ಖ್ಯಾತ ಜ್ಯೋತಿಷಿ ಬಾಬಾ ವಂಗಾ ನುಡಿದ ಭವಿಷ್ಯಗಳು ನಿಜವಾಗಿದೆ. ಜುಲೈ 3 ರಂದು ಬಾಬಾ ವಂಗಾ ಭೂಕಂಪದ ಭವಿಷ್ಯ ನುಡಿದಿದ್ದರು. ದ್ವೀಪದಲ್ಲಿ ಭೂಕಂಪ ಸಂಭವಿಸಲಿದೆ ಎಂಬ ಅವರ ಭವಿಷ್ಯ ನಿಜವಾಗಿದೆ. ಜಪಾನ್‌ನ ಟೊಕಾರ ದ್ವೀಪದಲ್ಲಿ ಜುಲೈ 3 ರಂದು 5.5 ತೀವ್ರತೆಯ ಭೂಕಂಪ ಸಂಭವಿಸಿತ್ತು. ಇದೀಗ ಬಾಬ ವಂಗಾ ಜುಲೈ 5 ರಂದು ಸುನಾಮಿ ಅಪ್ಪಳಿಸಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಭೂಕಂಪ ಭವಿಷ್ಯ ನಿಜವಾಗಿರುವ […]

Continue Reading

ಸರ್ಕಾರದ ಕಚೇರಿಗಳು ಜನಸ್ನೇಹಿಯಾಗಿರಬೇಕು: ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ಸರ್ಕಾರಿ ಕಚೇರಿಗಳು ಜನಸ್ನೇಹಿಯಾಗಿರಬೇಕು. ಅಂದಾಗ ಮಾತ್ರ ಒಳ್ಳೆಯ ಆಡಳಿತ ಕೊಡಲು ಸಾಧ್ಯವಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು. ಪಟ್ಟಣದಲ್ಲಿ 18.41 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪ್ರಜಾಸೌಧ ಕಟ್ಟಡ ಮತ್ತು ವಿವಿಧ ಯೋಜನೆಗಳಡಿ 517 ಫಲಾನುಭವಿಗಳಿಗೆ ಸೌಲಭ್ಯ ವಿತರಿಸಿ ಮಾತನಾಡಿದ ಅವರು, ಈ‌ ಹಿಂದೆ ಮಿನಿ ವಿಧಾನಸೌಧ ಎಂದು ಕರೆಯುತ್ತಿದ್ದ ಕಟ್ಟಡಗಳಿಗೆ ಈಗ ಪ್ರಜಾ ಸೌಧ ಎಂದು ಹೆಸರಿಸಲಾಗುತ್ತಿದೆ. ಕಾರಣ ಆಡಳಿತ ಜನರಿಗೆ […]

Continue Reading

ಒಬ್ಬ ಎಂಜಿನಿಯರ್ ಹಲವು ಕಂಪನಿಗಳಲ್ಲಿ ಕೆಲಸ: ಅಮೆರಿಕದ ಸ್ಟಾರ್ಟಪ್‌ಗಳಿಗೆ ತಲೆನೋವಾದ ಭಾರತೀಯ

ಅಮೆರಿಕದ ಸ್ಟಾರ್ಟ್‌ಅಪ್ ಜಗತ್ತಿನಲ್ಲಿ ಒಬ್ಬ ಭಾರತೀಯ ಸಾಫ್ಟ್‌ವೇರ್ ಎಂಜಿನಿಯರ್ ಬಿರುಗಾಳಿ ಎಬ್ಬಿಸಿದ್ದಾನೆ. ಆತನ ಹೆಸರು ಸೋಹಮ್ ಪರೇಖ್, ಈತ ಕೆಲಸ ಮಾಡುತ್ತಿರುವ ಕಂಪನಿಗೆ ತಿಳಿಸದೆ ಇನ್ನೂ 3- 4 ಬೇರೆ ಬೇರೆ ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದ ಆರೋಪ ಈಗ ಡಿಜಿಟಲ್ ಜಗತ್ತಿನಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದೆ. ಪ್ಲೇಗ್ರೌಂಡ್ ಎಐ ಸಂಸ್ಥಾಪಕ ಸುಹೇಲ್ ದೋಷಿ ಈ ಬಾಂಬ್ ಸಿಡಿಸುತ್ತಿದ್ದಂತೆ, ಟೆಕ್ ಲೋಕದ ಹಲವು ಜನರು ತಮಗೂ ಇದೆ ರೀತಿಯ ಅನುಭವ ಆಗಿರುವುದನ್ನು ಹಂಚಿಕೊಳ್ಳಲು ಮುಂದೆ ಬಂದಿದ್ದಾರೆ. ಇದು ನೇಮಕಾತಿ […]

Continue Reading

30 ವರ್ಷಗಳಲ್ಲಿ ಮೊದಲ ಬಾರಿಗೆ ಘಾನಾ ದೇಶಕ್ಕೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ

ಅಕ್ರಾ: ಪ‍್ರಧಾನಿ ನರೇಂದ್ರ ಮೋದಿ ಅಪರೂಪದ ದಾಖಲೆಗೆ ಪಾತ್ರರಾಗಿದ್ದಾರೆ, 30 ವರ್ಷಗಳಲ್ಲಿ ಇದೆ ಮೊದಲ ಬಾರಿಗೆ ಘಾನಾ ದೇಶಕ್ಕೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಐದು ದೇಶಗಳ ಪ್ರವಾಸ ಕೈಗೊಂಡಿರುವ ಪ‍್ರಧಾನಿ ನರೇಂದ್ರ ಮೋದಿ ಮೊದಲಿಗೆ ಘಾನಾಕ್ಕೆ ಭೇಟಿ ನೀಡಿದರು.ಇದಾದ ಕೆಲವು ಗಂಟೆಗಳಲ್ಲಿ ಉಭಯ ರಾಷ್ಟ್ರಗಳ ನಿಯೋಗವು ಮಾತುಕತೆ ನಡೆಸಿತು. ಘಾನಾ ಅಧ್ಯಕ್ಷ ಜಾನ್‌ ಡ್ರಾಮಾನಿ ಅವರೆ ವಿಮಾನ ನಿಲ್ದಾಣದಲ್ಲಿ ಮೋದಿ ಅವರನ್ನು ಬರಮಾಡಿಕೊಂಡು, ಸ್ವಾಗತಿಸಿದರು. ಆ ಮೂಲಕ ಕಳೆದ ಮೂರು […]

Continue Reading

ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ:  ಪ್ಲಾಸ್ಟಿಕ್ ಬಳಕೆ ಹಳ್ಳಿ, ನಗರ ಸೇರಿದಂತೆ ಎಲ್ಲೆಡೆ ವ್ಯಾಪಕವಾಗಿ ಬಳಕೆಯಾಗುತ್ತಿದೆ. ಇಂದು ಜಗತ್ತನ್ನು ಆಳುತ್ತಿರುವುದು  ಪ್ಲಾಸ್ಟಿಕ್, ಮಣ್ಣಲ್ಲಿ ಕೊಳೆಯದ, ನೀರಲ್ಲಿ ಕರಗದ, ಗಾಳಿಯಲ್ಲಿ ಲೀನವಾಗದೆ ಭೂಮಿಯ ಮೇಲೆ ರಾಶಿ-ರಾಶಿ ಕಸವಾಗಿ, ಮಾಲಿನ್ಯವಾಗಿ ಪರಿಸರ ಹಾಳು ಮಾಡುತ್ತಿರುವ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕುವುದು ಅಗತ್ಯವಾಗಿದೆ ಎಂದು ಉಪನ್ಯಾಸಕ, ಪರಿಸರ ಪ್ರೇಮಿ ಎಚ್.ಬಿ ಪಾಟೀಲ ಹೇಳಿದರು.     ನಗರದ ಆಳಂದ ರಸ್ತೆಯ ಜೆ.ಆರ್.ನಗರದಲ್ಲಿರುವ ಸಕ್ಸಸ್ ಕಂಪ್ಯೂಟರ್ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಅಂತಾರಾಷ್ಟ್ರೀಯ ಪ್ಲಾಸ್ಟಿಕ್ […]

Continue Reading