ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಬೆಳೆಸುವ ಕೆಲಸ ರಾವೂರ ಸಂಸ್ಥೆ ಯಶಸ್ವಿಯಾಗಿ ಮಾಡುತ್ತಿದೆ: ಕೋಟೇಶ್ವರರಾವ

ರಾವೂರ: ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಸಂಸ್ಕಾರವನ್ನು ನೀಡಿ ಬೆಳೆಸುವ ಕೆಲಸ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ಶಿಕ್ಷಣ ಸಂಸ್ಥೆ ಗ್ರಾಮೀಣ ಭಾಗದಲ್ಲಿ ಯಶಸ್ವಿಯಾಗಿ ಮಾಡುತ್ತಿದೆ ಎಂದು ಎಸಿಸಿಯ ಸಿ ಎಸ್ ಆರ್ ಕ್ಲಸ್ಟರ್ ಹೆಡ್ ಕೋಟೇಶ್ವರರಾವ ಹೇಳಿದರು. ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ 42ನೇ ವಾರ್ಷಿಕೋತ್ಸವದ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಉತ್ತಮ ಸಂಸ್ಕಾರ ಮನೆಯಲ್ಲಿ ಮತ್ತು ಶಾಲೆಗಳಲ್ಲಿ ಸಿಗದೆ ವಿಚಿತ್ರ ಪೀಳಿಗೆ ಹುಟ್ಟುತ್ತಿದೆ. ಸಮಾಜದಲ್ಲಿ ಇಂತಹ ಪೀಳಿಗೆ ಸಮಾಜಘಾತುಕ ಚಟುವಟಿಕೆ ಮಾಡುತ್ತಿವೆ. ಸಂಸ್ಕಾರದ ಕೊರತೆಯಾದಲ್ಲಿ […]

Continue Reading

ಕೌನ್ ಬನೇಗಾ ಕರೋಡ್​ಪತಿಯಲ್ಲಿ 50 ಲಕ್ಷ ಗೆದ್ದ ಬಾಗಲಕೋಟೆಯ ಬಡ ಯುವಕ

ಜ್ಞಾನವೇ ಎಲ್ಲದಕ್ಕಿಂತ ಮಿಗಿಲಾದ ಐಶ್ವರ್ಯಾ ಎಂಬ ಮಾತಿದೆ. ಕೇವಲ ಜ್ಞಾನದಿಂದಲೇ ಬಡ ಕಾರ್ಮಿಕನ ಮಗನೊಬ್ಬ ಈಗ ಬರೋಬ್ಬರಿ 50 ಲಕ್ಷ ರೂ ಗೆದ್ದಿದ್ದಾನೆ. ತನ್ನ ಕುಟುಂಬಕ್ಕೆ ಆಧಾರವಾಗಿದ್ದಾನೆ. ಬಡ ವೆಲ್ಡರ್ ಕಾರ್ಮಿಕನ ಮಗನೊಬ್ಬ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್​ಪತಿಯಲ್ಲಿ ಬರೋಬ್ಬರಿ 50 ಲಕ್ಷ ರೂ ಗೆದ್ದಿದ್ದಾನೆ. ಅಷ್ಟಕ್ಕೂ ಈ ಯುವಕ ಬೇರೆ ಯಾವುದೋ ರಾಜ್ಯದವನಲ್ಲ. ನಮ್ಮದೆ ಕರ್ನಾಟಕದ ಬಾಗಲಕೋಟೆಯವನು. ಬಾಗಲಕೋಟೆಯ ರಬಕವಿ ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದ ಯುವಕ ರಮ್​ಜಾನ್ ಮಲಿಕ್ […]

Continue Reading

ಪಠ್ಯೇತರ ಚಟುವಟಿಕೆಗಳು ಮಕ್ಕಳಲ್ಲಿ ಸೃಜನಾತ್ಮಕತೆ ಹೆಚ್ಚಿಸುತ್ತವೆ: ಸಿಸ್ಟರ್ ಸಿಂಪ್ರೋಜ್

ಚಿತ್ತಾಪುರ: ಮಕ್ಕಳಿಗೆ ಶಿಕ್ಷಣದಲ್ಲಿ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳು ಅವಶ್ಯಕ. ವಸ್ತು ಪ್ರದರ್ಶನಗಳು ಮಕ್ಕಳಲ್ಲಿರುವ ಸೃಜನಾತ್ಮಕತೆಯನ್ನು ಹೆಚ್ಚಿಸುತ್ತವೆ ಎಂದು ಶಿಶುವಿಹಾರ ಪ್ರಾಥಮಿಕ ಶಾಲೆಯ ಮುಖ್ಯಗುರು ಸಿಸ್ಟರ್ ಸಿಂಪ್ರೋಜ್ ಹೇಳಿದ್ದಾರೆ. ಪಟ್ಟಣದ ಪ್ರಾರ್ಥನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದಲ್ಲಿ ನಡೆಯುವ ಘಟನೆಗಳ ಮೂಲಕ ಮಕ್ಕಳು ಅನೇಕ ವಿಷಯಗಳು ಕಲಿಯುತ್ತಾರೆ. ಮಕ್ಕಳಲ್ಲಿ ಅನೇಕ ಪ್ರತಿಭೆ ಇರುತ್ತವೆ. ಅಂತಹ ಪ್ರತಿಭೆಯನ್ನು ಹೊರತರುವ ಕೆಲಸ ಶಿಕ್ಷಕರು ಮಾಡಬೇಕು. ಶಿಕ್ಷಕರಿಗೆ ಪಾಲಕರು ಪ್ರೋತ್ಸಾಹಿಸುವ ಮೂಲಕ […]

Continue Reading

ಕೋಲಿ ಸಮಾಜದ ಅಧ್ಯಕ್ಷರಿಗೆ ಈಡಿಗ ಸಮಾಜದಿಂದ ಸನ್ಮಾನ

ಚಿತ್ತಾಪುರ: ಕೋಲಿ ಸಮಾಜದ ನೂತನ ಅಧ್ಯಕ್ಷ ನಿಂಗಣ್ಣಾ ಹೆಗಲೇರಿ ಹಾಗೂ ನಗರ ಘಟಕದ ಅಧ್ಯಕ್ಷ ಪ್ರಭು ಹಲಕರ್ಟಿ ಅವರನ್ನು ಈಡಿಗ ಸಮಾಜದ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಈಡಿಗ ಸಮಾಜದ ಮುಖಂಡರಾದ ನಾಗಯ್ಯ ಗುತ್ತೆದಾರ್, ಸುರೇಶ ಗುತ್ತೆದಾರ್, ಮುಖಂಡರಾದ ರಾಮಲಿಂಗ ಬಾನರ, ಬಸವರಾಜ ಚಿನ್ನಮಳ್ಳಿ, ಹಣಮಂತ ಸಂಕನೂರು, ಪಿಂಟು ಜಮಾದಾರ, ಲಕ್ಷ್ಮಿಕಾಂತ ಸಾಲಿ, ಭೀಮಣ್ಣ ಹೋತಿನಮಡಿ, ಹಣಮಂತ ಕಟ್ಟಿ, ಕರಣಕುಮಾರ ಅಲ್ಲೂರ್, ರಾಜೇಶ ಹೋಳಿಕಟ್ಟಿ, ಅಶೋಕ ಬಾನರ, ಮಲ್ಲಿಕಾರ್ಜುನ ಹೊನ್ನಪೂರ, ಶಿವಶರಣ ಹೊನ್ನಪೂರ ಇದ್ದರು.

Continue Reading

ಕೋಲಿ ಸಮಾಜದ ನೂತನ ಅಧ್ಯಕ್ಷರಿಗೆ ಡಾ.ಪ್ರಣವಾನಂದ ಸ್ವಾಮಿ ಅವರಿಂದ ಸನ್ಮಾನ

ಚಿತ್ತಾಪುರ: ತಾಲೂಕು ಕೋಲಿ ಸಮಾಜದ ನೂತನ ಅದ್ಯಕ್ಷ ನಿಂಗಣ್ಣಾ ಹೆಗಲೇರಿ ಹಾಗೂ ನಗರ ಘಟಕದ ಅಧ್ಯಕ್ಷ ಪ್ರಭು ಹಲಕರ್ಟಿ ಅವರನ್ನು ಕರದಾಳ ಗ್ರಾಮದ ಬ್ರಹ್ಮರ್ಷಿ ನಾರಾಯಣಗುರು ಶಕ್ತಿ ಪೀಠದ ಪೀಠಾಧಿಪತಿ ಡಾ.ಪ್ರಣಾವನಂದ ಸ್ವಾಮೀಜಿ ಅವರು ಸನ್ಮಾನಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಸುಲೇಪೇಠದ ದೊಡ್ಡೆಂದ್ರ ಸ್ವಾಮಿಜಿ, ಮುಖಂಡರಾದ ರಾಮಲಿಂಗ ಬಾನರ, ಬಸವರಾಜ ಚಿನ್ನಮಳ್ಳಿ, ಹಣಮಂತ ಸಂಕನೂರು, ಪಿಂಟು ಜಮಾದಾರ, ಲಕ್ಷ್ಮಿಕಾಂತ ಸಾಲಿ, ಭೀಮಣ್ಣ ಹೋತಿನಮಡಿ, ನಾಗಯ್ಯಾ ಗುತ್ತೆದಾರ, ಹಣಮಂತ ಕಟ್ಟಿ, ಕರಣಕುಮಾರ ಅಲ್ಲೂರ್, ಸುರೇಶ ಗುತ್ತೆದಾರ್, ರಾಜೇಶ ಹೋಳಿಕಟ್ಟಿ, […]

Continue Reading

ಕೋಲಿ ಸಮಾಜದ ಸಂಘಟನೆ ಬಲಪಡಿಸಲು ಲಚ್ಚಪ್ಪ ಜಮಾದಾರ ಸಲಹೆ

ಚಿತ್ತಾಪುರ: ಕೋಲಿ ಸಮಾಜದ ಸರ್ವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಾಜದ ಸಂಘಟನೆಗೆ ಶ್ರಮಿಸಬೇಕು ಎಂದು ಕರ್ನಾಟಕ ರಾಜ್ಯ ಕೋಲಿ, ಕಬ್ಬಲಿಗ ಎಸ್.ಟಿ‌ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಭೇಟಿಯಾದ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದ ಜನರಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಸಾಂಸ್ಕೃತಿಕವಾಗಿ ಅರಿವು, ಜಾಗ್ರತೆ ಮೂಡಿಸುವ ಕೆಲಸ ಮಾಡಬೇಕು. ಸಮಾಜದ ಮೇಲೆ ನಡೆಯುವ ದಬ್ಬಾಳಿಕೆ, ದೌರ್ಜನ್ಯ, ಅನ್ಯಾಯವನ್ನು ತಡೆಗಟ್ಟಲು ಪ್ರಬಲ ಹೋರಾಟ ರೂಪಿಸಬೇಕು. ಸಮಾಜದ ಜನರಿಗೆ ನ್ಯಾಯ ಕೊಡಿಸಲು ಚಳುವಳಿ ರೂಪಿಸಿ ಧ್ವನಿ […]

Continue Reading

ನಿಮಗೆ ಸಲಾಂ ಹೊಡಿಬೇಕಾ ?: ತಹಸೀಲ್ದಾರ್‌ಗೆ ಕಂದಾಯ ಸಚಿವ ತರಾಟೆ

ಬೆಂಗಳೂರು: ಪೋಡಿ ದುರಸ್ತಿ ಮುಗಿದಿದ್ದರು ಎಡಿಎಲ್‌ಆರ್‌ಗಳಿಗೆ ಕಡತಗಳನ್ನು ಕಳುಹಿಸದಿರುವ ತಹಸೀಲ್ದಾರರನ್ನು ತರಾಟೆಗೆ ತೆಗೆದುಕೊಂಡ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಜನ ನಿಮ್ಮ ಬಳಿ ಬಂದು ಸಲಾಂ ಹೊಡೀಬೇಕಾ ? ಅಲ್ಲಿ ರೈತರು ತ್ರಿಶಂಕು ಸ್ಥಿತಿಯಲ್ಲಿದ್ದು, ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ನಿಮ್ಮಂತಹವರು ಮಾಡುತ್ತಿರುವ ಕೆಲಸದಿಂದ ಇಡಿ ಇಲಾಖೆಗೆ ಕೆಟ್ಟ ಹೆಸರು ಎಂದು ಆಕ್ರೋಶ ವ್ಯಕ್ತಪಡಿಸಿದರು. ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಸೀಲ್ದಾರ್‌ ಹಾಗೂ ಎಡಿಎಲ್‌ಆ‌ರ್‌ (ಭೂ ದಾಖಲೆಯ ಸಹಾಯ ನಿರ್ದೇಶಕರು) ಅಧಿಕಾರಿಗಳ ಜತೆ ಶುಕ್ರವಾರ ವೀಡಿಯೋ ಕಾನ್ಫರೆನ್ಸ್‌ ಮೂಲಕ ಪ್ರಗತಿ ಪರಿಶೀಲನಾ […]

Continue Reading

ಅಭಿವೃದ್ದಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ದೇವಯ್ಯ ಗುತ್ತೇದಾರರಿಗೆ ಕಸಾಪದಿoದ ಸನ್ಮಾನ

ಕಲಬುರಗಿ: ಅಭಿವೃದ್ದಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ವಿಜಯ ಕರ್ನಾಟಕ ದಿನಪತ್ರಿಕೆ ಸ್ಥಾನಿಕ ಸಂಪಾದಕ ದೇವಯ್ಯ ಗುತ್ತೇದಾರ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ್ ಇಲಾಖೆ ವತಿಯಿಂದ ಕೊಡಮಾಡಿದ ಅಭಿವೃದ್ದಿ ಪತ್ರಿಕೋದ್ಯಮ ಪ್ರಶಸ್ತಿ ಪುರಸ್ಕೃತ ದೇವಯ್ಯ ಗುತ್ತೇದಾರ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ ಭುವನೇಶ್ವರಿ ಭಾವಚಿತ್ರ ನೀಡಿ, ಕನ್ನಡ ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು.‌

Continue Reading

ಕ್ರೀಡಾ ಪತ್ರಿಭೆಗಳ ಗುರುತಿಸಿ, ಪ್ರೋತ್ಸಾಹಿಸುವುದು ಅಗತ್ಯ

ಕಲಬುರಗಿ: ಕ್ರೀಡಾ ಕ್ಷೇತ್ರದಲ್ಲಿ ಎಲೆಮರೆ ಕಾಯಿಯಂತೆ ಅನೇಕ ಪ್ರತಿಭಾವಂತರಿದ್ದಾರೆ. ಅವರನ್ನು ಗುರುತಿಸಿ ಸೂಕ್ತ ತರಬೇತಿ ನೀಡಿ, ಸಾಧನೆಗೆ ಪ್ರೋತ್ಸಾಹ ನೀಡುವುದು ಅಗತ್ಯವಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಧರ್ಮಾರಾಜ ಜವಳಿ ಹೇಳಿದರು. ನಗರದ ಗಂಗಾ ನಗರದ ವಿವೇಕಾನಂದ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಹಾರಿಬಿಡುವ ಮೂಲಕ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು. ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ, ಕ್ರೀಡಾ ಚಟುವಟಿಕೆಗಲ್ಲಿಯೂ ಭಾಗವಹಿಸಬೇಕು. ಕ್ರೀಡೆಗಳಲ್ಲಿ ತೊಡಗುವುದರಿಂದ […]

Continue Reading

ಮಹಾದೇವಿ ಭೀಮನಹಳ್ಳಿ ಕಲಾ ರತ್ನ ಪ್ರಶಸ್ತಿಗೆ ಆಯ್ಕೆ

ಚಿತ್ತಾಪುರ: ತಾಲೂಕಿನ ಭೀಮನಹಳ್ಳಿ ಗ್ರಾಮದ ಜಾನಪದ ಕಲಾವಿದೆ ಮಹಾದೇವಿ ಶರಣಪ್ಪ ಹೊಸಮನಿ ಅವರು ಕಲ್ಯಾಣ ಕರ್ನಾಟಕ ರತ್ನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ರಾಜ್ಯಧ್ಯಕ್ಷ ವಿಜಯಕುಮಾರ ಸೋನಾರೆ, ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಂಗಡಿ ತಿಳಿಸಿದ್ದಾರೆ. ಜನವರಿ 11 ಮತ್ತು 12 ರಂದು ಬೀದರ್’ನಲ್ಲಿ ನಡೆಯಲಿರುವ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ದ್ವಿತೀಯ ವಾರ್ಷಿಕೋತ್ಸವ ಅಂಗವಾಗಿ ವಿಭಾಗ ಮಟ್ಟದ ತತ್ವಪದ ಸಮಾವೇಶ ಹಾಗೂ ಭಜನಾ ಸ್ಪರ್ಧೆ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದರು.

Continue Reading