ಕೊಲ್ಹಾಪುರಿ ಚಪ್ಪಲಿ ತಯಾರಿಸುವವರಲ್ಲಿ ಬಹಳ ಜನ ಕರ್ನಾಟಕದವರು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮಹಾರಾಷ್ಟ್ರದ ವೈಶಿಷ್ಟ್ಯವೆಂದು ಪರಿಗಣಿಸಲಾದ ಕೊಲ್ಹಾಪುರಿ ಚಪ್ಪಲಿಯನ್ನು ವಿಶ್ವಖ್ಯಾತ ಫ್ಯಾಷನ್ ಸಂಸ್ಥೆ ಪ್ರಾದ 1.2 ಲಕ್ಷ ರೂ ಬೆಲೆಗೆ ಮಾರಾಟ ಮಾಡುತ್ತಿದೆ ಎನ್ನುವ ಸುದ್ದಿ ಇದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ದೊರೆಯುವ ಈ ಚಪ್ಪಲಿ ತಯಾರಿಕೆಯಲ್ಲಿ ಕರ್ನಾಟಕದವರ ಪಾತ್ರವೂ ದೊಡ್ಡದಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ಬಗ್ಗೆ ಎಕ್ಸ್​​ನಲ್ಲಿ ಮಾಹಿತಿ ಪೋಸ್ಟ್ ಮಾಡಿದ್ದಾರೆ. ಕೊಲ್ಹಾಪುರಿ ಚಪ್ಪಲಿಗೆ ಕರ್ನಾಟಕದ ಕುಶಲಕರ್ಮಿಗಳಿಗೂ ಜಿಐ ಟ್ಯಾಗ್ ಪಡೆಯಲು ಹೇಗೆ ಹೋರಾಟ ಮಾಡಲಾಯಿತು ಎನ್ನುವುದನ್ನು ಖರ್ಗೆ ವಿವರಿಸಿದ್ದಾರೆ. […]

Continue Reading

25 ವರ್ಷದ ಹಳೆಯ ಬೈಕ್​ನಲ್ಲಿ ತಂದೆಯನ್ನು ಕೂರಿಸಿಕೊಂಡು ದೇಶ ಸುತ್ತಿದ ಮಗನಿಗೆ ಕಂಪನಿಯಿಂದ 14 ಲಕ್ಷದ ಬೈಕ್​ ಗಿಫ್ಟ್

ಉಡುಪಿ: ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ದೇಗುಲ ನಿರ್ಮಾಣವಾಗಿದ್ದು, ಕೋಟಿ ಕೋಟಿ ಹಿಂದುಗಳ ಕನಸು ನನಸಾಗಿದೆ. ಬಾಲರಾಮನ ದರ್ಶನ ಪಡೆದು ಭಕ್ತರು ಸಂತಸದಲ್ಲಿದ್ದಾರೆ. 25 ವರ್ಷ ಹಳೆಯದಾದ ಬೈಕ್​ನಲ್ಲಿ ಉಡುಪಿಯಿಂದ ​2,110 ಕಿ.ಮೀ ದೂರವಿರುವ ಅಯೋಧ್ಯೆಯ ಶ್ರೀರಾಮನ ದರ್ಶನ ಮಾಡಿದ ಅಪ್ಪ-ಮಗನಿಗೆ ಹದಿನಾಲ್ಕುವರೆ ಲಕ್ಷದ ಬೈಕ್ ಒಲಿದಿದೆ. ಉಡುಪಿಯ ಕಾಪು ತಾಲೂಕಿನ ಶಿರ್ವ ನಿವಾಸಿ ಪ್ರಜ್ವಲ್ ಶೆಣೈ ಅವರು 25 ವರ್ಷದ ಹಳೆಯ ಬೈಕ್​ನಲ್ಲಿ ಅಪ್ಪನನ್ನು ಕೂರಿಸಿಕೊಂಡು ದೇಶಾದ್ಯಂತ 50 ಸಾವಿರ ಕಿ.ಮೀ ಸುತ್ತಾಡಿದ್ದಾರೆ. ಹೀರೋ ಹೋಂಡಾ ಸ್ಪ್ಲೆಂಡರ್ […]

Continue Reading

ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ

ಸುದ್ದಿ ಸಂಗ್ರಹ ಶಹಾಬಾದ ಪರಿಸರ ಸಂಕ್ಷಣೆ ಮತ್ತು ನೈಸರ್ಗಿಕ ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಸಾಮೂಹಿಕ ಜವಾಬ್ದಾರಿ ಪ್ರದರ್ಶಿಸಬೇಕು ಎಂದು ಸಂತ ಥಾಮಸ್ ಶಾಲೆಯ ಫಾದರ ಜೇರಾಲ್ಡ ಸಾಗರ ಹೇಳಿದರು. ನಗರದ ಸಂತ ಥಾಮಸ್ ಶಾಲೆಯಲ್ಲಿ ಶನಿವಾರ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದಿನ ದಿನಗಳಲ್ಲಿದ್ದ ಪರಿಸರ ಕಾಳಜಿ ಇಂದಿನ ಯುವಕರಲ್ಲಿ ಉಳಿದಿಲ್ಲ. ವರ್ಷದಿಂದ ವರ್ಷಕ್ಕೆ ಮಳೆ ಕಡಿಮೆಯಾಗುತ್ತಿದ್ದು ಯುವಕರು ಪರಿಸರದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಿದೆ ಎಂದರು. ಕೆನರಾ ಬ್ಯಾಂಕಿನ ಅಧಿಕಾರಿ ಪ್ರತೀಕ […]

Continue Reading

ಪತ್ನಿ ವಿಚ್ಛೇದನ ಕೊಟ್ಟಿದ್ದಕ್ಕೆ ಆಕ್ರೋಶಗೊಂಡು Metro ರೈಲಿಗೆ ಬೆಂಕಿ ಹಚ್ಚಿದ ಪತಿ: ಪ್ರಯಾಣಿಕರ ನರಳಾಟ

ಬಾಲಿವುಡ್ ಚಿತ್ರಗಳಲ್ಲಿ ನೀನು ನನಗೆ ಸಿಗದಿದ್ದರೆ ಜಗತ್ತನ್ನೆ ಸುಡುತ್ತೆನೆ ಎಂದು ನಾಯಕ ಹೇಳುವುದನ್ನು ನಾವು ನೋಡಿದ್ದೆವೆ. ಆದರೆ ದಕ್ಷಿಣ ಕೊರಿಯಾದ ವ್ಯಕ್ತಿಯೊಬ್ಬರು ವಾಸ್ತವವಾಗಿ ಇದೆ ರೀತಿ ಕೃತ್ಯ ಎಸಗಿದ್ದಾನೆ. ತನ್ನ ಪತ್ನಿಯ ವಿಚ್ಛೇದನದಿಂದ ಆಕ್ರೋಶಗೊಂಡ ವ್ಯಕ್ತಿ ಮೆಟ್ರೋ ರೈಲಿನಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ವಾನ್ ಎಂಬ ಉಪನಾಮ ಹೊಂದಿರುವ 67 ವರ್ಷದ ವ್ಯಕ್ತಿ ಸಿಯೋಲ್‌ನಲ್ಲಿ ಚಲಿಸುವ ಮೆಟ್ರೋ ರೈಲಿನೊಳಗೆ ಬೆಂಕಿ ಹಚ್ಚಿದ ಆರೋಪದಲ್ಲಿ ಶಿಕ್ಷೆಗೊಳಗಾಗಿದ್ದಾನೆ. ಹಲವಾರು ಜನರು ಗಾಯಗೊಂಡಿದ್ದು ವ್ಯಾಪಕ ಆಸ್ತಿ ನಷ್ಟವಾಗಿದೆ. ಸಿಯೋಲ್ ದಕ್ಷಿಣ […]

Continue Reading

ಪೆಟ್ರೋಲ್ ಬಂಕ್ ಎಡವಟ್ಟು: ಸಿಎಂ ಬೆಂಗಾವಲು ಪಡೆ 19 ವಾಹನಕ್ಕೆ ಡಿಸೇಲ್ ಬದಲು ನೀರು

ಮಧ್ಯಪ್ರದೇಶ: ಸಿಎಂ ಬೆಂಗಾವಲು ವಾಹನಕ್ಕೆ ಡಿಸೇಲ್ ಬದಲು ನೀರು ತುಂಬಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪ್ರಾದೇಶಿಕ ಕೈಗಾರಿಕೆ, ಕೌಶಲ್ಯ ಮತ್ತು ಉದ್ಯೋಗ ಸಮಾವೇಶದಲ್ಲಿ (RISE 2025) ಭಾಗವಹಿಸಲು ಮಧ್ಯಪ್ರದೇಶದ ಮುಖ್ಯಮಂತ್ರಿ ಡಾ.ಮೋಹನ ಯಾದವ್ ಬೆಂಗಾವಲುಪಡೆ ವಾಹನ ಮಧ್ಯದಲ್ಲಿ ನಿಂತಿದೆ. ಏನಾಯಿತೆಂದು ನೋಡಿದಾಗ, ಡಿಸೇಲ್ ಬದಲು ನೀರು ಇರೋದು ಬೆಳಕಿಗೆ ಬಂದಿದೆ. ಸಿಎಂ ಬೆಂಗಾವಲು ಪಡೆಯ 19 ಕಾರುಗಳಿಗೆ ಡಿಸೇಲ್ ಬದಲು ನೀರು ಹಾಕಲಾಗಿದೆ. ಎಲ್ಲ ಬೆಂಗಾವಲು ವಾಹನ ಇದ್ದಕ್ಕಿದ್ದಂತೆ ಒಂದರ ನಂತರ ಮತ್ತೊಂದು ರಸ್ತೆಯಲ್ಲಿ ನಿಂತಿದ್ದರಿಂದ ಆತಂಕ […]

Continue Reading

ನಾಡಿಗೆ ಕೆಂಪೇಗೌಡರ ಕೊಡುಗೆ ಅನನ್ಯ

ಕಲಬುರಗಿ: ದೇಶದ ಹೆಮ್ಮೆಯ ಬೆಂಗಳೂರಿನ ನಿರ್ಮಾತೃ ಕೆಂಪೇಗೌಡ ಅವರು ನೂರಾರು ವರ್ಷಗಳ ಹಿಂದೆ ಉತ್ತಮ ರಸ್ತೆಗಳ ನಿರ್ಮಾಣ, ಅನೇಕ ಕೆರೆ-ಬಾವಿಗಳ ನಿರ್ಮಿಸುವುದು ಸೇರಿದಂತೆ ಅನೇಕ ಜನಪರ ಕೆಲಸಗಳನ್ನು ಮಾಡುವ ಮೂಲಕ ನಾಡಿಗೆ ತಮ್ಮದೆಯಾದ ಅನನ್ಯ ಕೊಡುಗೆ ನೀಡಿದ್ದಾರೆ ಎಂದು ಪ್ರಾಚಾರ್ಯ ರವೀಂದ್ರಕುಮಾರ ಸಿ.ಬಟಗೇರಿ ಹೇಳಿದರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ನಮನ ಸಲ್ಲಿಸಿ ಮಾತನಾಡಿದ ಅವರು, ಇಂದು ಬೆಂಗಳೂರನ್ನು ಜಾಗತಿಕ ಮಟ್ಟದಲ್ಲಿ […]

Continue Reading

ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿಗಳಿಗೆ ಆರೋಗ್ಯ ಇಲಾಖೆ ನಿಷೇಧ

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಪ್ಯಾರಾಸಿಟಮೋಲ್ ಸೇರಿದಂತೆ 15 ಅಸುರಕ್ಷಿತ ಕಾಂತಿವರ್ಧಕಗಳು ಮತ್ತು ಔಷಧಿಗಳ ಬಳಕೆಗೆ ನಿರ್ಬಂಧ ಹೇರಿದೆ. ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಜ್ವರಕ್ಕೆ ಬಳಕೆ ಮಾಡುವ ಪ್ಯಾರಾಸಿಟಮೋಲ್ ಸೇರಿದಂತೆ ಹಲವು ಉತ್ಪನ್ನಗಳಿವೆ. ಅಸುರಕ್ಷಿತ ಉತ್ಪನ್ನಗಳ ಉತ್ಪಾದನೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ […]

Continue Reading

ಆಸ್ತಿಗಾಗಿ ಹೆಣ್ಣುಮಕ್ಕಳ ಗಲಾಟೆ: 4 ಕೋಟಿ ಮೌಲ್ಯದ ಆಸ್ತಿಯನ್ನು ದೇವಸ್ಥಾನದ ಹುಂಡಿಗೆ ಹಾಕಿದ ನಿವೃತ್ತ ಸೈನಿಕ

ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಅರಣಿ ಬಳಿಯ ಪಡವೇಡುವಿನಲ್ಲಿರುವ ಅರುಲ್ಮಿಗು ರೇಣುಗಾಂಬಲ್ ಅಮ್ಮನ್ ದೇವಾಲಯದ ಅಧಿಕಾರಿಗಳಿಗೆ ದೇವಾಲಯದ ಹುಂಡಿಯಿಂದ ಕಾಣಿಕೆಗಳನ್ನು ಎಣಿಸುವಾಗ 4 ಕೋಟಿ ರೂ. ಮೌಲ್ಯದ ಆಸ್ತಿ ದಾಖಲೆಗಳು ಸಿಕ್ಕಿದೆ. ಇದರ ಮೂಲವನ್ನು ಹುಡುಕಿದಾಗ ಅದೆ ಊರಿನ ನಿವೃತ್ತ ಸೈನಿಕರೊಬ್ಬರು ಇಷ್ಟು ದೊಡ್ಡ ಪ್ರಮಾಣದ ಆಸ್ತಿಯನ್ನು ದೇವರಿಗೆ ದಾನ ನೀಡಿದ್ದಾರೆ ಎಂದು ವರದಿಯಾಗಿದೆ ಜೂನ್ 24 ರಂದು ದೇವಾಲಯದ ಸಿಬ್ಬಂದಿ ಆವರಣದೊಳಗಿನ 11 ಹುಂಡಿಗಳಲ್ಲಿ ಒಂದನ್ನು ತೆರೆದಾಗ, ಅವರಿಗೆ ಮೂಲ ಭೂಮಿ ಮತ್ತು ಮನೆ ಮಾಲೀಕತ್ವದ […]

Continue Reading

ಮಣ್ಣು ಮತ್ತು ಎತ್ತುಗಳ ಗೌರವದ ಪ್ರತೀಕವಾದ ಮಣ್ಣೆತ್ತಿನ ಹಬ್ಬ: ಎಚ್.ಬಿ ಪಾಟೀಲ

ಚಿತ್ತಾಪುರ: ಮಾನವ ಮತ್ತು ಮಣ್ಣಿಗೆ ಅವಿನಾಭಾವ ಸಂಬಂಧವಿದೆ. ರೈತರು ಕೃಷಿ ಮಾಡಿ ಆಹಾರ ಬೆಳೆಯಲು ಮಣ್ಣು ಅವಶ್ಯಕವಾಗಿದೆ. ಎತ್ತುಗಳು ರೈತನ ಪ್ರಮುಖ ಸಾಧನಗಳಾಗಿವೆ. ಮಣ್ಣು ಮತ್ತು ಎತ್ತುಗಳಿಗೆ ಗೌರವ ಸಲ್ಲಿಸುವುದು ಮಣ್ಣೆತ್ತಿನ ಅಮವಾಸ್ಯೆ ಮುಂಗಾರಿನ ಹಬ್ಬವಾಗಿದೆ ಎಂದು ಕಜಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಬಿ ಪಾಟೀಲ್ ಹೇಳಿದರು. ಮಣ್ಣೆತ್ತಿನ ಅಮವಾಸ್ಯೆ ಪ್ರಯುಕ್ತ ಬುಧವಾರ ಜರುಗಿದ ಶೆಳ್ಳಗಿ ಗ್ರಾಮದ ವೃತ್ತಿ ಕುಂಬಾರರಾದ ಬಸವರಾಜ ಕುಂಬಾರ ಅವರಿಗೆ ಸತ್ಕಾರ, ಮಣ್ಣೆತ್ತುಗಳಿಗೆ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಸತ್ಕರಿಸಿ ಮಾತನಾಡಿದ ಅವರು, ರೈತ […]

Continue Reading

ವಿಧವೆಯರ ಬಗ್ಗೆ ಉತ್ತಮ ಮನೋಭಾವನೆ ಅಗತ್ಯ

ಕಲಬುರಗಿ: ಉತ್ತಮ ಮನೋಭಾವನೆಯಿಂದ ಗೌರವಿಸಿ, ನೆಮ್ಮದಿಯಿಂದ ಬದುಕಲು ಅನವು ಮಾಡಿಕೊಡುವುದು ಜವಾಬ್ದಾರಿಯುತ ಸಮಾಜದ ಆದ್ಯ ಕರ್ತವ್ಯವಾಗಿದೆ ಎಂದು ಉಪನ್ಯಾಸಕ, ಪ್ರಗತಿಪರ ಚಿಂತಕ ಎಚ್.ಬಿ ಪಾಟೀಲ್ ಆಶಯ ವ್ಯಕ್ತಪಡಿಸಿದರು. ನಗರದ ಹೊರವಲಯದ ರಾಣೆಸ್ಪಿರ್ ದರ್ಗಾ ರಸ್ತೆಯ ನೆಮ್ಮದಿ ಹಿರಿಯರ ಮನೆ(ವೃದ್ಧಾಶ್ರಮ)’ದಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗದಿಂದ ಮಂಗಳವಾರ ಸಂಜೆ ಜರುಗಿದ ‘ಅಂತಾರಾಷ್ಟ ವಿಧವೆಯರ ದಿನಾಚರಣೆ’ ವಿಧವಾ ತಾಯಂದಿರಿಗೆ ಗೌರವಿಸಿ, ನಂತರ ಮಾತನಾಡಿದ ಅವರು, ಯಾವುದೆ ಮಹಿಳೆಯು ತನ್ನ ಪತಿ ಕಳೆದುಕೊಂಡು ವಿಧವೆಯಾಗಬೇಕು ಎಂದು ಎಂದಿಗೂ ಕೂಡಾ ಬಯಸುವುದಿಲ್ಲ. ಕಾರಣಾಂತರಗಳಿಂದ […]

Continue Reading