ಕಲಬುರಗಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಮೇಘಣ್ಣನವರ್ ಅಧಿಕಾರ ಸ್ವೀಕಾರ

ಕಲಬುರಗಿ: ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಮಹೇಶ್ ಮೇಘಣ್ಣನವರ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಶ್ರೀನಿಧಿ ಅವರು ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್‌ ಮೇಘಣ್ಣನವರ್ ಅವರಿಗೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಮಹೇಶ್ ಮೇಘಣ್ಣನವರ್ ಅವರು ಈ ಹಿಂದೆ ಬೀದರ್ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ್ದರು. ಇದೀಗ ಕಲಬುರಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

Continue Reading

ಪ್ರಿಯಾಂಕ್ ಖರ್ಗೆ ಒಬ್ಬ ಪ್ರಬುದ್ಧ ರಾಜಕಾರಣಿ, ಬಿಜೆಪಿಯವರ ಷಡ್ಯಂತ್ರ ಫಲಿಸದು: ಓಂಕಾರೇಶ್ವರ ರೇಶ್ಮಿ

ಚಿತ್ತಾಪುರ: ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆಯವರು ಒಬ್ಬ ಪ್ರಬುದ್ಧ ಹಾಗೂ ಪ್ರಾಮಾಣಿಕ ರಾಜಕಾರಣಿಗಳಾಗಿದ್ದಾರೆ. ಬಿಜೆಪಿಯವರು ನಮ್ಮ ನಾಯಕರ ಮೇಲೆ ಮಾಡುತ್ತಿರುವ ರಾಜಕೀಯ ಷಡ್ಯಂತ್ರ ಫಲಿಸದು ಎಂದು ಕಾಂಗ್ರೆಸ್ ಮುಖಂಡ ಓಂಕಾರೇಶ್ವರ ರೇಶ್ಮಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗುತ್ತಿಗೆದಾರ ಸಚಿನ ಪ್ರಕರಣದಲ್ಲಿ ನಮ್ಮ ನಾಯಕರನ್ನು ಎಳೆದು ತರುವ ವಿಫಲ ಪ್ರಯತ್ನ ಮಾಡುತ್ತಿದ್ದಾರೆ. ಈ ಪ್ರಕರಣಕ್ಕೂ ನಮ್ಮ ಪ್ರಿಯಾಂಕ್ ಖರ್ಗೆಯವರಿಗೂ ಯಾವುದೇ ಸಂಭಂದವಿಲ್ಲದಿದ್ದರು ಬಿಜೆಪಿಯವರು ಮೊಸರಲ್ಲಿ ಕಲ್ಲು ಹುಡುಕುವ […]

Continue Reading

ಶಿಕ್ಷಣ ರತ್ನ ಪ್ರಶಸ್ತಿಗೆ ಸಿದ್ದಲಿಂಗ ಬಾಳಿ ಆಯ್ಕೆ

ಚಿತ್ತಾಪುರ: ಬೆಂಗಳೂರಿನ ಅನೇಲ್ಪ್ ಗ್ರೂಪ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ‘ಶಿಕ್ಷಣರತ್ನ ಪ್ರಶಸ್ತಿ’ಗೆ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯ ಕ್ರಿಯಾಶೀಲ ಸಮಾಜ ವಿಜ್ಞಾನ ಶಿಕ್ಷಕ ಸಿದ್ದಲಿಂಗ ಬಾಳಿ ಆಯ್ಕೆಯಾಗಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಾ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರುವ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕೈಗೊಳ್ಳುತ್ತಿರುವ ವಿನೂತನ ಚಟುವಟಿಕೆಗಳಿಂದ ಈ ಭಾಗದಲ್ಲಿ ಸೃಜನಶೀಲ ಶಿಕ್ಷಕರೆಂದು ಗುರುತಿಸಿಕೊಂಡಿರುವ ಶಿಕ್ಷಕ ಸಿದ್ದಲಿಂಗ ಬಾಳಿ ಅವರಿಗೆ ನಾಳೆ ಸಂಜೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ […]

Continue Reading

ಖರ್ಗೆ ಮೇಲೆ ವ್ಯರ್ಥ ಆರೋಪ ಸಲ್ಲ: ಮಲ್ಲಪ್ಪ ಹೊಸಮನಿ

ಚಿತ್ತಾಪುರ: ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪ್ರಶ್ನೆಯೇ ಉದ್ಭವಿಸದು. ಡೆತ್ ನೋಟ್ ಕೂಲಂಕುಷವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ. ಸುಳ್ಳು ಹೇಳುವ ಬಿಜೆಪಿಯವರು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜಕೀಯ ದುರುದ್ದೇಶದಿಂದ ವ್ಯರ್ಥ ಆರೋಪ, ಹೋರಾಟ ಮುಂದುವರಿಸಿದರೆ ನಾವು ಬಿಜೆಪಿ ನಾಯಕರ ವಿರುದ್ಧ ಧರಣಿ ಮಾಡಲು ಸಿದ್ಧರಿದ್ದೆವೆ ಎಂದು ಭಾರತೀಯ ದಲಿತ ಪ್ಯಾಂಥರ್ ರಾಜ್ಯಾಧ್ಯಕ್ಷ ಮಲ್ಲಪ್ಪ ಹೊಸ್ಮನಿ ಇಂಗನಕಲ್ ಹೇಳಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿನ್ ಆತ್ಮಹತ್ಯೆ ಕುರಿತು ಸಮಗ್ರ ತನಿಖೆ […]

Continue Reading

ಸಿದ್ದರಾಮಯ್ಯ ದೇಶದಲ್ಲೇ 3ನೇ ಶ್ರೀಮಂತ ಮುಖ್ಯಮಂತ್ರಿ, ನಂಬರ್‌ ಒನ್‌ ಯಾರು ?

ನವದೆಹಲಿ: ದೇಶದಲ್ಲೇ ಅತಿ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರನೇ ಸ್ಥಾನದಲ್ಲಿದ್ದಾರೆ. ಅಸೋಸಿಯೇಷನ್‌ ಆಫ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಮತ್ತು ನ್ಯಾಷನಲ್‌ ಎಲೆಕ್ಷನ್‌ ವಾಚ್‌ ಸಂಸ್ಥೆ ಸರ್ವೆ ನಡೆಸಿ ವರದಿ ಬಿಡುಗಡೆ ಮಾಡಿದೆ. ವರದಿ ಪ್ರಕಾರ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ನಂಬರ್‌ 1 ಹಾಗೂ ಅರುಣಾಚಲ ಪ್ರದೇಶದ ಪೆಮಾ ಖಂಡು ಅವರು ನಂಬರ್‌ 2 ಶ್ರೀಮಂತ ಮುಖ್ಯಮಂತ್ರಿಗಳಾಗಿದ್ದಾರೆ. ಆಂಧ್ರ ಮುಖ್ಯಮಂತ್ರಿ 931 ಕೋಟಿ ಹಾಗೂ ಅರುಣಾಚಲ ಪ್ರದೇಶದ ಮುಖ್ಯಮಂತ್ರಿ 332 ಕೋಟಿ […]

Continue Reading

ಡಾಕಿಂಗ್‌ ಸಾಹಸಕ್ಕೆ ಇಸ್ರೋ ರೆಡಿ, ಈ ಪ್ರಯೋಗದ ಮಹತ್ವ ಗೊತ್ತಿದೆಯೇ ?

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ (ISRO) ಇಂದು ಮಹತ್ವದ ದಿನ. ಸೋಮವಾರ ರಾತ್ರಿ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್ ಡಾಕಿಂಗ್ ಎಕ್ಸ್‌ಪರಿಮೆಂಟ್ ಯೋಜನೆ ಭಾಗವಾಗಿ 2 ಉಪಗ್ರಹಗಳು ಉಡಾವಣೆಯಾಗಲಿದೆ. ಬಾಹ್ಯಾಕಾಶ ಉಪಗ್ರಹಗಳ ಡಾಕಿಂಗ್‌ ಮತ್ತು ಅನ್‌ಡಾಕಿಂಗ್‌ ಪ್ರಯೋಗ ಯಶಸ್ವಿಯಾದಲ್ಲಿ ಸ್ಪೇಡೆಕ್ಸ್‌ನಲ್ಲಿ ಯಶ ಕಂಡ ವಿಶ್ವದ 4ನೇ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ. ಎರಡು ಉಪಗ್ರಹಗಳನ್ನು ಜೋಡಿಸುವ ಹಾಗೂ ಬೇರ್ಪಡಿಸುವ ಪ್ರಯೋಗದಲ್ಲಿ ಇಲ್ಲಿಯವರೆಗೆ ಅಮೆರಿಕ, ರಷ್ಯಾ ಮತ್ತು ಚೀನಾ ಯಶಸ್ಸು ಕಂಡಿದೆ. ಈ ಪ್ರಯೋಗದ ಭಾಗವಾಗಿ […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಮನ್ ಕಿ ಬಾತ್ ವೀಕ್ಷಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ 117ನೇ ಸಂಚಿಕೆಯ ಮನ್ ಕಿ ಬಾತ್ ಕಾರ್ಯಕ್ರಮವನ್ನು ಮುಖಂಡರು ವೀಕ್ಷಿಸಿದರು. ವೀಕ್ಷಣೆಯ ನಂತರ ಬಿಜೆಪಿ ಸ್ಥಳೀಯ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜನವರಿ 26ರಂದುನಮ್ಮ ಸಂವಿಧಾನವು 75 ವರ್ಷಗಳು ಪೂರೈಸುತ್ತಿರು ಹೆಮ್ಮೆಯ ವಿಷಯದ ಬಗ್ಗೆ ಹಾಗೂ ನಾವು ಕೈಗೊಳ್ಳಬೇಕಾದ ಕಾರ್ಯಗಳನ್ನು ಪ್ರಧಾನಿ ಮೋದಿ ತಿಳಿಸಿದ್ದಾರೆ ಎಂದರು. ಸಂವಿಧಾನವು ನಮಗೆ ಮಾರ್ಗದರ್ಶಕ ಬೆಳಕು ಮತ್ತು ಮಾರ್ಗದರ್ಶನ ಮಾಡುತ್ತಿದೆ. ಇದರ ಗೌರವಾರ್ಥವಾಗಿ ಸಂವಿಧಾನದ ಪೀಠಿಕೆ ಓದಲು ಮತ್ತು ವೀಡಿಯೊಗಳನ್ನು ಹಂಚಿಕೊಳ್ಳಲು […]

Continue Reading

ಪಿಎಸ್‌ಐ ಆನಂದ ಕಾಶಿ ಸೇವೆ ಮೆಚ್ಚಿ ರಾಜ್ಯಪಾಲರಿಂದ ಪ್ರಶಂಸಾ ಪತ್ರ

ಚಿತ್ತಾಪುರ: ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಹಾಲಿ ಸದಸ್ಯ ಚಂದ್ರಶೇಖರ ಕಾಶಿ ಅವರ ಪುತ್ರ ಆನಂದ ಕಾಶಿ ಪಿಎಸ್‌ಐ ಆಗಿ ರಾಜಭವನಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಗೌರವಾನ್ವಿತ ರಾಜ್ಯಪಾಲರಾದ ತಾವರಚಂದ್ ಗೆಹ್ಲೋಟ್ ಅವರು ಪ್ರಶಂಸಾ ಪತ್ರ ನೀಡಿ ಶುಭ ಹಾರೈಸಿದ್ದಾರೆ. ಬೆಂಗಳೂರು ವಿಧಾನಸೌಧ ಪೊಲೀಸ್ ಠಾಣೆಯ ಪಿಎಸ್‌ಐ ಆನಂದ ಕಾಶಿ ಅವರಿಗೆ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಪ್ರಶಂಸಾ ಪತ್ರ ನೀಡಿ ಶುಭ ಹಾರೈಸಿದ್ದಾರೆ. ರಾಜಭವನಕ್ಕೆ ಸಂಬಂಧಿಸಿದ ಕಾರ್ಯಗಳಿಗೆ ಮಾಡಿದ ಪ್ರಯತ್ನಗಳು ಮತ್ತು ಕೆಲಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. […]

Continue Reading

ಅಯ್ಯಪ್ಪ ಸ್ವಾಮಿ ಮಹಾಪಡಿ ಪೂಜೆ: ಭಕ್ತಿಯಲ್ಲಿ ಮಿಂದೆದ್ದ ಅಯ್ಯಪ್ಪ ಮಾಲಧಾರಿಗಳು

ಚಿತ್ತಾಪುರ: ಪಟ್ಟಣದ ಬಾಲಾಜಿ ಮಂದಿರದ ಅಯ್ಯಪ್ಪಸ್ವಾಮಿ ಸನ್ನಿಧಾನದಲ್ಲಿ 20ನೇ ವರ್ಷದ ಅಯ್ಯಪ್ಪ ಸ್ವಾಮಿಯ ಮಹಾಪಡಿ ಪೂಜಾ ಕಾರ್ಯಕ್ರಮ ಆನಂದಕುಮಾರ ಗುರುಸ್ವಾಮಿ ನೇತೃತ್ವದಲ್ಲಿ ಶುಕ್ರವಾರ ಶ್ರದ್ಧೆ ಭಕ್ತಿ, ಸಂಭ್ರಮ, ಸಡಗರದಿಂದ ಅದ್ಧೂರಿಯಾಗಿ ನಡೆಯಿತು. ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಭಕ್ತಿಯಲ್ಲಿ ಮಿಂದೆದ್ದರು. ಶ್ರೀಕಾಂತ ಲಂಭೋದರ ಗುರುಸ್ವಾಮಿ ಹಾಗೂ ಅವರ ತಂಡದಿಂದ ನವಗೃಹ ಪೂಜೆ, ಗಣಪತಿ ಪೂಜೆ, ಲಕ್ಷ್ಮಿ ಪೂಜೆ, ಸುಬ್ರಹ್ಮಣ್ಯ ಪೂಜೆ, ಅಯ್ಯಪ್ಪ ಅಭಿಷೇಕ ಹಾಗೂ ಮಹಾಪಡಿ ಪೂಜೆ ನಡೆಯಿತು. ಕಾರ್ತಿಕ ನಾರಾಯಣಪೇಟ್ ಅವರ ತಂಡದಿಂದ ಅಯ್ಯಪ್ಪ ಭಕ್ತಿಗೀತೆಗಳ ಸಂಗೀತ […]

Continue Reading

ನಂದಿನಿ ಇಡ್ಲಿ, ದೋಸೆ ಹಿಟ್ಟು ಬಿಡುಗಡೆಗೊಳಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆ ಮಾಡಿದರು. ನಂದಿನಿ ವತಿಯಿಂದ ಪ್ರಥಮ ಬಾರಿಗೆ ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು. ಮಾರುಕಟ್ಟೆಯಲ್ಲಿ ಇನ್ನುಮುಂದೆ ನಂದಿನಿ ಇಡ್ಲಿ ಮತ್ತು ದೋಸೆ ಹಿಟ್ಟು ದೊರೆಯಲಿದೆ. ಈ ಸಂದರ್ಭದಲ್ಲಿ ಪಶು ಸಂಗೋಪನೆ ಹಾಗೂ ರೇಷ್ಮೆ ಸಚಿವ ವೆಂಕಟೇಶ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೆಎಂಎಫ್ ಅಧ್ಯಕ್ಷ ಭೀಮ ನಾಯ್ಕ್, […]

Continue Reading