ವಾಡಿ: ಬಿಜೆಪಿ ಕಛೇರಿಯಲ್ಲಿ ಜ್ಯೋಶಿ ಮುಖರ್ಜಿ ಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಜನಸಂಘದ ಸಂಸ್ಥಾಪಕ ಜಗನ್ನಾಥ ಜ್ಯೋಶಿ ಅವರ ಜನ್ಮದಿನಾಚರಣೆ ಹಾಗೂ ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಬಲಿದಾನದ ನಿಮಿತ್ಯ ಪಕ್ಷದ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರ ನಿಸ್ವಾರ್ಥ ದೇಶ ಸೇವೆಯನ್ನು ಬಿಜೆಪಿ ಮುಖಂಡರು ಸ್ಮರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ಜಗನ್ನಾಥರಾವ್ ಜೋಶಿ ಹಾಗೂ ಶ್ಯಾಮ್ ಪ್ರಸಾದ್ ಮುಖರ್ಜಿ ಅವರು ಜನಸಂಘದ ಕಾಲದಿಂದ ಪಕ್ಷದ ಬೆಳವಣಿಗೆಗೆ ಕಾರಣಿಕರ್ತರು ಎಂದರು. ಜ್ಯೋಶಿ […]

Continue Reading

ಮೋದಿ ಆಡಳಿತಕ್ಕೆ 11 ವರ್ಷ: ಬಿಜೆಪಿ ಮುಖಂಡರ ಸಂಭ್ರಮ

ವಾಡಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್’ಡಿಎ ಮೈತ್ರಿಕೂಟದ 11 ವರ್ಷ ಆಡಳಿತದ ಸಾಧನೆಯನ್ನು ನೆನೆದ ಬಿಜೆಪಿ ಮುಖಂಡರು ಪಕ್ಷದ ಕಛೇರಿಯ ಆವರಣದಲ್ಲಿ ಸಸಿ ನೆಟ್ಟು ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಜಗತ್ತು ಮೆಚ್ಚಿದ ವಿಶ್ವನಾಯಕ, ದಣಿವರಿಯದೆ ದೇಶದ ಅಭಿವೃದ್ಧಿಗೆ ಶ್ರಮಿಸುತ್ತಿರುವ, ದಕ್ಷ ಆಡಳಿತಗಾರ, ಸಮರ್ಥ ನಾಯಕತ್ವ, ಸ್ಪಂದನಶೀಲ ಪ್ರಧಾನಿಯಾಗಿ 11 ವರ್ಷ ಪೂರೈಸಿದ ನಮ್ಮೆಲ್ಲರ ನೆಚ್ಚಿನ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಮ್ಮೆಲ್ಲರಿಂದ ಅಭಿನಂದನೆಗಳು. 2014ರ ಮೇ 26ರಂದು ಪ್ರಧಾನಿಯಾಗಿ […]

Continue Reading

ರಾವೂರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಚಿತ್ತಾಪುರ: ಸಮೀಪದ ರಾವೂರ ಗ್ರಾಮದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶಿವರಾಜ್ ಸಿದ್ದರಾಮಪ್ಪ ಅಳೊಳ್ಳಿ, ಉಪಾಧ್ಯಕ್ಷರಾಗಿ ಬಸವರಾಜ್ ಹಿರಣ್ಣ ಹಾಲಿನೂರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾದ ಸುರೇಶ್ ಬೆಳ್ಳಗೋಳ, ದತ್ತಾತ್ರೇಯ ಕಾಳೆಕರ್, ಭೀಮಣ್ಣ ಕೆಸಬಳ್ಳಿ, ಸಿದ್ದು ಗೋಗಿ, ಸರಸ್ವತಿ ಬಿ ಜಡಿ, ಮಲ್ಲಮ್ಮ ಯರಗಲ್, ಬಾಹುಬಲಿ ಜೈನ್, ವಿಜಯ್ ಕುಮಾರ್ ಗುದಗಲ್, ರಾಯಪ್ಪ ತಳವಾರ್ ಯರಗಲ್, ಹನುಮಂತರಾಯ ವಂತಟ್ಟಿ ಗಾಂಧಿನಗರ ಉಪಸ್ಥಿತರಿದ್ದರು. ಫಲಿತಾಂಶ ಹೊರಬೀಳುತ್ತಿದ್ದಂತೆ ರಾವೂರ ಗ್ರಾಮದ ಮುಖಂಡರು, ಕಾರ್ಯಕರ್ತರು‌ ಮತ್ತು ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಆಯ್ಕೆಯಾದ […]

Continue Reading

ಕನ್ನಡ ಮತ್ತು ಶರಣ ಸಾಹಿತ್ಯಕ್ಕೆ ಜಯದೇವಿ ತಾಯಿ ಲಿಗಾಡೆ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ

ಕಲಬುರಗಿ: ಕರ್ನಾಟಕದ ಗಡಿ ಭಾಗದಲ್ಲಿನ ಮರಾಠಿ ಪ್ರಾಬಲ್ಯದಿಂದ ಕನ್ನಡ ಉಳಿಸಿ, ಬೆಳೆಸುವಲ್ಲಿ ಮತ್ತು ಶರಣ ಸಾಹಿತ್ಯದ ರಕ್ಷಕರಾಗಿ ತಮ್ಮದೆಯಾದ ಅಮೂಲ್ಯ ಕೊಡುಗೆ ಶರಣೆ ಜಯದೇವಿ ತಾಯಿ ಲಿಗಾಡೆಯವರು ನೀಡಿದ್ದಾರೆ ಎಂದು ಉಪನ್ಯಾಸಕ, ಶರಣ ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಶರಣೆ ಜಯದೇವಿ ತಾಯಿ ಲಿಗಾಡೆಯವರ 113ನೇ ಜಯಂತಿ’ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಆಧ್ಯಾತ್ಮ ಚಿಂತಕಿ, […]

Continue Reading

ಕಕ ಭಾಗದಿಂದ ಒಲಿಂಪಿಕ್ಸ್‌’ನಲ್ಲಿ ಸಾಧನೆ ಮಾಡುವಂತಾಗಲಿ

ಕಲಬುರಗಿ: ವಿದ್ಯಾರ್ಥಿ ದೆಸೆಯಿಂದಲೇ ಕಕ ಭಾಗದ ಕ್ರೀಡಾಪಟುಗಳನ್ನು ಗುರ್ತಿಸಿ, ಅವರಲ್ಲಿ ಆಸಕ್ತಿ ಮೂಡಿಸಿ, ಒಲಿಂಪಿಕ್ಸ್ ಕ್ರೀಡೆಯ ಬಗ್ಗೆ ಮಾರ್ಗದರ್ಶನ, ತರಬೇತಿ ನೀಡಿ ಅದರಲ್ಲಿ ಭಾಗವಹಿಸಿ ಸಾಧನೆ ಮಾಡುವಂತಾಗಲಿ ಎಂದು ಜಗತ್‌ನ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಗುರುಲಿಂಗಯ್ಯ ಮಠ ಆಶಯ ವ್ಯಕ್ತಪಡಿಸಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಅಂತಾರಾಷ್ಟ್ರೀಯ ಒಲಿಂಪಿಕ್ಸ್ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ವಿಶ್ವ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿರುವ ಒಲಿಂಪಿಕ್ಸ್‌’ನಲ್ಲಿ […]

Continue Reading

ಸಂಗೀತಕ್ಕಿದೆ ರೋಗ ನಿವಾರಣಾ ಶಕ್ತಿ

ಕಲಬುರಗಿ: ಸುಮಧುರ ಸಂಗೀತ ಆಲಿಸುವದರಿಂದ ಮಾನಸಿಕ ಒತ್ತಡದಿಂದ ಮುಕ್ತಗೊಳಿಸಿ, ಮನಸಿಗೆ ನೆಮ್ಮದಿ ದೊರೆಯತ್ತದೆ. ರೋಗ ನಿವಾರಣೆ ಮಾಡುವ ಶಕ್ತಿ ಸಂಗೀತಕ್ಕಿದೆ, ಇದು ವೈಜ್ಞಾನಿಕ ನಿರೂಪಣೆಯಾಗಿದ್ದು ಸಂಗೀತದ ಮಹತ್ವ ತೋರಿಸುತ್ತದೆ ಎಂದು ಖ್ಯಾತ ಗಾಯಕ, ಕಲಾವಿದ ಶರಣು ಕಾಂಬಳೆ ಅಭಿಮತಪಟ್ಟರು. ನಗರದ ಆಳಂದ ಚೆಕ್ ಪೋಸ್ಟ್ ಸಮೀಪದ ಗಾನಗಂಧರ್ವ ಸಂಗೀತ ಪಾಠಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ರವಿವಾರ ಜರುಗಿದ ‘ವಿಶ್ವ ಸಂಗೀತ ದಿನಾಚರಣೆ’ಯನ್ನು ಹಾರ್ಮೋನಿಯಂ ನುಡಿಸಿ, ಗೀತೆಯನ್ನು ಹಾಡುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕ […]

Continue Reading

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಹೊಸ ಕಾರು ಖರೀದಿ: ಬೆಲೆ ಎಷ್ಟು ಗೊತ್ತಾ ?

ಬಾಲಿವುಡ್‌ನಲ್ಲಿ ಮಿಂಚುತ್ತಿರುವ ಸ್ಟಾರ್ ಹೀರೋಗಳಲ್ಲಿ ಸಲ್ಮಾನ್ ಖಾನ್ ಪ್ರಮುಖರು. ಸಿನಿಮಾಗಳಲ್ಲಿ ಹೀರೊಯಿಸಂ ತೋರಿಸುವುದು ಮಾತ್ರವಲ್ಲದೆ 60 ವರ್ಷಕ್ಕೆ ಕಾಲಿಟ್ಟರೂ ಫಿಟ್ನೆಸ್, ಸ್ಟೈಲಿಶ್ ಲುಕ್ಸ್‌ನಿಂದ ಅಭಿಮಾನಿಗಳನ್ನು ರಂಜಿಸುತ್ತಿದ್ದಾರೆ. ದುಬಾರಿ ಜೀವನ ಶೈಲಿಯಿಂದಲೂ ಸುದ್ದಿಯಲ್ಲಿರುತ್ತಾರೆ. ಹೊಸ ಕಾರು ಖರೀದಿಸಿದ ಸಲ್ಮಾನ್ ಖಾನ್ ಸಲ್ಮಾನ್ ಖಾನ್ ಬಳಸುವ ವಸ್ತುಗಳು, ಕಾರುಗಳು ಎಲ್ಲವೂ ಕೋಟಿಗಳಲ್ಲಿವೆ. ಈಗಾಗಲೇ ಅವರ ಗ್ಯಾರೇಜ್‌ನಲ್ಲಿ ಅನೇಕ ದುಬಾರಿ ಕಾರುಗಳಿವೆ. ಇದೀಗ ಮತ್ತೊಂದು ದುಬಾರಿ ಕಾರು ಸೇರ್ಪಡೆಯಾಗಿದೆ. ಮರ್ಸಿಡಿಸ್-ಮೇಬಾಚ್ GLS 600 SUV. ಈ ಐಷಾರಾಮಿ ಕಾರಿನಲ್ಲಿ ಸಲ್ಮಾನ್ ಖಾನ್ […]

Continue Reading

ಯೋಗದ ಮೂಲಕ ದೇಹದ ಜೊತೆಗೆ ಮನಸ್ಸನ್ನು ಮಣಿಸೋಣ: ಸಿದ್ದಲಿಂಗ ಶ್ರೀ

ಚಿತ್ತಾಪುರ: ನಿತ್ಯ ಯೋಗ ಮಾಡುವ ಮೂಲಕ ದೇಹದ ಜೊತೆಗೆ ಮನಸ್ಸನ್ನು ಮಣಿಸೋಣ ಎಂದು ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು ಹೇಳಿದರು. ಸಮೀಪದ ರಾವೂರ ಗ್ರಾಮದ ಸಿದ್ದಲಿಂಗೇಶ್ವರ ವಿದ್ಯಾಭಿವೃದ್ಧಿ ಸಂಸ್ಥೆಯ ವಿವಿಧ ಪ್ರಕಲ್ಪಗಳ ಅಡಿಯಲ್ಲಿ ನಡೆದ ವಿಶ್ವ ಯೋಗ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಅಮುಲ್ಯವಾದ ದೇಹವನ್ನು ನಾವುಗಳು ಒತ್ತಡದ ಜೀವನ, ಕಲುಷಿತ ಪರಿಸರ ಮತ್ತು ವಿಷಯುಕ್ತ ಆಹಾರ ಪದ್ಧತಿಯಿಂದ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದೆವೆ. ಇದೆಲ್ಲದಕ್ಕೂ ಪರಿಹಾರವೆಂದರೆ ಯೋಗ ಮಾತ್ರ. “ಯೋಗಿ ನಿರೋಗಿ” ಎನ್ನುವ ಹಾಗೆ ಯೋಗ, […]

Continue Reading

ಭಾಗೋಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಚಿತ್ತಾಪುರ: ತಾಲೂಕಿನ ಭಾಗೋಡಿ ಗ್ರಾಮದಲ್ಲಿ ನಡೆದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶರಣಬಸಪ್ಪ ಪಾಟೀಲ, ಉಪಾಧ್ಯಕ್ಷರಾಗಿ ಮಲ್ಲಿಕಾರ್ಜುನ ದೊಡ್ಡಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ನಿರ್ದೇಶಕರಾದ ಸುಭಾಶ್ಚಂದ್ರ ಮುತ್ತಣ್ಣ ಶರಪೊದ್ದಿನ್ ಅಬ್ದುಲ ಹಮೀದ್, ಅಂಬಾರಾಯ ಹಣಮಂತರಾಯ, ಸಾಬಣ್ಣ ನರಸಪ್ಪ, ಇಂದುಶೇಖರ ನಾಗಣ್ಣ, ಸಿದ್ರಾಮಪ್ಪ ಕಾಮಣ್ಣ, ದೇವಿಂದ್ರ ಮೈಲಾರಿ, ವಿಶ್ವನಾಥ ರುದ್ರಪ್ಪ, ಶರಣಮ್ಮ ವಿಶ್ವೇಶ್ವರ, ಲಕ್ಷ್ಮೀಬಾಯಿಸಿದ್ರಾಮಪ್ಪ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮುಖಂಡರಾದ ಬಸವರಾಜಪಾಟೀಲ (ದಳಪತಿ), ಪ್ರದೀಪ ಪೂಜಾರಿ ಕದ್ದರಗಿ, ಅರುಣಯಾಗಾಪೂರ, ಮದನ ಯಾಗಾಪೂರ ಸೇರಿದಂತೆಅನೇಕರು ಉಪಸ್ಥಿತರಿದ್ದರು. […]

Continue Reading

ಮಗ ಮದುವೆಯಾಗಬೇಕಿದ್ದ ಯುವತಿಯನ್ನೆ ವರಿಸಿದ ಅಪ್ಪ

ಉತ್ತರ ಪ್ರದೇಶ: ಉತ್ತರ ಪ್ರದೇಶದ ರಾಂಪುರ ಜಿಲ್ಲೆಯ 55 ವರ್ಷದ ವ್ಯಕ್ತಿಯೊಬ್ಬ ತನ್ನ ಮಗ ಮದುವೆಯಾಗಬೇಕಿದ್ದ ವಧುವನ್ನೇ ಮದುವೆಯಾಗಿರುವ ಶಾಕಿಂಗ್ ಘಟನೆ ನಡೆದಿದೆ. 6 ಮಕ್ಕಳ ತಂದೆ ಮತ್ತು ಮೂರು ಮಕ್ಕಳ ಅಜ್ಜನಾಗಿರುವ ಶಕೀಲ್ ಎಂಬವರೇ ಮಗನಿಗೆ ನಿಶ್ಚಿಯವಾಗಿದ್ದ ಮಹಿಳೆಯನ್ನು ವರಿಸಿದರಾಗಿದ್ದು, ತಮ್ಮ ಮಗಳ ಮದುವೆಯ ನಂತರ ಸಮೀಪದ ಹಳ್ಳಿಯ 22 ವರ್ಷದ ಆಯೇಷಾ ಎಂಬ ಮಹಿಳೆಯನ್ನು ಪದೆ ಪದೆ ಭೇಟಿಯಾಗುತ್ತಿದ್ದರು ಎಂದು ಅವರ ಪತ್ನಿ ಶಬಾನಾ ಹೇಳಿದ್ದಾರೆ. ಮಗ ಅಮಾನ್ ಜೊತೆ ಆಯೇಷಾಳ ಮದುವೆ ನಿಶ್ಚಯ […]

Continue Reading