ಮಳೆಗಾಲದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಮಳೆಗಾಲದಲ್ಲಿ ಸರ್ವರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಅವಶ್ಯಕವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ಮಳೆಗಾಲದಲ್ಲಿ ಆರೋಗ್ಯದ ಮುಂಜಾಗೃತಾ ಕ್ರಮಗಳು ವಿಶೇಷ ಕಾರ್ಯಕ್ರಮ’ ಉದ್ಘಾಟಿಸಿ ಮಾತನಾಡಿದ ಅವರು, ಮಳೆಗಾಲ ಪ್ರಾರಂಭವಾಗಿದೆ ವಾತಾವರಣದ ತಂಪಾಗಿದೆ. ಡೆಂಗ್ಯೂ, ಮಲೇರಿಯಾ, ಶೀತ, ನೆಗಡಿ, ಜ್ವರ, ಅಜೀರ್ಣ ಸಮಸ್ಯೆ, ಕಾಲರಾದಂತಹ ಮುಂತಾದ ಸಾಮಾನ್ಯ ಕಾಯಿಲೆಗಳು ಕಂಡುಬರುತ್ತವೆ. ಇಂತಹ ಸಮಯದಲ್ಲಿ ರೋಗನಿರೋಧಕ […]

Continue Reading

ವ್ಯಕ್ತಿಯ ಲೋಕೇಷನ್ ಮಾಹಿತಿ ಕೊಟ್ಟಿದ್ದಕ್ಕೆ ಹಾನಗಲ್ CPI ಆಂಜನೇಯ ಅಮಾನತು

ಹಾವೇರಿ: ಸಮುದಾಯವೊಂದರ ಪ್ರಭಾವಿ ತಂಗಿದ್ದ ಸ್ಥಳದ ಬಗ್ಗೆ ಲೋಕೇಷನ್ ಸಮೇತ ಅನ್ಯರಿಗೆ ಮಾಹಿತಿ ಕೊಟ್ಟ ಆರೋಪದಡಿ ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಲೋಕೇಷನ್‌ನಿಂದ ಸಮಸ್ಯೆಗೆ ಸಿಲುಕಿದ್ದ ಹಾನಗಲ್ ಪಟ್ಟಣದ ಪ್ರಭಾವಿ ನೀಡಿದ್ದ ಮಾಹಿತಿ ಅನ್ವಯ ಪ್ರಾಥಮಿಕ ತನಿಖೆ ನಡೆಸಿ ವರದಿ ಪಡೆದಿದ್ದ ದಾವಣಗೆರೆ ವಲಯದ ಐಜಿಪಿ ರವಿಕಾಂತೇಗೌಡ ಅವರು ಸಿಪಿಐ ಆಂಜನೇಯ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಐಜಿಪಿ ಆದೇಶ ಉಲ್ಲೇಖಿಸಿ ಮತ್ತೊಂದು ಆದೇಶ ಹೊರಡಿಸಿರುವ ಜಿಲ್ಲಾ ಎಸ್ಪಿ […]

Continue Reading

ಈತ ಕಲಿಯುಗದ ಷಹಜಹಾನ್‌: ಪತ್ನಿಗಾಗಿ ತಾಜ್‌ಮಹಲ್ ನಂತಹ ಮನೆ ಕಟ್ಟಿಸಿದ ಭೂಪ

ಭೋಪಾಲ್: ತಾಜ್‍ ಮಹಲ್ ಜಗತ್ತಿನ ಏಳು ಅದ್ಭುತಗಳಲ್ಲಿ ಒಂದು. ಇದರ ಸೌಂದರ್ಯವನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಪ್ರವಾಸಿಗರು ಆಗ್ರಾಕ್ಕೆ ಭೇಟಿ ನೀಡುತ್ತಾರೆ. ಆದರೆ ಮಧ್ಯಪ್ರದೇಶದ ದಂಪತಿ ತಮ್ಮ ಮನೆಯನ್ನು ಈ ಐತಿಹಾಸಿಕ ಸ್ಮಾರಕದ ಪ್ರತಿಕೃತಿಯಂತೆ ವಿನ್ಯಾಸಗೊಳಿಸಿದ್ದಾರೆ. ಇದರ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ನೆಟ್ಟಿಗರು ಈ ಮನೆಯನ್ನು ನೋಡಿ ಫುಲ್‌ ಫಿದಾ ಆಗಿದ್ದಾರೆ. ಆನಂದ್ ಪ್ರಕಾಶ್ ಚೌಕ್ಸೆ ಮತ್ತು ಇತನ ಪತ್ನಿ ಒಡೆತನದ ನಾಲ್ಕು ಬೆಡ್ ರೂಂಗಳಿರುವ ಮನೆ ಮಧ್ಯಪ್ರದೇಶದ ಬುರ್ಹಾನ್‌ಪುರದಲ್ಲಿದೆ. ಈ ಮನೆಯನ್ನು ಮಕ್ರಾನಾ ಅಮೃತಶಿಲೆಯನ್ನು […]

Continue Reading

ಭಕ್ತರ ದೇಣಿಗೆ ಹಣ ದೇವಸ್ಥಾನದ ಅಭಿವೃದ್ಧಿಗೆ ಮಾತ್ರ ಬಳಕೆ ಮಾಡಲು ಅಂಡಗಿ ಮನವಿ

ಕಲಬುರಗಿ: ಮುಜರಾಯಿ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಸಂಗ್ರಹವಾಗುವ ಭಕ್ತರ ದೇಣಿಗೆ ಹಣ ದೇವಾಲಯದ ಅಭೀವೃದ್ಧಿಗೆ ಮಾತ್ರ ಬಳಸಿಕೊಳ್ಳಬೇಕು, ಬೇರೆ ಬೇರೆ ಯೋಜನೆಗಳಿಗೆ ಬಳಸಿಕೊಳ್ಳದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕಛೇರಿ ಮುಖಾಂತರ ಘನ ಸರ್ಕಾರದ ಮುಜರಾಯಿ ಸಚಿವರಿಗೆ ಟೆಂಗಳಿ ಅಂಡಗಿ ಪ್ರತಿಷ್ಠಾನದ ಅಧ್ಯಕ್ಷ ಶಿವರಾಜ ಅಂಡಗಿ ಮನವಿ ಮಾಡಿದ್ದಾರೆ. ಜಿಲ್ಲಾ ಧಾರ್ಮಿಕ ಪರಿಷತ್ತು ಹಾಗೂ ವಿವಿಧ ದೇವಸ್ಥಾನಗಳ ವ್ಯವಸ್ಥಾಪಕ ಮಂಡಳಿ ಇದುವರೆಗೆ ರಚನೆಯಾಗಿಲ್ಲ. ಕೂಡಲೇ ರಚನೆ ಮಾಡಿ ಭಕ್ತಿಯ ಸೇವೆ ಮಾಡುತ್ತಿರುವ ಭಕ್ತರಿಗೆ ಪರಿಷತ್ತು ಮತ್ತು ಮಂಡಳಿಯಲ್ಲಿ […]

Continue Reading

ಅಂತರಿಕ್ಷಯಾನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ಮಾರುಕಟ್ಟೆ: ಪ್ಯಾರಿಸ್ ಏರ್ ಫೋರಂ ಚರ್ಚಾಕೂಟದಲ್ಲಿ ಪ್ರಿಯಾಂಕ್ ಖರ್ಗೆ

ಬೆಂಗಳೂರು (ಪ್ಯಾರಿಸ್): ಜಾಗತಿಕ ಅಂತರಿಕ್ಷಯಾನ ಕ್ಷೇತ್ರದಲ್ಲಿ ಭಾರತ ಮೂರನೇ ಅತಿದೊಡ್ಡ ನಾಗರಿಕ ವಿಮಾನಯಾನ ಮಾರುಕಟ್ಟೆಯಾಗಿ ಬೆಳೆದಿದೆ ಮತ್ತು ವೇಗವಾಗಿ ಬೆಳೆಯುತ್ತಿರುವ ದೇಶೀಯ ವಾಯುಯಾನ ಮಾರುಕಟ್ಟೆಯಾಗಿ ಮುನ್ನಡೆ ಸಾಧಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಪ್ಯಾರಿಸ್ ಏರ್ ಫೋರಂ ಚರ್ಚಾಕೂಟದಲ್ಲಿ ನಡೆದ ಪ್ಯಾನಲ್ ಚರ್ಚೆಯಲ್ಲಿ ಮಾತನಾಡಿದ ಅವರು, ಸರ್ಕಾರಗಳ ನಡುವೆ ಮಾತ್ರವಲ್ಲದೆ, ಸಂಶೋಧನೆ ಮತ್ತು ಅಭಿವೃದ್ಧಿ ಪರಿಸರ ವ್ಯವಸ್ಥೆಗಳಲ್ಲಿಯೂ ಸಹ ಸಹಯೋಗದ ಮಹತ್ವವನ್ನು ಎತ್ತಿ ತೋರಿಸಿದರು. ಪ್ರತಿಯೊಬ್ಬ […]

Continue Reading

ಕಲಬುರಗಿ ಜಿಲ್ಲಾ ಕೋರ್ಟ್‌ನಲ್ಲಿ ನ್ಯಾಯಾಧೀಶರಿಗೆ ಹಾರ್ಟ್ ಅಟ್ಯಾಕ್: ಚೇಂಬರ್‌ನಲ್ಲಿದ್ದಾಗಲೆ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆಯ ಕೋರ್ಟ್‌ನಲ್ಲಿ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶರಾದ ವಿಶ್ವನಾಥ ಮುಗುಟಿ (44) ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೋರ್ಟ್ ಚೇಂಬರ್‌ ನಲ್ಲಿದ್ದಾಗಲೆ ಎದೆನೋವಿನ ಲಕ್ಷಣ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತ್ವರಿತವಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅದಾಗಲೇ ಅವರು ಸಾವಿಗೀಡಾಗಿದ್ದರು ಎಂಬುದಾಗಿ ವೈದ್ಯರು ದೃಢಪಡಿಸಿದ್ದಾರೆ. ಚೇಂಬರ್‌ನಲ್ಲಿಯೇ ಅಸ್ವಸ್ಥತೆಇಂದು ಬೆಳಿಗ್ಗೆ ಸದಾ ನಗುತ್ತಾ ಕೋರ್ಟ್‌ಗೆ ಆಗಮಿಸಿದ ನ್ಯಾಯಾಧೀಶರು ತಮ್ಮ ಚೇಂಬರ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಂದರ್ಭದಲ್ಲೇ ಎದೆನೋವು ಕಾಣಿಸಿಕೊಂಡಿತು. ತಕ್ಷಣ ಅವರ ಚಾಲಕ ಮತ್ತು ಕಚೇರಿ ಸಿಬ್ಬಂದಿಯ ಸಹಾಯದಿಂದ ಕಲಬುರಗಿಯ ಜಯದೇವ […]

Continue Reading

ಅಹಮದಾಬಾದ್‌ ವಿಮಾನ ಪತನ: ಮೊಬೈಲ್​ನಲ್ಲಿ ವಿಡಿಯೋ ಸೆರೆಹಿಡಿದ ಹುಡುಗನಿಗೆ ಶುರುವಾಗಿದೆ ಭಯ

ಅಹಮದಾಬಾದ್‌: ಟೇಕಾಫ್​ ಆದ ಕೆಲವೇ ಸೆಕೆಂಡ್​ಗಳಲ್ಲಿ ಅಹಮದಾಬಾದ್‌ ವಿಮಾನ ನಿಲ್ದಾಣದ ಬಳಿ ಏರ್’ಇಂಡಿಯಾ ಪತನಗೊಂಡ ಸುದ್ದಿ ಎಲ್ಲರಿಗೂ ತಿಳಿದಿದೆ. ಈ ದುರಂತ ನೆನೆಪು ಮಾಡಿಕೊಂಡರೆ ಈ ಕ್ಷಣವೂ ಕಣ್ತುಂಬಿಕೊಳ್ಳುತ್ತದೆ. 12 ಸಿಬ್ಬಂದಿ ಸೇರಿದಂತೆ 241 ಜನ ದುರ್ಘಟನೆಯಲ್ಲಿ ಸಾವಿಗೀಡಾದರು. ವಿಮಾನ ಪತನಗೊಂಡ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. ಅದರಲ್ಲೂ ಮೊಬೈಲ್​ನಲ್ಲಿ ರೆಕಾರ್ಡ್​ ಮಾಡಿ ವಿಡಿಯೋವೊಂದು ಎಲ್ಲರ ಗಮನ ಸೆಳೆಯಿತು. ಆ ವಿಡಿಯೋ ಮಾಡಿದ್ದು ಆರ್ಯನ್ ಎಂಬ ಹುಡುಗ. ಈ ವಿಡಿಯೋ ವೈರಲ್ ಆದ ನಂತರ […]

Continue Reading

UPI ಪಾವತಿ ಇನ್ನಷ್ಟು ವೇಗ: ಇಂದಿನಿಂದ 10-15 ಸೆಕೆಂಡ್‌ಗಳಲ್ಲಿ ಪಾವತಿ

ಹೊಸದಿಲ್ಲಿ: ದೇಶದಲ್ಲಿ ವ್ಯಾಪಕವಾಗಿ ಬಳಕೆಯಲ್ಲಿರುವ ಯುಪಿಐ ಸೇವೆಗಳು ಸೋಮವಾರದಿಂದ ಮತ್ತಷ್ಟು ವೇಗವನ್ನು ಪಡೆದುಕೊಳ್ಳಲಿವೆ. ಇಡಿ ವ್ಯವಸ್ಥೆಯನ್ನು ಕ್ಷಿಪ್ರಗೊಳಿಸುವ ಕ್ರಮ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ಜಾರಿ ಮಾಡಿದೆ. ಹೀಗಾಗಿ ಈ ಮೊದಲು 30 ಸೆಕೆಂಡ್‌ ತೆಗೆದುಕೊಳ್ಳುತ್ತಿದ್ದ ಸೇವೆಗಳು ಇನ್ನುಮುಂದೆ 10 ಅಥವಾ 15 ಸೆಕೆಂಡ್‌ಗಳಲ್ಲಿ ಲಭ್ಯವಾಗಲಿವೆ ಎನ್ನಲಾಗಿದೆ. ಏಕೀಕೃತ ಪಾವತಿ ಇಂಟರ್ಫೇಸ್‌ (ಯುಪಿಐ) ವ್ಯವಸ್ಥೆಯನ್ನು ನಿರ್ವಹಣೆ ಮಾಡುವ ಎನ್‌ಪಿಸಿಐ ಈ ಬಗ್ಗೆ ಎಪ್ರಿಲ್‌ನಲ್ಲಿ ಅಧಿಸೂಚನೆ ಬಿಡುಗಡೆ ಮಾಡಿತ್ತು. ಈಗ ಈ ಪ್ರಕ್ರಿಯೆ ಪೂರ್ಣಗೊಂಡಿದೆ, ಸೋಮವಾರದಿಂದ ಜಾರಿಗೆ […]

Continue Reading

ವಿಶ್ವ ಪಾರಂಪರಿಕತೆಗೆ ಮುನ್ನುಡಿ ಬರೆಯುವ ಕಾಳಗಿಯ ಚರಿತ್ರೆ: ಮುಡುಬಿ ಗುಂಡೇರಾವ

ಕಾಳಗಿ: ವಿಶ್ವ ಪಾರಂಪರಿಕತೆಗೆ ಮುನ್ನುಡಿ ಬರೆಯುವ ಕಾಳಗಿಯ ಚರಿತ್ರೆಯು ವೈಶಿಷ್ಟಪೂರ್ಣವಾಗಿದೆ, ಕಾಳಗಿಯಲ್ಲಿ ಉತ್ಖನನ ಕಾರ್ಯ ನಡೆಯುವ ಮೂಲಕ ಕನ್ನಡ ಸಂಸ್ಕೃತಿಯ ಮೇಲೆ ಹೊಸ ಬೆಳಕು ಚೆಲ್ಲಬೇಕಾಗಿದೆ ಎಂದು ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ ಅಭಿಮತವ್ಯಕ್ತಪಡಿಸಿದರು. ಪಟ್ಟಣದ ನೀಲಕಂಠ ಕಾಳೇಶ್ವರ ದೇವಾಲಯದ ಪರಿಸರದಲ್ಲಿ ಕಲಬುರಗಿ ಬಸವೇಶ್ವರ ಸೇವಾ ಬಳಗ ಆಯೋಜಿಸಿದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದ ಅವರು, ರಾಮಾಯಣ ಕಾಲದಲ್ಲಿ ದಂಡಕಾರಣ್ಯವಾಗಿತ್ತು , ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಮನ್ನೆದಡಿ ಸಾಸಿರ ನಾಡು, ಸಾವಿರ […]

Continue Reading

ಪವನ ಶಕ್ತಿಯ ಸದುಪಯೋಗದಿಂದ ವಿದ್ಯುಚ್ಛಕ್ತಿ ಸಮಸ್ಯೆ ನಿವಾರಣೆಯಾಗಲು ಸಾಧ್ಯ

ಕಲಬುರಗಿ: ಯಾವ ಪ್ರದೇಶಗಳಲ್ಲಿ ಗಾಳಿಯಿಂದ ವಿದ್ಯುಚ್ಛಕ್ತಿ ಉತ್ಪಾದನೆ ಸಾಧ್ಯವೋ, ಅಲ್ಲಿ ಪವನ-ವಿದ್ಯುಚ್ಛಕ್ತಿ ಕೇಂದ್ರಗಳ ಸ್ಥಾಪನೆ ಮಾಡಿ, ವಿದ್ಯುಚ್ಛಕ್ತಿ ಉತ್ಪಾದಿಸುವುದರತ್ತ ಗಮನಹರಿಸಬೇಕಾಗಿರುವುದು ಪ್ರಸ್ತುತವಾಗಿ ಅಗತ್ಯವಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಶಿವ ನಗರದ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ‘ಜಾಗತಿಕ ಪವನ ಶಕ್ತಿ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಪವನಶಕ್ತಿಯಿಂದ ವಿದ್ಯುಚ್ಛಕ್ತಿ ಉತ್ಪಾದನೆ ಸಾಧ್ಯವಾಗಿದೆ. ಪರಿಸರ ಮಾಲಿನ್ಯ ರಹಿತವಾಗಿದ್ದು, ಆರ್ಥಿಕ ಮಿತವ್ಯಯ ಸಾಧ್ಯವಿದೆ. ಪವನಶಕ್ತಿಯಿಂದ […]

Continue Reading