ಚಿತ್ತಾಪುರ: ತಹಸೀಲ್ ಕಚೇರಿಗೆ ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಭೇಟಿ

ಚಿತ್ತಾಪುರ: ಜಿಲ್ಲಾಧಿಕಾರಿ ಫೌಜೀಯಾ ತರನ್ನುಮ್ ಅವರು ಶನಿವಾರ ತಹಸೀಲ್ ಕಚೇರಿಗೆ ಭೇಟಿ ನೀಡಿ ಭೂ ದಾಖಲೆಗಳ ಡಿಜಿಟಲಿಕರಣ ಕೆಲಸದ ಪ್ರಗತಿ ಪರಿಶೀಲಿಸಿದರು. ನಂತರ ಕರ್ನಾಟಕ ಪಬ್ಲಿಕ್ ಶಾಲೆಯ ಹೊಸ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ನಾಗಯ್ಯ ಹಿರೇಮಠ, ಗ್ರೇಡ್ – 2 ತಹಸೀಲ್ದಾರ್ ರಾಜಕುಮಾರ್ ಮರತೂರಕರ್, ಲೋಕೋಪಯೋಗಿ ಇಲಾಖೆಯ ಎಇಇ ಮಹ್ಮದ ಇಸ್ಮಾಯಿಲ್, ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ, ಗ್ರಾಮಾಡಳಿತ ಅಧಿಕಾರಿ ಮೈನೋದ್ದಿನ್, ವಿಠಲರಾವ ಸೇರಿದಂತೆ ಅನೇಕರು ಇದ್ದರು.

Continue Reading

ಸಂತಾನಹರಣ ಶಸ್ತ್ರಚಿಕಿತ್ಸೆ ನಂತರವೂ ಮಗುವಿಗೆ ಜನ್ಮ ನೀಡಿದ ಮಹಿಳೆ: ವೈದ್ಯನಿಗೆ ದಂಡ

ಚಿತ್ರದುರ್ಗ: ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು 5 ವರ್ಷದ ನಂತರ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಾರೆ. ಅವರಿಗೆ ಸರಿಯಾಗಿ ಆಪರೇಷನ್ ಮಾಡದ ವೈದ್ಯನಿಗೆ ಜಿಲ್ಲಾ ಗ್ರಾಹಕರ ಆಯೋಗ 55 ಸಾವಿರ ರೂ. ದಂಡ ವಿಧಿಸಿದೆ. 28 ಏಪ್ರಿಲ್ 2014ರಂದು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ 2 ಮಕ್ಕಳ ತಾಯಿ ಲಕ್ಷ್ಮಮ್ಮ ಎನ್ನುವವರಿಗೆ ವೈದ್ಯ ಡಾ. ಕೆ ಶಿವಕುಮಾರ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿದ್ದರು. ಶಸ್ತ್ರಚಿಕಿತ್ಸೆ ಮಾಡಿದ ಮೇಲೆ ಕೂಡ ಲಕ್ಷ್ಮಮ್ಮ ಗರ್ಭಿಣಿಯಾಗಿ 26 ಜನೆವರಿ 2020 ರಂದು ಮಗುವಿಗೆ ಜನ್ಮ ನೀಡಿದ್ದರು. ವೈದ್ಯರು […]

Continue Reading

ಯಶಸ್ವಿನಿ ಯೋಜನೆ: 5 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ, ಹೊಸ ಸದಸ್ಯರ ನೊಂದಣಿ ಪ್ರಾರಂಭ

ಬೆಂಗಳೂರು: ಪ್ರಸಕ್ತ ಸಾಲಿನ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿಗೊಳಿಸಲು ಮತ್ತು ಈ ಯೋಜನೆಯಡಿ ಹೊಸ ಸದಸ್ಯರ ನೊಂದಣೆಗೆ ರಾಜ್ಯ ಸರಕಾರದಿಂದ ಹೊಸ ಆದೇಶ ಪ್ರಕಟಿಸಲಾಗಿದೆ. ಯಶಸ್ವಿನಿ ಯೋಜನೆಯು ಸಹಕಾರಿ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಸರಕಾರವು ಜಾರಿಗೊಳಿಸಿರುವ ಪ್ರತಿಷ್ಠಿತ ವಿಶಿಷ್ಟ ಯೋಜನೆಯಾಗಿದೆ, ಈ ಯೋಜನೆಯನ್ನು ಅನುಷ್ಥಾನ ಮಾಡಲು ಈ ವರ್ಷದ ಅಧಿಕೃತ ಮಾರ್ಗಸೂಚಿ ಹೊರಡಿಸಲಾಗಿದೆ. ಯಶಸ್ವಿನಿ ಯೋಜನೆಯಡಿ ಪ್ರಯೋಜನ ಪಡೆಯಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು ? ಅರ್ಜಿ ಎಲ್ಲಿ ಸಲ್ಲಿಸಬೇಕು ? ಅರ್ಜಿ ಸಲ್ಲಿಸಲು ಅಗತ್ಯ […]

Continue Reading

ಸಂಸ್ಕೃತಿ ಸನ್ಮಾನ್ ಹಾಗೂ ಸೀಗಿ ಸಾಹಿತ್ಯ ಪ್ರಶಸ್ತಿಗೆ ಡಾ.ಸ್ವಾಮಿರಾವ ಕುಲಕರ್ಣಿ, ಮಹಿಪಾಲರೆಡ್ಡಿ ಮುನ್ನೂರ ಆಯ್ಕೆ

ಸೇಡಂ: ಸಂಸ್ಕೃತಿ ಪ್ರಕಾಶನ ಟ್ರಸ್ಟ್ ಕೊಡಮಾಡುವ ಸಂಸ್ಕೃತಿ ಸಮ್ಮಾನ್ ಪ್ರಶಸ್ತಿಗೆ ದಾಸ ಸಾಹಿತ್ಯದ ವಿದ್ವಾಂಸ ಹಿರಿಯ ಸಾಹಿತಿ ಡಾ. ಸ್ವಾಮಿರಾವ ಕುಲಕರ್ಣಿ ಹಾಗೂ ಸಿಗಿ ಸಾಹಿತ್ಯ ಪ್ರಶಸ್ತಿಗೆ ಕ್ರಿಯಾಶೀಲ ಬರಹಗಾರ, ಲೇಖಕ, ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ ಆಯ್ಕೆಯಾಗಿದ್ದಾರೆ ಎಂದು ಸಂಸ್ಕೃತಿ ಪ್ರಕಾಶನ ಟ್ರಸ್ಟ್‌ ಅಧ್ಯಕ್ಷ ಪ್ರಭಾಕರ ಜೋಶಿ ತಿಳಿಸಿದ್ದಾರೆ. ಸಂಸ್ಕೃತಿ ಪ್ರಕಾಶನದ 35ನೇ ವಾರ್ಷಿಕೋತ್ಸವದ ಅಂಗವಾಗಿ ಸಂಸ್ಕೃತಿ ಸಮ್ಮಾನ್‌ ಪ್ರಶಸ್ತಿ ನೀಡಲಾಗುತ್ತಿದೆ. ಸಂಸ್ಕೃತಿ ಪ್ರಕಾಶನದ ಬೆಳ್ಳಿ ಹಬ್ಬದ ಸಂದರ್ಭದಲ್ಲಿ ಕೊಡಲಾಗುತ್ತಿರುವ ಸಂಸ್ಕೃತಿ ಸಮ್ಮಾನ್‌ ಪ್ರಶಸ್ತಿಯನ್ನು ಸಾಹಿತ್ಯ – […]

Continue Reading

ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಬಳೂಂಡಗಿ ಅವರಿಗೆ ಕಸಾಪದಿಂದ ಸನ್ಮಾನ

ಕಲಬುರಗಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಬಳೂಂಡಗಿ ಹಾಗೂ ರಾಜ್ಯ ಸಮಿತಿಗೆ ಆಯ್ಕೆಯಾದ ಧರ್ಮರಾಜ ಜವಳಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್ ಧನ್ನಿ, ಕೋಶಾಧ್ಯಕ್ಷ ಶರಣರಾಜ ಚಪ್ಪರಬಂದಿ ಅವರು ಸನ್ಮಾನಿಸಿ ಗೌರವಿಸಿದರು.

Continue Reading

ದೇಶದಲ್ಲೇ ಪ್ರಥಮ ಬಾರಿಗೆ ವಿಕಲಚೇತನರ ಆರೈಕೆದಾರರಿಗೆ ಮಾಸಿಕ ಸಾವಿರ ರೂ. ಭತ್ಯೆ: ಸಿಎಂ ಘೋಷಣೆ

ಬೆಂಗಳೂರು: ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ ಅವರು ಸಮಾಜದ ಆಸ್ತಿ, ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡುತ್ತಿದ್ದಾರೆ. ಈ ಬಾರಿ ವಿಶ್ವ ವಿಕಲಚೇತನರ ದಿನಾಚರಣೆಯನ್ನು “ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವ್ಯಕ್ತಿಗಳಲ್ಲಿ ನಾಯಕತ್ವದ ಉತ್ತೇಜನ” ಎಂಬ ಘೋಷ ವಾಕ್ಯದೊಂದಿಗೆ ಆಚರಿಸಿದ್ದೆವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ವರ್ಷ ನಾಲ್ಕು ಬಗೆಯ ವಿಕಲಚೇತನರ ಆರೈಕೆದಾರರಿಗೆ ಮಾಸಿಕ 1 ಸಾವಿರ ರೂ. ಆರೈಕೆದಾರರ ಭತ್ಯೆ ನೀಡುವ ಯೋಜನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಘೋಷಿಸಿದೆ, ಇದನ್ನು ಪ್ರಸಕ್ತ ಸಾಲಿನಿಂದ […]

Continue Reading

ಬಾಟಲ್‌ ನೀರು ತುಂಬಾ ಡೇಂಜರ್‌ ಎಂದ FSSAI

ನವದೆಹಲಿ: ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (FSSAI) ಪ್ಯಾಕೇಜ್‌ ಮಾಡಲಾದ ಕುಡಿಯುವ ಮತ್ತು ಮಿನರಲ್‌ ವಾಟರ್‌ ವಿಭಾಗವನ್ನು ಹೆಚ್ಚಿನ ಅಪಾಯದ ಆಹಾರ ವರ್ಗ ಎಂದು ಪರಿಗಣಿಸಲು ನಿರ್ಧರಿಸಿದೆ ಮತ್ತು ಅದನ್ನು ಕಡ್ಡಾಯ ತಪಾಸಣೆ ಮತ್ತು ಮೂರನೇ ವ್ಯಕ್ತಿಯ ಆಡಿಟ್ ಮಾನದಂಡಗಳಿಗೆ ಒಳಪಡಿಸಿದೆ. ಪ್ಯಾಕ್ ಮಾಡಲಾದ ಕುಡಿಯುವ ಮತ್ತು ಖನಿಜಯುಕ್ತ ನೀರಿನ ಉದ್ಯಮಕ್ಕಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್‌ನಿಂದ ಪ್ರಮಾಣಿಕರಣ ಪಡೆಯಬೇಕಾದ ಕಡ್ಡಾಯ ಷರತ್ತನ್ನು ತೆಗೆದು ಹಾಕಲು ಸರ್ಕಾರ ತೀರ್ಮಾನ ಮಾಡಿದ ಬೆನ್ನಲ್ಲಿಯೇ FSSAI ಈ […]

Continue Reading

ಕನ್ನಡ ಸಾಹಿತ್ಯಕ್ಕೆ ಗೋರುಚ ಕೊಡುಗೆ ಅನುಪಮ: ಡಾ.ಸಿದ್ಧತೋಟೇಂದ್ರ ಶ್ರೀ

ನಾಲವಾರ: ಹಿರಿಯ ಜಾನಪದ ವಿದ್ವಾಂಸರಾಗಿ, ಶರಣ ಸಾಹಿತ್ಯ ಪ್ರಸಾರಕರಾಗಿ, ಶ್ರೇಷ್ಠ ಸಾಹಿತಿಗಳಾಗಿ ಗೋರುಚ ಅವರು ಕನ್ನಡ ಸಾರಸ್ವತ ಲೋಕಕ್ಕೆ ನೀಡಿದ ಕೊಡುಗೆ ಅನುಪಮವಾದದ್ದು ಎಂದು ನಾಲವಾರದ ಸದ್ಗುರು ಶ್ರೀ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಮಹಾಸ್ವಾಮಿಗಳು ಹೇಳಿದರು. ಇದೇ ತಿಂಗಳು ಮಂಡ್ಯದಲ್ಲಿ ಜರುಗಲಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ನಿಯೋಜಿತ ಸರ್ವಾಧ್ಯಕ್ಷರಾಗಿರುವ ಪ್ರಯುಕ್ತ ಶ್ರೀಮಠದ ದರ್ಶನಾಶೀರ್ವಾದ ಪಡೆಯಲು ಆಗಮಿಸಿದ್ದ ನಾಡೋಜ ಡಾ.ಗೋರುಚ ಅವರನ್ನು ಶ್ರೀಮಠದ ವತಿಯಿಂದ ಆತ್ಮೀಯವಾಗಿ ಸತ್ಕರಿಸಿ ಆಶೀರ್ವಚನ ನೀಡಿದರು. ಜಾನಪದ ಅಕಾಡೆಮಿ, […]

Continue Reading

ಪತ್ನಿಗೆ ಚಿನ್ನದ ಸರ ಖರೀದಿಸಿದ ಬೆನ್ನಲ್ಲೇ 8 ಕೋಟಿ ಮನೆಗೆ ಎಂಟ್ರಿ ಮಾಡಿಸಿದ ಅದೃಷ್ಟ ಲಕ್ಷ್ಮಿ

ಅದೃಷ್ಟ ಯಾರಿಗೆ, ಯಾವಾಗ, ಯಾವ ರೂಪದಲ್ಲಿ ಒಲಿದು ಬರುತ್ತದೆ ಎಂಬುದು ಅಂದಾಜಿಸಲಾಗದು. ಸಾಮಾನ್ಯ ವ್ಯಕ್ತಿಗೆ ಲಾಟರಿ ಹೊಡೆದು ಕೋಟ್ಯಾಧಿಪತಿ ಆಗಿರುವದನ್ನು ನೋಡಿ ನಮಗ್ಯಾಕೆ ಇಂತಹ ಅದೃಷ್ಟ ಬರಬಾರದು ಎಂದು ಅಂದುಕೊಂಡಿರುತ್ತೆವೆ. ಆದರೆ ಅದೆಲ್ಲ ಕಾಲದ ಮಹಿಮೆಯಷ್ಟೆ.‌ ಇಂತಹ ಮಹಿಮೆ ಈಗ ಸಿಂಗಾಪೂರ್​ನಲ್ಲಿರುವ ಭಾರತೀಯ ಮೂಲದ ವ್ಯಕ್ತಿಯೊಬ್ಬರ ಬದುಕಲ್ಲಿ ನಡೆದಿದೆ. ಈ ಸ್ಟೋರಿ ಓದಿದರೆ ಎಂಥಾ ಅದೃಷ್ಟನಪ್ಪಾ ಎಂದು ಹುಬ್ಬೇರಿಸದೆ ಇರಲಾರರು. ಭಾರತೀಯ ಮೂಲದ ವ್ಯಕ್ತಿ ತನ್ನ ಹೆಂಡತಿಯ ಮಾತು ಕೇಳಿದ್ದಕ್ಕೆ ಈಗ 8 ಕೋಟಿ ರೂ. ಮೌಲ್ಯದ […]

Continue Reading

ಕಲಬುರಗಿ: ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 6 ಖೈದಿಗಳು ಬಿಡುಗಡೆ

ಕಲಬುರಗಿ: ಸನ್ನಡತೆ ಆಧಾರದ ಮೇಲೆ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 6 ಜನ ಖೈದಿಗಳು ಬಿಡುಗಡೆಯಾಗಿದ್ದಾರೆ. ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಾಬಣ್ಣ ಬನಾರ್, ಖಾಜಾಸಾಬ್, ಶಿವಶಂಕರ, ಬಸವರಾಜ, ರವಿ, ಬೀರಪ್ಪ ಮತ್ತು ಅಬಿದಾ ಬೇಗಂ ಬಿಡುಗಡೆಯಾಗಿದ್ದಾರೆ. ಜೈಲಿನಲ್ಲಿ ಉತ್ತಮ ನಡತೆ ತೋರಿದ ಹಿನ್ನೆಲೆಯಲ್ಲಿ ಕಾರಾಗೃಹ ಇಲಾಖೆ ಅವಧಿ ಪೂರ್ವ ಬಿಡುಗಡೆ ಮಾಡಿದೆ. ಕಾರಾಗೃಹ ಡಿಜಿ ನಿರ್ದೇಶನದ ಮೇರೆಗೆ ಕಲಬುರಗಿ ಜೈಲು ಅಧೀಕ್ಷಕಿ ಆರ್ ಅನಿತಾ ಬಿಡುಗಡೆಗೊಳಿಸಿ ಆದೇಶಿಸಿದ್ದಾರೆ.

Continue Reading