ಮಕ್ಕಳ ಭವಿಷ್ಯ ನಿರ್ಮಿಸುವ ಶಿಲ್ಪಿ ತಂದೆ: ಎಚ್.ಬಿ ಪಾಟೀಲ

ಕಲಬುರಗಿ: ತಂದೆಯ ತ್ಯಾಗ, ಪ್ರೀತಿ, ಪ್ರೇಮ ಮರೆಯಬಾರದು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ತನ್ನತನವನ್ನು ತೊರೆದು, ಎಲ್ಲವೂ ಮಕ್ಕಳಿಗಾಗಿ ದಾರೆಯೆರೆಯುವ ಮೂಲಕ ಮಕ್ಕಳ ಭವಿಷ್ಯವನ್ನು ನಿರ್ಮಿಸುವ ಶಿಲ್ಪಿ ತಂದೆಯಾಗಿದ್ದಾನೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಆಯೋಜಿಸಲಾಗಿದ್ದ ‘ವಿಶ್ವ ಅಪ್ಪಂದಿರ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಇಡಿ ಜೀವನದುದ್ದಕ್ಕೂ ಕುಟುಂಬದ ಲೇಸನ್ನು ಬಯಸುವ ಕೌಟುಂಬಿಕ ವ್ಯವಸ್ಥೆಯ ಸಫಲತೆಯಲ್ಲಿ ತಂದೆಯ ಪಾತ್ರ ಅನನ್ಯವಾಗಿದೆ ಎಂದರು. […]

Continue Reading

ಒಬ್ಬರ ರಕ್ತದಾನದಿಂದ ಮೂವರ ಜೀವ ಉಳಿಸಲು ಸಾಧ್ಯ

ಕಲಬುರಗಿ: ರಕ್ತದಾನ ಜೀವದಾನಕ್ಕೆ ಸಮ, ಮತ್ತೊಬ್ಬರಿಗೆ ಮಾಡಿದ ರಕ್ತದಾನದಿಂದ ವ್ಯಕ್ತಿ ಸತ್ತ ನಂತರವು ತಾನು ಬದುಕಿನ ಸಾರ್ಥಕತೆ ಪಡೆಯಲು ಸಾಧ್ಯ ಎಂದು 18 ಬಾರಿ ರಕ್ತದಾನ ಮಾಡಿದ ಮಾಜಿ ಸೈನಿಕ ರೇಣುಕಾಚಾರ್ಯ ಸ್ಥಾವರಮಠ ಮಾರ್ಮಿಕವಾಗಿ ಹೇಳಿದರು. ನಗರದ ಗಾಂಧಿ ನಗರದ ಆಚಾರ್ಯ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ‘ವಿಶ್ವ ರಕ್ತದಾನ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ರಕ್ತದ ಬೇಡಿಕೆ ಮತ್ತು ರಕ್ತದಾನದ ಪ್ರಮಾಣದ ನಡುವೆ […]

Continue Reading

ಶಹಾಬಾದ್: ಪೊಲೀಸ್ ಮತ್ತು ಪತ್ರಕರ್ತರಿಂದ ಉಪನ್ಯಾಸ ನಾಳೆ

ಶಹಾಬಾದ್‌: ಸೇಂಟ್ ಥಾಮಸ್‌ ಶಾಲೆಯಲ್ಲಿ ರವಿವಾರ ಬೆಳಗ್ಗೆ 10.30ಕ್ಕೆ ಪೊಲೀಸ್ ಇಲಾಖೆ ಮತ್ತು ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಮಾಜ ಸುಧಾರಣೆಯಲ್ಲಿ ಪೊಲೀಸ್ ಮತ್ತು ಪತ್ರಕರ್ತರ ಪಾತ್ರ ಕುರಿತು ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಕರ್ತರಾದ ಲೋಹಿತ ಕಟ್ಟಿ, ನಿಂಗಣ್ಣ ಜಂಬಗಿ ತಿಳಿಸಿದ್ದಾರೆ. ಜಿಲ್ಲಾ ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಮಹೇಶ ಮೇಘಣ್ಣನವರ್ ಉದ್ಘಾಟಿಸಲಿದ್ದಾರೆ, ಫಾದರ್ ಜೇರಾಲ್ಡ್ ಸಾಗರ ಸಾನ್ನಿಧ್ಯ ವಹಿಸಲಿದ್ದಾರೆ. ಡಿವೈಎಸ್‌ಪಿ ಶಂಕರಗೌಡ ಪಾಟೀಲ್‌, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ ಯಡ್ರಾಮಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ […]

Continue Reading

ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಬರೆದು 625ಕ್ಕೆ 625 ಅಂಕ ಪಡೆದು ಟಾಪರ್ ಆದ ಸಂಜನಾ

ಶಿವಮೊಗ್ಗ: ಒಂದು ಅಂಕದಿಂದ ಎಸ್ಸೆಸ್ಸೆಲ್ಸಿಯಲ್ಲಿ ಟಾಪರ್ ಕನಸು ತಪ್ಪಿಸಿಕೊಂಡಿದ್ದ ಹುಡುಗಿ ಅದೆ ಒಂದು ಅಂಕಕ್ಕಾಗಿ ಮತ್ತೊಮ್ಮೆ ಪರೀಕ್ಷೆ ಎದುರಿಸಿ 625ಕ್ಕೆ 625 ಅಂಕ ಪಡೆದು ವಿಶೇಷ ಸಾಧನೆ ಮಾಡಿದ್ದಾಳೆ. ಶಿವಮೊಗ್ಗದ ಆದಿಚುಂಚನಗಿರಿ ಪ್ರೌಢ ಶಾಲೆಯ ಸಂಜನಾ ಎಸ್ ಮೊದಲ ಪರೀಕ್ಷೆಯಲ್ಲಿ 624 ಅಂಕ ಪಡೆದಿದ್ದಳು. ಬಯಲಾಜಿಯಲ್ಲಿ ಒಂದು ಅಂಕ ಕಟ್ ಆಗಿತ್ತು. “ಥ ಇನ್ಫರ‍್ಮೇಶನ್ ಸೋರ್ಸ್ ಫಾರ್ ಮೇಕಿಂಗ್ ಪ್ರೋಟಿನ್ ಇನ್ ದ ಸೆಲ್ಸ್ ಇಸ್” ಎಂಬ ಬಹು ಆಯ್ಕೆಯ ಪ್ರಶ್ನೆಗೆ ಕೇಳಲಾಗಿತ್ತು. ಅದಕ್ಕೆ ಜೀನ್, ಕ್ರೋಮೋಜೋಮ್, […]

Continue Reading

ಹಕ್ಕಿ ಡಿಕ್ಕಿಯಿಂದ ಟೇಕಾಫ್‌ ವೇಗ ಕಳೆದುಕೊಂಡು ವಿಮಾನ ಪತನ

ನವದೆಹಲಿ: ಹಕ್ಕಿ ಡಿಕ್ಕಿಯಾಗಿ ಅಹಮಾದಬಾದ್‌ನಲ್ಲಿ ಏರ್‌ ಇಂಡಿಯಾ ವಿಮಾನ ಪತನಗೊಂಡಿತಾ ಎಂಬ ಶಂಕೆ ವ್ಯಕ್ತವಾಗಿದೆ. ವಿಮಾನ ನಿಲ್ದಾಣದಿಂದ ಟೇಕಾಫ್‌ ಆಗುವಾಗ ವಿಮಾನದ ಎಂಜಿನ್‌ಗೆ ಪಕ್ಷಿ ಬಡಿದ ಕಾರಣ ಈ ದುರಂತ ಸಂಭವಿಸಬರಬಹುದು ಎಂದು ಅನುಮಾನ ವ್ಯಕ್ತವಾಗಿದೆ. ಟೇಕಾಫ್‌ ಆಗುವಾಗ ಎಂಜಿನ್‌ಗೆ ಪಕ್ಷಿ ಬಡಿದಾಗ ವಿಮಾನ ಮುಂದಕ್ಕೆ ಹೋಗಬೇಕಾದ ವೇಗ ಅಟೋಮ್ಯಾಟಿಕ್‌ ಆಗಿ ತಗ್ಗುತ್ತದೆ ಎಂದು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸಾಧಾರಣವಾಗಿ ವಿಮಾನದ ಒಂದು ಎಂಜಿನ್‌ಗೆ ಪಕ್ಷಿ ಬಡಿದರೆ ಇನ್ನೊಂದು ಎಂಜಿನ್‌ ಮೂಲಕ ಚಾಲನೆ ಮಾಡಿ ಸಮೀಪದ ನಿಲ್ದಾಣದಲ್ಲಿ […]

Continue Reading

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರ ಸಹಕಾರ ಅಗತ್ಯ

ಚಿತ್ತಾಪುರ: ಬಾಲ ಕಾರ್ಮಿಕ ಪದ್ಧತಿಯು ಮಕ್ಕಳ ಬೆಳವಣಿಗೆಗೆ ಮಾರಕವಾಗಿದ್ದು, ಅದರ ನಿರ್ಮೂಲನೆಗೆ ಸರ್ಕಾರಗಳು ಅನೇಕ ಕಾಯ್ದೆ-ಕಾನೂನುಗಳನ್ನು ಜಾರಿಗೊಳಿಸಿದೆ. ಇವುಗಳನ್ನು ಅನುಷ್ಠಾನಗೊಳಿಸಿ ನಿರ್ಮೂಲನೆ ಮಾಡಲು ಸರ್ಕಾರ, ಕಾರ್ಮಿಕ ಇಲಾಖೆ ಶ್ರಮಿಸುತ್ತಿದೆ. ಇವರ ಜೊತೆಗೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ನಿವೃತ್ತ ಜಿಲ್ಲಾ ಕಾರ್ಮಿಕ ಅಧಿಕಾರಿ ಜಿ.ಸಿದ್ಧಲಿಂಗಪ್ಪ ಹೇಳಿದರು. ಮತಕ್ಷೇತ್ರದ ವ್ಯಾಪ್ತಿಯ ಮಾಡಬೂಳ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ‘ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ […]

Continue Reading

200 ಟನ್ ಚಿನ್ನ, 2.5 ಲಕ್ಷ ಕೋಟಿ ಮೌಲ್ಯದ ಖಜಾನೆ: 300 ವರ್ಷಗಳ ಹಿಂದೆ ಮುಳುಗಿದ ಹಡಗು ಸಿಕ್ಕಿತು

ಮಹಾಸಾಗರಗಳಲ್ಲಿ ಮುಳುಗಿರುವ ಬೃಹತ್ ಹಡಗುಗಳ ಬಗ್ಗೆ ತಿಳಿದುಕೊಳ್ಳಲು ಜನರು ಕುತೂಹಲ ಹೊಂದಿರುತ್ತಾರೆ. ದೈತ್ಯ ಹಡಗು ಟೈಟಾನಿಕ್ ಮುಳುಗಿದ್ದನ್ನು ಇಡಿ ಜಗತ್ತು ಶಾಕ್ ಆಗಿತ್ತು. ಸಮುದ್ರ ತಳದಲ್ಲಿರುವ ಟೈಟಾನಿಕ್ ಹಡಗು ನೋಡಲು ಹೋಗಿ ಪ್ರಾಣ ಕಳೆದುಕೊಂಡ ಉದಾಹರಣೆಗಳಿವೆ. ಸ್ಪ್ಯಾನಿಷ್ ಗ್ಯಾಲಿಯನ್ ಸ್ಯಾನ್ ಜೋಸ್ ಎಂಬ ಹಡಗು 317 ವರ್ಷಗಳ ಹಿಂದೆ‌ (1708ರಲ್ಲಿ) ಮುಳುಗಿತ್ತು. ಈ ಹಡಗು ಅಪಾರ ಪ್ರಮಾಣದ ಚಿನ್ನ, ವಜ್ರ ಸೇರಿದಂತೆ ದೊಡ್ಡ ಖಜಾನೆಯನ್ನು ಹೊತ್ತು ಸಾಗುತ್ತಿತ್ತು. ಹೀಗಾಗಿ ಸ್ಪ್ಯಾನಿಷ್ ಗ್ಯಾಲಿಯನ್ ಸ್ಯಾನ್ ಜೋಸ್ ಹಡಗು ಮುಳುಗಡೆ […]

Continue Reading

ಬಾಲಕಾರ್ಮಿಕತೆ ನಿಯಂತ್ರಣಕ್ಕೆ ಜನಜಾಗೃತಿ ಅವಶ್ಯಕ: ಸಿದ್ದಲಿಂಗ ಬಾಳಿ

ಸುದ್ದಿ ಸಂಗ್ರಹ ರಾವೂರ ಕಲಿಯುವ ವಯಸ್ಸಿನಲ್ಲಿ ಮಕ್ಕಳ ದುಡಿಮೆ ಆತoಕಾರಿ ಬೆಳವಣಿಗೆಯಾಗಿದೆ. ಬಾಲಕಾರ್ಮಿಕ ಪದ್ಧತಿ ನಿಯಂತ್ರಣಕ್ಕೆ ಕಠಿಣ ಕಾನೂನು ಕ್ರಮ ಹಾಗೂ ಜನಜಾಗೃತಿ ಅವಶ್ಯಕ ಎಂದು ಶಿಕ್ಷಕ ಸಿದ್ದಲಿಂಗ ಬಾಳಿ ಹೇಳಿದರು. ಶಹಾಬಾದ್ ತಾಲೂಕಿನ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ “ವಿಶ್ವ ಬಾಲಕಾರ್ಮಿಕ ವಿರೋಧಿ ದಿನ” ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ಬೆಳೆಯುವ ವಯಸ್ಸಿನಲ್ಲಿ ಮಕ್ಕಳಿಗೆ ಶಿಕ್ಷಣ, ಆಟ, ವಿರಾಮ, ಆಹಾರ ಎಲ್ಲಾ ರೀತಿಯ ಹಕ್ಕಗಳನ್ನು ಪಡೆಯಬೇಕು ಇಲ್ಲವಾದರೆ ಅವರ ಬೆಳವಣಿಗೆ ಕುಂಠಿತವಾಗುತ್ತದೆ. ಬಡತನ […]

Continue Reading

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ, ಅಲ್ಲಲ್ಲಿ ಅನಾಹುತ ಸೃಷ್ಟಿ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರ್ಭಟ ಜೋರಾಗಿದೆ, ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ವರುಣನ ಅಬ್ಬರದಿಂದ ಕೆಲವು ಕಡೆಗಳಲ್ಲಿ ಅನಾಹುತ ಸೃಷ್ಟಿಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಚಾಮರಾಜನಗರ, ಮಂಡ್ಯ, ಹಾಸನ, ಕೊಪ್ಪಳ, ರಾಯಚೂರು ಜಿಲ್ಲೆಗಳಲ್ಲಿ ಮಳೆಯಾಗಿದೆ. ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ, ಹನೂರು ಸೇರಿದಂತೆ ಎಲ್ಲೆಡೆ ಭಾರಿ ಮಳೆಯಾಗಿದೆ, ಬಿಳಿಗಿರಿರಂಗನ ಬೆಟ್ಟದಲ್ಲಿ ಸುಂದರ ಲೋಕ ಸೃಷ್ಟಿಯಾಗಿದೆ. ಮಂಡ್ಯ ನಗರದ ಬಿಎಸ್‌ಎನ್‌ಎಲ್ ಕಚೇರಿ ಬಳಿ ರಸ್ತೆಯಲ್ಲಿ ಹೆಚ್ಚು ನೀರು ನಿಂತ ಹಿನ್ನೆಲೆ ಚರಂಡಿಗೆ ಕಾರು ಉರುಳಿ ಬಿದ್ದಿದೆ. ಹಾಸನ ಜಿಲ್ಲೆಯ ಬೇಲೂರು, ಹೊಳೆನರಸೀಪುರ, […]

Continue Reading

ವಾಡಿ ಪುರಸಭೆ: 10 ವರ್ಷಕ್ಕಿಂತ ಹೆಚ್ಚು ಅವಧಿ ಕರ್ತವ್ಯದಲ್ಲಿರುವ ನೌಕರರ ವರ್ಗಾವಣೆಗೆ ಕರವೇ ಒತ್ತಾಯ

ಚಿತ್ತಾಪುರ: ವಾಡಿ ಪುರಸಭೆಯಲ್ಲಿ 3 ಜನ ನೌಕರರು 10 ರಿಂದ 15 ವರ್ಷಗಳಾದರೂ ಇನ್ನೂ ವಾಡಿಕೆಯಲ್ಲೆ ಕಾರ್ಯನಿರ್ವಹಿಸುತ್ತಿದ್ದಾರೆ, ಹೀಗಾಗಿ ಆದಷ್ಟು ಬೇಗ ಅವರನ್ನು ವರ್ಗಾವಣೆ ಮಾಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ಚಂದರ ಚವ್ಹಾಣ ಮತ್ತು ಘಟಕದ ಅಧ್ಯಕ್ಷ ಶಿವಕುಮಾರ ಗುತ್ತೆದಾರ ಅವರು ಬೆಂಗಳೂರು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಿಗೆ ಮನವಿ ಸಲ್ಲಿಸಿದ್ದಾರೆ. ತಾಲೂಕಿನ ವಾಡಿ ಪುರಸಭೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಅಧಿಕಾರಿ ಈಶ್ವರ ಅಂಬೆಕಾರ, ಪ್ರಥಮ ದರ್ಜೆ ಸಹಾಯಕ ವಿರುಪಾಕ್ಷ ಮತ್ತು ಆರೋಗ್ಯ ನಿರಿಕ್ಷಕಿ ಲತಾಮಣಿ […]

Continue Reading