35 ವರ್ಷದ ಹಿಂದೆ ಅಪ್ಪ ಖರೀದಿಸಿದ್ದ ಷೇರು ಪತ್ರ ಪತ್ತೆ: ರಾತ್ರೋರಾತ್ರಿ ಶ್ರೀಮಂತನಾದ ಮಗ

ನವದೆಹಲಿ: ಮನುಷ್ಯನಿಗೆ ಜೀವನದಲ್ಲಿ ಅದೃಷ್ಟ ಹೇಗೆಲ್ಲಾ ಖುಲಾಯಿಸಬಹುದು ಎಂದು ಊಹಿಸುವುದು ಕಷ್ಟ. ಇದೀಗ ವೈರಲ್‌ ಆಗುತ್ತಿರುವ ಈ ಸುದ್ದಿ ಅದಕ್ಕೊಂದು ಸೇರ್ಪಡೆ. ಹೌದು ಇತ್ತೀಚೆಗೆ ವ್ಯಕ್ತಿಯೊಬ್ಬರಿಗೆ ತನ್ನ ತಂದೆ 1990ರಲ್ಲಿ ಒಂದು ಲಕ್ಷ ರೂ’ಗೆ ಖರೀದಿಸಿದ್ದ ಜೆಎಸ್‌’ಡಬ್ಲ್ಯು ಸ್ಟೀಲ್‌’ನ ಹಳೆಯ ಷೇರು ಪ್ರಮಾಣಪತ್ರ ಸಿಕ್ಕಿದೆ. ಮೂರು ದಶಕಗಳ ಬಳಿಕ ಈ ಷೇರುಗಳ ಬೆಲೆ ಈಗ ಅಂದಾಜು 80 ಕೋಟಿ ರೂ ಆಗಿದೆ. ಹೂಡಿಕೆದಾರ ಸೌರವ್‌ ದತ್ತಾ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಈ ವಿಷಯವನ್ನು ಪೋಸ್ಟ್‌ ಮಾಡುವ […]

Continue Reading

ಪ್ರಗತಿಶೀಲ ಚಿಂತನೆಗೆ ಪ್ರೇರಣೆ ನೀಡುವ ದೇವನೂರು ಸಾಹಿತ್ಯ

ಕಲಬುರಗಿ: ದೇವನೂರು ಮಹಾದೇವ ಅವರು ಕೇವಲ ಸಾಹಿತಿ ಮಾತ್ರವಲ್ಲದೆ, ದಲಿತ ಹಕ್ಕುಗಳಿಗಾಗಿ ಹೋರಾಡಿದ ಸಾಮಾಜಿಕ ಹೋರಾಟಗಾರರು ಆಗಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪ್ರಮುಖ ಸಂಘಟಕರು. ಅವರ ಬರವಣಿಗೆಯು ದಲಿತರ ಮೇಲಿನ ಶೋಷಣೆ, ಕ್ರೌರ್ಯ ಹಾಗೂ ಸಾಮಾಜಿಕ ಅಸಮಾನತೆಯನ್ನು ಪ್ರಶ್ನಿಸುವ ಮೂಲಕ ಪ್ರಗತಿಶೀಲ ಚಿಂತನೆಗೆ ಪ್ರೇರಣೆ ನೀಡುತ್ತವೆ ಎಂದು ಉಪನ್ಯಾಸಕ, ಪ್ರಗತಿಪರ ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಸಂಸ್ಥೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ […]

Continue Reading

ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಜಗದೀಶ ಚವ್ಹಾಣ ಆಯ್ಕೆ

ಚಿತ್ತಾಪುರ: ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಪುರಸಭೆ ಸದಸ್ಯ ಜಗದೀಶ ಚವ್ಹಾಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಮಂಗಳವಾರ ನಡೆದ ವಿಶೇಷ ಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಹಾಗೂ ಸದಸ್ಯರ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಜಗದೀಶ್ ಚವ್ಹಾಣ ಅವರನ್ನು ಅವಿರೋಧವಾಗಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಸ್ಥಾಯಿ ಸಮಿತಿಯ ಸದಸ್ಯರಾಗಿ ಸುಮಂಗಲಾ ಸಣ್ಣೂರಕರ್, ಬೇಬಿ ಸುಭಾಷ್ ಜಾಧವ, ಶಹನಾಜ್ ಬೇಗಂ ಮಹ್ಮದ್ ಯಕ್ಬಾಲ್, ಪ್ರಭು ಗಂಗಾಣಿ ಅವರನ್ನು ಆಯ್ಕೆ ಮಾಡಲಾಯಿತು. ಪುರಸಭೆ ಮುಖ್ಯಾಧಿಕಾರಿ […]

Continue Reading

ಇಂದಿನಿಂದ ಭಾರಿ ಮಳೆ ಸಾಧ್ಯತೆ: 28 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್

ಬೆಂಗಳೂರು: ರಾಜ್ಯದ ವಿವಿಧೆಡೆ ಸೋಮವಾರದಿಂದ ಭಾರಿ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ನೀಡಿರುವ ಹವಾಮಾನ ಇಲಾಖೆ, 28 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯನ್ನು ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಕರಾವಳಿ ಜಿಲ್ಲೆಗಳ ಹಲವೆಡೆ ಸೋಮವಾರ ಮತ್ತು ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ, ಬುಧವಾರ ಈ ಜಿಲ್ಲೆಗಳಿಗೂ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ. ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ […]

Continue Reading

16 ಲಕ್ಷ ರೂ.ಗಳೊಂದಿಗೆ ನಾಪತ್ತೆಯಾದ ಪ್ರಾದೇಶಿಕ ಸಾರಿಗೆ ಕಚೇರಿ ಸಿಬ್ಬಂದಿ

ಬಳ್ಳಾರಿ: ಇಲ್ಲಿನ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಜನರಿಂದ ಸಂಗ್ರಹವಾಗಿದ್ದ 16 ಲಕ್ಷ ರೂ. ಬ್ಯಾಂಕಿಗೆ ಜಮೆ ಮಾಡದೆ ಹಣದೊಂದಿಗೆ ಎಸ್’ಡಿಎ ಸಿಬ್ಬಂದಿ ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಆರ್’ಟಿಒ ಕಚೇರಿಯ ಖಜಾನೆ (ಟ್ರೆಶರಿ) ವಿಭಾಗದ ಸಿಬ್ಬಂದಿ ರವಿ ತಾವರೆಕೆಡ 16.72 ಲಕ್ಷ ರೂ.ಗಳೊಂದಿಗೆ ನಾಪತ್ತೆಯಾಗಿದ್ದು, ಈ ಕುರಿತು ಆರ್’ಟಿಒ ಅಧಿಕಾರಿ ಶ್ರೀನಿವಾಸ್ ಗಿರಿ ನೀಡಿರುವ ದೂರಿನ ಮೇರೆಗೆ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಖಜಾನೆ ವಿಭಾಗದ ಎಸ್’ಡಿಎ ರವಿ ತಾವರೆಕೆಡ ಕಚೇರಿಯಲ್ಲಿ ಸಾರಿಗೆ ಇಲಾಖೆ ಸಾರ್ವಜನಿಕರಿಗೆ […]

Continue Reading

ನಕಲಿ ಆನ್‌ಲೈನ್‌ ಕ್ಲೀನಿಂಗ್‌ ಸೇವೆಗೆ 9 ರೂ. ಪಾವತಿಸಿ 99 ಸಾವಿರ ರೂ. ಕಳೆದುಕೊಂಡ ಮಹಿಳೆ

ಮುಂಬೈ: ನಕಲಿ ಆನ್‌ಲೈನ್ ಕ್ಲೀನಿಂಗ್ ಸೇವೆಗೆ 9 ರೂ. ಪಾವತಿ ಮಾಡಿದ ನಂತರ ಮಹಿಳೆಯೊಬ್ಬರು ಬರೋಬ್ಬರಿ 99,000 ರೂ. ಕಳೆದುಕೊಂಡಿದ್ದಾರೆ. ಮುಂಬೈನ ಅಂಧೇರಿ ಪಶ್ಚಿಮದಿಂದ ಆಘಾತಕಾರಿ ಸೈಬರ್ ವಂಚನೆ ವರದಿಯಾಗಿದೆ. ಮಧುಮೇಹ ಶಿಕ್ಷಕಿಯಾಗಿರುವ ಮಹಿಳೆ ತನ್ನ ಕಚೇರಿಯನ್ನು ಸ್ವಚ್ಛಗೊಳಿಸಲು ಆನ್‌ಲೈನ್ ಸೇವೆಯನ್ನು ಹುಡುಕುತ್ತಿದ್ದಳು. ಇಂಟರ್ನೆಟ್‌ನಲ್ಲಿ ಹುಡುಕುತ್ತಿರುವಾಗ, ‘ಅರ್ಬನ್ ಕ್ಲಬ್’ ಎಂಬ ಶುಚಿಗೊಳಿಸುವ ಸೇವೆಯನ್ನು ಕಂಡುಕೊಂಡಳು. ನಂತರ ಅಪರಿಚಿತ ವ್ಯಕ್ತಿಯೊಬ್ಬ ಆಕೆಗೆ ಕರೆ ಮಾಡಿ ನಾನು ಕಂಪನಿಯ ಪ್ರತಿನಿಧಿ ಎಂದು ಪರಿಚಯಿಸಿಕೊಂಡು ಮಹಿಳೆಗೆ ಅಪ್ಲಿಕೇಶನ್ ಡೌನ್‌ಲೋಡ್ ಮಾಡಲು ಹೇಳಿದ್ದಾನೆ. […]

Continue Reading

ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಮಗಳನ್ನೆ ಕೊಂದ ತಾಯಿ

ಹಾಸನ: ನೀರಿನ ತೊಟ್ಟಿಯಲ್ಲಿ ಮುಳುಗಿಸಿ 6 ವರ್ಷದ ಮಗಳನ್ನೆ ತಾಯಿ ಹತ್ಯೆ ಮಾಡಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಜಿನ್ನೇನಹಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಸಾನ್ವಿ (6) ತಾಯಿಯಿಂದಲೇ ಕೊಲೆಯಾದ ದುರ್ದೈವಿ ಮಗಳು. ಶ್ವೇತಾ (36) ಮಗಳನ್ನೇ ಕೊಂದ ಆರೋಪಿ. ಕಳೆದ 7 ವರ್ಷಗಳ ಹಿಂದೆ ಶಿವಮೊಗ್ಗದ ರಘು ಎಂಬವರ ಜೊತೆ ಶ್ವೇತಾ ವಿವಾಹವಾಗಿದ್ದರು. ಆರಂಭದಿಂದಲೂ ಗಂಡ-ಹೆಂಡತಿ ನಡುವೆ ಜಗಳ ನಡೆಯುತ್ತಿತ್ತು. ಕಳೆದ 4 ವರ್ಷಗಳಿಂದ ಸಾನ್ವಿಯನ್ನು ರಘು ಪೋಷಕರು ಸಾಕುತ್ತಿದ್ದರು. ಗಂಡನಿಂದ ದೂರವಾಗಿ ಶ್ವೇತಾ […]

Continue Reading

ಮದುವೆ ಮಂಟಪದಲ್ಲೆ ಪತಿಗೆ ಚಪ್ಪಲಿಯಿಂದ ಥಳಿಸಿದ ಪತ್ನಿ

ಚಿತ್ರದುರ್ಗ: ವರದಕ್ಷಿಣೆ ದುರಾಸೆಗೆ 2ನೇ ಮದುವೆಯಾಗಲು ಮುಂದಾಗಿದ್ದ ಪತಿಗೆ ಕಲ್ಯಾಣ ಮಂಟಪದಲ್ಲೆ ಪತ್ನಿ ತನ್ನ ಚಪ್ಪಲಿಯಿಂದ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಶನಿವಾರ ತಡರಾತ್ರಿ ಜರುಗಿದೆ. ಪತ್ನಿ, ಆಕೆಯ ಕುಟುಂಬಸ್ಥರಿಂದ ಪತಿ ಮತ್ತು ಆತನ ಕಡೆಯವರಿಗೆ ಸಖತ್ತಾಗಿ ಧರ್ಮದೇಟು ಬಿದ್ದವು. ನಗರದ ಗಾಯತ್ರಿ ಕಲ್ಯಾಣ ಮಂಟಪದಲ್ಲಿ ನಡೆದ ಈ ಘಟನೆಯಿಂದ ನವ ವಧು ಮತ್ತು ಕುಟುಂಬದವರು ಕಕ್ಕಾಬಿಕ್ಕಿಯಾದರು. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಮುಶೇನಾಳ ಗ್ರಾಮದ ತನುಜಾ 4 ವರ್ಷದ ಹಿಂದೆ ಚಿಕ್ಕಮಗಳೂರು ಜಿಲ್ಲೆಯ ಅರಸೀಕೆರೆಯ ತಿಪ್ಪಘಟ್ಟದ ಕಾರ್ತಿಕ್ […]

Continue Reading

ಸುರಕ್ಷಿತ ಆಹಾರ ಸೇವನೆಯಿಂದ ಸದೃಢ ಆರೋಗ್ಯ ಸಾಧ್ಯ

ಕಲಬುರಗಿ: ಮಾನವನು ಆರೋಗ್ಯಪೂರ್ಣವಾಗಿ ಜೀವಿಸಲು ಶುದ್ಧವಾದ ಆಕ್ಸಿಜನ್, ಕುಡಿಯುವ ನೀರು ಮತ್ತು ಆಹಾರ ಅವಶ್ಯಕ. ನಮ್ಮ ದೇಹಕ್ಕೆ ಬರುವ ಅನೇಕ ಕಾಯಿಲೆಗಳು ಇವುಗಳಿಗೆ ಸಂಬಂಧಿಸಿವೆ. ಶುಚಿಯಾದ, ಸತ್ವಯುತ ಮತ್ತು ಸಮತೋಲಿತವಾದ ಆಹಾರದ ಸೇವನೆಯಿಂದ ದೇಹವು ಆರೋಗ್ಯಪೂರ್ಣವಾಗಿರಲು ಸಾಧ್ಯವಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸನ್’ಲೈಟ್ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಆಹಾರ ಸುರಕ್ಷತಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾನವನ ದುರಾಸೆಯಿಂದ ನಾವು […]

Continue Reading

ಬ್ರೈನ್ ಟ್ಯೂಮರ್ ನಿರ್ಲಕ್ಷ್ಯ ಬೇಡ, ಮುಂಜಾಗ್ರತೆ ಅಗತ್ಯ: ಡಾ.ಮಂಜುನಾಥ

ಕಲಬುರಗಿ: ಆಧುನಿಕ ಒತ್ತಡ ಬದುಕು, ಅನಾರೋಗ್ಯಕರ ಜೀವನ ಶೈಲಿ, ಅಪಘಾತ, ವಿಶ್ರಾಂತಿ ಇಲ್ಲದಿರುವುದು, ರಾಸಾಯನಿಕ ಸೇವನೆ, ಅತಿಯಾದ ಮೊಬೈಲ್ ಬಳಕೆ ಸೇರಿದಂತೆ ಮತ್ತಿತರ ಕಾರಣಗಳಿಂದ ಬ್ರೈನ್ ಟ್ಯೂಮರ್ ಉಂಟಾಗುತ್ತದೆ. ಇದರ ಬಗ್ಗೆ ನಿರ್ಲಕ್ಷ್ಯ ವಹಿಸದೆ, ತಿಳಿದುಕೊಂಡು, ಮುಂಜಾಗ್ರತೆ ವಹಿಸಬೇಕಾದದ್ದು ಅವಶ್ಯಕವಾಗಿವೆ ಎಂದು ಕುಟುಂಬ ವೈದ್ಯ ಡಾ.ಮಂಜುನಾಥ ಪವಾಡಶೆಟ್ಟಿ ಸಲಹೆ ನೀಡಿದರು. ನಗರದ ಆಳಂದ ಚೆಕ್‌ಪೋಸ್ಟ್ ಸಮೀಪದ ಬಸವೇಶ್ವರ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ವಿಶ್ವ ಬ್ರೈನ್ ಟ್ಯೂಮರ್ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, […]

Continue Reading