ಹೈಕೋರ್ಟ್​ ಆದೇಶಕ್ಕೆ ಮಣಿದ ಸರ್ಕಾರ: ಐಪಿಎಸ್​ ಅಧಿಕಾರಿ ರೂಪಾಗೆ ಮುಂಬಡ್ತಿ

ಬೆಂಗಳೂರು: ಕರ್ನಾಟಕ ರೇಷ್ಮೆ ಮಾರುಕಟ್ಟೆ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಐಪಿಎಸ್​ ಮಹಿಳಾ ಅಧಿಕಾರಿ ಡಿ.ರೂಪಾ ಮೌದ್ಗಿಲ್​ ಅವರಿಗೆ ರಾಜ್ಯ ಸರ್ಕಾರ ಮುಂಬಡ್ತಿ ನೀಡಿ ಆದೇಶ ಹೊರಡಿಸಿದೆ. 2000ನೇ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿರುವ ರೂಪಾ ಅವರನ್ನು ಐಜಿಪಿಯಿಂದ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕಿಯಾಗಿ (ಎಡಿಜಿಪಿ) ಸರ್ಕಾರವು ಮುಂಬಡ್ತಿ ನೀಡಿ, ಈಗ ಇರುವ ಹುದ್ದೆಯಲ್ಲೆ ಮುಂದುವರೆಸಿದೆ. ಮುಂಬಡ್ತಿ ಸಂಬಂಧ ಡಿ. ರೂಪಾ ಅವರು ಏಪ್ರಿಲ್ 25 ರಂದು ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯವಾಗಿ ತಮಗೆ ಸಿಗಬೇಕಾದ ಬಡ್ತಿ ನೀಡುವ ಕುರಿತು […]

Continue Reading

ಕರ್ತವ್ಯದಿಂದ ನಿವೃತ್ತಿಯಾಗುವ ದಿನವೆ ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಇಂಜಿನಿಯರ್

ಧಾರವಾಡ: ಕರ್ತವ್ಯದಿಂದ ನಿವೃತ್ತಿಯಾದ ದಿನವೆ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ)ಯ ಉತ್ತರ ವಲಯ ಮುಖ್ಯ ಇಂಜಿನಿಯರ್ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ ಘಟನೆ ಶನಿವಾರ ನಡೆದಿದೆ. ಮುಖ್ಯ ಅಭಿಯಂತರ ಎಚ್ ಸುರೇಶ ಅವರ ಕಚೇರಿ, ಕೆಸಿಡಿ ಗಣಪತಿ ದೇವಸ್ಥಾನದ ಹಿಂಭಾಗದಲ್ಲಿರುವ ಸರಕಾರಿ ನಿವಾಸದ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ತಂಡಗಳು ದಾಳಿ ಮಾಡಿದ್ದು, ಕೋಟ್ಯಾಂತರ ಮೌಲ್ಯದ ಸ್ಥಿರಾಸ್ತಿ ಕಾಗದ ಪತ್ರ, ಚರಾಸ್ತಿ ವಸ್ತುಗಳು ವಶಕ್ಕೆ ಪಡೆಯಲಾಗಿದೆ. ಕರ್ತವ್ಯದಿಂದ ನಿವೃತ್ತಿ ಹಿನ್ನೆಲೆಯಲ್ಲಿ ನಿವಾಸದಲ್ಲಿ ಸತ್ಯನಾರಾಯಣ ಪೂಜೆ ಹಮ್ಮಿಕೊಳ್ಳಲಾಗಿತ್ತಲ್ಲದೆ ಇಲಾಖೆ ಸಿಬ್ಬಂದಿಗಳಿಂದ ಬೀಳ್ಕೊಡುಗೆ […]

Continue Reading

ಕಲಬುರಗಿ: ನಾಳೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಕಲಬುರಗಿ: ಮಹಾಸಾದ್ವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 603ನೇ ಜಯಂತ್ಯೋತ್ಸವ ಆಚರಣೆ ಮತ್ತು ರೆಡ್ಡಿ ಸಮಾಜದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ರೆಡ್ಡಿ ಸಮಾಜದ ಜಿಲ್ಲಾಧ್ಯಕ್ಷ ಶರಣಬಸಪ್ಪ ಕಾಮರೆಡ್ಡಿ ತಿಳಿಸಿದ್ದಾರೆ. ನಗರದ ಖೂಬಾ ಕಲ್ಯಾಣ ಮಂಟಪದಲ್ಲಿ ಜೂ.1 ರಂದು ಬೆಳಿಗ್ಗೆ 11 ಗಂಟೆಗೆ ಮಹಾಸಾದ್ವಿ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 603ನೇ ಜಯಂತ್ಯೋತ್ಸವ ಆಚರಣೆ ಮತ್ತು ರೆಡ್ಡಿ ಸಮಾಜದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದ್ದಾರೆ.

Continue Reading

ಸೇವೆಯಲ್ಲಿ ಕರ್ತವ್ಯ ಬದ್ಧತೆ, ಪ್ರಾಮಾಣಿಕತೆ ಮುಖ್ಯ

ಕಲಬುರಗಿ: ಸರ್ಕಾರಿ ನೌಕರಿ ಪಡೆಯುವುದು, ದೀರ್ಘಕಾಲ ಸೇವೆ ಸಲ್ಲಿಸುವುದು ದೊಡ್ಡ ಸಾಧನೆಯಲ್ಲ. ಬದಲಿಗೆ ದೊರೆತ ಹುದ್ದೆಗೆ ಪ್ರಾಮಾಣಿಕತೆ, ನಿಷ್ಠೆ ಹಾಗೂ ಕರ್ತವ್ಯಬದ್ಧತೆಯಿಂದ ಸೇವೆ ಸಲ್ಲಿಸಿ, ನ್ಯಾಯ ಒದಗಿಸುವುದು ಮುಖ್ಯ. ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ದಕ್ಷತೆ, ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿ, ಇಲಾಖೆ ಹಾಗೂ ಸರ್ಕಾರಿ ನೌಕರರಿಗೆ ಮಲ್ಲಿಕಾರ್ಜುನ ಜಮಾದಾರ ಮತ್ತು ದಾನಮ್ಮ ಅವರು ಮಾದರಿಯಾಗಿದ್ದಾರೆ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮನೀರ್ ಅಹಮ್ಮದ್ ಮಾರ್ಮಿಕವಾಗಿ ಹೇಳಿದರು. ನಗರದ ಸಾರ್ವಜನಿಕ ಉದ್ಯಾನವನದಲ್ಲಿರುವ ಕಿರು ಮೃಗಾಲಯದಲ್ಲಿ ಅರಣ್ಯ […]

Continue Reading

ತಂಬಾಕು, ಧೂಮಪಾನ ಸೇವನೆ ಬೇಡ: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ತಂಬಾಕು, ಧೂಮಪಾನ ಸೇವನೆಯಿಂದ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ದುಷ್ಪರಿಣಾಮವಾಗಿ ಜೀವಕ್ಕೆ ಗಂಡಾಂತರ, ಹೀಗಾಗಿ ಇವುಗಳ ಸೇವನೆ ಮಾಡಬಾರದು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದಲ್ಲಿರುವ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಶನಿವಾರ ಜರುಗಿದ ‘ವಿಶ್ವ ತಂಬಾಕು ರಹಿತ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ದೇಶದ ಒಟ್ಟು ಜನಸಂಖ್ಯೆಯಲ್ಲಿ ಅರ್ಧದಷ್ಟು ಯುವ ಶಕ್ತಿಯಿದೆ. ರಾಷ್ಟ್ರದ ಅಭಿವೃದ್ಧಿಯಲ್ಲಿ ಸದೃಢ ಮಾನವ ಸಂಪನ್ಮೂಲ ತುಂಬಾ […]

Continue Reading

ಸಮಾಜಕ್ಕೆ ಅಹಿಲ್ಯಾಬಾಯಿ ಹೋಳ್ಕರ ಕೊಡುಗೆ ಅಪಾರ: ಎಚ್.ಬಿ ಪಾಟೀಲ

ಕಲಬುರಗಿ: ಮಹಿಳಾ ಸ್ವಾತಂತ್ರ ಹೋರಾಟಗಾರ್ತಿ, ಹಿಂದುಳಿದ, ಮಹಿಳೆಯರ, ಬಡವರ ಪರ ಹೋರಾಟ ಮಾಡಿ, ಪ್ರತಿಯೊಬ್ಬರಿಗೂ ಶಿಕ್ಷಣ ದೊರೆಯಲು ಶ್ರಮಿಸಿದ, ಅನೇಕ ಕೆರೆ-ಕಟ್ಟೆಗಳನ್ನು ನಿರ್ಮಿಸಿ ಸಮಾಜಪರ ಕೆಲಸಗಳನ್ನು ಮಾಡಿದ ಅಹಿಲ್ಯಾಬಾಯಿ ಹೋಳ್ಕರ ಅವರು ಬಹುಮುಖಿ ವ್ಯಕ್ತಿತ್ವದ ಮಹಾನ ಸಾಧಕಿಯಾಗಿ ಭಾರತೀಯ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ ‘ಅಹಿಲ್ಯಾಬಾಯಿ ಹೋಳ್ಕರ್‌ರ 300ನೇ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ […]

Continue Reading

ಗುಣಮಟ್ಟದ ಶಿಕ್ಷಣ ರಾಷ್ಟ್ರದ ಅಭಿವೃದ್ಧಿಗೆ ಪೂರಕ

ಕಲಬುರಗಿ: ಶಿಕ್ಷಣವು ವ್ಯಕ್ತಿಗೆ ಜ್ಞಾನ, ಬುದ್ದಿ, ಸಂಸ್ಕಾರ, ಮಾನವೀಯತೆ, ಕೌಶಲಗಳನ್ನು ನೀಡಿ ರಾಷ್ಟ್ರದ ಸದೃಢ ಮಾನವ ಸಂಪನ್ಮೂಲ ನಿರ್ಮಾಣ ಮಾಡುವ ಮೂಲಕ ಸಾಮಾಜಿಕ ಪರಿವರ್ತನೆಯ ಪ್ರಮುಖ ಸಾಧನವಾಗಿದೆ. ಆದರೆ ಶಿಕ್ಷಣವು ಕೇವಲ ಪರಿಮಾಣಾತ್ಮಕವಾಗಿದ್ದರೆ ಪ್ರಯೋಜನೆಯಿಲ್ಲ. ಅದು ಗುಣಮಟ್ಟದಿಂದ ಕೂಡಿರಬೇಕು. ಗುಣಮಟ್ಟದ ಶಿಕ್ಷಣ ರಾಷ್ಟ್ರದ ಅಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಶಿಕ್ಷಣ ಪ್ರೇಮಿ ಡಾ.ಸುನೀಲಕುಮಾರ ಎಚ್ ವಂಟಿ ಅಭಿಪ್ರಾಯಪಟ್ಟರು. ನಗರದ ಆಸಿಫ್ ಗಂಜ್‌ನ ಕಸ್ತೂರಬಾ ಬಾಲಿಕಾ ವಸತಿ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಿದ್ಯಾರ್ಥಿ […]

Continue Reading

ಐಪಿಎಲ್ ಟಿಕೆಟ್​ ಕಾಳಸಂತೆಯಲ್ಲಿ ಮಾರಾಟ: ದಂಧೆ ಕಿಂಗ್​ಪಿನ್ ಆಗಿದ್ದ ಇಬ್ಬರು ಪೊಲೀಸರು ಸಸ್ಪೆಂಡ್

ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಟಿಕೆಟ್‌ ಕಾಳಸಂತೆ ಮಾರಾಟದಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಟಿಕೆಟ್ ಮಾರಾಟ ಮಾಡುವಾಗ ಇಬ್ಬರು ಕಾನ್ಸ್‌ಟೇಬಲ್‌ ಸಿಕ್ಕಿಬಿದ್ದಿದ್ದು, ಈ ಸಂಬಂಧ ಗೋವಿಂದರಾಜ ನಗರದ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಇದೀಗ ಇಬ್ಬರು ಪೊಲೀಸ್ ಪೇದೆಗಳನ್ನು ಸಸ್ಪೆಂಡ್ ಮಾಡಲಾಗಿದೆ. ಹಲಸೂರು ಸಂಚಾರಿ ಠಾಣೆಯ ಪೊಲೀಸ್ ಕಾನ್ಸ್​​ ಟೇಬಲ್ ರವಿಚಂದ್ರ ಹಾಗೂ ಟಿಎಂಸಿ ಸಿಬ್ಬಂದಿ ವೆಂಕಟಗಿರಿಗೌಡನನ್ನು ಸಸ್ಪೆಂಡ್ ಮಾಡಿ ಬೆಂಗಳೂರು ಸಂಚಾರ ವಿಭಾಗದ ಜಂಟಿ ಆಯುಕ್ತ ಅನುಚೇತ್ ಆದೇಶ ಹೊರಡಿಸಿದ್ದಾರೆ. ಮೇ 17 ರಂದು […]

Continue Reading

ಡಾ.ಎಚ್.ಎಸ್ ವೆಂಕಟೇಶ ಮೂರ್ತಿಯವರಿಗೆ ಶೃದ್ಧಾಂಜಲಿ

ಕಲಬುರಗಿ: ಶುಕ್ರವಾರ ನಿಧನರಾದ ಹಿರಿಯ ಸಾಹಿತಿ ಡಾ.ಎಚ್.ಎಸ್ ವೆಂಕಟೇಶ ಮೂರ್ತಿ ಅವರಿಗೆ ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶೃದ್ಧಾಂಜಲಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಎಚ್.ಬಿ ಪಾಟೀಲ, ಶಿವಯೋಗೆಪ್ಪಾ ಎಸ್. ಬಿರಾದಾರ, ದತ್ತು ಹಡಪದ, ಡಾ‌ರಾಜಶೇಖರ ಪಾಟೀಲ, ರಾಜು ಕೊರಳ್ಳಿ ಹಾಗೂ ವಿದ್ಯಾರ್ಥಿಗಳು ಇದ್ದರು.

Continue Reading

ಶೇ.30 ರಷ್ಟು ಆಯಸ್ಸು ಹೆಚ್ಚಿಸುವ ಔಷಧ ಪ್ರಯೋಗ ಯಶಸ್ವಿ: ಇಲಿಗಳ ಮೇಲೆ ಜರ್ಮನಿ ವಿಜ್ಞಾನಿಗಳ ಪ್ರಯೋಗ

ಬರ್ಲಿನ್‌: ಜೀವಿಗಳ ಆಯಸ್ಸು ಹೆಚ್ಚಿಸುವ ಕುರಿತಾದ ಜೀವವಿಜ್ಞಾನಿಗಳ ಪ್ರಯೋಗಕ್ಕೆ ಪ್ರಾರಂಭಿಕ ಯಶಸ್ಸು ದೊರೆತಿದೆ, ಜರ್ಮನಿಯ ವಿಜ್ಞಾನಿಗಳು ಇಲಿಗಳ ಜೀವಿತಾವಧಿಯನ್ನು ಶೇ.30 ರಷ್ಟು ವಿಸ್ತರಿಸುವ ಪ್ರಯೋಗದಲ್ಲಿ ಯಶಸ್ಸು ಕಂಡಿದ್ದಾರೆ ಎಂದು ವರದಿಯಾಗಿದೆ. ಮಾನವರ ಮೇಲೂ ಪ್ರಯೋಗದ ಚಿಂತನೆ ಇದೆ ಎನ್ನಲಾಗಿದೆ. ಮ್ಯಾಕ್ಸ್‌ ಪ್ಲಾಂಕ್‌ ಇನ್ಸ್ಟಿಟ್ಯೂಟ್‌ ಫಾರ್‌ ಬಯಾಲಜಿ ಆಫ್ ಏಜಿಂಗ್‌ನ ಜೀವವಿಜ್ಞಾನಿಗಳ ತಂಡ ಎಫ್ಡಿಎ ಪ್ರಮಾಣಿತ ಔಷಧಗಳಾದ ರಾಪಾಮೈಸಿನ್‌ (ಅಂಗಾಂಶ ಕಸಿಯಲ್ಲಿ ಬಳಕೆಯಾಗುವ ಔಷಧ) ಹಾಗೂ ಟ್ರಾಮೆಟಿನಿಬ್‌ (ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಬಳಕೆಯಾಗುವ ಔಷಧ) ಸಂಯೋಜನೆ ಬಳಸಿ ಈ ಪ್ರಯೋಗ […]

Continue Reading