ವಿಚಕ್ಷಣ ದಳದ ದಾಳಿಗೆ ಹೆದರಿ ಕಿಟಕಿಯಿಂದ ನೋಟುಗಳ ಬಂಡಲ್ ಎಸೆದ ಇಂಜಿನಿಯರ್‌: 2.1 ಕೋಟಿ ಜಪ್ತಿ

ಭುವನೇಶ್ವರ: ನಿನ್ನೆಯಷ್ಟೇ ಉತ್ತರಾಖಂಡ್‌ನ ಡೆಹ್ರಾಡೂನ್‌ನಲ್ಲಿ ವಿಚಕ್ಷಣ ದಳದ ದಾಳಿಗೆ ಹೆದರಿ ಸಿಕ್ಕಿ ಬೀಳುವ ಭಯದಲ್ಲಿ ವಿಲೇಜ್ ಅಕೌಂಟೆಂಟ್‌ ಒಬ್ಬರು ತಾವು ಪಡೆದ ಲಂಚದ ಹಣವನ್ನು ನುಂಗಿದಂತಹ ಘಟನೆ ನಡೆದ ಬಗ್ಗೆ ವರದಿಯಾಗಿತ್ತು. ಈ ಘಟನೆ ಮಾಸುವ ಮೊದಲೇ ಈಗ ಒಡಿಶಾದಲ್ಲಿ ಇದೆ ರೀತಿಯ ಘಟನೆಯೊಂದು ನಡೆದಿದೆ. ಮನೆ ವಿಚಕ್ಷಣ ದಳದ ದಾಳಿ ನಡೆಯುವುದು ತಿಳಿಯುತ್ತಿದ್ದಂತೆ ಸರ್ಕಾರಿ ಅಧಿಕಾರಿಯೊಬ್ಬ ತಮ್ಮ ಬಳಿ ಅಕ್ರಮವಾಗಿ ಸಂಗ್ರಹಿಸಿದ್ದ ನೋಟುಗಳನ್ನು ಕಿಟಿಕಿಯ ಮೂಲಕ ಹೊರಗೆ ಎಸೆದಂತಹ ಘಟನೆ ನಡೆದಿದೆ. ಈತನ ಬಳಿಯಿಂದ 2.1 […]

Continue Reading

ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಬೆಳೆಸಲು ಬೇಸಿಗೆ ಶಿಬಿರ ಪೂರಕ: ಎಚ್.ಬಿ ಪಾಟೀಲ

ಕಲಬುರಗಿ: ಬೇಸಿಗೆ ಶಿಬಿರದಲ್ಲಿ ಭಾಗವಹಿಸುವುದರಿಂದ ತರಗತಿಯ ಪಠ್ಯದ ಜೊತೆಗೆ ಪಠ್ಯೇತರ, ಸೃಜನಶೀಲ ಚಟುವಟಿಕೆಗಳ ಮೂಲಕ ವಿಷಯದ ಜ್ಞಾನ, ಸಮಯದ ಸದುಪಯೋಗಕ್ಕೆ ಬೇಸಿಗೆ ಶಿಬಿರಗಳು ಪೂರಕವಾಗುತ್ತವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಹೊರವಲಯದ ಉಪಳಾಂವ ಗ್ರಾಮದ ಶ್ರೀರಾಮ ಕನ್ನಡ ಕಾನ್ವೆಂಟ್ ಶಾಲೆಯಲ್ಲಿ ಜರುಗಿದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಬೇಸಿಗೆ ದಿನಗಳಲ್ಲಿ ವಿದ್ಯಾರ್ಥಿಗಳು ಬಿಸಿಲಿನಲ್ಲಿ ಸುತ್ತಾಡಿ ಆರೋಗ್ಯ ಹಾಳುಮಾಡಿಕೊಳ್ಳುತ್ತಾರೆ. ಮಕ್ಕಳು ಮೊಬೈಲ್, ಟಿ.ವಿ ವೀಕ್ಷಣೆಯಲ್ಲಿಯೇ […]

Continue Reading

ಮಹಿಳೆಯರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು: ಡಾ.ಅನುಪಮಾ ಕೇಶ್ವಾರ

ಕಲಬುರಗಿ: ಮಹಿಳೆಯರು ತಮ್ಮ ಆರೋಗ್ಯದಲ್ಲಿ ಏನಾದರೂ ಸಮಸ್ಯೆಯಿದ್ದರೆ ಮುಜುಗರ ಪಡದೆ ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ, ಸಲಹೆ ಪಡೆದು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಮಹಿಳೆಯರಿಗೆ ಸಲಹೆ ನೀಡಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಅಂತಾರಾಷ್ಟ್ರೀಯ ಮಹಿಳಾ ಆರೋಗ್ಯ ಸಂರಕ್ಷಣಾ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ತಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದೆ ಸಮಸ್ಯೆಯಿದ್ದರೆ, ಮುಜುಗರ, ಹಿಂಜರಿಕೆಯ ಮನೋಭಾವದಿಂದ […]

Continue Reading

ಯಡ್ರಾಮಿ: ಮಧ್ಯರಾತ್ರಿ ಸುರಿಯುತ್ತಿರುವ ಮಳೆಯಲ್ಲಿ ರಥ ಎಳೆದ ಭಕ್ತರು

ಯಡ್ರಾಮಿ: ತಾಲೂಕಿನ ಕಾಖಂಡಕಿ ಗ್ರಾಮದ ಮಲ್ಲಾರಾಧ್ಯರ ಹಾಗೂ ಕೋರಿಸಿದ್ದೇಶ್ವರ ಶಿವಯೋಗಿಗಳ ಭಕ್ತರು ಸುರಿಯುತ್ತಿರುವ ಭಾರಿ ಮಳೆಯ ನಡುವೆಯೂ ರಥವನ್ನು ಎಳೆದರು. ಬುಧವಾರ ಸಂಜೆ ನಡೆಯಬೇಕಿದ್ದ ರಥೋತ್ಸವವು ಮಳೆಯ ಕಾರಣದಿಂದ ಮುಂದೂಡಲಾಗಿತ್ತು. ಮಳೆ ನಿಲ್ಲುವ ಯಾವ ಲಕ್ಷಣವೂ ಕಾಣದಿದ್ದಾಗ ಭಕ್ತರು ನಾಲವಾರ ಹಾಗೂ ಕಾಖಂಡಕಿ ಮಠಗಳ ಪೀಠಾಧಿಪತಿ ಸಿದ್ಧತೋಟೇಂದ್ರ ಶಿವಾಚಾರ್ಯರ ಅಪ್ಪಣೆ ಪಡೆದು ಸದ್ಗುರು ಮಲ್ಲಾರಾಧ್ಯರ ಹಾಗೂ ಕೋರಿಸಿದ್ದೇಶ್ವರ ಶಿವಯೋಗಿಗಳ, ಸಿದ್ಧತೋಟೇಂದ್ರ ಶಿವಾಚಾರ್ಯರ ಜೈಕಾರ ಹಾಕುತ್ತಾ ಮಧ್ಯರಾತ್ರಿ ಸುರಿಯುತ್ತಿರುವ ಭಾರಿ ಮಳೆಯಲ್ಲಿಯೇ ರಥವನ್ನು ಎಳೆದರು. ನಡೆದಾಡಲು ಕಷ್ಟವಾಗಿರುವ ಕೆಸರು […]

Continue Reading

ಕಾಖಂಡಕಿ ಜಾತ್ರಾ ಸಂಭ್ರಮದಲ್ಲಿ ತನಾರತಿ ಹರಕೆ ತೀರಿಸಿದ ಸಹಸ್ರಾರು ಭಕ್ತರು

ಯಡ್ರಾಮಿ: ನಾಡಿನ ವಿಶಿಷ್ಟ ಉತ್ಸವಗಳಲ್ಲಿ ಒಂದಾದ ತನಾರತಿ ಉತ್ಸವವು ಬಾದಮಿ ಅಮಾವಾಸ್ಯೆಯ ದಿನದಂದು ತಾಲೂಕಿನ ಕಾಖಂಡಕಿ ಕ್ಷೇತ್ರದಲ್ಲಿ ಸಹಸ್ರಾರು ಭಕ್ತರ ಮಧ್ಯೆ ಭಕ್ತಿಭಾವದಿಂದ ನೆರವೇರಿತು. ಸದ್ಗುರು ಮಲ್ಲಾರಾಧ್ಯರ ಹಾಗೂ ಕೋರಿಸಿದ್ಧೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ನಾಲವಾರ- ಕಾಖಂಡಕಿ ಮಠಗಳ ಒಡೆಯರಾದ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಸಾನಿಧ್ಯದಲ್ಲಿ ನಡೆದ ಉತ್ಸವದಲ್ಲಿ ನಾಡಿನ-ಪರನಾಡಿನ ಸಹಸ್ರಾರು ಸದ್ಭಕ್ತರು ಇಷ್ಟಾರ್ಥ ಪೂರೈಸಿದ ಮಹಾಗುರುವಿಗೆ ತನಾರತಿ ಹರಕೆ ತೀರಿಸಿ ಭಕ್ತಿ ಭಾವ ಮೆರೆದರು. ಬುಧವಾರ ನಸುಕಿನ ಜಾವ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು […]

Continue Reading

ಬಸವೇಶ್ವರ ಮೂರ್ತಿಯ ಜೊತೆಗೆ ತತ್ವವೂ ಎಲ್ಲೆಡೆ ಪಸರಿಸಲಿ: ಬಸವರಾಜ ಪಾಟೀಲ್ ಸೇಡಂ

ಚಿತ್ತಾಪುರ: ವಿಶ್ವಗುರು ಬಸವೇಶ್ವರ ಮೂರ್ತಿಯ ಜೊತೆಗೆ ತತ್ವ ಸಿದ್ಧಾಂತಗಳು ಎಲ್ಲೆಡೆ ಪಸರಿಸುವ ಕೆಲಸ ಪ್ರತಿಯೊಬ್ಬರೂ ಮಾಡಬೇಕಿದೆ ಎಂದು ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ಹೇಳಿದರು. ಸಮೀಪದ ರಾವೂರ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವಗುರು ಬಸವೇಶ್ವರರ 892ನೇ ಜಯಂತ್ಯೋತ್ಸವ ಹಾಗೂ ಬಸವೇಶ್ವರ ಮೂರ್ತಿ ಅನಾವರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾವೂರ ಗ್ರಾಮದಲ್ಲಿ ಮೂರ್ತಿ ಅನಾವರಣ ಮಾಡಿದ್ದು ಖುಷಿಯ ಸಂಗತಿ. ಆದರ ಜೊತೆಗೆ ಮೂರ್ತಿ ಅನಾವರಣ ಸಮಿತಿಯವರು ನಿತ್ಯವೂ ಈ ಮೂರ್ತಿಯ ಪರಿಸರ ಸ್ವಚ್ಛವಾಗಿಟ್ಟು ಪೂಜೆ ಮಾಡಬೇಕು. ಮಕ್ಕಳಿಗಾಗಿ […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ವೀರ ಸಾವರ್ಕರ ಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ವೀರ ಸಾವರ್ಕರ ಜಯಂತಿ ಪ್ರಯುಕ್ತ ಮುಖಂಡರು ಸಾವರ್ಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಅವರ ಹೋರಾಟ ತ್ಯಾಗ ಹಾಗೂ ಅನುಭವಿಸಿದ ಕಷ್ಟಗಳ ಕುರಿತು ಸ್ಮರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಬಸವರಾಜ ಪಂಚಾಳ ಮಾತನಾಡಿ, ವೀರ್ ಸಾವರ್ಕರ್ ಭಾರತೀಯರಲ್ಲಿ ಏಕತೆಯ ಕಟ್ಟಾ ಪ್ರತಿಪಾದಕರಾಗಿದ್ದರು ಮತ್ತು ಎಲ್ಲಾ ಸಮುದಾಯಗಳು ಸಾಮರಸ್ಯದಿಂದ ಸಹಬಾಳ್ವೆ ನಡೆಸಬಹುದಾದ ಅಖಂಡ ಭಾರತದಲ್ಲಿ ನಂಬಿಕೆ ಇಟ್ಟಿದ್ದರು. ಅವರ ದೃಷ್ಟಿಕೋನವು ಹಿಂದುತ್ವದ ಕಲ್ಪನೆ ಒಳಗೊಂಡಿತ್ತು, ಇದು ಧಾರ್ಮಿಕ ಪ್ರತ್ಯೇಕತೆಗಿಂತ […]

Continue Reading

ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆಗೆ ನೌಕರರ ಸಂಘ ಖಂಡನೆ

ಕಲಬುರಗಿ: ಕಲಬುರಗಿ ಜಿಲ್ಲೆಯ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್‌ ಅವರ ಬಗ್ಗೆ ಇತ್ತೀಚೆಗೆ ವಿಧಾನ ಪರಿಷತ್‌ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್ ರವಿಕುಮಾರ ಅವರ ಅವಹೇಳನಕಾರಿ ಹೇಳಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾ ಘಟಕತೀವ್ರವಾಗಿ ಖಂಡಿಸಿದೆ. ಈ ರೀತಿಯ ಹೇಳಿಕೆಯಿಂದ ಸರ್ಕಾರಿ ಅಧಿಕಾರಿ-ನೌಕರರ ಆತ್ಮಸ್ಥೆರ್ಯ ಕುಸಿಯುವಂತಾಗುತ್ತದೆ. ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್‌ ಅವರು ಜಿಲ್ಲೆಯ ಅಭಿವೃದ್ಧಿಗೆ ಹಗಲಿರುಳು ಶ್ರಮಿಸುತ್ತಿದ್ದಾರೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ತಿಳಿಸಿದ್ದಾರೆ.

Continue Reading

ಪಾಕ್‌, ಚೀನಾಗೆ ಟಕ್ಕರ್‌ ಕೊಡಲು ಹೊಸ ಫೈಟರ್‌ ಜೆಟ್‌ಗೆ ಭಾರತ ಅನುಮೋದನೆ

ನವದೆಹಲಿ: ಪಾಕಿಸ್ತಾನಕ್ಕೆ ಚೀನಾ ಶಸ್ತ್ರಾಸ್ತ್ರಗಳ ನೆರವಿನ ಮಧ್ಯೆ ಭಾರತವು ತನ್ನದೆ ಆದ ಸ್ಟೆಲ್ತ್‌ ಫೈಟರ್‌ ಜೆಟ್‌ ಯೋಜನೆಗೆ ಅನುಮೋದನೆ ನೀಡಿದೆ. ಭಾರತದ ವಾಯು ಪ್ರಾಬಲ್ಯವನ್ನು ಎದುರಿಸಲು ತನ್ನ ಶಸ್ತ್ರಾಗಾರವನ್ನು ಬಲಪಡಿಸಲು ಪಾಕಿಸ್ತಾನಕ್ಕೆ ಸ್ಟೆಲ್ತ್ ಫೈಟರ್ ಜೆಟ್‌ಗಳನ್ನು ಪೂರೈಸುವ ಯೋಜನೆಯನ್ನು ಚೀನಾ ತ್ವರಿತಗೊಳಿಸುತ್ತಿದೆ. ಈ ನಡುವೆ ದೇಶದ ಮೊದಲ ಸ್ಟೆಲ್ತ್ ಫೈಟರ್‌ ಜೆಟ್‌ ನಿರ್ಮಿಸುವ ಯೋಜನೆಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದನೆ ನೀಡಿದ್ದಾರೆ. ಈ ಫೈಟರ್ ಜೆಟ್ ಅವಳಿ-ಎಂಜಿನ್, 5ನೇ ತಲೆಮಾರಿನ ಮಿಲಿಟರಿ ವಿಮಾನವಾಗಿದೆ. ಈ ಕಾರ್ಯಕ್ರಮವನ್ನು […]

Continue Reading

ಭಾರತದ ನವೋದಯ ಧೃವತಾರೆ ರಾಜಾ ರಾಮ್ ಮೋಹನರಾಯ

ಕಲಬುರಗಿ: ಹತ್ತೊಂಬತ್ತನೆ ಶತಮಾನ ಭಾರತದ ಬೌದ್ಧಿಕ, ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಬೆಳವಣಿಗೆಯ ಸುಧಾರಣೆಯಲ್ಲಿ ಅದ್ವೀತಿಯ ಪಾತ್ರ ವಹಿಸಿದ ರಾಜಾ ರಾಮ್ ಮೋಹನರಾಯರು, ‘ಭಾರತದ ನವೋದಯ ಧೃವತಾರೆ’ಯಾಗಿದ್ದಾರೆ. ಅವರು ಶ್ರೇಷ್ಟ ಸಮಾಜ ಸುಧಾರಕರು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರಾಜಾ ರಾಮ್ ಮೋಹನರಾಯ್’ರ 253ನೇ ಜನ್ಮದಿನಾಚರಣೆಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, […]

Continue Reading