ವಿಶ್ವ ಮಟ್ಟದಲ್ಲಿ ಕನ್ನಡದ ಕಂಪು ಪಸರಿಸಿದ ಬಾನು ಮುಷ್ತಾಕ್, ದೀಪಾ ಭಾಸ್ತಿ

ಕಲಬುರಗಿ: ಕನ್ನಡದ ಮೇರು ಲೇಖಕಿ, ಸಾಹಿತಿ ಬಾನು ಮುಷ್ತಾಕ್ ಅವರ ‘ಎದೆಯ ಹಣತೆ’ ಕಥಾ ಸಂಕಲನ ಮತ್ತು ಇದರ ಅನುವಾದಕಿಯರಾದ ದೀಪಾ ಭಾಸ್ತಿ ಅವರಿಗೆ ವಿಶ್ವದ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ದೊರೆತಿರುವುದು ಸಮಸ್ತ ಕನ್ನಡಿಗರಿಗೆ ದೊರೆತ ಗೌರವವಾಗಿದೆ, ತನ್ಮೂಲಕ ಕನ್ನಡದ ಕಂಪು ವಿಶ್ವ ಮಟ್ಟದಲ್ಲಿ ಪಸರಿಸಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಮುಕ್ತ ಕಂಠದಿಂದ ಶ್ಲಾಘಿಸಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನ ಸಕ್ಸಸ್ ಕಂಪ್ಯೂಟರ ತರಬೇತಿ ಸಂಸ್ಥೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ […]

Continue Reading

ಪೊಲೀಸಪ್ಪನನ್ನು ಮದುವೆಯಾಗಿ ಫಜೀತಿಗೆ ಸಿಲುಕಿದ ಮಹಿಳೆ: ನಾಪತ್ತೆಯಾದ ಗಂಡನನ್ನು ಹುಡುಕಿಕೊಡುವಂತೆ ಅಧಿಕಾರಿಗಳ ಮೊರೆ ಹೋದ ಪತ್ನಿ

ಚಿಕ್ಕಬಳ್ಳಾಪುರ: ಆಕೆ ಪದವೀಧರೆ. ಆತ ಪೊಲೀಸ್ ಕಾನ್‌ಸ್ಟೆಬಲ್‌. ಅವರಿಬ್ಬರು ಕಾಲೇಜಿನಲ್ಲಿ ಪರಿಚಯವಾಗಿ ಪ್ರೀತಿ, ಪ್ರೇಮವೆಂದು ಸುತ್ತಾಡಿ ಬಳಿಕ ಮದುವೆ ಮಾಡಿಕೊಂಡಿದ್ದರು. ಅವರಿಬ್ಬರು ಮದುವೆಯಾಗಿ ಇನ್ನೂ ಒಂದು ವರ್ಷ ಕೂಡ ಆಗಿಲ್ಲ. ಆಗಲೆ ನೀನು ಬೇಡ, ನಿನ್ನ ಜೊತೆ ಸಂಸಾರವೂ ಬೇಡ ಎಂದು ಪೊಲೀಸ್ ಗಂಡ ಕಾಣೆಯಾಗಿದ್ದಾರೆ. ಇದರಿಂದ ವಿಚಲಿತಳಾಗಿರುವ ಪತ್ನಿ, ಪೊಲೀಸ್ ಗಂಡನನ್ನು ಹುಡುಕಿಕೊಡುವಂತೆ ಅವಲತ್ತುಕೊಂಡಿದ್ದಾರೆ. 27 ಆಗಸ್ಟ್ 2024 ರಂದು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಪೊಲೀಸ್‍ ಠಾಣೆಯ ಕಾನ್ಸ್‍ಟೇಬಲ್ ತಿಮ್ಮಣ್ಣ ಬೂಸರೆಡ್ಡಿ ಹಾಗೂ ಅದೆ ಜಿಲ್ಲೆಯ […]

Continue Reading

ಶಿರಸ್ತೆದಾರ್‌ ಮೇಲೆ ಹಲ್ಲೆ: ತಹಸೀಲ್ದಾರ್ ವಿರುದ್ಧ ಎಫ್‌ಐಆರ್‌

ಬೀದರ್: ಚಿಟಗುಪ್ಪ ತಹಸೀಲ್ದಾರ್ ಕಚೇರಿಯ ಶಿರಸ್ತೆದಾರ್ ಸುಭಾಷಚಂದ್ರ ಅವರನ್ನು ಅಪಹರಿಸಿ ತೀವ್ರವಾಗಿ ಹಲ್ಲೆ ನಡೆಸಿದ ಆರೋಪದಲ್ಲಿ ಗ್ರೇಡ್-2 ತಹಸೀಲ್ದಾರ್ ಜಯಶ್ರೀ ಮತ್ತು ಅವರ ಪತಿ ಶಾರಧಕ ಸೇರಿ ಐವರ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಿಲ್ಲೆಯ ಚಿಟಗುಪ್ಪ ತಹಸೀಲ್ದಾರ್ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಭಾಷಚಂದ್ರ ಹಾಗೂ ಜಯಶ್ರೀ ನಡುವೆ ಕಚೇರಿ ಕೆಲಸದಲ್ಲಿ ತಕರಾರು ನಡೆದಿದ್ದ ವಿಚಾರಕ್ಕೆ ಹಲ್ಲೆ ನಡೆದಿದೆ ಎನ್ನಲಾಗುತ್ತಿದೆ. ನಡೆದಿದ್ದು ಏನು ? ಮೇ.16 ರಂದು ಕೆಲಸ ಮುಗಿಸಿಕೊಂಡು ಚಿಟಗುಪ್ಪದಿಂದ ಸ್ವಗ್ರಾಮ ಕಲಬುರಗಿ ಜಿಲ್ಲೆಯ […]

Continue Reading

ಕನ್ನಡಿಗರ ಸಾಧನೆಗಳು ಸಾರುವ ಭಂಕೂರ್‌ನ ಶಾಸನಗಳು: ಮುಡುಬಿ ಗುಂಡೆರಾವ

ಕಲಬುರಗಿ: ಸಮಸ್ತ ಕನ್ನಡಿಗರ ಪ್ರಾಚೀನ ಸಾಧನೆಗಳು ಪ್ರತಿಪಾದಿಸುವ ಭಂಕೂರ ಗ್ರಾಮದ ಐತಿಹಾಸಿಕ ಸ್ಮಾರಕಗಳು, ವೀರಗಲ್ಲುಗಳು, ಶಿಲ್ಪ ಕಲೆಗಳು, ಶಾಸನಗಳು ಸಾವಿರಾರು ವರ್ಷದ ರೋಚಕ ಇತಿಹಾಸ ಸಾರುತ್ತವೆ ಎಂದು ಸಂಸೋಧಕ- ಸಾಹಿತಿ ಮುಡುಬಿ ಗುಂಡೆರಾವ ಅಭಿಮತ ವ್ಯಕ್ತಪಡಿಸಿದರು. ಶಹಬಾದ ತಾಲೂಕಿನ ಭಂಕೂರ ಗ್ರಾಮದ ಜೈನ ಶಾಂತಿನಾಥ ತೀರ್ಥಂಕರ ಮಂದಿರದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-16ರಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುತ್ತ, ಮಾತನಾಡಿದ ಅವರು, ಭಂಕೂರಿನಲ್ಲಿ […]

Continue Reading

ರಾವೂರ: ಮೇ‌.27 ರಂದು ಬಸವೇಶ್ವರ ಮೂರ್ತಿ ಅನಾವರಣ

ರಾವೂರ: ಮೇ.27ರಂದು ಗ್ರಾಮದ ಬಸವೇಶ್ವರ ವೃತ್ತದಲ್ಲಿ ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ ಸಮಾರಂಭ ನಡೆಯಲಿದೆ ಎಂದು ವಿಶ್ವಗುರು ಬಸವೇಶ್ವರ ಮೂರ್ತಿ ಅನಾವರಣ ಸಮಿತಿ ತಿಳಿಸಿದೆ. ಅಂದು ಸಂಜೆ 4 ಗಂಟೆಗೆ ಗ್ರಾಮದ ಸಿದ್ದಲಿಂಗೇಶ್ವರ ಸಂಸ್ಥಾನ ಮಠದಿಂದ ವಿವಿಧ ಕಲಾ ತಂಡಗಳೊಂದಿಗೆ ಬಸವೇಶ್ವರ ಮೂರ್ತಿ ಮೆರವಣಿಗೆ ನಡೆಯಲಿದೆ. ಸಂಜೆ 6.30ಕ್ಕೆ ರಾವೂರ ಸಿದ್ದಲಿಂಗ ಮಹಾಸ್ವಾಮಿಗಳ ನೇತೃತ್ವದಲ್ಲಿ ಬಸವೇಶ್ವರ ಮೂರ್ತಿ ಅನಾವರಣಗೊಳ್ಳುವದು. ಸೊನ್ನದ ಪೂಜ್ಯ ಶಿವಾನಂದ ಸ್ವಾಮಿ, ಮುಗುಳನಾಗಾವಿಯ ಅಭಿನವ ಸಿದ್ದಲಿಂಗ ಶಿವಾಚಾರ್ಯರು, ಚಿತ್ತಾಪುರದ ಸೋಮಶೇಖರ ಶಿವಾಚಾರ್ಯರು ಸಾನಿಧ್ಯ ವಹಿಸುವರು. […]

Continue Reading

ಭಯೋತ್ಪಾದನೆ ನಿರ್ಮೂಲನೆಗೆ ದೃಢ ಸಂಕಲ್ಪದೊಂದಿಗೆ ಕಾರ್ಯನಿರ್ವಹಣೆ ಅಗತ್ಯ

ಕಲಬುರಗಿ: ನಮ್ಮ ದೇಶ ಸೇರಿದಂತೆ ವಿಶ್ವದಲ್ಲಿ ದಿನನಿತ್ಯ ನೂರಾರು ಅಮಾಯಕರ ಸಾವಿಗೆ ಕಾರಣವಾಗಿ, ಜಗತ್ತನ್ನು ತಲ್ಲಣಗೊಳಿಸಿ, ಅಶಾಂತಿಯುತ ವಾತಾವರಣದ ಸೃಷ್ಟಿಗೆ ಕಾರಣಿಕೃತವಾದ ಭಯೋತ್ಪಾದನೆ ಎಂಬುದು ದೊಡ್ಡ ಸಾಮಾಜಿಕ ಪಿಡುಗಾಗಿದೆ. ರಾಷ್ಟ್ರದ ಶಾಂತಿ, ಅಭಿವೃದ್ಧಿಗೆ ಇದು ತೊಡಕಾಗಿದೆ, ಅದರ ನಿರ್ಮೂಲನೆಗೆ ಎಲ್ಲರೂ ಜೊತೆಗೂಡಿ ಬೇರು ಸಹಿತ ಸರ್ವನಾಶ ಮಾಡುವ ದೃಢ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸಬೇಕಾಗಿದೆ‌ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಗಂಗಾ ನಗರದ ವಿವೇಕಾನಂದ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಏರ್ಪಡಿಸಿದ್ದ […]

Continue Reading

ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

ಕಲಬುರಗಿ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ವಿದ್ಯಾರ್ಥಿ ದೆಸೆಯಿಂದ ಪರಿಸರ ಪ್ರಜ್ಞೆ ಬೆಳೆಸಿಕೊಂಡು, ಪರಿಸರ ಸಂರಕ್ಷಣೆ ಮಾಡುವುದರ ಜೊತೆಗೆ ಬೇರೊಬ್ಬರಿಗೂ ಇದರ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಕುಸನೂರ ಗ್ರಾ.ಪಂ ಅಧ್ಯಕ್ಷ ಕುಪೇಂದ್ರ ಬರಗಾಲಿ ಹೇಳಿದರು. ನಗರದ ಸಮೀಪದ ಕುಸನೂರ ಗ್ರಾಮದ ಗವಿಸಿದ್ದೇಶ್ವರ ದೇವಸ್ಥಾನದಲ್ಲಿ ಹಿಂಗುಲಾಂಬಿಕಾ ಬಿ.ಎಡ್ ಕಾಲೇಜಿನ ಒಂದು ವಾರದ ಎನ್.ಎಸ್.ಎಸ್ ಶಿಬಿರಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರ ಉಳಿದರೆ ಮಾತ್ರ ಸಕಲ ಜೀವಿಗಳು ಉಳಿಯಲು ಸಾಧ್ಯ ಎಂದರು. ಜೇವರ್ಗಿ ಸರ್ಕಾರಿ ಪಿಯು […]

Continue Reading

ಗ್ರಾಹಕರಿಗೆ ಗುಣಮಟ್ಟದ ಸರಕುಗಳು ದೊರೆಯಲಿ

ಕಲಬುರಗಿ: ಜನಸಂಖ್ಯಾ ಸ್ಫೋಟ, ಮಾನವನ ದುರಾಸೆ, ಮೋಸ ಸೇರಿದಂತೆ ಮುಂತಾದ ಕಾರಣಗಳಿಂದ ಸರಕುಗಳಲ್ಲಿ ಕಲಬೆರಕೆ ವ್ಯಾಪಕವಾಗಿದೆ, ಗುಣಮಟ್ಟದ ಪ್ರಮಾಣ ಕಡಿಮೆಯಾಗಿರುವುದು ಗೋಚರಿಸುತ್ತಿದೆ. ಇದರಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಗುಣಮಟ್ಟದ ಸರಕುಗಳ ಉತ್ಪಾದನೆಯ ಪ್ರಮಾಣ ಹೆಚ್ಚಳವಾಗಬೇಕಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ, ಸಾಮಾಜಿಕ ಚಿಂತಕ ಎಚ್.ಬಿ ಪಾಟೀಲ ಆಶಯ ವ್ಯಕ್ತಪಡಿಸಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ಸನಲೈಟ್ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ‘ವಿಶ್ವ ಮಾಪಕ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಂದು […]

Continue Reading

ಮಾನವ ಸಂಪನ್ಮೂಲ ಸಂಸ್ಥೆಯ ಬೆನ್ನೆಲುಬು

ಕಲಬುರಗಿ: ಯಾವುದೆ ಒಂದು ಕಂಪನಿ ಅಥವಾ ಸಂಸ್ಥೆಗೆ ಸರಿಯಾದ ಅಭ್ಯರ್ಥಿಯನ್ನು ಆಯ್ಕೆ ಮಾಡುವುದರಿಂದ, ವೇತನ, ಸಂಘರ್ಷ ಪರಿಹಾರ, ಉದ್ಯೋಗಿಗಳಿಗೆ ತರಬೇತಿ, ಕಾನೂನು ಸಮಸ್ಯೆಗಳನ್ನು ನಿರ್ವಹಿಸುವುದು, ಉದ್ಯೋಗಿಗಳನ್ನು ಒಗ್ಗೂಡಿಸುವುದು ಸೇರಿದಂತೆ ಮುಂತಾದ ಪ್ರಮುಖ ಕಾರ್ಯಗಳು ಮಾಡುವ ಮಾನವ ಸಂಪನ್ಮೂಲ ವಿಭಾಗವು ಸಂಸ್ಥೆಯ ಬೆನ್ನೆಲುಬಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ‘ಅಂತಾರಾಷ್ಟ್ರೀಯ ಮಾನವ ಸಂಪನ್ಮೂಲ […]

Continue Reading

ನನ್ನ ವೃತ್ತಿ ನನ್ನ ಭವಿಷ್ಯ ಪುಸ್ತಕವನ್ನು ಸಚಿವ ಡಾ.ಎಚ್.ಸಿ ಮಹದೇವಪ್ಪ ಬಿಡುಗಡೆ

ಬೆಂಗಳೂರು: ನನ್ನ ವೃತ್ತಿ ನನ್ನ ಭವಿಷ್ಯ ಕಾರ್ಯಕ್ರಮದ ಪುಸ್ತಕವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ ಮಹದೇವಪ್ಪ ಬಿಡುಗಡೆಗೊಳಿಸಿದರು. ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಅನಾಹತ ಯುನೈಟೆಡ್ ಎಫರ್ಟ್ಸ್ ಫೌಂಡೇಶನ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಇವರ ಸಹಭಾಗಿತ್ವದಲ್ಲಿ   ರಾಜ್ಯದ ಎಲ್ಲಾ ವಸತಿ ಶಾಲೆಗೆ ಅನುಷ್ಠಾನಗೊಂಡಿರುವ ನನ್ನ ವೃತ್ತಿ ನನ್ನ ಭವಿಷ್ಯ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಕ್ಕಳಿಗೆ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಶಾಲಾ ಹಂತದಲ್ಲೇ ತಿಳಿಸಿದರೆ ಮುಂದಿನ ಭವಿಷ್ಯ ಉಜ್ವಲವಾಗಿರುತ್ತದೆ. ನಾವು ವಿದ್ಯಾಭ್ಯಾಸ ಮಾಡುವ ಸಮಯದಲ್ಲಿ […]

Continue Reading