ವಾಡಿ: ಪಂಡಿತ ದೀನ್‍ದಯಾಳ್’ರ 109ನೇ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಪಂಡಿತ ದೀನ್‍ದಯಾಳ್ ಉಪಾಧ್ಯಾಯರ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಪಂಡಿತ ದೀನ್‍ದಯಾಳ್ ಉಪಾಧ್ಯಾಯರು ಕಾಂಗ್ರೆಸ್ಸಿಗೆ ಪರ್ಯಾಯವಾಗಿ ಭಾರತೀಯ ಜನಸಂಘ ಎಂಬ ರಾಜಕೀಯ ಶಕ್ತಿಯನ್ನು ಪೋಷಿಸಿದರು, ಅವರು ಕಾಲವಾದ ನಂತರ ಭಾರತೀಯ ಜನಸಂಘವು ಭಾರತೀಯ ಜನತಾ ಪಕ್ಷವಾಗಿ ಮಾರ್ಪಟ್ಟು ಇಂದಿನ ಬೃಹತ್ ಬಿಜೆಪಿ ಉದಯಕ್ಕೆ ಕಾರಣವಾಯಿತು ಎಂದರು. ಅವರ ಮಾನವತಾವಾದ ನಮ್ಮ ಪಕ್ಷಕ್ಕೆ ಒಂದು ಸೈದ್ಧಾಂತಿಕ ವೈಚಾರಿಕತೆ […]

Continue Reading

ನಿಸ್ವಾರ್ಥ ಸೇವೆಯಿಂದ ಸಮಾಜ ಪರಿವರ್ತಿಸಲು ಸಾಧ್ಯ

ಸುದ್ದಿ ಸಂಗ್ರಹ ಶಹಬಾದ ಸಮಾಜದಲ್ಲಿ ಪ್ರತಿಯೊಬ್ಬರು ನಿಸ್ವಾರ್ಥ ಸೇವೆ ಸಲ್ಲಿಸಿದಾಗ ಮಾತ್ರ ಸಮಾಜ ಪರಿವರ್ತಿಸಲು ಸಾಧ್ಯ ಎಂದು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಹನುಮಂತಪ್ಪ ಬಿ ಸೇಡಂಕರ ಹೇಳಿದರು. ನಗರದ ಹೈ.ಕ ಶಿಕ್ಷಣ ಸಂಸ್ಥೆಯ ಎಸ್.ಎಸ್ ಮರಗೋಳ ಪದವಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಸ್ಥಾಪನಾ ದಿನಾಚರಣೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಇಂದು ತೆಗೆದುಕೊಳ್ಳುವ ನಿರ್ಧಾರ, ನಾಳೆ ಸಮಾಜ ಪರಿವರ್ತಿಸುವ ಶಕ್ತಿ ಹೊಂದಿದೆ. ಸೇವಾ ಮನೋಭಾವವು ಬದುಕನ್ನು ಶ್ರೀಮಂತಗೊಳಿಸುತ್ತದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಹೈ.ಕ ಶಿಕ್ಷಣ ಸಂಸ್ಥೆಯ […]

Continue Reading

ಆರ್ಥಿಕ ಬೆಳವಣಿಗೆಗೆ ಮೇಕ್ ಇನ್ ಇಂಡಿಯಾ ಪೂರಕ

ಕಲಬುರಗಿ:  ಭಾರತದಲ್ಲಿ ವಿನ್ಯಾಸ, ತಯಾರಿಕೆ ಮತ್ತು ಜೋಡಣೆಯನ್ನು ಉತ್ತೇಜಿಸಲು, ವ್ಯಾಪಾರ-ವ್ಯವಹಾರ ವೃದ್ಧಿಗೆ  ಭಾರತ ಸರ್ಕಾರವು ಪ್ರಾರಂಭಿಸಿದ ಮೇಕ್ ಇನ್ ಇಂಡಿಯಾ ಯೋಜನೆ ಪೂರಕವಾಗಿದೆ ಎಂದು ಜಿಲ್ಲಾ ಸಣ್ಣ ಕೈಗಾರಿಕೆಗಳ ಮಾಲೀಕರ ಸಂಘದ ಅಧ್ಯಕ್ಷ ಭೀಮಾಶಂಕರ ಪಾಟೀಲ ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ಡಿಗ್ರಿ ಕಾಲೇಜಿನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಮೇಕ್ ಇನ್ ಇಂಡಿಯಾದ ದಶಮಾನೋತ್ಸವ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಮಾತನಾಡಿ, ಉತ್ಪಾದನೆಯಲ್ಲಿ ಹೂಡಿಕೆ ಹೆಚ್ಚಿಸುವುದು, […]

Continue Reading

ಬಾಡಿಗೆಗೆಂದು ಸುಮಾರು 500 ಕಾರುಗಳನ್ನು ಪಡೆದು ಗಿರವಿಗೆ ಇಟ್ಟ ಭೂಪ

ಬಳ್ಳಾರಿ: ಬಾಡಿಗೆ ವಾಹನಗಳ ಟ್ರೆಂಡ್​ ಸದ್ಯ ಜೋರಾಗಿದೆ. ಅದರಲ್ಲೂ ಸೆಲ್ಫ್​ ಡ್ರೈವಿಂಗ್​ಗೆಂದು ವಾಹನ ಪಡೆಯುವವರೆ ಹೆಚ್ಚು, ಹೀಗಾಗಿ ಕೆಲ ವಾಹನಗಳ ಮಾಲಿಕರು ಕಂಡ ಕಂಡವರಿಗೆ ವಾಹನಗಳನ್ನು ಬಾಡಿಗೆಗೆ ಕೊಡುವುದು ಉಂಟು. ಅಂತಹ ಮಾಲಿಕರಿಗೆ ಬಳ್ಳಾರಿಯಲ್ಲೊಬ್ಬ ವ್ಯಕ್ತಿ ಭರ್ಜರಿ ಶಾಕ್​ ಕೊಟ್ಟಿದ್ದಾನೆ. ಯಾಮಾರಿ ಯಾರ್ಯಾರಿಗೋ ವಾಹನಗಳನ್ನು ಬಾಡಿಗೆ ನೀಡಿದರೆ, ಅವು ಇನ್ಯಾರ ಬಳಿ ಗಿರವಿ ಇರುತ್ತವೆ ಎಂಬುದು ಪ್ರೂವ್ ಮಾಡಿ ತೋರಿಸಿದ್ದಾನೆ. ಕಾರು ಪಡೆದಿದ್ದು ಬಾಡಿಗೆಗೆ, ಇಟ್ಟಿದ್ದು ಗಿರವಿಗೆ ರಾಯಚೂರು ಜಿಲ್ಲೆಯ ಸಿಂಧನೂರಿನ M.D ಜಹೀದ್ ಭಾಷಾ ಅಲಿಯಾಸ್ […]

Continue Reading

ಅತಿವೃಷ್ಟಿ ಪೀಡಿತ ಪ್ರದೇಶ ಘೋಷಣೆಗೆ ಆಗ್ರಹ

ಸುದ್ದಿ ಸಂಗ್ರಹ ಶಹಾಬಾದ ಅತಿಯಾದ ಮಳೆಯಿಂದ ರೈತರು ಬೆಳೆದ ತೊಗರಿ, ಹೆಸರು, ಉದ್ದು ಸೇರಿದಂತೆ ಇತರ ಎಲ್ಲಾ ಬೆಳೆಗಳು ಸಂಪೂರ್ಣ ನಷ್ಟವಾಗಿದೆ, ಹೀಗಾಗಿ ಕಲಬುರಗಿ ಜಿಲ್ಲೆಯು ಅತಿವೃಷ್ಟಿ ಪೀಡಿತ ಜಿಲ್ಲೆ ಎಂದು ಘೋಷಿಸಿ ಪರಿಹಾರ ನೀಡಬೇಕು ಎಂದು ಶಹಾಬಾದ್ ಮಂಡಲ ಅಧ್ಯಕ್ಷ ನಿಂಗಣ್ಣ ಹುಳುಗೋಳ್ಕರ್ ಆಗ್ರಹಿಸಿದರು.  ನಗರದ ಬಸವೇಶ್ವರ ವೃತ್ತದಲ್ಲಿ ಬುಧುವಾರ ಬಿಜೆಪಿ ಪಕ್ಷ, ರೈತ ಮೋರ್ಚಾದ ವತಿಯಿಂದ ಅತಿವೃಷ್ಟಿ ಪೀಡಿತ ಪ್ರದೇಶ ಘೋಷಣೆಗೆ ಆಗ್ರಹಿಸಿ ಪ್ರತಿಭಟನೆಯಲ್ಲಿ ಮಾತನಾಡಿ, ರೈತರಿಗೆ ಸೇರಬೇಕಾದ ಹಳೆಯ ಪರಿಹಾರ ಬಾಕಿಯನ್ನು ಬಿಡುಗಡೆ […]

Continue Reading

ಬಿಗ್ ಬಾಸ್ ಸೀಸನ್ 12 ಭಾರಿ ಸ್ಪೆಷಲ್: ಬಿಗ್ ಅಪ್ ಡೇಟ್

ಬೆಂಗಳೂರು: ಸೆ.28ರಂದು ರವಿವಾರ ಸಂಜೆ 6 ಗಂಟೆಗೆ ಬಿಗ್ಬಾಸ್ ಸೀಸನ್ 12ರ ಗ್ರಾಂಡ್ ಓಪನಿಂಗ್ ಪ್ರಸಾರವಾಗಲಿದ್ದು, ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9.30ಕ್ಕೆ ಕಲರ್ಸ್ ಕನ್ನಡ ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ. ವಾರಾಂತ್ಯದಲ್ಲಿ (ಶನಿವಾರ ಮತ್ತು ರವಿವಾರ) ರಾತ್ರಿ 9 ಗಂಟೆಯಿಂದ ಪ್ರಸಾರವಾಗಲಿದೆ. ಈಗಾಗಲೇ ಬಿಗ್ ಬಾಸ್ನ 11 ಸೀಸನ್‌ಗಳನ್ನು ನೋಡಿ ಯಶಸ್ವಿಯಾಗಿಸಿರುವ ವೀಕ್ಷಕರ ಮನಸಲ್ಲಿ ಈ ಸೀಸನ್ ಹೇಗಿರಬಹುದು ಎನ್ನುವ ಕೂತೂಹಲ ಇದೆ. ಈ ಸೀಸನ್‌ನಲ್ಲಿ ವಿಭಿನ್ನ ವ್ಯಕ್ತಿತ್ವದ ಕಂಟೆಸ್ಟೆಂಟ್ಸ್ ಹಾಗೂ ಅನಿರೀಕ್ಷಿತ ಟಾಸ್ಕ್‌ಗಳನ್ನು ಹೊತ್ತು ನವರಾತ್ರಿ […]

Continue Reading

ತಲೆಗೂದಲಿಗೆ ಎಣ್ಣೆ ಹಚ್ಚದಿದ್ದಕ್ಕೆ ವಿದ್ಯಾರ್ಥಿನಿಯ ಕೂದಲು ಕಟ್: ಶಿಕ್ಷಕಿ ವಜಾ

ಗಾಂಧಿನಗರ: ತಲೆಗೂದಲಿಗೆ ಎಣ್ಣೆ ಹಚ್ಚದಿದ್ದಕ್ಕೆ ವಿದ್ಯಾರ್ಥಿನಿಯ ಕೂದಲು ಕತ್ತರಿಸಿದ ಘಟನೆ ಗುಜರಾತ್‌ನ ಖಾಸಗಿ ಶಾಲೆಯಲ್ಲಿ ನಡೆದಿದೆ. ಮಂಗಳವಾರ ವಿದ್ಯಾರ್ಥಿನಿ ಶಾಲೆಗೆ ತೆರಳಿದಾಗ ತಲೆಗೂದಲಿಗೆ ಎಣ್ಣೆ ಹಚ್ಚಿರಲಿಲ್ಲ. ಇದನ್ನು ಕಂಡ ದೈಹಿಕ ಶಿಕ್ಷಕಿ ವಿದ್ಯಾರ್ಥಿಯ ಕೂದಲನ್ನು ಬ್ಲೇಡ್‌ನಿಂದ ಕತ್ತರಿಸಿದ್ದಾರೆ. ಮನೆಗೆ ಮರಳಿದ ಮಗಳ ಕೂದಲು ಗಮನಿಸಿದಾಗ ಪೋಷಕರಿಗೆ ವಿಷಯ ತಿಳಿದಿದ್ದು, ಕೂಡಲೇ ಜಿಲ್ಲಾ ಶಿಕ್ಷಣ ಅಧಿಕಾರಿಗೆ ದೂರು ನೀಡಿದ್ದಾರೆ. ದೂರಿನನ್ವಯ ಅಧಿಕಾರಿಗಳು ಶಿಕ್ಷಕಿಯನ್ನು ವಜಾಗೊಳಿಸಿದ್ದಾರೆ. ಈ ಕುರಿತು ವಿದ್ಯಾರ್ಥಿನಿಯ ತಾಯಿ ಮಾತನಾಡಿ, ಶಾಲೆಯಲ್ಲಿ ಮಕ್ಕಳಿಗೆ ಚಿಕ್ಕ ಚಿಕ್ಕ ವಿಷಯಗಳಿಗೆ […]

Continue Reading

ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗೆ ಕೊನೆಗೂ ನೇಮಕ

ಬೆಂಗಳೂರು: ಹಲವು ದಿನಗಳಿಂದ ನನೆಗುದಿಗೆ ಬಿದ್ದಿದ್ದ ನಿಗಮ-ಮಂಡಳಿಗೆ ಕೊನೆಗೂ ನೇಮಕವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಡಬ್ಲ್ಯೂಸಿ ಸಭೆಗೆಂದು ಬಿಹಾರ್ ತೆರಳಿದ ಸಂದರ್ಭದಲ್ಲೇ ನಿಗಮ ಮಂಡಳಿಗಳಿಗೆ ನೇಮಕ ಮಾಡಲಾಗಿದೆ. 39 ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ಹೈಕಮಾಂಡ್‌ ಮುದ್ರೆ ಹಾಕಿ ಇಂದು (ಸೆಪ್ಟೆಂಬರ್ 24) ರಾಜ್ಯಕ್ಕೆ ರವಾನೆ ಮಾಡಿದೆ. ಇನ್ನು ಪ್ರಕರಣದಲ್ಲಿ ಜೈಲಿನಲ್ಲಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರ ಪತ್ನಿ ಶಿವಲೀಲಾ ಅವರಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಹಾಗಾದರೆ […]

Continue Reading

ಮರತೂರ: ಶ್ರೀಶೈಲ ಮಹಾಸ್ವಾಮಿಗಳ ಮೌನಾನುಷ್ಠಾನ

ಸುದ್ದಿ ಸಂಗ್ರಹ ಶಹಾಬಾದ್ ತಾಲೂಕಿನ ಮರತೂರ ಗ್ರಾಮದ ವಿರಕ್ತ ಮಠದ ಪೀಠಾಧ್ಯಕ್ಷ ಶ್ರೀಶೈಲ ಮಹಾಸ್ವಾಮಿಗಳು ಲೋಕಕಲ್ಯಾಣ ಮತ್ತು ಲಿಂಗೈಕ್ಯ ಗುರುಲಿಂಗ ಶಿವಾಚಾರ್ಯರ ಪುಣ್ಯಸ್ಮರಣೋತ್ಸವ ನಿಮಿತ್ಯ ಒಂದು ತಿಂಗಳ ಕಾಲ ಮೌನ ಅನುಷ್ಠಾನ ಕೈಗೊಂಡಿದ್ದಾರೆ, ಕಲಬುರಗಿಯ ಮುಕ್ತಂಪುರಿನ ಗುರುಬಸವೇಶ್ವರ ಬೃಹನ್ಮಠದ ಶಿವಾನಂದ ಮಹಾಸ್ವಾಮಿಗಳ ಪಾದಪೂಜೆ ಮಾಡುವ ಮೂಲಕ ಮೌನ ಅನುಷ್ಠಾನ ಪ್ರಾರಂಭಿಸಿದರು. ಇದೆ ಸಂದರ್ಭದಲ್ಲಿ ಶಿರೋಳಿಯ ಶಿವಬಸವ ಮಹಾಸ್ವಾಮಿಗಳು ಉಪಸ್ಥಿತರಿದ್ದರು. ಅ.7 ರಂದು ಮೌನ ಅನುಷ್ಠಾನ ಮಂಗಲ ಸಮಾರಂಭ ನಡೆಯಲಿದೆ, ನಾಡಿನ ಪೂಜ್ಯರು, ವಿವಿಧ ರಾಜಕೀಯ ಪಕ್ಷದ ಮುಖಂಡರು […]

Continue Reading

ಸಮೀಕ್ಷೆಯಲ್ಲಿ ಕಬ್ಬಲಿಗ, ಕೋಲಿ ಎಂದು ಬರೆಯಿಸಲು ಸಮಾಜದಿಂದ ಕರೆ

ಚಿತ್ತಾಪುರ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಕೋಲಿ, ಕಬ್ಬಲಿಗ ಜಾತಿಯವರು ಕಡ್ಡಾಯವಾಗಿ ಜಾತಿ ಕಬ್ಬಲಿಗ ಎಂದು, ಉಪ ಜಾತಿ ಕೋಲಿ ಎಂದು ಬರೆಯಿಸಬೇಕು ಎಂದು ತಾಲೂಕು ಕೋಲಿ ಸಮಾಜದ ಅಧ್ಯಕ್ಷ ನಿಂಗಣ್ಣಾ ಹೆಗಲೇರಿ ಮತ್ತು ಗೌರವಾಧ್ಯಕ್ಷ ರಾಮಲಿಂಗ ಬಾನರ ಸಮಾಜದ ಜನರಿಗೆ ಕರೆ ನೀಡಿದ್ದಾರೆ.‌ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಮೀಕ್ಷೆ ಮಾಡಲು ಮನೆ ಮನೆಗೆ ಸಮೀಕ್ಷೆದಾರರು ಬಂದಾಗ ಧರ್ಮ ಕೇಳಿದಾಗ ಹಿಂದೂ ಎಂದು, ಜಾತಿ ಕೇಳಿದಾಗ ಕಬ್ಬಲಿಗ […]

Continue Reading