ನೆಲದ ಸಂಸ್ಕೃತಿ ಸಾರುವ ಹೊಡಲ್ ಸ್ಮಾರಕಗಳು: ಮುಡುಬಿ ಗುಂಡೇರಾವ

ಕಲಬುರಗಿ: ಕನ್ನಡ ನಾಡು-ನುಡಿ, ಸಂಸ್ಕೃತಿಯನ್ನು ಸಾರುವ ಹೊಡಲ ಗ್ರಾಮದ ರಾಮಲಿಂಗೇಶ್ವರ ದೇವಾಲಯ ಮತ್ತು ಸ್ಮಾರಕಗಳ ಕೊಡುಗೆ ಅಪಾರವಾಗಿವೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಕಮಲಾಪುರ ತಾಲೂಕಿನ ಹೊಡಲ್ ಗ್ರಾಮದ ರಾಮಲಿಂಗೇಶ್ವರ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-15ರಲ್ಲಿ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದ ಅವರು, ನಾಡಿನ ಭವ್ಯ ಪರಂಪರೆಯ ಪ್ರತೀಕವಾದ ಸ್ಮಾರಕಗಳ ಬಗ್ಗೆ ಜಾಗೃತಿ ಮೂಡಿಸುವುದು ಅವಶ್ಯವಾಗಿದೆ. ಇಲ್ಲಿಯ ಒಂದೊಂದು ಕಲ್ಲು, ಶಿಲ್ಪಗಳು, […]

Continue Reading

ಬಹುಮುಖ ವ್ಯಕ್ತಿತ್ವದ ಮೇರು ಸಾಹಿತಿ ಡಾ.ಗಿರೀಶ್ ಕಾರ್ನಾಡ

ಕಲಬುರಗಿ: ಗಿರೀಶ್ ಕಾರ್ನಾಡ ಅವರು ನಾಟಕಕಾರ, ರಂಗಕರ್ಮಿ, ಲೇಖಕ, ಸಿನಿಮಾ ನಟ, ನಿರ್ದೇಶಕ, ಚಿಂತಕ, ಹೋರಾಟಗಾರ, ವಿಮರ್ಶಕರಾಗಿ ಹೀಗೆ ವಿವಿಧ ಮುಖಗಳುಳ್ಳ ಬಹುಮುಖ ವ್ಯಕ್ತಿತ್ವದ ಮಹಾನ ಸಾಧಕ. ಕನ್ನಡಕ್ಕೆ ಜ್ಞಾನಪೀಠ ಪ್ರಶಸ್ತಿ ದೊರಕಿಸಿಕೊಟ್ಟಿರುವ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಹೊರವಲಯ ಉಪಳಾಂವನ ಶ್ರೀರಾಮ ಕನ್ನಡ ಕಾನ್ವೆಂಟ್ ಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ ‘ಡಾ.ಗಿರೀಶ್ ಕಾರ್ನಾಡ್‌ರ 87ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, […]

Continue Reading

ನಾಡಿಗೆ ಕನ್ನಡ ಭಾಷೆಯನ್ನು ಬೋಧಿಸಿದ ಬೋಧನ ಗ್ರಾಮ: ಮುಡುಬಿ ಗುಂಡೇರಾವ

ಕಲಬುರಗಿ: ತಾಲೂಕಿನ ಬೋಧನ ಗ್ರಾಮವು ಪ್ರಾಚೀನ ಕಾಲದಲ್ಲಿ ‘ಸರಸ್ವತಿಪುರ’ ಎಂದು ನಾಡಿಗೆ ಚಿರಪರಿಚಿತವಾಗಿದೆ. ನಾಡಿಗೆ ಕನ್ನಡ ಭಾಷೆಯನ್ನು ಬೋಧಿಸಿದ ‘ಬೋಧನ’ ಗ್ರಾಮವಾಗಿದೆ ಎಂದು ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಆಳಂದ ತಾಲೂಕಿನ ಬೋಧನ ಗ್ರಾಮದ ಮಲ್ಲಿಕಾರ್ಜುನ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-14ರಲ್ಲಿ ಜರುಗಿದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮದ ಮಲ್ಲಿಕಾರ್ಜುನ ದೇವಾಲಯದಲ್ಲಿ ಪ್ರಾಚೀನ ಕಾಲದಲ್ಲಿ ಕನ್ನಡ ವಿಷಯ […]

Continue Reading

ಅನಾಥವಾಗಿ ಬಿದ್ದಿದ್ದ ಮಗುವನ್ನು ಸಾಕಿದ ಮಹಿಳೆ, ಆ ಮಗಳಿಂದಲೆ ಕೊಲೆಯಾದ ತಾಯಿ

ಭುವನೇಶ್ವರ: ಅಪ್ಪ-ಅಮ್ಮನಿಗೆ ಬೇಡವಾದ ಮಗು ಕಸದಬುಟ್ಟಿಯಲ್ಲಿ, ರಸ್ತೆಯ ಬದಿಯಲ್ಲಿ ಸೇರುತ್ತದೆ. ಇನ್ನು ಕೆಲವರು ಹೆಣ್ಣುಮಗು ಹುಟ್ಟಿತೆಂಬ ಕಾರಣಕ್ಕೆ ಅದನ್ನು ಕೊಲ್ಲುವವರೂ ಇದ್ದಾರೆ. ಆದರೆ ಒಡಿಶಾದ ಮಹಿಳೆ ರಾಜಲಕ್ಷ್ಮಿಕರ್ ಎಂಬುವವರಿಗೆ ಮಕ್ಕಳೆಂದರೆ ಜೀವ. ತಮಗೆ ಮಕ್ಕಳಾಗಲಿಲ್ಲವೆಂದು ಕೊರಗುತ್ತಿದ್ದ ಅವರಿಗೆ 13 ವರ್ಷದ ಹಿಂದೆ ರಸ್ತೆ ಬದಿಯಲ್ಲಿ 3 ದಿನದ ಹೆಣ್ಣುಮಗುವೊಂದು ಸಿಕ್ಕಿತ್ತು. ಕಾನೂನುಪ್ರಕಾರ ಆ ಮಗುವನ್ನು ದತ್ತು ಪಡೆದು ಆ ಅನಾಥ ಮಗುವಿಗೆ ತಾಯಿಯಾದರು. ಅಮ್ಮನಿಗೆ ಬೇಡವಾಗಿ ಬಿದ್ದಿದ್ದ ಆ ಹೆಣ್ಣು ಶಿಶುವಿನ ಜೀವನಕ್ಕೆ ಆಧಾರವಾದರು. ಒಳ್ಳೆಯ ಶಾಲೆಗೆ […]

Continue Reading

ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರ ಮುಚ್ಚಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಔಷಧ ವಿತರಣೆ ಮಾಡುತ್ತಿರುವುದರಿಂದ ಆಸ್ಪತ್ರೆಗಳ ಆವರಣದಲ್ಲಿ ಜನೌಷಧಿ ಕೇಂದ್ರಗಳ ಅಗತ್ಯವಿಲ್ಲ ಎಂದು ಸರ್ಕಾರ ಈ ಕ್ರಮ ಕೈಗೊಂಡಿದೆ. ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಶ್ರೀಪತಿ ಪಿ.ಕೆ ಅವರು ಆದೇಶ ಹೊರಡಿಸಿದ್ದಾರೆ. ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳ ವೈದ್ಯರು ರೋಗಿಗಳಿಗೆ ಯಾವುದೆ ಔಷಧಿ ಹೊರಗಿನಿಂದ ಖರೀದಿಸಲು ಶಿಫಾರಸ್ಸು ಮಾಡದಂತೆ ನೋಡಿಕೊಳ್ಳುವುದು […]

Continue Reading

ಶಿಕ್ಷಕರಿಗೆ ಕಿರುಕುಳ: ಬಿಇಒ ಅಮಾನತು

ಬೀದರ್‌: ಶಿಕ್ಷಕರಿಗೆ ಕಿರುಕುಳ ಕೊಟ್ಟು ಕರ್ತವ್ಯಲೋಪ ಎಸಗಿದ ಕಾರಣಕ್ಕೆ ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್‌ ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಅಮಾನತುಗೊಳಿಸಿದ್ದಾರೆ. ಟಿ.ಆರ್‌ ದೊಡ್ಡೆ ಅವರ ಸ್ಥಾನಕ್ಕೆ ಕಲಬುರಗಿ ಜಿಲ್ಲೆಯ ಕಮಲಾಪುರದ ಡಯಟ್‌ ಹಿರಿಯ ಉಪನ್ಯಾಸಕರನ್ನು ವರ್ಗಾಯಿಸಿ, ನೇಮಕ ಮಾಡಲಾಗಿದೆ. ಏಳನೇ ಪರಿಷ್ಕೃತ ವೇತನ ಬಟವಾಡೆಗೆ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಂದ ಹಣ ತೆಗೆದುಕೊಂಡು ಪರಿಷ್ಕೃತ ವೇತನ ಬಿಡುಗಡೆಗೊಳಿಸಿದ್ದಾರೆ. ಕಾಲಮಿತಿ ವೇತನ ಬಡ್ತಿ ಹಾಗೂ […]

Continue Reading

ಆರೋಗ್ಯಯುತ ಜೀವನಶೈಲಿಯಿಂದ ಅಧಿಕ ರಕ್ತದೊತ್ತಡ ದೂರ: ಡಾ.ರಾಜಶೇಖರ ಪಾಟೀಲ

ಕಲಬುರಗಿ: ಅನಾರೋಗ್ಯಕರ ಜೀವನಶೈಲಿಯಿಂದ ಬೊಜ್ಜು, ಸ್ಥೂಲಕಾಯದ ಪ್ರಮಾಣ ಹೆಚ್ಚಾಗಿದೆ. ಒತ್ತಡ ಜೀವನ ಸೇರಿದಂತೆ ಮುಂತಾದ ಕಾರಣದಿಂದ ಅಧಿಕ ರಕ್ತದೊತ್ತಡವಿರುವವರ ಸಂಖ್ಯೆ ಹೆಚ್ಚಾಗುತ್ತಾದೆ. ಇದು ಉಸಿರಾಟ ಸಂಬಂಧಿತ ಸಮಸ್ಯೆಗಳೊಂದಿಗೆ ಹೃದಯಘಾತಕ್ಕೆ ಕಾರಣವಾಗುವ ಮೂಲಕ ಜೀವಕ್ಕೆ ಅಪಾಯಕಾರಿಯಾಗಿದೆ. ಆರೋಗ್ಯಯುತ ಜೀವನಶೈಲಿಯಿಂದ ಅಧಿಕ ರಕ್ತದೊತ್ತಡದಿಂದ ದೂರವಿರಲು ಸಾಧ್ಯ ಎಂದು ಹಿರಿಯ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ಬಸವ ಗಂಗಾ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಜರುಗಿದ […]

Continue Reading

ರಾಷ್ಟ್ರದ ಅಭಿವೃದ್ಧಿಗೆ ದೂರಸಂಪರ್ಕ ಕ್ಷೇತ್ರದ ಕೊಡುಗೆ ಅಪಾರ

ಕಲಬುರಗಿ: ನಮ್ಮ ದೇಶ ಸೇರಿದಂತೆ ಇಡಿ ವಿಶ್ವದಲ್ಲಿ ಉಂಟಾದ ದೂರ ಸಂಪರ್ಕ ಕ್ಷೇತ್ರದಲ್ಲಿನ ಕ್ರಾಂತಿಯಿಂದಾಗಿ, ಪ್ರಸ್ತುತವಾಗಿ ಜಗತ್ತೆ ಒಂದು ಚಿಕ್ಕ ಗ್ರಾಮವೆಂಬ ಪರಿಕಲ್ಪನೆ ಮೂಡಲು ಸಾಧ್ಯವಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನದ ತೀವ್ರ ಬೆಳವಣಿಗೆಯಿಂದಾಗಿ ಸಾಧ್ಯವಾಗಿದ್ದು, ದೂರಸಂಪರ್ಕ ಕ್ಷೇತ್ರದ ಕ್ರಾಂತಿಯಿಂದಾಗಿ ರಾಷ್ಟ್ರ ತೀವ್ರಗತಿಯಲ್ಲಿ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ಅಪಾರವಾದ ಕೊಡುಗೆ ನೀಡಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಜೆ.ಆರ್ ನಗರದಲ್ಲಿನ ‘ಶ್ರೇಯಸ್ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಏರ್ಪಡಿಲಾಗಿದ್ದ ‘ಅಂತಾರಾಷ್ಟ್ರೀಯ ದೂರಸಂಪರ್ಕ ದಿನಾಚರಣೆ’ […]

Continue Reading

ವೈದ್ಯಾಧಿಕಾರಿಗಳಿಗೆ ಗ್ರಾಮೀಣ ಸೇವೆ ಕಡ್ಡಾಯ, ಕೆಲವರಿಗಷ್ಟೇ ವಿನಾಯಿತಿ

ಬೆಂಗಳೂರು: ಕಡ್ಡಾಯವಾಗಿ ಗ್ರಾಮೀಣ ಸೇವೆ ಸಲ್ಲಿಸದ, 50 ವರ್ಷ ಮೀರದ ವೈದ್ಯಾಧಿಕಾರಿಗಳ ಮತ್ತು ಇತರ ಸಿಬ್ಬಂದಿಯನ್ನು ಗುರುತಿಸಿ ತಕ್ಷಣವೆ ಗ್ರಾಮೀಣ ಪ್ರದೇಶದ ಸೇವೆಗೆ ವರ್ಗಾವಣೆ ಮಾಡಬೇಕೆಂದು ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಅಲ್ಲದೆ ವಿಶೇಷ ತಜ್ಞರು ಮತ್ತು ಹಿರಿಯ ವಿಶೇಷ ತಜ್ಞರು ಅವರ ವಿಶೇಷ ವಿದ್ಯಾರ್ಹತೆಗೆ ಗೊತ್ತುಪಡಿಸದ ಹುದ್ದೆಗಳಲ್ಲಿ ಕಾರ್ಯನಿರ್ವಸುತ್ತಿದ್ದಲ್ಲಿ ಅವರ ಸೇವೆಯನ್ನು ಕೂಡಲೇ ಹಿಂಪಡೆದು ವಿಶೇಷ ವಿದ್ಯಾರ್ಹತೆಗೆ ಗೊತ್ತುಪಡಿಸಿದ ಹುದ್ದೆಗಳಿಗೆ ವರ್ಗಾವಣೆ ಮಾಡಬೇಕು ಎಂದು ಸೂಚಿಸಲಾಗಿದೆ. ಕನಿಷ್ಠ ಮೂರು ವರ್ಷ ಗ್ರೂಪ್‌ ‘ಎ’ ಹುದ್ದೆಯಲ್ಲಿ, ಕನಿಷ್ಠ […]

Continue Reading

13 ವರ್ಷದ ವಿದ್ಯಾರ್ಥಿಯಿಂದ ಗರ್ಭಿಣಿಯಾದ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಕೋರ್ಟ್‌ ಅನುಮತಿ

ಗಾಂಧಿನಗರ: 13 ವರ್ಷದ ವಿದ್ಯಾರ್ಥಿಯೊಂದಿಗೆ ಓಡಿ ಹೋಗಿ, ಆತನಿಂದಲೇ ಗರ್ಭಿಣಿಯಾಗಿ ಸದ್ಯ ಪೋಕ್ಸೊ ಕಾಯ್ದೆಯಡಿ ಬಂಧನದಲ್ಲಿರುವ 23 ವರ್ಷದ ಶಿಕ್ಷಕಿಯ ಗರ್ಭಪಾತಕ್ಕೆ ಗುಜರಾತ್‌ನ ಸೂರತ್‌ನ ವಿಶೇಷ ಪೋಕ್ಸೋ ನ್ಯಾಯಾಲಯ ಅನುಮತಿ ನೀಡಿದೆ. ಅಪ್ರಾಪ್ತ ವಯಸ್ಕನನ್ನು ಅಪಹರಿಸಿದ ಪ್ರಕರಣದಲ್ಲಿ ಶಿಕ್ಷಕಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ದೂರು ದಾಖಲಾಗಿದೆ, ಸದ್ಯ ಸೂರತ್‌ನ ಜೈಲಿನಲ್ಲಿದ್ದಾಳೆ. ಕೆಲವು ದಿನಗಳ ಹಿಂದೆ ಬೆಳಕಿಗೆ ಬಂದಿರುವ ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿತು. ಆಕೆಯ ಮಾನಸಿಕ ತೊಂದರೆಗಳನ್ನು ಗಣನೆಗೆ ತೆಗೆದುಕೊಂಡು ಈ ತೀರ್ಪು ನೀಡಲಾಗಿದೆ ಎಂದು […]

Continue Reading