ಬಾಲ್ಯದಿಂದಲೇ ಮಕ್ಕಳಲ್ಲಿ ಮೌಲ್ಯ ಬಿತ್ತುವ ಕಾರ್ಯವಾಗಲಿ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿಮಕ್ಕಳಿಗೆ ಬಾಲ್ಯದಿಂದಲೇ ಮೌಲ್ಯ, ದೇಶದ ಸಂಸ್ಕೃತಿ, ಪರಂಪರೆ, ಹಬ್ಬಗಳು, ಉತ್ಸವಗಳ ಹಿನ್ನಲೆಯ ಬಗ್ಗೆ ಅವರಲ್ಲಿ ಬಿತ್ತುವ ಕಾರ್ಯ ಮಾಡಬೇಕಾದದ್ದು ಪ್ರಸ್ತುತ ಜರೂರಿಯಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು.‌ ಮಹಾಗಾಂವ ಕ್ರಾಸ್ ಸಮೀಪದ ಚಿಗುರು ನಿರ್ಗತಿಕ ಮತ್ತು ಅನಾಥ ಮಕ್ಕಳ ನಿಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಯುಗಾದಿ ಹಬ್ಬದ ನಿಮಿತ್ಯ ಗುರುವಾರ ಜರುಗಿದ ‘ಯುಗಾದಿ ಮಕ್ಕಳ ಕಲರವ’ ವಿಶೇಷ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಯುವ ಜನತೆ ವಿದೇಶಿ […]

Continue Reading

ಅಲ್ಲಮಪ್ರಭುಗಳ ವಚನಗಳು ಮನೆ-ಮನ ತಲುಪಲಿ: ಡಾ.ರಾಜಶೇಖರ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿಪ್ರಸ್ತುತ ದಿನಗಳಲ್ಲಿಯೂ ಕೂಡಾ ಕಂಡು ಬರುತ್ತಿರುವ ಜಾತಿಯತೆ, ಮೂಡನಂಬಿಕೆ, ಕಂದಾಚಾರ, ಅಂಧಶೃದ್ಧೆಯಂತಹ ಮುಂತಾದ ಸಾಮಾಜಿಕ ಸಮಸ್ಯೆಗಳ ನಿರ್ಮೂಲನೆಗೆ ಬಸವಣ್ಣನವರ ಜೊತೆಗೂಡಿ 950 ವರ್ಷಗಳ ಹಿಂದೆ ಹೋರಾಡಿದ, ಸಾಮಾಜಿಕ ಸಮಾನತೆಯ ನಿರ್ಮಾಣಕ್ಕೆ ಶ್ರಮಿಸಿದ ಶರಣ ಅಲ್ಲಮಪ್ರಭು ದೇವರು ವಿಶ್ವದ ಪ್ರಥಮ ಮೊದಲ ಸಂಸತ್ತಿನ ಅಧ್ಯಕ್ಷರಾಗಿ ಅನನ್ಯವಾದ ಕೊಡುಗೆ ನೀಡಿದ್ದಾರೆ, ಎಲ್ಲರ ಮನೆಯಲ್ಲಿ ಅವರ ಭಾವಚಿತ್ರ ಇಡುವುದು ಮತ್ತು ಅವರ ವಚನಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಶರಣ ಚಿಂತಕ ಡಾ.ರಾಜಶೇಖರ ಪಾಟೀಲ ಹೆಬಳಿ ಅಭಿಪ್ರಾಯಪಟ್ಟರು. ನಗರದ […]

Continue Reading

ಮೆಡಿಕಲ್ ಸ್ಟೋರ್ ಪರವಾನಗಿ ನವೀಕರಣಕ್ಕಾಗಿ ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ಕೋಲಾರ ಡ್ರಗ್​​ ಕಂಟ್ರೋಲರ್

ಸುದ್ದಿ ಸಂಗ್ರಹ ಕೋಲಾರಮೆಡಿಕಲ್ ಸ್ಟೋರ್ ಪರವಾನಗಿ ನವೀಕರಣಕ್ಕಾಗಿ 38 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕೋಲಾರ ಜಿಲ್ಲಾ ಡ್ರಗ್​​ ಕಂಟ್ರೋಲರ್​​ ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕರ್ನಾಟಕ ದಲಿತ ಸಿಂಹ ಸೇನೆ ಮುಖಂಡ ಹೂಹಳ್ಳಿ ಪ್ರಕಾಶ್, ಕೃಷ್ಣಯ್ಯ ದೂರಿನ ಅನ್ವಯ ಲೋಕಾಯುಕ್ತ ಉಪ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಪ್ರಕರಣ ಸಂಬಂಧ ಜಿಲ್ಲಾ ಔಷಧ ನಿಯಂತ್ರಕರಾದ ಶ್ಯಾಮಲಾ, ವಾಹನ ಚಾಲಕ ಮಹಂತೇಶ್ ಮತ್ತು ನಿವೃತ್ತ ಡಿ ಗ್ರೂಪ್ ಶ್ರೀನಿವಾಸನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಮಾಲೂರು […]

Continue Reading

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

ಸುದ್ದಿ ಸಂಗ್ರಹ ಮಂಗಳೂರು ಮಧ್ಯಪ್ರಾಚ್ಯ ರಾಷ್ಟ್ರಗಳ ಯುದ್ಧ ಹಿನ್ನೆಲೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಇದೀಗ ಕರಾವಳಿಯ ಪ್ಲಾಸ್ಟಿಕ್ ಉದ್ಯಮದ ಮೇಲೆ‌ ಭಾರಿ ಹೊಡೆತ ಬಿದ್ದಿದೆ. ಕರಾವಳಿಯ ಪ್ಲಾಸ್ಟಿಕ್ ಪ್ಯಾಕ್ಟರಿಗಳು ಬಂದ್ ಆಗುವ ಭೀತಿ ಎದುರಾಗಿದೆ. ಪೆಟ್ರೋಲಿಯಂ ಬೈ ಪ್ರಾಡೆಕ್ಟ್‌ನ‌ ಕಚ್ಚಾ ವಸ್ತುವಿನಿಂದ ತಯಾರಿಸಲಾಗುವ ಪ್ಲಾಸ್ಟಿಕ್ ಉತ್ಪನ್ನಗಳ ಸುಮಾರು 50 ಕ್ಕೂ ಹೆಚ್ಚು ಫ್ಯಾಕ್ಟರಿಗಳು ಮಂಗಳೂರು ಹಾಗೂ ಉಡುಪಿಯಲ್ಲಿವೆ. ಕಚ್ಚಾ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಉತ್ಪಾದನಾ ವೆಚ್ಚ ಭರಿಸಲು ಫ್ಯಾಕ್ಟರಿಗಳು ಪರದಾಡುತ್ತಿದೆ‌. ಕಚ್ಚಾ ತೈಲದ ಬೆಲೆ‌ ಪ್ರತಿ […]

Continue Reading

ಮಾನವೀಯ ಮೌಲ್ಯಗಳೇ ನಿಜವಾದ ಧರ್ಮ

ಸುದ್ದಿ ಸಂಗ್ರಹ ಶಹಾಬಾದಪ್ರತಿಯೊಂದು ಕೆಲಸದಲ್ಲಿ ದೇವರನ್ನು ಕಾಣುವದು ನಿಜವಾದ ಧರ್ಮವಾಗಿದ್ದು, ಮಾನವನ ಮಾನವೀಯ ಮೌಲ್ಯಗಳೆ ನಿಜವಾ ಧರ್ಮ ಎಂದು ಕಲಬುರಗಿ ಚರ್ಚ್ ಫಾದರ್ ಪ್ರವೀಣ್ ಹೇಳಿದರು. ನಗರದ ಲಕ್ಷ್ಮಿ ಗಂಜನಲ್ಲಿರುವ ಸಂತ್ ತೋಮಾಸ್ ಚರ್ಚಿನಲ್ಲಿ ರಂಜಾನ್ ನಿಮಿತ್ತ ನಡೆದ ಸೌಹಾರ್ದ ಇಫ್ತಿಯಾರ್ ಕೂಟದಲ್ಲಿ ಮಾತನಾಡಿದ ಅವರು, ಪ್ರತಿಯೊಬ್ಬರ ಪರಸ್ಪರ ಸಹಕಾರ, ಸಹ ಬಾಳ್ವೆಯಿಂದ ಜೀವನ ನಡೆಸಬೇಕು, ಪ್ರತಿಯೊಂದು ಕೆಲಸದಲ್ಲಿ ದೇವರನ್ನು ಕಾಣುವದು ನಿಜವಾದ ಧರ್ಮವಾಗಿದೆ ಎಂದರು. ಜಾಮೀಯಾ ಮಜೀದ್ ಸಮಿತಿಯ ಅಧ್ಯಕ್ಷ ಮತೀನ್ ಸೇಠ್ ಮಾತನಾಡಿ, ಚರ್ಚಿನ […]

Continue Reading

ಯಾಗಾಪೂರ: SSLC ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಉಚಿತ ಪ್ರಯಾಣ ವ್ಯವಸ್ಥೆ

ಸುದ್ದಿ ಸಂಗ್ರಹ ಚಿತ್ತಾಪುರಯಾಗಾಪೂರ ಗ್ರಾಮದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ನಾಲವಾರ ಗ್ರಾಮದ ಸಮಾಜ ಸೇವಕ ಶಿವಕುಮಾರ ಸುಣಗಾರ ಉಚಿತ ವಾಹನ ವ್ಯವಸ್ಥೆ ಕಲ್ಪಿಸಿದ್ದಾರೆ. ತಾಲೂಕಿನ ಯಾಗಾಪೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ದೂರದ ನಾಲವಾರ ಗ್ರಾಮಕ್ಕೆ ಹೋಗಬೇಕಾಗಿದ್ದು, ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ತೆರಳುವ ಉದ್ದೇಶದಿಂದ ನಾಲವಾರ ಗ್ರಾಮದ ಸಮಾಜ ಸೇವಕ ಮತ್ತು ಕೋಲಿ ಸಮಾಜದ ಯುವ ಮುಖಂಡ ಶಿವಕುಮಾರ ಸುಣಗಾರ ಉಚಿತ ವಾಹನದ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. […]

Continue Reading

ಬರೆದಂತೆ ಬದುಕಿದ ಆಧುನಿಕ ಸರ್ವಜ್ಞ ಡಿವಿಜಿ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿಬರೆದಂತೆ ಬದುಕಿದ ಅಪರೂಪದ ಸಾಹಿತಿ ಡಿವಿಜಿಯವರು ಆಧುನಿಕ ಸರ್ವಜ್ಞರಾಗಿದ್ದಾರೆ. ಬರವಣಿಗೆ ಮತ್ತು ಬದುಕಿನಲ್ಲಿ ಸಾಮ್ಯತೆಯಿರುವವರು ಬೆರಳಣಿಕೆಯಷ್ಟು ಜೀವನದ ನೈಜತೆ, ಮೌಲ್ಯಗಳು, ಮೇರು ಸಂದೇಶ ಡಿವಿಜಿಯವರು ತಮ್ಮ ಅನುಭಾವದ ಸಾಹಿತ್ಯ ಮೂಲಕ ಸಾರಿದ್ದಾರೆ. ‘ಕಗ್ಗ ಕವಿ’ ಎಂದೆ ಖ್ಯಾತಿ ಪಡೆದಿರುವ ಡಿವಿಜಿಯವರು ಬಹುಮುಖ ವ್ಯಕ್ತಿತ್ವವದ ಮೇರು ಸಾಹಿತಿಯಾಗಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಜರುಗಿದ ಕನ್ನಡದ […]

Continue Reading

ಎಲ್ಲ ಕ್ಷೇತ್ರದಲ್ಲೂ ಮಹಿಳೆಯರ ಸಾಧನೆ ಅನನ್ಯ: ತಹಸೀಲ್ದಾರ್ ನಾಗಯ್ಯ ಹಿರೇಮಠ

ಸುದ್ದಿ ಸಂಗ್ರಹ ಚಿತ್ತಾಪುರಆಧುನಿಕ ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡಿ, ಪುರುಷರ ಸಮಾನಾಗಿ ನಿಂತಿದ್ದಾರೆ ಎಂದು ತಹಸೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು. ಪಟ್ಟಣದ ಅಂಬಿಗರ ಚೌಡಯ್ಯ ಭವನದಲ್ಲಿ ತಾಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಮತ್ತು “ಕಾನೂನು ಅರಿವು” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರಪಂಚದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಲಾಗಿದ್ದು, ಅದನ್ನು […]

Continue Reading

ಟೆಂಗಳಿ ಮಹಾದ್ವಾರ ದುರಸ್ತಿ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಸುದ್ದಿ ಸಂಗ್ರಹ ಕಾಳಗಿತಾಲೂಕಿನ ಟೆಂಗಳಿ ಗ್ರಾಮದ ಐತಿಹಾಸಿಕ ಮಹಾದ್ವಾರದ (ಅಗಸಿ) ದುರಸ್ತಿ ಕಾರ್ಯ ಶೀಘ್ರ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಂಡಗಿ ಪ್ರತಿಷ್ಠಾನದ ಅಧ್ಯಕ್ಷ ಶಿವರಾಜ ಅಂಡಗಿ ಮನವಿ ಪತ್ರ ಸಲ್ಲಿಸಿದರು. ಪಟ್ಟಣದಲ್ಲಿ ನಡೆದ ವಿವಿಧ ಕಾಮಗಾರಿಗಳ ಅಡಿಗಲ್ಲು ಸಮಾರಂಭದ ವೇಳೆ ಸಚಿವರನ್ನು ಭೇಟಿಯಾಗಿ, ಟೆಂಗಳಿ ಗ್ರಾಮದ ಮಹಾದ್ವಾರ ಅವನತಿ ಸ್ಥಿತಿಯಲ್ಲಿ ಇರುವುದರಿಂದ ತಕ್ಷಣವೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಮನವಿ ಮಾಡಿದರು. ಮನವಿ ಪತ್ರದಲ್ಲಿ […]

Continue Reading

SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: KSRTC ಬಸ್‌ನಲ್ಲಿ ಉಚಿತ ಪ್ರಯಾಣ ಸೌಲಭ್ಯ

ಸುದ್ದಿ ಸಂಗ್ರಹ ಬೆಂಗಳೂರು ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಪರೀಕ್ಷೆ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಮಹತ್ವದ ಸುದ್ದಿ ನೀಡಿದೆ. ನಾಳೆ ಮಾರ್ಚ್ 18 ಬುಧವಾರದಿಂದ ಏಪ್ರಿಲ್‌ 02 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿವೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಎಸ್‌ಆರ್‌ಟಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹಾಗೂ […]

Continue Reading