ಕಲಬುರಗಿಯಲ್ಲಿ ಬಿರುಸಿನ ಮಳೆ: ವಾಹನ ಸವಾರರ ಪರದಾಟ

ಸುದ್ದಿ ಸಂಗ್ರಹ ಕಲಬುರಗಿನಗರ‌ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸೋಮವಾರ ಸಂಜೆ ಧಾರಾಕಾರ‌ ಮಳೆ‌ ಸುರಿಯಿತು. ಕಾದಿದ್ದ ವಾತಾವರಣಕ್ಕೆ ತಂಪೆರೆಯಿತು. ನಗರದಲ್ಲಿ ದಿನವಿಡಿ ಬಿಸಿಲಿನ ವಾತಾವರಣ ಇತ್ತು, ಸಂಜೆ ಹೊತ್ತಿಗೆ ಆಗಸದಲ್ಲಿ ಮೋಡಗಳು ದಟ್ಟೈಸಿ ಧಾರಾಕಾರವಾಗಿ ಮಳೆ‌ ಸುರಿಸಿದವು. ಬೇಸಿಗೆಯಂಥ ಸೆಕೆಯಿಂದ ಬಳಲಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿಸಿತು. ಕೆಲವೇ ನಿಮಿಷಗಳ ಮಳೆಯಿಂದ ರಸ್ತೆಗಳ ಮೇಲೆ ನೀರು ಹರಿಯಿತು. ತಗ್ಗು ಪ್ರದೇಶಗಳಲ್ಲಿ ನೀರು ಜಮಾಯಿಸಿ, ವಾಹನಗಳ‌ ಸವಾರರು ಪರದಾಡಿದರು. ಜಿಲ್ಲೆಯ ಚಿತ್ತಾಪುರ ಮತ್ತು ಕಾಳಗಿ ತಾಲೂಕಿನಲ್ಲೂ ಉತ್ತಮ ಮಳೆ […]

Continue Reading

ನೀನು ಕೊಲ್ಲದಿದ್ದರೆ ನಾನೇ ಕೊಲ್ತೀನಿ- ಪತಿಯನ್ನೆ ಮುಗಿಸಲು ಪತ್ನಿ-ಪ್ರಿಯಕರನ ಸ್ಕೆಚ್‌; ಚಾಟ್‌ ನೋಡಿ ಪೊಲೀಸರ ಮೊರೆ ಹೋದ ಗಂಡ

ಸುದ್ದಿ ಸಂಗ್ರಹ ತೆಲಂಗಾಣಪತ್ನಿ ಹಾಗೂ ಆಕೆಯ ಶಂಕಿತ ಪ್ರಿಯಕರ ಸೇರಿಕೊಂಡು ತನ್ನನ್ನ ಕೊಲೆ ಮಾಡಿ, ಅದನ್ನು ರಸ್ತೆ ಅಪಘಾತದಂತೆ ಬಿಂಬಿಸಲು ಸಂಚು ರೂಪಿಸಿದ್ದರು ಎಂದು ಆರೋಪಿಸಿ ತೆಲಂಗಾಣದ ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಈ ಪ್ರಕರಣ ಇದೀಗ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಮಹಬೂಬಾಬಾದ್ ಜಿಲ್ಲೆಯ ಗ್ರಾಮವೊಂದರ ನಿವಾಸಿ ಗಾಡೆ ರಾಜೇಶ್ವರ ರಾವ್ ಎಂಬವರು ಪೊಲೀಸರಿಗೆ ದೂರು ನೀಡಿದ್ದು, ತಮ್ಮ ಪತ್ನಿ ಭವಾನಿ ಹಾಗೂ ಖಮ್ಮಂನ ಕೊರಿಯರ್ ಡೆಲಿವರಿ ಏಜೆಂಟ್ ಸೈದುಲು ನಡುವೆ ನಡೆದಿರುವ ವಾಟ್ಸಾಪ್ ಮತ್ತು ಇನ್ಸ್ಟಾಗ್ರಾಮ್‌ […]

Continue Reading

ಲಿಪ್‌ಸ್ಟಿಕ್‌ನಲ್ಲಿ ಕ್ಯಾನ್ಸರ್‌ಕಾರಕ ಕೆಮಿಕಲ್ ಪತ್ತೆ: ಆಹಾರ ಸುರಕ್ಷತಾ ಇಲಾಖೆ ಪರಿಶೀಲನೆ

ಸುದ್ದಿ ಸಂಗ್ರಹ ಬೆಂಗಳೂರುಲಿಪ್‌ಸ್ಟಿಕ್ ಬಳಸುವ ಮಹಿಳೆಯರಿಗೆ ಇದೊಂದು ಶಾಕಿಂಗ್‌ ಸುದ್ದಿ. ಕರ್ನಾಟಕದ ಆಹಾರ ಸುರಕ್ಷತಾ ಇಲಾಖೆ ನಡೆಸಿದ ಪರಿಶೀಲನೆಯಲ್ಲಿ ಕೆಲವು ಲಿಪ್‌ಸ್ಟಿಕ್ ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಮತ್ತು ಲೋಹದ ಅಂಶಗಳು ಪತ್ತೆಯಾಗಿವೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಮಾರಾಟವಾಗುವ ಲಿಪ್‌ಸ್ಟಿಕ್‌ಗಳ ಮಾದರಿಗಳನ್ನು ಅಧಿಕಾರಿಗಳು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿದ್ದಾರೆ. ಬ್ರಾಂಡೆಡ್ ಉತ್ಪನ್ನಗಳ ಜೊತೆಗೆ ರಸ್ತೆ ಬದಿ ಮಾರಾಟವಾಗುವ ಲಿಪ್‌ಸ್ಟಿಕ್‌ಗಳ ಸ್ಯಾಂಪಲ್‌ಗಳನ್ನೂ ಪರಿಶೀಲಿಸಲಾಗಿದೆ. ಪರಿಶೀಲನೆ ವೇಳೆ 23 ಮಾದರಿಗಳಲ್ಲಿ ಅಪಾಯಕಾರಿ ರಾಸಾಯನಿಕ ಅಂಶಗಳು ಪತ್ತೆಯಾಗಿವೆ ಎಂದು ಆಹಾರ ಸುರಕ್ಷತಾ ಇಲಾಖೆ ತಿಳಿಸಿದೆ. ಕೆಲವು […]

Continue Reading

ಸಿಎಂ ಒತ್ತಡಕ್ಕೆ ಸಭಾಪತಿ ಹೊರಟ್ಟಿ ರಾಜೀನಾಮೆ: ಅಂಗೀಕರಿಸದಂತೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ಮನವಿ

ಸುದ್ದಿ ಸಂಗ್ರಹ ಬೆಂಗಳೂರುಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರಿಂದ ಬಲವಂತವಾಗಿ ರಾಜೀನಾಮೆ ಕೊಡಿಸಲಾಗಿದೆ. ಹೊರಟ್ಟಿ ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಸಿದೆ. ಛಲವಾದಿ ನಾರಾಯಣಸ್ವಾಮಿ, ಶರವಣ ನೇತೃತ್ವದಲ್ಲಿ ಲೋಕಭವನಕ್ಕೆ ತೆರಳಿದ ಬಿಜೆಪಿ-ಜೆಡಿಎಸ್ ನಿಯೋಗ, ಹೊರಟ್ಟಿ ಅವರ ರಾಜೀನಾಮೆ ಅಂಗೀಕರಿಸದಂತೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಮಾಡಿದೆ. ಸದನ ನಡಾವಳಿ ಪ್ರಕಾರ ರಾಜೀನಾಮೆ ಸಲ್ಲಿಕೆ ಆಗಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಿದೆ. ಕಾಂಗ್ರೆಸ್ ಲೆಟರ್‌ಹೆಡ್‌ನಲ್ಲಿ ಸಭಾಧ್ಯಕ್ಷ, ಸಭಾಪತಿಗಳ ಹೆಸರುಗಳ ಆಯ್ಕೆ ಬಗ್ಗೆಯೂ ರಾಜ್ಯಪಾಲರಿಗೆ ನಿಯೋಗ […]

Continue Reading

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಸಭೆಯಲ್ಲಿ ಗಲಾಟೆ: ವೀಕ್ಷಕರ ಎದುರೆ ಕಾರ್ಯಕರ್ತರ ಫೈಟಿಂಗ್

ಸುದ್ದಿ ಸಂಗ್ರಹ ಶಿವಮೊಗ್ಗನಗರದ ಕಾಂಗ್ರೆಸ್‌ ಭವನದಲ್ಲಿ ಪಕ್ಷದ ಜಿಲ್ಲಾ ಅಧ್ಯಕ್ಷರ ಆಯ್ಕೆ ಸಂಬಂಧ ನಡೆದ ಸಭೆಯಲ್ಲಿ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಎಐಸಿಸಿ ವೀಕ್ಷಕ ಶರತ್ ಎದುರಲ್ಲೆ ಕಾಂಗ್ರೆಸ್ ಕಾರ್ಯಕರ್ತರು ಕೈ-ಕೈ ಮಿಲಾಯಿಸಿಕೊಂಡಿದ್ದಾರೆ. ಸಭೆ ನಡೆಯುತ್ತಿದ್ದ ವೇಳೆ ಮುಖಂಡ ರಂಗೇಗೌಡರನ್ನು ಕಾಂಗ್ರೆಸ್ ಕಚೇರಿ ಸಭಾಂಗಣಕ್ಕೆ ಬಿಡದೆ ತಡೆಯಲಾಗಿದೆ. ಇದೆ ವಿಚಾರಕ್ಕೆ ದಕ್ಷಿಣ ಬ್ಲಾಕ್ ಅಧ್ಯಕ್ಷ ಕಲಿಂ ಪಾಷಾ ಬೆಂಬಲಿಗರು ಹಾಗೂ ಕಾಂಗ್ರೆಸ್ ಮುಖಂಡ ರಂಗೇಗೌಡ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ. ಈ ಸಂದರ್ಭ ಕಲಿಂ ಪಾಷಾ ಬೆಂಬಲಿಗರು ರಂಗೇಗೌಡರ […]

Continue Reading

ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ? – ಜಸ್ಟ್‌ 10 ಸೆಕೆಂಡ್‌ನಲ್ಲಿ ಚೆಕ್‌ ಮಾಡಿ

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದ್ದು ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೋ ಇಲ್ವೋ ಎನ್ನುವ ಪ್ರಶ್ನೆ, ಆತಂಕ ನಿಮ್ಮನ್ನು ಕಾಡುತ್ತಿರಬಹುದು. ಆದರೆ ನೀವು ಚಿಂತೆ ಮಾಡಬೇಕಾದ ಅಗತ್ಯವಿಲ್ಲ. ಚುನಾವಣಾ ಆಯೋಗ ಎಸ್‌ಐಆರ್‌ ಪ್ರಕ್ರಿಯೆಯ ಬಳಿಕ ವೆಬ್‌ಸೈಟ್‌ ರೂಪಿಸಿದೆ. ಈ ವೆಬ್‌ಸೈಟ್‌ನಲ್ಲಿ ನೀವು ನಿಮ್ಮ ಎಪಿಕ್‌ ನಂಬರ್‌ ನಮೂದಿಸುವ ಮೂಲಕ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರನ್ನು ಪರಿಶೀಲಿಸಬಹುದು. ಒಂದು ವೇಳೆ ಈ ಸೈಟ್‌ನಲ್ಲಿ ಹೆಸರು ASDDO ಪಟ್ಟಿಗೆ ಸೇರ್ಪಡೆಯಾಗಿದ್ದರೆ ಮತದಾರರು […]

Continue Reading

ಸಚಿವ ಸ್ಥಾನ ಬಿಟ್ಟು ಪಕ್ಷದ ಕೆಲಸ ಮಾಡಿ ಅಂತ ಹೈಕಮಾಂಡ್ ಹೇಳಿದ್ರೆ ಎಲ್ಲರೂ ಮಾಡಬೇಕು: ಪ್ರಿಯಾಂಕ್ ಖರ್ಗೆ

ಸುದ್ದಿ ಸಂಗ್ರಹ ಬೆಂಗಳೂರುಹೈಕಮಾಂಡ್ ಸಚಿವ ಸ್ಥಾನ ಬಿಟ್ಟು ಪಕ್ಷದ ಕೆಲಸ ಮಾಡಬೇಕು ಅಂದರೆ ನಾನು ಸೇರಿ ಎಲ್ಲರೂ ಮಾಡಬೇಕಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. ನೂತನ ಸಚಿವರಿಗೆ ಖಾತೆ ಹಂಚಿಕೆ ಆಗದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾವ ಮಂತ್ರಿಗೆ ಯಾವ ಜವಾಬ್ದಾರಿ ಕೊಡಬೇಕು ಅನ್ನೋದು ಸಿಎಂ ವಿವೇಚನೆ. ಹೈಕಮಾಂಡ್ ಜೊತೆ ಮಾತಾಡಿ ಸಿಎಂ ಅವರು ಸರ್ಕಾರ ಯಾರಿಗೆ ಜವಾಬ್ದಾರಿ ಕೊಟ್ಟರೆ ಉತ್ತಮ ಅಂತ ತೀರ್ಮಾನ ಮಾಡ್ತಾರೆ. ಇದರಲ್ಲಿ ಯಾವುದೆ ಗೊಂದಲ ಇಲ್ಲ ಎಂದರು. ಈಗಿರುವ […]

Continue Reading

ಬೆಂಗಳೂರಲ್ಲಿ 1 ಕೋಟಿ ಮತದಾರರಲ್ಲಿ ಅರ್ಧಕ್ಕರ್ಧ ಔಟ್: ಎಸ್‌ಐಆರ್‌ನಲ್ಲಿ ಮಹಾ ಲೋಪವೆಂದ ಕಾಂಗ್ರೆಸ್

ಸುದ್ದಿ ಸಂಗ್ರಹ ಬೆಂಗಳೂರುರಾಜ್ಯದಲ್ಲಿ ಎಸ್‌ಐಆರ್ ನಾಳೆಗೆ (ಆ.7) ಅಂತ್ಯವಾಗಲಿದೆ. ರಾಜ್ಯದಲ್ಲಿ ಈಗಾಗಲೆ 1.11 ಕೋಟಿ ಮತದಾರರ ಹೆಸರು ಪಟ್ಟಿಯಿಂದ ಡಿಲೀಟ್‌ ಆಗುವ ಸಾಧ್ಯತೆ ಇದೆ ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ. ಈ ಪೈಕಿ ಬೆಂಗಳೂರಿನ ಜಿಬಿಎ ವ್ಯಾಪ್ತಿಯಲ್ಲಿ ಅರ್ಧಕ್ಕರ್ಧ ಮತದಾರರಿಗೆ ಕೊಕ್ ಆಗಲಿದೆ ಎಂದು ದತ್ತಾಂಶ ಹೇಳುತ್ತಿದೆ. ಬೆಂಗಳೂರಿನಲ್ಲಿ 1.3 ಕೋಟಿ ಮತದಾರರಿದ್ದು, ಈ ಪೈಕಿ 49.53 ಲಕ್ಷ ಮತದಾರರಿಗೆ ಕೊಕ್ ಬೀಳಲಿದೆ. ಗೈರು, ಸ್ಥಳಾಂತರ, ಮರಣ ಹೊಂದಿದ, ನಕಲು ಮತ್ತು ಇತರೆ ಮತದಾರರನ್ನು ಚುನಾವಣಾ […]

Continue Reading

ಮಳೆಗಾಲದಲ್ಲಿ ಒಗೆದ ಬಟ್ಟೆಗಳ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಈ ತಂತ್ರ ಪಾಲಿಸಿ

ಬಟ್ಟೆಗಳನ್ನು ಒಣಗಿಸುವುದು ಮತ್ತು ಒಗೆದ ಬಟ್ಟೆಗಳು ವಾಸನೆ ಬರದಂತೆ, ಫ್ರೆಶ್‌ ಆಗಿ ಇಟ್ಟುಕೊಳ್ಳುವುದು ಮಳೆಗಾಲದಲ್ಲಿ ದೊಡ್ಡ ಸವಾಲಿನ ಕೆಲಸವಾಗಿದೆ. ಬಿಸಿಲಿನ ಕೊರತೆ, ಮತ್ತು ಗಾಳಿಯಲ್ಲಿ ಅತಿಯಾದ ಆರ್ದ್ರತೆಯಿಂದಾಗಿ, ಮಳೆಗಾಲದಲ್ಲಿ ಬಟ್ಟೆಗಳು ಸರಿಯಾಗಿ ಒಣಗುವುದಿಲ್ಲ. ಕೆಲವೊಮ್ಮೆ, ಉತ್ತಮ ಡಿಟರ್ಜೆಂಟ್‌ನಿಂದ ಡ್ರೆಸ್‌ ವಾಶ್‌ ಮಾಡಿದ್ರೂ, ಬಟ್ಟೆಗಳಿಂದ ದುರ್ವಾಸನೆ ಹೊರಸೂಸಲು ಪ್ರಾರಂಭಿಸುತ್ತವೆ. ಈ ವಾಸನೆ ಬರುವ ಬಟ್ಟೆಯನ್ನು ಧರಿಸಿದರೆ ಖಂಡಿತ ಮುಜುಗರ ಉಂಟಾಗುತ್ತದೆ. ಆದ್ದರಿಂದ ಈ ಕೆಲವೊಂದು ಪದಾರ್ಥಗಳ ಸಹಾಯದಿಂದ ಬಟ್ಟೆ ಒಗೆಯುವ ಮೂಲಕ ಒಗೆದ ಬಟ್ಟೆಗಳು ವಾಸನೆ ಬರದಂತೆ, ತಾಜಾ […]

Continue Reading

ಕಲಬುರಗಿ ಅಂಚೆ ವಿಭಾಗದಲ್ಲಿ ಫ್ರಾಂಚೈಸಿ ಮಳಿಗೆಗಳಿಗೆ ಅರ್ಜಿ ಆಹ್ವಾನ

ಸುದ್ದಿ ಸಂಗ್ರಹ ಕಲಬುರಗಿಭಾರತ ಸರ್ಕಾರದ ಅಂಚೆ ಇಲಾಖೆಯು ಸಾರ್ವಜನಿಕರಿಗೆ ಅಂಚೆ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ಮತ್ತು ಸಮೀಪದಲ್ಲಿ ಒದಗಿಸುವ ಉದ್ದೇಶದಿಂದ ಕಲಬುರಗಿ ಅಂಚೆ ವಿಭಾಗದ ವ್ಯಾಪ್ತಿಯ ಆಯ್ದ ಸ್ಥಳಗಳಲ್ಲಿ ಅಂಚೆ ಕಚೇರಿ ಫ್ರಾಂಚೈಸಿ ಮಳಿಗೆಗಳನ್ನು ಆರಂಭಿಸಲು ಅರ್ಜಿ ಆಹ್ವಾನಿಸಿದೆ ಎಂದು ಕಲಬುರಗಿ ಅಂಚೆ ವಿಭಾಗದ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ವಿಭಾಗದ ಅಂಚೆ ಅಧೀಕ್ಷಕರ ಕಚೇರಿಯಿಂದ ಕಚೇರಿ ವೇಳೆಯಲ್ಲಿ ಪಡೆಯಲು ಅಥವಾ ಭಾರತೀಯ ಅಂಚೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ದಿಂದ ಡೌನ್‌ಲೋಡ್ ಮಾಡಿಕೊಂಡು ಭರ್ತಿ […]

Continue Reading