ಅ.1ರಂದು ಡಾ.ಸಿದ್ಧತೋಟೇಂದ್ರ ಶಿವಾಚಾರ್ಯರ ಜನ್ಮದಿನೋತ್ಸವ, ನಾಳೆಯಿಂದ ನಾಲವಾರ ಮಠದಲ್ಲಿ ನವರಾತ್ರಿ ಸಂಭ್ರಮ

ಚಿತ್ತಾಪುರ: ಅ.1 ರಂದು ಮಹಾನವಮಿಯ ಆಯುಧಪೂಜೆಯಂದು, ತಾಲೂಕಿನ ಶ್ರೀಕ್ಷೇತ್ರ ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಹಿಂದಿನ ಪೀಠಾಧಿಪತಿ ಲಿಂ.ತೋಟೇಂದ್ರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಹಾಗೂ ಪ್ರಸ್ತುತ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನೋತ್ಸವ ಸಮಾರಂಭ ಅದ್ಧೂರಿಯಾಗಿ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ. ಪ್ರಸ್ತುತ ಪೂಜ್ಯರ ಜನ್ಮದಿನೋತ್ಸವ ಹಾಗೂ ಮಠದ ಹಿರಿಯ ಗುರುಗಳ ಪುಣ್ಯಸ್ಮರಣೋತ್ಸವ ಪ್ರಯುಕ್ತ ಶ್ರೀಮಠದಲ್ಲಿ ನಾಳೆಯಿಂದ ಪ್ರತಿನಿತ್ಯ ಲಿಂಗೈಕ್ಯ ತೋಟೇಂದ್ರ ಶಿವಯೋಗಿಗಳ ಕರ್ತೃ ಗದ್ದುಗೆಗೆ ರುದ್ರಾಭಿಷೇಕ,‌ ವಿಶೇಷ ಪೂಜೆ, ಮಹಾಮಂಗಳಾರತಿ ನಡೆಯಲಿದೆ ಎಂದರು. […]

Continue Reading

ಜಿಲ್ಲೆಯ ಪ್ರವಾಹ ಪೀಡಿತ ಗ್ರಾಮಗಳಲ್ಲಿ ಸಮರೋಪಾದಿಯಲ್ಲಿ ಪರಿಹಾರ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಜಿಲ್ಲೆಯಲ್ಲಿ ನಿನ್ನೆಯಿಂದ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಮಳೆ ಮತ್ತು ಪ್ರವಾಹ ಪೀಡಿತ ಗ್ರಾಮಗಳಲ್ಲಿ ಪರಿಹಾರ ಕಾರ್ಯ ಸಮರೋಪಾದಿಯಲ್ಲಿ ನಡೆಯುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಬೆಣ್ಣೆತೊರಾ ನದಿ ತುಂಬಿ ಹರಿಯುತ್ತಿದ್ದು, ಕಾಳಗಿ ಮತ್ತು ಚಿತ್ತಾಪುರ ತಾಲೂಕಿನ ನದಿ ಪಾತ್ರದ ಗ್ರಾಮಗಳಲ್ಲಿ ನೀರು ನುಗ್ಗಿದೆ. ಪ್ರವಾಹ ಪೀಡಿತ […]

Continue Reading

ಇಂದಿನಿಂದ ಉಳಿತಾಯ ಹಬ್ಬ: ದಿನನಿತ್ಯ ಬಳಸುವ ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆ ?

ದಸರಾ ಹಬ್ಬದ ಜೋಶ್‌ನಲ್ಲಿರುವ ಸಾಮಾನ್ಯ ಮತ್ತು ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ‘ದಸರಾ ಗಿಫ್ಟ್‌’ ಕೊಟ್ಟಿದೆ. ಇಂದಿನಿಂದ ಹೊಸ ಜಿಎಸ್‌ಟಿ ದರ ಜಾರಿಗೆ ಬರಲಿದೆ. ಇದರಿಂದ ಅದೆಷ್ಟೋ ದಿನಬಳಕೆ ವಸ್ತುಗಳ ಬೆಲೆ ಕೈಗೆಟುಕುವ ದರದಲ್ಲಿ ಸಿಗಲಿದೆ. ದಿನನಿತ್ಯ ಬಳಸುವ ಬಹುತೇಕ ವಸ್ತುಗಳ ಬೆಲೆ ಕಡಿಮೆಯಾಗಿದೆ. ಯಾವ ವಸ್ತುಗಳ ಬೆಲೆ ಎಷ್ಟು ಇಳಿಕೆಯಾಗಿದೆ ? ಹಳೆಯ ದರ ಎಷ್ಟಿತ್ತು ? ಎಂಬುದರ ಕಂಪ್ಲೀಟ್‌ ಡಿಟೇಲ್ಸ್‌ ಇಲ್ಲಿದೆ. ಯಾವ ಉತ್ಪನ್ನಗಳ ಬೆಲೆ ಎಷ್ಟು ? ಈ ಉತ್ಪನ್ನಗಳ ಬೆಲೆಯೂ […]

Continue Reading

ಆರೋಗ್ಯಕರ ಜೀವನ ಶೈಲಿಯಿಂದ ಕಾಯಿಲೆಗಳು ದೂರ: ಡಾ.ಅಂಕಿತ್ ಕದರ್ಗಿ

ಕಲಬುರಗಿ: ಎಲ್ಲರು ಆರೋಗ್ಯಕರ ಜೀವನಶೈಲಿ ಅಳವಡಿಸಿಕೊಂಡರೆ ಕಾಯಿಲೆಗಳಿಂದ ದೂರವಿರಬಹುದಾಗಿದೆ. ಆರೋಗ್ಯವೇ ಮನುಷ್ಯನ ದೊಡ್ಡ ಸಂಪತ್ತಾಗಿದ್ದು, ಅದನ್ನು ಕಾಪಾಡಿಕೊಳ್ಳಬೇಕು ಎಂದು ತಜ್ಞ ವೈದ್ಯ ಡಾ.ಅಂಕಿತ್ ಆರ್ ಕದರ್ಗಿ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಕೆ.ಎಚ್.ಬಿ ಗ್ರೀನ್ ಪಾರ್ಕನ ಹನುಮಾನ ದೇವಸ್ಥಾನದ ಆವರಣದಲ್ಲಿ ಆಯುಸಿಂಕ್ ಮೆಡಿಕಲ್ ಕಂಪನಿ ಮತ್ತು ಬಡಾವಣೆಯ ಜಂಟಿ ಆಶ್ರಯದಲ್ಲಿ ಭಾನುವಾರ ಏರ್ಪಡಿಸಿದ್ದ ಒಂದು ದಿನದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, ಆರೋಗ್ಯ ಕಳೆದುಕೊಂಡು ಬೇರೆಲ್ಲಾ ಸಂಪತ್ತು ಗಳಿಸಿದರೂ ವ್ಯರ್ಥ. ಪ್ರಸ್ತುತ ದಿನಗಳಲ್ಲಿ […]

Continue Reading

ಶಾಂತಿಯುತ ವಾತಾವರಣ ನಿರ್ಮಾಣ ಸರ್ವರ ಜವಾಬ್ದಾರಿ: ಎಚ್.ಬಿ ಪಾಟೀಲ

ಕಲಬುರಗಿ: ಪ್ರತಿಯೊಬ್ಬರು ಸೃಷ್ಟಿಕೃತನ ಮಕ್ಕಳು, ನಾವೆಲ್ಲರು ಒಂದೆ ಎಂಬ ಭಾವನೆ ಮೂಡಬೇಕು. ಎಲ್ಲೆಡೆ ಶಾಂತಿಯುತ ವಾತಾವರಣ ನಿರ್ಮಾಣ ಮಾಡುವುದು ಸರ್ವರ ಜವಾಬ್ದಾರಿಯಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ಕಮಲಾಪುರ ತಾಲೂಕಿನ ಮಹಾಗಾಂವ ಕ್ರಾಸ್ ಸಮೀಪದ ಚಿಗುರು ನಿರ್ಗತಿಕ ಮತ್ತು ಅನಾಥ ಮಕ್ಕಳ ನಿಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಭಾನುವಾರ ಜರುಗಿದ ‘ಅಂತಾರಾಷ್ಟ್ರೀಯ ಶಾಂತಿ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಇಡಿ ಜಗತ್ತೆ ಶಾಂತಿಯ ಮಂತ್ರ ಪಠಿಸಬೇಕಾಗಿದೆ. ಭಯೋತ್ಪಾದನೆ, ವೈಷಮ್ಯ, […]

Continue Reading

ಮಣ್ಣಿನ ಮೂರ್ತಿಗೆ ಪೂಜಿಸಿ ಪಾಲಕರನ್ನು ಸ್ಮರಿಸಿದ ಅನಾಥ ಮಕ್ಕಳು

ಕಲಬುರಗಿ: ಮಹಾಗಾಂವ ಕ್ರಾಸ್ ಸಮೀಪದ ಚಿಗುರು ನಿರ್ಗತಿಕ ಮತ್ತು ಅನಾಥ ಮಕ್ಕಳ ನಿಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಭಾನುವಾರ ಜರುಗಿದ ‘ಮಹಾಲಯ ಅಮವಾಸ್ಯೆ’ಯ ಕಾರ್ಯಕ್ರಮದ ಪ್ರಯುಕ್ತ ಅನಾಥ ಮಕ್ಕಳು ಪಾಲಕರ ಮಣ್ಣಿನ ಮೂರ್ತಿಯನ್ನು ರಚಿಸಿ, ಪೂಜಿಸಿ ಸ್ಮರಿಸಿದ ಅಪರೂಪದ ಘಟನೆ ಜರುಗಿತು. ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಮಾತನಾಡಿ, ಏಕಲವ್ಯ ಮತ್ತು ದ್ರೋಣಾಚಾರ್ಯರ ಮೂರ್ತಿ ಸ್ಥಾಪಿಸಿ ಬಿಲ್ವವಿದ್ಯೆ ಕಲಿತಿದ್ದು ನಾವು ತಿಳಿದಿದ್ದೆವೆ. ಪ್ರಸ್ತುತವಾಗಿ ಇಲ್ಲಿನ ಅನಾಥ ಮಕ್ಕಳು ತಮ್ಮ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥ […]

Continue Reading

ಜಿಎಸ್‌ಟಿ ಸುಧಾರಣೆಯಿಂದ ದಿನನಿತ್ಯದ ಅಗತ್ಯ ವಸ್ತುಗಳು, ಔಷಧಿಗಳು ಅಗ್ಗ: ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಸಲ್ಲಿಸಿದ ಹೊಸೂರಕರ್

ಚಿತ್ತಾಪುರ: ಜಿಎಸ್‌ಟಿ ಉಳಿತಾಯ ಉತ್ಸವದ ಆರಂಭದಿಂದ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ದೀಪಕ್ ಹೊಸೂರಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಜಿಎಸ್‌ಟಿ ಸುಧಾರಣೆಯಿಂದ ದಿನನಿತ್ಯದ ಅಗತ್ಯ ವಸ್ತುಗಳು, ಔಷಧಿಗಳು, ವಿಮೆ ಅಗ್ಗವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವರಾತ್ರಿಯ ಮುನ್ನಾ ದಿನದಂದು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜಿಎಸ್‌ಟಿ ಉತ್ಸವ (ಉಳಿತಾಯ ಹಬ್ಬ) ಆರಂಭವಾಗುತ್ತಿದೆ ಎಂದು ಹೇಳಿದ್ದಾರೆ. ಕೇವಲ 5% ಮತ್ತು 18% ರ ಎರಡು ತೆರಿಗೆ ಸ್ಲ್ಯಾಬ್‌ಗಳಿಗೆ ತರಲಾಗಿದೆ. ಹಿಂದೆ 12% ತೆರಿಗೆಯಲ್ಲಿದ್ದ […]

Continue Reading

ನಂದಿನಿ: 20 ಉತ್ಪನ್ನಗಳ ದರ ಇಳಿಕೆ

ಬೆಂಗಳೂರು: ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳಿಯು (ಕೆಎಂಎಫ್) ತುಪ್ಪ, ಬೆಣ್ಣೆ, ಪನೀರ್ ಸೇರಿ ‘ನಂದಿನಿ’ ಹಾಲಿನ ವಿವಿಧ ಉತ್ಪನ್ನಗಳ ದರವನ್ನು ಇಳಿಕೆ ಮಾಡಿದ್ದು, ಇದೆ ತಿಂಗಳು 22ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಶನಿವಾರ ಸುದ್ದಿಗಾರರೊಂದಿಗೆ ಈ ಬಗ್ಗೆ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಬಿ ಶಿವಸ್ವಾಮಿ, ಹಾಲಿನ ಉತ್ಪನ್ನಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಇಳಿಕೆಯ ಪರಿಣಾಮ, ಈ ಪರಿಷ್ಕರಣೆ ಮಾಡಲಾಗಿದೆ. 1 ಲೀಟ‌ರ್ ತುಪ್ಪದ ದರ ರೂ.650 ರಿಂದ 610ಕ್ಕೆ ಇಳಿಕೆ ಮಾಡಲಾಗಿದೆ. […]

Continue Reading

ಕಲ್ಲಿನ ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು

ಹಾಸನ: ದೇವಾಲಯದ ಕಬ್ಬಿಣದ ಬಾಗಿಲು ತೆರೆದು ಕಲ್ಲಿನ ಗಣೇಶ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಬಸ್ ನಿಲ್ದಾಣದ ಮುಂಭಾಗದಲ್ಲಿರುವ ಬೇಲೂರು ಪುರಸಭೆ ಆವರಣದ ಶ್ರೀ ವಿದ್ಯಾಗಣಪತಿ ದೇವಾಲಯದಲ್ಲಿ ಪ್ರತಿನಿತ್ಯ ಪೂಜೆ ಕೈಂಕರ್ಯಗಳು ನಡೆಯುತ್ತವೆ. ಪ್ರತಿನಿತ್ಯ ವ್ಯಾಪಾರಿಗಳು ಬೆಳಗ್ಗೆ ಗಣೇಶ ಮೂರ್ತಿಗೆ ಕೈಮುಗಿದು ವ್ಯಾಪಾರ ಆರಂಭಿಸುತ್ತಾರೆ. ಶನಿವಾರ ರಾತ್ರಿ ಪುರಸಭೆ ಗೇಟ್‌ಗೆ ಬೀಗ ಹಾಕಿಕೊಂಡು ತೆರಳಿದ್ದರು. ಇಂದು ಬೆಳಗ್ಗೆ ಭಕ್ತಾಧಿಗಳು ಕೈಮುಗಿಯಲು ಹೋದಾಗ ಗಣಪತಿಗೆ ಚಪ್ಪಲಿ ಹಾರ ಹಾಕಿ […]

Continue Reading

ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಎಸ್​ಎಸ್​ಎಲ್​ಸಿ ಮತ್ತು ದ್ವಿತೀಯ ಪಿಯುಸಿ 2026ರ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಜಾಲತಾಣದಲ್ಲಿ www.kseab.karnataka.gov.in ವೇಳಾಪಟ್ಟಿ ಪ್ರಕಟಿಸಲಾಗಿದೆ. 2026ರ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳಿಗೆ ವಿದ್ಯಾರ್ಥಿಗಳು, ಪೋಷಕರು ಮತ್ತು ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 09 ರವರೆಗೆ ಕಾಲಾವಕಾಶ ನೀಡಲಾಗಿದೆ. ಆಕ್ಷೇಪಣೆಯನ್ನು ಮಂಡಲಿಯ ಇ-ಮೇಲ್ ವಿಳಾಸ: chairpersonkseab@gmail.com ಗೆ ಹಾಗೂ ಹಾರ್ಡ್ ಪ್ರತಿಯನ್ನು […]

Continue Reading