ಅ.1ರಂದು ಡಾ.ಸಿದ್ಧತೋಟೇಂದ್ರ ಶಿವಾಚಾರ್ಯರ ಜನ್ಮದಿನೋತ್ಸವ, ನಾಳೆಯಿಂದ ನಾಲವಾರ ಮಠದಲ್ಲಿ ನವರಾತ್ರಿ ಸಂಭ್ರಮ
ಚಿತ್ತಾಪುರ: ಅ.1 ರಂದು ಮಹಾನವಮಿಯ ಆಯುಧಪೂಜೆಯಂದು, ತಾಲೂಕಿನ ಶ್ರೀಕ್ಷೇತ್ರ ನಾಲವಾರದ ಕೋರಿಸಿದ್ಧೇಶ್ವರ ಮಹಾಸಂಸ್ಥಾನ ಮಠದ ಹಿಂದಿನ ಪೀಠಾಧಿಪತಿ ಲಿಂ.ತೋಟೇಂದ್ರ ಶಿವಯೋಗಿಗಳ ಪುಣ್ಯಸ್ಮರಣೋತ್ಸವ ಹಾಗೂ ಪ್ರಸ್ತುತ ಪೀಠಾಧಿಪತಿ ಡಾ.ಸಿದ್ಧತೋಟೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳ ಜನ್ಮದಿನೋತ್ಸವ ಸಮಾರಂಭ ಅದ್ಧೂರಿಯಾಗಿ ನಡೆಯಲಿದೆ ಎಂದು ಶ್ರೀಮಠದ ವಕ್ತಾರ ಮಹಾದೇವ ಗಂವ್ಹಾರ ತಿಳಿಸಿದ್ದಾರೆ. ಪ್ರಸ್ತುತ ಪೂಜ್ಯರ ಜನ್ಮದಿನೋತ್ಸವ ಹಾಗೂ ಮಠದ ಹಿರಿಯ ಗುರುಗಳ ಪುಣ್ಯಸ್ಮರಣೋತ್ಸವ ಪ್ರಯುಕ್ತ ಶ್ರೀಮಠದಲ್ಲಿ ನಾಳೆಯಿಂದ ಪ್ರತಿನಿತ್ಯ ಲಿಂಗೈಕ್ಯ ತೋಟೇಂದ್ರ ಶಿವಯೋಗಿಗಳ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ವಿಶೇಷ ಪೂಜೆ, ಮಹಾಮಂಗಳಾರತಿ ನಡೆಯಲಿದೆ ಎಂದರು. […]
Continue Reading