ಪಾಕಿಸ್ತಾನದ ದಾಳಿಯಲ್ಲಿ ಹುತಾತ್ಮರಾದ ಯೋಧ ಮುರಳಿ ನಾಯಕಗೆ ಭಾವಪೂರ್ಣ ಶ್ರದ್ಧಾಂಜಲಿ

ಚಿತ್ತಾಪುರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಭಾರಿ ಶೆಲ್ ದಾಳಿಯಲ್ಲಿ ಆಂಧ್ರ ಪ್ರದೇಶದ ಸೈನಿಕ ಮುರಳಿ ನಾಯಕ್ ಹುತಾತ್ಮರಾಗಿದ್ದಾರೆ, ಈ ಹಿನ್ನೆಲೆಯಲ್ಲಿ ಪಟ್ಟಣದ ಚಿತಾವಲಿ ವೃತ್ತದಿಂದ ಸಂಜೆ ಕ್ಯಾಂಡಲ್ ಮಾರ್ಚ್ ಮೆರವಣಿಗೆ ಕಪಡಾ ಬಜಾರ್, ಜನತಾ ವೃತ್ತ, ಭುವನೇಶ್ವರಿ ವೃತ್ತ, ಅಂಬೇಡ್ಕರ್ ವೃತ್ತ, ಬಸ್ ನಿಲ್ದಾಣದ ರಸ್ತೆ, ಬಸವೇಶ್ವರ ವೃತ್ತದ ಮೂಲಕ ಲಾಡ್ಜಿಂಗ್ ಕ್ರಾಸ್ ಸಮೀಪ ಸಮಾವೇಶಗೊಂಡು ಒಂದು ನಿಮಿಷ ಮೌನಾಚರಣೆ ಮಾಡಿ ಮೃತಯೋಧರ ಆತ್ಮಕ್ಕೆ ಶಾಂತಿ ಕೋರಲಾಯಿತು. ಪುರಸಭೆ […]

Continue Reading

ವಾಡಿ: ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಪ್ರಯುಕ್ತ ಹೇಮರೆಡ್ಡಿ ಮಲ್ಲಮ್ಮ ಭಾವಚಿತ್ರಕ್ಕೆ ಬಿಜೆಪಿ ಮುಖಂಡರು ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಹೇಮರೆಡ್ಡಿ ಮಲ್ಲಮ್ಮ ಅವರು ಸೂರ್ಯ-ಚಂದ್ರ ಇರುವವರೆಗೂ ಸಮಾಜಕ್ಕೆ ಅನ್ನದ ಕೊರತೆ ಬರಬಾರದು ಎಂದು ಶಿವನಿಂದ ವರ ಪಡೆದ ಮಹಾತಾಯಿ ಎಂದರು. ಅವರ ತತ್ವಾದರ್ಶಗಳೊಂದಿಗೆ ಬದುಕು ಸಾಗಿಸಿದರೆ ಆತ್ಮದ ಉನ್ನತಿ ಸಾಧ್ಯ. ಶ್ರೀಮಂತಿಕೆ ಅಂದರೆ ಹಣ, ಚಿನ್ನವಲ್ಲ ಪರಸ್ಪರ ಪ್ರೀತಿ, ಗೌರವದಿಂದ ಕಾಣುವುದು. ಮಾನವೀಯ […]

Continue Reading

ನಾಡಿನ ಇತಿಹಾಸದ ಪುಟ ತೆರೆಯುವ ಬೋಳೆವಾಡ ಸ್ಮಾರಕಗಳು: ಮುಡುಬಿ ಗುಂಡೇರಾವ

ಚಿತ್ತಾಪುರ: ಕನ್ನಡಿಗರ ಶೌರ್ಯ, ಸಾಧನೆ, ಸಾಹಸ, ಪರಾಕ್ರಮತೆ, ತ್ಯಾಗ, ಬಲಿದಾನದ ರೋಚಕ ಇತಿಹಾಸ ಸಾರುವ ಬೋಳವಾಡದ ಸ್ಮಾರಕಗಳ ಬಗ್ಗೆ ಜನಜಾಗೃತಿ ಅವಶ್ಯಕ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು.  ಚಿತ್ತಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೋಳೆವಾಡ ಗ್ರಾಮದ ಭೊಗೇಶ್ವರ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-13 ರಲ್ಲಿ ಶನಿವಾರ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಷ್ಟ್ರಕೂಟರು ಮತ್ತು ಕಲ್ಯಾಣ ಚಾಲುಕ್ಯರ ಕಾಲದ ವೀರಗಲ್ಲುಗಳು, […]

Continue Reading

ಭಯೋತ್ಪಾದನೆಯ ವಿರುದ್ಧ ಯುದ್ಧ ಸಾರಿದ ಭಾರತ

ನವದೆಹಲಿ: ಭಯೋತ್ಪಾದನೆ ವಿರುದ್ಧ ಭಾರತ ಸಮರ ಸಾರಿದೆ. ಯಾವುದೆ ಭಯೋತ್ಪಾದನೆಯನ್ನು ಭಾರತ ಯುದ್ಧ ಎಂದೆ ಪರಿಗಣಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಸರಣಿ ಸಭೆ ನಡೆಸಿದ ಮೋದಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಈ ಮೂಲಕ ಭಯೋತ್ಪಾದಕರನ್ನು ಛೂ ಬಿಡುತ್ತಿದ್ದ ಪಾಕಿಸ್ತಾನಕ್ಕೆ ಕಟು ಸಂದೇಶವನ್ನು ಮೋದಿ ರವಾನಿಸಿದ್ದಾರೆ. ಪಾಕಿಸ್ತಾನಲ್ಲಿ ಮಿಲಿಟರಿ ಸೈನಿಕರ ಸಂಖ್ಯೆ ಕಡಿಮೆಯಿದ್ದು ಉಗ್ರರ ಬಳಸಿಕೊಂಡು ಪ್ರತಿದಾಳಿ ನಡೆಸುತ್ತದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದ ಬೆನ್ನಲ್ಲೆ ಈ ಮಹತ್ವದ ನಿರ್ಧಾರ ಪ್ರಕಟವಾಗಿದೆ.

Continue Reading

ಹೇಮರೆಡ್ಡಿ ಮಲ್ಲಮ್ಮ ಸ್ತ್ರೀಕುಲದ ಅನರ್ಘ್ಯ ರತ್ನ: ಎಚ್.ಬಿ ಪಾಟೀಲ

ಕಲಬುರಗಿ: ಪ್ರಸ್ತುತ ದಿನಗಳಲ್ಲಿ ಸಣ್ಣ ವಿಷಯಕ್ಕೂ ಕೌಟುಂಬಿಕ ಕಲಹದಿಂದಾಗಿ, ಅವಿಭಕ್ತ ಕುಟುಂಬಗಳು ನಾಶವಾಗಿ ಒಡೆದ ಮನಸ್ಸುಗಳಾಗುತ್ತಿವೆ. ಮಹಿಳೆಯರು ಎಲ್ಲವನ್ನು ಸಾಧಿಸಬಹುದೆಂದು ತೋರಿಸಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಆದರ್ಶ ವ್ಯಕ್ತಿತ್ವ ಸಮಸ್ತ ಮಹಿಳಾ ಲೋಕಕ್ಕೆ ಮಾದರಿಯಾಗಿದೆ, ಸ್ತ್ರೀಕುಲದ ಅನರ್ಘ್ಯ ರತ್ನವಾಗಿದ್ದಾರೆ ಎಂದು ಶರಣ ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದಿಂದ ಶನಿವಾರ ಜರುಗಿದ ‘ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ 603ನೇ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಲ್ಲಮ್ಮನವರು […]

Continue Reading

UPI ಪಾವತಿ ಬಂದ್: ಇಂದಿನಿಂದ ಪೆಟ್ರೋಲ್ ಪಂಪ್‌ಗಳಲ್ಲಿ ಹೊಸ ನಿಯಮ

ಮಹಾರಾಷ್ಟ್ರ: ಮೇ.10 ರಿಂದ ಪೆಟ್ರೋಲ್ ಪಂಪ್‌ಗಳಲ್ಲಿ UPI ಮತ್ತು ಕಾರ್ಡ್‌ಗಳ ಮೂಲಕ ಪಾವತಿಸುವುದು ಕಷ್ಟವಾಗಬಹುದು. ಪೆಟ್ರೋಲ್ ಪಂಪ್ ಮಾಲೀಕರು ಇಂದಿನಿಂದ ಡಿಜಿಟಲ್ ಪಾವತಿಗಳನ್ನು ಸ್ವೀಕರಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಪಂಪ್ ಮಾಲೀಕರು ಮತ್ತು ಅವರ ಸಂಘಟನೆಗಳು UPI ಮತ್ತು ಕಾರ್ಡ್ ಪಾವತಿಗಳನ್ನು ಸ್ವೀಕರಿಸುವದಿಲ್ಲ ಎಂದು ಹೇಳುತ್ತಿದ್ದಾರೆ. ಈ ರೀತಿಯ ಪಾವತಿಗಳಿಂದ ವಂಚನೆ ಪ್ರಕರಣಗಳು ಹೆಚ್ಚುತ್ತಿವೆ ಎಂದು ಹೇಳಿದ್ದಾರೆ. ಮೇ 10 ರಿಂದ UPI […]

Continue Reading

ಗೋಪಾಲಕೃಷ್ಣ ಗೋಖಲೆಯವರ 159ನೇ ಜನ್ಮದಿನೋತ್ಸವ

ಕಲಬುರಗಿ: ಸ್ವಾತಂತ್ರ್ಯ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಗೋಪಾಲಕೃಷ್ಣ ಗೋಖಲೆಯವರ 159ನೇ ಜನ್ಮದಿನೋತ್ಸವವನ್ನು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಸ್ವಾತಿ ಪ್ರೌಢಶಾಲೆಯಲ್ಲಿ ಶುಕ್ರವಾರ ಆಚರಿಸಲಾಯಿತು. ಗೋಖಲೆಯವರು ದೇಶದ ಸ್ವಾತಂತ್ರ್ಯಕ್ಕೆ ನೀಡಿದ ಕೊಡುಗೆಯ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕ ಎಚ್.ಬಿ ಪಾಟೀಲ, ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ, ಸಮಾಜ ಸೇವಕ ಶಿವಯೋಗೆಪ್ಪಾ ಎಸ್.ಬಿರಾದಾರ, ಶಿಕ್ಷಕಿಯರಾದ ಪೂರ್ಣಿಮಾ ಪಾಟೀಲ, ಪ್ರೀತಿ ಸಣಮನಿ ಹಾಗೂ ವಿದ್ಯಾರ್ಥಿಗಳು ಇದ್ದರು.

Continue Reading

ಕಾದಂಬರಿ ಸಾರ್ವಭೌಮ ಅ.ನ ಕೃಷ್ಣರಾವ

ಕಲಬುರಗಿ: ಅ.ನ ಕೃಷ್ಣರಾವ ಅವರು ಕನ್ನಡ ಪ್ರಗತಿಶೀಲ ಸಾಹಿತ್ಯದ ಪ್ರವರ್ತಕರು. ಕನ್ನಡಪರ ಹೋರಾಟಗಾರರಾಗಿದ್ದರು. ಕನ್ನಡ ಸಾಹಿತ್ಯಕ್ಕೆ ವಿಶೇಷ ಕಾದಂಬರಿಗಳು ನೀಡಿದ ಅವರು ‘ಕಾದಂಬರಿ ಸಾರ್ವಭೌಮ’ರಾಗಿದ್ದಾರೆ ಎಂದು ಲೇಖಕ ಶಿವಯೋಗೆಪ್ಪಾ ಎಸ್ ಬಿರಾದಾರ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಅ.ನ ಕೃಷ್ಣರಾವ ಅವರ 117ನೇ ಜನ್ಮದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಉಪನ್ಯಾಸಕ ಎಚ್.ಬಿ ಪಾಟೀಲ, ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಗಾರಂಪಳ್ಳಿ, ಶಿಕ್ಷಕಿಯರಾದ ಪೂರ್ಣಿಮಾ ಪಾಟೀಲ, […]

Continue Reading

ಕ್ರೀಡಾ ಪ್ರತಿಭೆಗಳನ್ನು ಗುರ್ತಿಸಿ, ಪ್ರೋತ್ಸಾಹಿಸಿದರೆ ಸಾಧನೆ ಸಾಧ್ಯ

ಕಲಬುರಗಿ: ನಮ್ಮ ಭಾಗದಲ್ಲೂ ಪ್ರತಿಭಾವಂತ ಕ್ರೀಡಾಪಟುಗಳಿದ್ದು, ಅವರನ್ನು ಗುರ್ತಿಸಿ, ಪ್ರೋತ್ಸಾಹಿಸಿದರೆ ಸಾಧನೆ ಮಾಡಲು ಸಾಧ್ಯ ಎಂದು ದೈಹಿಕ ಶಿಕ್ಷಣ ಶಿಕ್ಷಕ ಶರಣು ಮಲಶೆಟ್ಟಿ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಅಥ್ಲೆಟಿಕ್ಸ್ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಯಾವುದೆ ರಾಷ್ಟ್ರದಲ್ಲಿ ಕ್ರೀಡಾ ಕ್ಷೇತ್ರ ಬೆಳವಣಿಗೆಯಾಗಬೇಕಾದರೆ, ಅಲ್ಲಿನ ಕ್ರೀಡಾ ಪ್ರತಿಭೆಗಳನ್ನು ಗುರ್ತಿಸಿ ಅವರಿಗೆ ಸೂಕ್ತ ತರಬೇತಿ, ಪ್ರೋತ್ಸಾಹ ನೀಡಬೇಕು. […]

Continue Reading

ಮೇ.15 ರಿಂದ ಜೂನ್‌ 14ರವರೆಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ

ಬೆಂಗಳೂರು: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಮೇ.15 ರಿಂದ ಜೂನ್‌ 14ರವರೆಗೆ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (ಡಿಪಿಎಆರ್) ಈ ಬಗ್ಗೆ ಸಚಿವ ಸಂಪುಟ ಸಭೆಯ ಅನುಮೋದನೆಗೆ ಪ್ರಸ್ತಾವ ಮಂಡಿಸಿದೆ. ಗ್ರೂಪ್‌ ಎ, ಬಿ, ಸಿ ಮತ್ತು ಡಿ ವರ್ಗದ ನೌಕರರನ್ನು ಆಯಾ ವೃಂದಗಳ ಕಾರ್ಯನಿರತ ವೃಂದ ಬಲದ ಶೇ.6 ರಷ್ಟನ್ನು ಮೀರದಂತೆ ವರ್ಗಾವಣೆ ಮಾಡಬಹುದು. ಎ ಮತ್ತು ಬಿ ವೃಂದದ ಅಧಿಕಾರಿಗಳಿಗೆ ಸಂಬಂಧಿಸಿದಂತೆ ಆಯಾ ಇಲಾಖೆಯ ಸಚಿವರಿಗೆ […]

Continue Reading