ವಾಡಿ: ಬಿಜೆಪಿ ಕಛೇರಿಯಲ್ಲಿ ಭಗೀರಥ ಮಹರ್ಷಿ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಗೀರಥ ಮಹರ್ಷಿ ಭಾವಚಿತ್ರಕ್ಕೆ ಮುಖಂಡರು ಪುಷ್ಪ ನಮನ ಸಲ್ಲಿಸುವ ಮೂಲಕ ಭಗೀರಥ ಮಹರ್ಷಿ ಜಯಂತಿ ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಮಾತನಾಡಿ, ಸೋಲಿನಿಂದ ಧೃತಿಗೆಡದೆ, ಸತತ ಪ್ರಯತ್ನ ಪಡಬೇಕು. ಪ್ರಯತ್ನಕ್ಕೆ ಇನ್ನೊಂದು ಹೆಸರೆ ಭಗೀರಥರು ಎಂದರು. ಅವರ ಸತತ ಯತ್ನದಿಂದ, ತಪಸ್ಸಿನಿಂದ, ಭೂಲೋಕದ ಜೀವರಾಶಿಗೆ ನೀರು ದೊರೆಯುವಂತಾಯಿತು. ಭಗೀರಥರ ಬಹುದೊಡ್ಡ ಮಹಾರಾಜ ಅವರಿಗೆ ಸಕಲ ವೈಭವಗಳಿದ್ದರೂ ಒಂದು ಕೊರಗಿತ್ತು. ಅವನ ತಂದೆ ಮತ್ತು ತಾಯಂದರಿಗೆ ದೇವಗಂಗೆ ಪಡೆಯಬೇಕು […]

Continue Reading

ಮನೆ ಆವರಣದಲ್ಲಿ ಗಾಂಜಾ ಗಿಡ: ಬೆಂಗಳೂರಿನ ಹಿರಿಯ ನಾಗರಿಕನಿಗೆ ಹೈಕೋರ್ಟ್ ರಿಲೀಫ್

ಬೆಂಗಳೂರು: ಮನೆ ಆವರಣದಲ್ಲಿ ಬೆಳೆದಿದ್ದ ಗಾಂಜಾ ಗಿಡದಿಂದಾಗಿ ಕ್ರಿಮಿನಲ್ ಕೇಸ್ ಎದುರಿಸುತ್ತಿದ್ದ 67 ವರ್ಷದ ವ್ಯಕ್ತಿಗೆ ಹೈಕೋರ್ಟ್ ರಿಲೀಫ್ ನೀಡಿದೆ. 2023ರಲ್ಲಿ ಬೆಂಗಳೂರಿನ ಜಯನಗರದ ಚಂದ್ರಶೇಖರ ಎಂಬುವರ ಮನೆ ಆವರಣದಲ್ಲಿ ಐದು ಗಾಂಜಾ ಗಿಡಗಳು ಬೆಳೆದಿದ್ದವು. ಈ ಪ್ರಕರಣ ಸಂಬಂಧ ಪೊಲೀಸರು ಚಂದ್ರಶೇಖರ​ ವಿರುದ್ಧ ಕೇಸ್ ದಾಖಲಿಸಿದ್ದರು. ಆದರೆ ಇದೀಗ ಆ ಪ್ರಕರಣವನ್ನು ಹೈಕೋರ್ಟ್ ಇಂದು (ಮೇ 05) ರದ್ದುಗೊಳಸಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಹಿರಿಯ ನಾಗರಿಕ ಚಂದ್ರಶೇಖರ […]

Continue Reading

ಕೂದಲೆಳೆ ಅಂತರದಲ್ಲಿ ಪಾರಾದ DMK ಸಂಸದ ರಾಜಾ

ಚೆನ್ನೈ: ಮೈಲಾಡುತುರೈನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಡಿಎಂಕೆ ಸಂಸದ ಎ ರಾಜಾ ಅವರು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಪಕ್ಷದ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿರುವಾಗ ಗಾಳಿ ಬೀಸುತ್ತಿತ್ತು. ಈ ವೇಳೆ ಬಲವಾದ ಗಾಳಿಯಿಂದಾಗಿ ವೇದಿಕೆಯ ಬಳಿ ಓವರ್‌ಹೆಡ್ ಫೋಕಸ್ ದೀಪಗಳು ಕುಸಿದು ಬಿದ್ದು ಡಯಾಜ್ ಮೇಲೆ ಬಿದ್ದಿದೆ. ಫೋಕಸ್‌ ದೀಪಗಳು ಬೀಳುವುದನ್ನು ನೋಡಿದ ರಾಜಾ ಅವರು ತಮ್ಮ ಎಡಗಡೆ ಸರಿದ ಪರಿಣಾಮ ಅಪಾಯದಿಂದ ಪಾರಾಗಿದ್ದಾರೆ. ಒಂದು ವೇಳೆ ಅವರು ಭಾಷಣ ಮಾಡುತ್ತಲೇ ಇರುತ್ತಿದ್ದರೆ ಗಾಯಗೊಳ್ಳುವ ಸಾಧ್ಯತೆ ಇತ್ತು. ಓವರ್‌ಹೆಡ್ […]

Continue Reading

ನಗುವಿನಿಂದ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿ: ಗುಂಡಣ್ಣ ಡಿಗ್ಗಿ

ಕಲಬುರಗಿ: ನಗುವದರಿಂದ ರಕ್ತದೊತ್ತಡ, ಸಕ್ಕರೆ ಕಾಯಿಲೆ, ಹೃದಯಘಾತವಾಗುವ ಸಂಭವನೀಯತೆ ಕಡಿಮೆಯಾಗುತ್ತದೆ. ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ. ಮಾನಸಿಕವಾಗಿ ನೆಮ್ಮದಿ, ವ್ಯಕ್ತಿಯ ಆಯಸ್ಸು ಹೆಚ್ಚಾಗುತ್ತದೆ ಎಂದು ಖ್ಯಾತ ಹಾಸ್ಯ ಕಲಾವಿದ ಗುಂಡಣ್ಣ ಡಿಗ್ಗಿ ಹೇಳಿದರು. ಅಫಜಲಪುರ ತಾಲೂಕಿನ ನೀಲೂರ ಗ್ರಾಮದ ಮಲ್ಲಿಕಾರ್ಜುನ ದೇವಸ್ಥಾನದ ಆವರಣದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಸುಜಯ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಇವುಗಳ ವತಿಯಿಂದ ಜರುಗಿದ ‘ವಿಶ್ವ ನಗುವಿನ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಕಾಲದಲ್ಲಿ ಅವಿಭಕ್ತ ಕುಟುಂಬವಿದ್ದ […]

Continue Reading

ಶಾಲಾ ಮಕ್ಕಳಿಗೆ ನೀಡಿದ ಮಧ್ಯಾಹ್ನದ ಊಟದಲ್ಲಿ ಸತ್ತ ಹಾವು ಪತ್ತೆ

ಪಾಟ್ನಾ: ಸರ್ಕಾರಿ ಶಾಲೆಯಲ್ಲಿ ನೀಡಲಾದ ಮಧ್ಯಾಹ್ನದ ಊಟದಲ್ಲಿ ಸತ್ತ ಹಾವು ಪತ್ತೆಯಾಗಿದೆ. ಬಿಹಾರದ ಪಾಟ್ನಾ ಜಿಲ್ಲೆಯ ಮೊಕಾಮಾ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಮಕ್ಕಳು ಅಸ್ವಸ್ಥರಾದ ನಂತರ ಆಸ್ಪತ್ರೆಗೆ ದಾಖಲಿಸಲಾಯಿತು. ಆಲೂಗಡ್ಡೆ ಕರಿಯಲ್ಲಿ ಸತ್ತ ಹಾವು ಪತ್ತೆಯಾಗಿದೆ. ಈ ಘಟನೆ ಏಪ್ರಿಲ್ 26 ರಂದು ವರದಿಯಾಗಿದೆ. 500 ಮಕ್ಕಳಿಗೆ ಆಹಾರ ಒದಗಿಸಲಾಯಿತು. ಈ ಮಕ್ಕಳಲ್ಲಿ ಸುಮಾರು 100 ಮಕ್ಕಳು ಅಸ್ವಸ್ಥರಾಗಿದ್ದರು ಎಂದು ವರದಿಯಾಗಿದೆ. ಮಕ್ಕಳ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಪೊಲೀಸರು ಆಗಮಿಸಿ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಿದರು. […]

Continue Reading

ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಲಂಬಾಣಿ ಎಂದು ಬರೆಯಿಸಲು ಬಂಜಾರ ಸಮಾಜ ಮನವಿ

ಚಿತ್ತಾಪುರ: ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿಪ್ರತಿಯೊಂದು ಕುಟುಂಬ ಭಾಗವಹಿಸುವ ಮೂಲಕಲಂಬಾಣಿ ಎಂದು ಬರೆಯಿಸಬೇಕು ಎಂದು ಬಂಜಾರಸಮಾಜದ ತಾಲೂಕು ಅಧ್ಯಕ್ಷ ಭೀಮಸಿಂಗ್ ಚವ್ಹಾಣ ಮತ್ತು ತಾಲೂಕು ಯುವ ಅಧ್ಯಕ್ಷ ಜಗದೀಶ ಚವ್ಹಾಣ ಮನವಿ ಮಾಡಿದ್ದಾರೆ. 1 ಜುಲೈ 2024 ರಂದು ಸುಪ್ರೀಂಕೋರ್ಟ್ ತೀರ್ಪಿನಂತೆ ಕರ್ನಾಟಕ ಸರ್ಕಾರವು ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನ್ಯಾಯಮೂರ್ತಿ ಹೆಚ್.ಎನ್ ನಾಗಮೋಹನದಾಸ್ ಏಕ ಸದಸ್ಯ ವಿಚಾರಣೆ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಮೇ.5 ರಿಂದ 17 […]

Continue Reading

ಅಗ್ನಿಶಾಮಕರು ಸಮಾಜದ ರಕ್ಷಕರು: ಅಂಕುಶ್ ಆಳಂದೆ

ಕಲಬುರಗಿ: ಬೆಂಕಿ ಅವಗಡ, ಭೂಕಂಪ, ಅತಿವೃಷ್ಟಿ, ನೆರೆ ಹಾವಳಿ, ಪ್ರವಾಹದಂತಹ ತುರ್ತು ಸಂದರ್ಭದಲ್ಲಿ ಜೀವದ ಹಂಗನ್ನು ತೊರೆದು ಸಾರ್ವಜನಿಕರ ಜೀವ ರಕ್ಷಿಸುವ ಅಗ್ನಿಶಾಮಕರು ಸಮಾಜದ ಕಾವಲುಗಾರ ಹಾಗೂ ರಕ್ಷಕರಾಗಿದ್ದಾರೆ. ಅವರಿಗೆ ಸಾರ್ವಜನಿಕ ಸುರಕ್ಷತೆ, ಸಮಾಜದ ರಕ್ಷಣೆಯೆ ಪ್ರಮುಖವಾಗಿದೆ ಎಂದು ಅಗ್ನಿಶಾಮಕ ಠಾಣಾಧಿಕಾರಿ ಅಂಕುಶ್ ಎ ಆಳಂದೆ ಅಭಿಪ್ರಾಯಪಟ್ಟರು. ನಗರದ ಅಗ್ನಿಶಾಮಕ ಠಾಣೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಅಗ್ನಿಶಾಮಕ ಠಾಣೆಯ ಜಂಟಿ ಆಶ್ರಯದಲ್ಲಿ ರವಿವಾರ ಏರ್ಪಡಿಸಿದ್ದ್ ‘ಅಂತಾರಾಷ್ಟ್ರೀಯ ಅಗ್ನಿಶಾಮಕರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಡಿಸೆಂಬರ್ […]

Continue Reading

ಭೂಮಿಗೆ ಗಂಗೆಯನ್ನು ಹರಿಸಿದ ಭಗೀರಥ ಮಹರ್ಷಿ: ಎಚ್.ಬಿ ಪಾಟೀಲ

ಕಲಬುರಗಿ: ಭಾರತ ಅನೇಕ ಮಹನೀಯರ, ಶರಣರ, ಋಷಿ-ಮುನಿಗಳ ತವರೂರಾಗಿದೆ. ಇದರಲ್ಲಿ ಭಗೀರಥ ಮಹರ್ಷಿ ಕೇವಲ ರಾಜ ಮಾತ್ರನಾಗಿರದೆ, ಭಕ್ತಿಯ ಸಂಪನ್ನರಾಗಿದ್ದರು. ಅವರು ಘೋರವಾದ ತಪ್ಪಸ್ಸು ಮಾಡಿ ಭೂಮಿಗೆ ಗಂಗೆಯನ್ನು ಹರಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ಭಗೀರಥ ಮಹರ್ಷಿ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ನಾವು ನುಡಿಗಟ್ಟಾಗಿ ಬಳಸುವ ‘ಭಗೀರಥ ಪ್ರಯತ್ನ’ ಎಂಬ […]

Continue Reading

ಮುಕ್ತ ಪತ್ರಿಕೋದ್ಯಮಕ್ಕೆ ಬೆಂಬಲ ನೀಡುವುದು ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳ ಚಟುವಟಿಕೆ ಬಗ್ಗೆ ನಿಗಾ ವಹಿಸಿ, ದೇಶದ ಸಮಸ್ಯೆಗಳ ಬಗ್ಗೆ ಮೇಲಿಂದ ಮೇಲೆ ಬೆಳಕು ಚೆಲ್ಲಿ, ಅದಕ್ಕೆ ಪರಿಹಾರ ಹುಡುಕುವಂತೆ ಮಾಡಿ ಸ್ವಸ್ಥ, ಸಧೃಢ ರಾಷ್ಟ್ರ ನಿರ್ಮಾಣಕ್ಕೆ ‘ಮಾಧ್ಯಮ ರಂಗ’ ತನ್ನದೆಯಾದ ಅದ್ವಿತೀಯ ಕೊಡುಗೆಯನ್ನು ನೀಡುತ್ತಿದೆ. ಸಮಾಜಕ್ಕೆ ಸ್ವತಂತ್ರ, ನಿರ್ಭೀತ, ನ್ಯಾಯಯುತ ಪತ್ರಿಕೋದ್ಯಮ ಅಗತ್ಯ. ಪತ್ರಿಕೋದ್ಯಮವು ಮುಕ್ತವಾಗಿ ಕಾರ್ಯನಿರ್ವಹಿಸಲು ಬೆಂಬಲ ನೀಡುವುದು ಅವಶ್ಯಕ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತ ವ್ಯಕ್ತಪಡಿಸಿದರು. ನಗರದ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ […]

Continue Reading

ದೇಶದ ಐಕ್ಯತೆಗಾಗಿ ಮೋದಿ ಸರ್ಕಾರ ಏನೆ ಕ್ರಮ ಕೈಗೊಂಡರು ಬೆಂಬಲ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ದೇಶದ ಐಕ್ಯತೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏನೇ ನಿರ್ಧಾರಗಳನ್ನು ಅಥವಾ ಕ್ರಮಗಳನ್ನು ಕೈಗೊಂಡರೂ ಅದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದರು. ಪಹಲ್ಗಾಮ್ ಉಗ್ರ ದಾಳಿ ವಿಚಾರವಾಗಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ದೇಶಕ್ಕಾಗಿ ಏನೆ ನಿರ್ಧಾರ ಕೈಗೊಂಡರು ಬೆಂಬಲಿಸುತ್ತೆವೆ. ಆದರೆ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು ಎಂದರು. ಕೇವಲ ಭಾಷಣ […]

Continue Reading