ಸಾಹಸಸಿಂಹ ಡಾ.ವಿಷ್ಣುವರ್ಧನ್‌, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ

ಬೆಂಗಳೂರು: ಸಾಹಸಸಿಂಹ ಡಾ.ವಿಷ್ಣುವರ್ಧನ್‌ ಹಾಗೂ ನಟಿ ಬಿ.ಸರೋಜಾದೇವಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಟ ಡಾ.ವಿಷ್ಣುವರ್ಧನ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡುವಂತೆ ಪತ್ನಿ ಭಾರತಿ ಮತ್ತು ಅಳಿಯ ಅನಿರುದ್ಧ್‌, ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಈ ಸಂಬಂಧ ವಿಷ್ಣು ಅಭಿಮಾನಿಗಳು ಸಹ ಸರ್ಕಾರದ ಮೇಲೆ ಒತ್ತಡ ಹಾಕಿದ್ದರು. ಸಿನಿಮಾ ರಂಗಕ್ಕೆ ವಿಷ್ಣು ಅವರ ಕೊಡುಗೆ ಹಾಗೂ ಅಭಿಮಾನಿಗಳ ಒತ್ತಾಸೆಯನ್ನು ಪರಿಗಣಿಸಿ ಸರ್ಕಾರ […]

Continue Reading

ಮಾರುಕಟ್ಟೆಗೆ ಲಗ್ಗೆ ಇಟ್ಟ ಚೀನಾದ ಡೇಂಜರಸ್​ ಬೆಳ್ಳುಳ್ಳಿ: ಗುರುತಿಸುವದು ಹೇಗೆ ?‌

ಭಾರತದ ಮಾರುಕಟ್ಟೆಗೆ ಚೀನಾದ ಬೆಳ್ಳುಳ್ಳಿ ಆಗಾಗ್ಗೆ ಲಗ್ಗೆ ಇಟ್ಟು ಸದ್ದು ಮಾಡುತ್ತಲೆ ಇರುತ್ತದೆ. ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಈ ಬೆಳ್ಳುಳ್ಳಿ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಇಡಿ ವಿಶ್ವಕ್ಕೆ ಕರೋನಾ ಕೊಟ್ಟಿರುವ ಚೀನಾ ಮಾಡುತ್ತಿರುವ ಕಿತಾಪತಿ ಒಂದಲ್ಲ, ಎರಡಲ್ಲ. ಚೀನಾದ ಮಾಲ್​ ಎಂದರೆ ಅದು ಡೇಂಜರಸ್ ಎನ್ನುವುದು ಗೊತ್ತಿರುವ ವಿಷಯ. ಇದೀಗ ಚೀನಾದ ಬೆಳ್ಳುಳ್ಳಿ ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಲಗ್ಗೆ ಇಟ್ಟಿದೆ. ಈ ಹಿಂದೆ ಇದೆ ರೀತಿ ಮಾರುಕಟ್ಟೆಗೆ ಬಂದಿದ್ದ ಬೆಳ್ಳುಳ್ಳಿ ಕುರಿತು ಸಾಕಷ್ಟು ಜಾಗೃತಿ […]

Continue Reading

ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ: ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

ಬೆಂಗಳೂರು: ಬಸ್ಸಿನಲ್ಲಿ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಚಾಲಕನಿಗೆ ತಾಯಿಯೊಬ್ಬಳು ಬಟ್ಟೆ ಬಿಚ್ಚಿ ಥಳಿಸಿದ ಘಟನೆ ಬಸವೇಶ್ವರ ಸರ್ಕಲ್ ಬಳಿ ನಡೆದಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಸ್ಲೀಪರ್‌ ಬಸ್ಸಿನಲ್ಲಿ 15 ವರ್ಷದ ಬಾಲಕಿ ಹೊರಟಿದ್ದಳು. ರಾತ್ರಿ ಮೊಬೈಲಿನ ಚಾರ್ಜ್‌ ಖಾಲಿಯಾಗಿದ್ದರಿಂದ ಚಾಲಕನ ಬಳಿ ಚಾರ್ಜ್‌ ಹಾಕುವಂತೆ ಹೇಳಿದ್ದಳು. ಸ್ವಲ್ಪ ಹೊತ್ತಾದ ನಂತರ ಬಾಲಕಿ ಮೊಬೈಲ್‌ ಕೊಡುವಂತೆ ಕೇಳಿದಾಗ ಸಹ ಚಾಲಕ ಆರೀಫ್‌ ಮುತ್ತು ಕೊಟ್ಟರೆ ಮಾತ್ರ ನೀಡುವುದಾಗಿ ಹೇಳಿದ್ದಾನೆ. ಅಷ್ಟೇ ಅಲ್ಲದೆ ಮಲಗಿದ್ದಾಗ ಸೀಟ್‌ ಬಳಿ ಬಂದು ಲೈಂಗಿಕ […]

Continue Reading

ಕಾರಿನ ಮೇಲೆ ಪಾಕ್ ಧ್ವಜ ಪ್ರದರ್ಶನ: ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲು

ಗದಗ: ಕಾರಿನ ಬಾನೆಟ್ ಮೇಲೆ ಪಾಕಿಸ್ತಾನ ಧ್ವಜ ಪ್ರದರ್ಶಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪದ ಮೇಲೆ ಗದಗ ನಗರದ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಿಸಲಾಗಿದೆ. ಈದ್‌ಮಿಲಾದ್ ಹಬ್ಬದಂದು ಅಪ್ರಾಪ್ತ ಬಾಲಕ ಇನ್ಸ್ಟಾಗ್ರಾಮ್‌ನಲ್ಲಿ ಕಾರಿನ ಬಾನೆಟ್ ಮೇಲೆ ಪಾಕಿಸ್ತಾನ ಧ್ವಜ ಹಾಕಿದ ಫೋಟೋ ಪೋಸ್ಟ್ ಮಾಡಿದ್ದು, ಸಮಾಜದ ಐಕ್ಯತೆಗೆ ಧಕ್ಕೆ ತರುವ ಹಾಗೂ ಸೌಹಾರ್ದತೆಗೆ ಭಾದಕವಾಗುವ ಕೃತ್ಯ ಎಸಗಿದ್ದಾನೆ ಎಂದು ಅಪ್ರಾಪ್ತ ಬಾಲಕನ ವಿರುದ್ಧ ಸುಮೋಟೋ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕ ಪೋಸ್ಟ್ ಮಾಡಿದ ಫೋಟೋ […]

Continue Reading

ವಿಷ್ಣು ಸಮಾಧಿ, ಕರ್ನಾಟಕ ರತ್ನ ಬಗ್ಗೆ ರಮೇಶ್ ಅರವಿಂದ್ ರಿಯಾಕ್ಷನ್

ಬೆಂಗಳೂರು: ಹಿರಿಯ ನಟ ರಮೇಶ್ ಅರವಿಂದ್ ಅಭಿನಯದ 106ನೇ ಸಿನಿಮಾ ದೈಜಿ ಚಿತ್ರದ ಟೀಸರ್ ರಿಲೀಸ್ ಆಗಿದೆ. ಟೀಸರ್ ರಿಲೀಸ್ ಇವೆಂಟ್ ಬಳಿಕ ನಟ ರಮೇಶ್ ಅರವಿಂದ್ ಹಲವಾರು ವಿಚಾರಗಳ ಬಗ್ಗೆ ಮಾತನಾಡಿದರು. ಮುಖ್ಯವಾಗಿ ಹಿರಿಯ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುವ ಬಗ್ಗೆ ಮತ್ತು ಸಮಾಧಿ ನೆಲಸಮ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ವಿಷ್ಣು ಸರ್ ಅವರನ್ನು ಬಹಳ ಹತ್ತಿರದಿಂದ ನೋಡಿದ್ದಿನಿ. ಅವರಿಗೆ ಡಾಕ್ಟರೇಟ್ ಬಂದಾಗ ನಾನು ಹೇಳಿದ್ದು ಒಂದೆ, […]

Continue Reading

ನೇಪಾಳದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಮಕ

ಕಠ್ಮಂಡು: ನೇಪಾಳದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿ ನೇಪಾಳದ ಪ್ರಧಾನಿ ಮತ್ತು ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ಮಧ್ಯಂತರ ಸರ್ಕಾರದ ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ದೇಶಾದ್ಯಂತ ನಡೆದ ವರ್ಚುವಲ್ ಸಭೆಯಲ್ಲಿ 5,000ಕ್ಕೂ ಹೆಚ್ಚು ಯುವಕರು ಅವರನ್ನು ಬೆಂಬಲಿಸಿದ ನಂತರ, ನಿವೃತ್ತ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ನೇಪಾಳದ ಮುಂದಿನ ಪ್ರಧಾನಿ ಹುದ್ದೆಗೆ ಜನರಲ್ ಝಡ್ ಅವರ ಪ್ರಮುಖ ಆಯ್ಕೆಯಾಗಿ ಹೊರಹೊಮ್ಮಿದ್ದಾರೆ. ಆನ್‌ಲೈನ್ ಚರ್ಚೆಯು ಉನ್ನತ ಹುದ್ದೆಗೆ […]

Continue Reading

ಸೋಲು ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ಶಿವಶರಣಪ್ಪ ಮಂಠಾಳೆ

ಚಿತ್ತಾಪುರ: ಸೋಲು ಗೆಲುವಿಗಿಂತ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ ಎಂದು ತಾಲೂಕ ಧೈಹಿಕ ಶಿಕ್ಷಣಾಧಿಕಾರಿ ಶಿವಶರಣಪ್ಪ ಮಂಠಾಳೆ ಹೇಳಿದರು. ಸಮೀಪದ ರಾವೂರ ಗ್ರಾಮದ ಸಚ್ಚಿದಾನಂದ ಪದವಿಪೂರ್ವ ಕಾಲೇಜಿನಲ್ಲಿ ಶಾಲಾ ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿಗೆ ಮಕ್ಕಳಲ್ಲಿ ಕ್ರೀಡಾ ಮನೋಭಾವ ಕಡಿಮೆಯಾಗುತ್ತಿದೆ. ಮೊಬೈಲ್, ಸಾಮಾಜಿಕ ಜಾಲತಾಣಗಳಲ್ಲಿ ಕಳೆದು ಹೋಗುತ್ತಿದ್ದಾರೆ. ಪಾಠಗಳ ಜೊತೆಗೆ ಆಟಗಳು ಮಕ್ಕಳ ವ್ಯಕ್ತಿತ್ವ ವಿಕಾಸಗೊಳಿಸುತ್ತವೆ ಎಂದರು. ಪದವಿಪೂರ್ವ ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ಕೊರತೆಯಿಂದ ಹೆಚ್ಚಿನ […]

Continue Reading

ಪ್ರೆಸ್‌ ಮೀಟ್‌ ನಡೆಯುತ್ತಿದ್ದಾಗ ಕುಸಿದು ಬಿದ್ದ ಸ್ವೀಡನ್‌ನ ನೂತನ ಆರೋಗ್ಯ ಸಚಿವೆ ಎಲಿಸಬೆಟ್ ಲ್ಯಾನ್

ಸ್ಟಾಕ್‌ಹೋಮ್: ಪ್ರೆಸ್‌ ಮೀಟ್‌ ನಡೆಯುತ್ತಿದ್ದ ವೇಳೆ ಸ್ವೀಡನ್‌ನ ನೂತನ ಆರೋಗ್ಯ ಸಚಿವೆ ಎಲಿಸಬೆಟ್ ಲ್ಯಾನ್ ವೇದಿಕೆಯಲ್ಲೆ ಕುಸಿದು ಬಿದ್ದ ಘಟನೆ ನಡೆದಿದೆ. ಲ್ಯಾನ್‌ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ಘಟನೆ ಸಂಭವಿಸಿದಿದೆ. ಸುದ್ದಿಗೋಷ್ಠಿಯಲ್ಲಿ 48 ವರ್ಷದ ಎಲಿಸಬೆಟ್ ಲ್ಯಾನ್, ಸ್ವೀಡಿಷ್ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್ ಹಾಗೂ ಕ್ರಿಶ್ಚಿಯನ್ ಡೆಮಾಕ್ರಟಿಕ್ ಪಕ್ಷದ ನಾಯಕಿ ಎಬ್ಬಾ ಬುಷ್ ಪಕ್ಕದಲ್ಲಿ ನಿಂತಿದ್ದರು. ಪತ್ರಕರ್ತರು ಪ್ರಶ್ನೆ ಕೇಳುತ್ತಿರುವಾಗ ವೇದಿಕೆಯಿಂದ ಗಾಜಿನ ಪೋಡಿಯಂ ಸಮೇತ ಕುಸಿದುಬಿದ್ದಿದ್ದಾರೆ. 16 ಸೆಕೆಂಡುಗಳ ವಿಡಿಯೋ ವೈರಲ್‌ಎಲಿಸಬೆಟ್ ಲ್ಯಾನ್ […]

Continue Reading

ಹಿಂದೂಗಳ ತಾಳ್ಮೆ ಕೆಣಕುತ್ತಿರುವ ಸರ್ಕಾರ: ವೀರಣ್ಣ ಯಾರಿ

ವಾಡಿ: ಸೆ.7 ರಂದು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿ ಕಲ್ಲು ತೂರಾಟದ ವೇಳೆ ಬೀದಿ ದೀಪಗಳನ್ನು ಆಫ್ ಮಾಡಿದ್ದು, ಇದು ಪೂರ್ವ ಯೋಜಿತ ಕೃತ್ಯವಾಗಿದೆ. ಇದರಲ್ಲಿ ಭಾಗಿಯಾದ ಸಮಾಜಘಾತುಕರಿಗೆ ಕಠಿಣ ಶಿಕ್ಷಗೆ ಗುರಿಪಡಿಸಬೇಕು ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಆಗ್ರಹಿಸಿದರು.‌ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದೂ ಹಬ್ಬಗಳು, ಗಣಪತಿ ಉತ್ಸವ ಮತ್ತು ಮೆರವಣಿಗೆಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗಿ ಬಿಟ್ಟಿವೆ, ಇವುಗಳಿಗೆ ಮಟ್ಟಹಾಕುವುದು ಬಿಟ್ಟು, ಅನ್ಯಾಯದ ವಿರುದ್ಧ ಹೋರಾಡಿದರೆ ಲಾಠಿ ಚಾರ್ಜ್ ಮಾಡುತ್ತಾ […]

Continue Reading

ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಕೃಷ್ಣನ್ ಆಯ್ಕೆ

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿಂದು ಎನ್‌ಡಿಎ ಅಭ್ಯರ್ಥಿ ಗೆಲುವು ಸಾಧಿಸಿದ್ದು, ನೂತನ ಉಪರಾಷ್ಟ್ರಪತಿ ಸಿ.ಪಿ ರಾಧಕೃಷ್ಣನ್ ಆಯ್ಕೆಯಾಗಿದ್ದಾರೆ. ಜಗದೀಪ್ ಧನ್ಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯುವ ಮೂಲಕ ಸಿ.ಪಿ ರಾಧಾಕೃಷ್ಣನ್‌ ಗೆಲುವು ಸಾಧಿಸಿದರು. ರಾಧಾಕೃಷ್ಣನ್‌ ಅವರು 452 ಮೊದಲ ಪ್ರಾಶಸ್ತ್ಯದ ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ಪ್ರತಿಸ್ಪರ್ಧಿ ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದು ಪರಾಭವಗೊಂಡರು. ಉಪರಾಷ್ಟ್ರಪತಿ ಆಯ್ಕೆಗೆ ಇಂದು ಬೆಳಗ್ಗೆ 10 ಗಂಟೆ ಸಂಜೆ 5 […]

Continue Reading