ದೇಶದ ಐಕ್ಯತೆಗಾಗಿ ಮೋದಿ ಸರ್ಕಾರ ಏನೆ ಕ್ರಮ ಕೈಗೊಂಡರು ಬೆಂಬಲ: ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ದೇಶದ ಐಕ್ಯತೆಗಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಏನೇ ನಿರ್ಧಾರಗಳನ್ನು ಅಥವಾ ಕ್ರಮಗಳನ್ನು ಕೈಗೊಂಡರೂ ಅದಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶನಿವಾರ ಹೇಳಿದರು. ಪಹಲ್ಗಾಮ್ ಉಗ್ರ ದಾಳಿ ವಿಚಾರವಾಗಿ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ದೇಶಕ್ಕಾಗಿ ಏನೆ ನಿರ್ಧಾರ ಕೈಗೊಂಡರು ಬೆಂಬಲಿಸುತ್ತೆವೆ. ಆದರೆ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳಬೇಕು ಎಂದರು. ಕೇವಲ ಭಾಷಣ […]

Continue Reading

ಚಿತ್ತಾಪುರ: ವಿದ್ಯಾನಿಕೇತನ ಪ್ರೌಢ ಶಾಲೆಗೆ ಸಹನಾ ಬಳ್ಳಾ ಟಾಪರ್

ಚಿತ್ತಾಪುರ: ವಿದ್ಯಾನಿಕೇತನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಸಹನಾ ಬಳ್ಳಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 611 ಅಂಕ ಪಡೆದಿದ್ದಾಳೆ. ಸಂಧ್ಯಾಕಾಲ ಪತ್ರಿಕೆಯ ವರದಿಗಾರ ಚಂದ್ರಶೇಖರ ಬಳ್ಳಾ ಅವರ ಪುತ್ರಿ ಸಹನಾ ಬಳ್ಳಾ ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ 611 (ಶೇ.97.76) ಅಂಕ ಪಡೆಯುವ ಮೂಲಕ ವಿದ್ಯಾನಿಕೇತನ ಪ್ರೌಢ ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಮಗಳು ಸಹನಾಗೆ ಸಿಹಿ ತಿನ್ನಿಸಿ ಪೋಷಕರು ಸಂಭ್ರಮಿಸಿದ್ದಾರೆ. 2024-25ನೇ ಸಾಲಿನ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಹಾಜರಾದ ಒಟ್ಟು 54 ವಿದ್ಯಾರ್ಥಿಗಳಲ್ಲಿ 53 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. 20 ವಿದ್ಯಾರ್ಥಿಗಳು […]

Continue Reading

ಇನ್ನುಮುಂದೆ ಆಧಾರ್, ಪ್ಯಾನ್, ಪಡಿತರ ಚೀಟಿ ಭಾರತೀಯ ಪೌರತ್ವಕ್ಕೆ ಪುರಾವೆಯಲ್ಲ, ಈ 2 ಡಾಕ್ಯುಮೆಂಟ್‌ ಇದ್ದರೆ ಮಾತ್ರ ಭಾರತದ ಪ್ರಜೆ: ಸರ್ಕಾರದ ಹೊಸ ಆದೇಶ

ಪಹಲ್ಗಾಮ್ ದಾಳಿಯ ನಂತರ ಪಾಕಿಸ್ತಾನಿ ನಾಗರಿಕರನ್ನು ತನಿಖೆ ಮಾಡಿ ದೇಶದಿಂದ ಹೊರಹೋಗುವ ಮಾರ್ಗ ತೋರಿಸಲಾಗಿದೆ. ಇದಾದ ನಂತರ ಸರ್ಕಾರ ಆಧಾರ್, ಪ್ಯಾನ್, ಪಡಿತರ ಚೀಟಿ ಭಾರತೀಯ ಪೌರತ್ವಕ್ಕೆ ಪುರಾವೆಯಲ್ಲ ಎಂದು ಹೇಳಿದೆ. ಇವು ಆಡಳಿತಾತ್ಮಕ ಅಗತ್ಯಗಳನ್ನು ಮಾತ್ರ ಪೂರೈಸುತ್ತವೆ. ಇದಲ್ಲದೆ ಸರ್ಕಾರದಿಂದ ಗುರುತಿಸಲ್ಪಟ್ಟ ಏಕೈಕ ದಾಖಲೆಗಳು ಜನನ ಪ್ರಮಾಣಪತ್ರ ಮತ್ತು ನಿವಾಸ ಪ್ರಮಾಣಪತ್ರ ಎಂದು ಸರ್ಕಾರ ಹೇಳಿದೆ. ಇದರ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಅಕ್ರಮ ವಿದೇಶಿ ನಾಗರಿಕರು ಪರಿಶೀಲನೆಯ ಸಮಯದಲ್ಲಿ ಆಧಾರ್ ಕಾರ್ಡ್, ಪಡಿತರ ಚೀಟಿ ಮತ್ತು ಪ್ಯಾನ್ […]

Continue Reading

ಕಾರ್ಮಿಕರಿಗೆ ಸೇವಾ ಭದ್ರತೆ, ಸೂಕ್ತ ವೇತನ ದೊರೆಯಲಿ

ಕಲಬುರಗಿ: ಬೆವರು ಹರಿಸಿ, ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಕಾಯಕ ಜೀವಿಗಳ ಕೊಡುಗೆ ಸಮಾಜ ಮರೆಯುವಂತಿಲ್ಲ. ಅವರಿಗೆ ಸೇವಾ ಭದ್ರತೆ, ಸೂಕ್ತ ವೇತನ ನೀಡಬೇಕು ಎಂದು ಕಾರ್ಮಿಕ ಮುಖಂಡ ಡಾ.ಸುನೀಲಕುಮಾರ ಎಚ್.ವಂಟಿ ಹೇಳಿದರು. ನಗರದ ಜಗತ್ ವೃತ್ತದ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪುತ್ತಳಿಯ ಆವರಣದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ಕಾರ್ಮಿಕರ ದಿನಾಚರಣೆ’ಯಲ್ಲಿ ಕಾರ್ಮಿಕರಿಗೆ ಸತ್ಕರಿಸಿ, ಮಾತನಾಡಿದರು. ಬಳಗದ ಅಧ್ಯಕ್ಷ ಹಾಗೂ ಉಪನ್ಯಾಸಕ ಎಚ್.ಬಿ ಪಾಟೀಲ್ ಮಾತನಾಡಿ, ‘ನಮಿಸುವ ಕೈಗಳಿಗಿಂತ, ದುಡಿಯುವ ಕೈಗಳು ಶ್ರೇಷ್ಟ’ವಾಗಿವೆ. […]

Continue Reading

SSLC ಪರೀಕ್ಷೆ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು: ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ಮಧ್ಯಾಹ್ನ 12.30ಕ್ಕೆ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷ ಎಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ದಿ: 21 ಮಾರ್ಚ್ 2025 ರಿಂದ 04 ಎಪ್ರಿಲ್ 2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು […]

Continue Reading

ವಾಡಿ: ಬಿಜೆಪಿ ಕಛೇರಿಯಲ್ಲಿ ಬಸವ ಜಯಂತಿ ಆಚರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ವಿಶ್ವಗುರು ಬಸವಣ್ಣನವರ 892ನೇ ಜಯಂತಿಯನ್ನು ಬಸವೇಶ್ವರ ಭಾವಚಿತ್ರಕ್ಕೆ ಬಿಜೆಪಿ ಮುಖಂಡರು ಗೌರವ ಪುಷ್ಪನಮನ ಸಲ್ಲಿಸುವುದರ ಮೂಲಕ ಆಚರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಎಸ್.ಸಿ ಮೂರ್ಚಾದ ಮಾಜಿ ಅಧ್ಯಕ್ಷ ರಾಜು ಮುಕ್ಕಣ್ಣ ಮಾತನಾಡಿ, 12ನೇ ಶತಮಾನದಲ್ಲಿಯೇ ಜಾತಿ ಎಂಬ ಕತ್ತಲೆ ಹೋಗಲಾಡಿಸಿ, ಸಾಮಾನತೆಯ ಜ್ಯೋತಿ ಬೆಳಗಿಸಿ, ಸರ್ವರಿಗೂ ಸಮ ಬಾಳು ನೀಡಿದ ಮಹಾನ ಸಮಾಜ ಸುಧಾರಕರು ಅಣ್ಣ ಬಸವಣ್ಣನವರು ಎಂದರು. ಜಾತಿ ಎಂಬ ಅನಿಷ್ಠ ಪದ್ಧತಿಯನ್ನು ನಾವಾಗಿಯೇ ಸೃಷ್ಟಿಮಾಡಿಕೊಂಡಿದ್ದೆವೆ. ಬಸವಣ್ಣನವರು ಎಲ್ಲರೂ […]

Continue Reading

ರಾತ್ರಿ ವೇಳೆ ಮನೆಗಳಿಗೆ ಕನ್ನ, ಐಷಾರಾಮಿ ಜೀವನ: ಪಾಪ ಪರಿಹಾರಕ್ಕೆ ಸಮಾಜ ಸೇವೆ ಮಾಡುತ್ತಿದ್ದ ಕಳ್ಳನ ಬಂಧನ

ಕಲಬುರಗಿ: ಕದ್ದ ಹಣವನ್ನು ಜಾತ್ರೆಗಳಲ್ಲಿ ಸಾಮೂಹಿಕ ಭೋಜನಕ್ಕೆ, ಮದ್ಯ ಮತ್ತು ಮನರಂಜನೆಗಾಗಿ ಖರ್ಚು ಮಾಡುತ್ತಿದ್ದ ಕಳ್ಳನನ್ನು ಕಲಬುರಗಿಯ ಅಶೋಕ್ ನಗರ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯ ಭಾಗ್ಯವಂತಿ ನಗರದ ನಿವಾಸಿ ಶಂಕರಗೌಡ ನೀಡಿದ ದೂರಿನ ಆಧಾರದ ಮೇಲೆ, ಏಪ್ರಿಲ್ 13 ರಂದು ತಮ್ಮ ಕುಟುಂಬದೊಂದಿಗೆ ಹೊರ ಹೋಗಿದ್ದರು. ಆ ಸಮಯದಲ್ಲಿ ಕಳ್ಳರು 343 ಗ್ರಾಂ ಚಿನ್ನಾಭರಣ, 14.5 ಲಕ್ಷ ರೂ. ನಗದು, 10,000 ರೂ. ಮೌಲ್ಯದ 40 ಗ್ರಾಂ ಬೆಳ್ಳಿ ವಸ್ತುಗಳನ್ನು ಕದ್ದಿದ್ದಾರೆ ಎಂದು ಕಲಬುರಗಿ ಪೊಲೀಸ್ ಆಯುಕ್ತ […]

Continue Reading

ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ಬೆನ್ನಲ್ಲೆ ಮುಂದಿನ 24-36 ಗಂಟೆಗಳಲ್ಲಿ ಭಾರತ ಕ್ರಮ ಸಾಧ್ಯತೆ: ಪಾಕ್ ಸಚಿವ

ಇಸ್ಲಾಮಾಬಾದ್: ಪಹಲ್ಗಾಮ್ ಉಗ್ರರ ದಾಳಿ ಬೆನ್ನಲ್ಲೆ ಭಾರತ ಸೇನಾಪಡೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದು, ಈ ಬೆಳವಣಿಗೆ ಪಾಕಿಸ್ತಾನಕ್ಕೆ ಆತಂಕ ಶುರುವಾಗುವಂತೆ ಮಾಡಿದೆ. ಮೋದಿ ನಿರ್ಧಾರ ಬೆನ್ನಲ್ಲೆ ಭಾರತವು ಮುಂದಿನ 24 ರಿಂದ 36 ಗಂಟೆಗಳಲ್ಲಿ ತನ್ನ ವಿರುದ್ಧ ಮಿಲಿಟರಿ ಕ್ರಮ ಕೈಗೊಳ್ಳಲು ಯೋಜಿಸುತ್ತಿದೆ ಎಂದು ಪಾಕ್ ಸಚಿವ ಅತ್ತೌಲ್ಲಾ ತರಾರ್ ಎಚ್ಚರಿಕೆ ನೀಡಿದ್ದಾರೆ. ಕಳೆದ ವಾರ ನಾಗರಿಕರ ಮೇಲೆ ನಡೆದ ಉಗ್ರಗಾಮಿ ದಾಳಿಯನ್ನು ಮುಂದಿನ ಮಿಲಿಟರಿ ಕ್ರಮಕ್ಕೆ “ನೆಪ”ವಾಗಿ […]

Continue Reading

ಕರ್ನಾಟಕದಲ್ಲಿ ಇಂದಿನಿಂದ ಒಂದೆ ಗ್ರಾಮೀಣ ಬ್ಯಾಂಕ್‌

ಧಾರವಾಡ: ರಾಜ್ಯಕ್ಕೆ ಈಗ ಒಂದೆ ಗ್ರಾಮೀಣ ಬ್ಯಾಂಕ್‌ ಅಸ್ವಿತ್ವಕ್ಕೆ ಬಂದಿದೆ. ಧಾರವಾಡದಲ್ಲಿ ಪ್ರಧಾನ ಕಚೇರಿ ಹೊಂದಿದ್ದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ (ಕೆವಿಜಿ ಬ್ಯಾಂಕ್‌) ಮತ್ತು ಬಳ್ಳಾರಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್‌’ಗಳು ಪರಸ್ಪರ ವಿಲೀನಗೊಂಡಿದ್ದು, ಮೇ 1ರ ಗುರುವಾರದಿಂದ ‘ಕರ್ನಾಟಕ ಗ್ರಾಮೀಣ ಬ್ಯಾಂಕ್’ ಉದಯಿಸಲಿದೆ. ಒಂದು ರಾಜ್ಯ, ಒಂದು ಗ್ರಾಮೀಣ ಬ್ಯಾಂಕ್ ಎಂಬ ನೀತಿಯನ್ವಯ ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಯ ಮೇರೆಗೆ ರಾಜ್ಯಕ್ಕೆ ಈಗ ಒಂದೆ ಗ್ರಾಮೀಣ ಬ್ಯಾಂಕ್‌ ಅಸ್ವಿತ್ವಕ್ಕೆ ಬಂದಿದೆ. ನೂತನ […]

Continue Reading

ಬಸ್ ಡ್ರೈವರ್ ಆಗಿದ್ದ ಯಶ್ ತಂದೆ ಈಗ ನಿರ್ಮಾಪಕ: ಹೊಸ ಬ್ಯಾನರ್ ಶುರು

ರಾಕಿಂಗ್ ಸ್ಟಾರ್ ಯಶ್ ಅವರು ಭಾರತೀಯ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಈಗ ಕೇವಲ ನಟ ಮಾತ್ರವಲ್ಲ ನಿರ್ಮಾಪಕ ಕೂಡ ಹೌದು. ಬಾಲಿವುಡ್​ನ ರಾಮಾಯಣ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾಗುವ ಹಂತಕ್ಕೆ ಬೆಳೆದಿದ್ದಾರೆ ಅನ್ನೊದು ವಿಶೇಷ. ಈ ಚಿತ್ರಕ್ಕೆ ಅವರು ದೊಡ್ಡ ಮಟ್ಟದಲ್ಲಿ ಬಂಡವಾಳ ಹೂಡುತ್ತಿದ್ದಾರೆ. ಈಗ ಅವರ ಕುಟುಂಬದವರು ಕೂಡ ಸಿನಿಮಾ ನಿರ್ಮಾಣದಲ್ಲಿ ತೊಡಗಿಕೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿಯಾಗಿದೆ. ಯಶ್ ಬಳಿಕ ಅವರ ತಾಯಿ ಪುಷ್ಪ ಅವರು ಹಲವು ಸಿನಿಮಾಗಳನ್ನು ತಯಾರು […]

Continue Reading